ದಾವಣಗೆರೆ | ಲಿಂಗಾಯತ ಮಠಾಧೀಶರಿಗೆ ಅಪಮಾನ:ಕನ್ನೇರಿ ಶ್ರೀ ಗಡಿಪಾರಿಗೆ ಬಸವಪರ ಸಂಘಟನೆಗಳ ಒತ್ತಾಯ

Date:

ಲಿಂಗಾಯತ ಮಠಾಧೀಶರಿಗೆ ಅಪಮಾನವಾಗುವಂತೆ ಮಾತನಾಡಿ, ಸಾಮಾಜಿಕ ಶಾಂತಿಗೆ ಧಕ್ಕೆ ಉಂಟು ಮಾಡಲು ಮುಂದಾಗಿರುವ ಕನ್ನೇರಿ ಮಠದ ಶ್ರೀ ಕಾಡಸಿದ್ದೇಶ್ವರ ಸ್ವಾಮಿಯನ್ನು ದೇಶದಿಂದ ಗಡಿಪಾರು ಮಾಡುವಂತೆ ಒತ್ತಾಯಿಸಿ ದಾವಣಗೆರೆ ಬಸವಪರ ಸಂಘಟನೆಗಳ ಒಕ್ಕೂಟ ಪ್ರತಿಭಟನೆ ನಡೆಸಿ ದಾವಣಗೆರೆ ಉಪವಿಭಾಗಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

“ಸೌಹಾರ್ದತೆಯ ನಾಡು ಎಂದೇ ಭಾರತ ಹೆಸರಾಗಿದೆ. ಇಂತಹ ಸೌಹಾರ್ದ ನೆಲದಲ್ಲಿ ವೈದಿಕತೆಯು ಸೃಷ್ಟಿಸಿದ ಅಸಮಾನತೆಯ ವಿರುದ್ಧ ಬುದ್ಧ ಶಾಂತಿ, ಸಹಬಾಳ್ವೆ ತತ್ವಗಳ ಮೂಲಕ ಜೀವಪರ ಆಶಯಗಳನ್ನು ಬಿತ್ತರಿಸಿದ್ದು, ಇಂದಿಗೂ ಜಗತ್ತಿಗೆ ಮಾದರಿಯಾಗಿವೆ. ಬುದ್ಧ ಗುರುವಿನ ತರುವಾಯ ಮಹತ್ವದ ಸಾಮಾಜಿಕ ಕ್ರಾಂತಿಗೆ ಮುಂದಾಗಿ ಸಮಸಮಾಜಕ್ಕೆ ಮುನ್ನುಡಿ ಬರೆದವರು 12ನೇ ಶತಮಾನದ ಬಸವಾದಿ ಶರಣರುಗಳು, 12ನೇ ಶತಮಾನದಲ್ಲಿ ಬಸವಣ್ಣ ರೂಪಿಸಿದ ಜೀವಪರ ನೆಲೆಯ ಲಿಂಗಾಯತ ಧರ್ಮವು ತನ್ನದೇ ಆದ ಮಹತ್ವ ಪಡೆದುಕೊಂಡು ಸಾಗಿಬಂದಿದೆ” ಎಂದು ತಿಳಿಸಿದರು.

“ಲಿಂಗಾಯತ ಮಠಾಧೀಶರುಗಳು ಬಸವಣ್ಣ ರೂಪಿಸಿದ ಲಿಂಗಾಯತ ತತ್ವದ ತಳಹದಿಯ ಮೇಲೆ ಕಾರ್ಯಪ್ರವೃತ್ತರಾಗಿದ್ದಾರೆ. ಒಕ್ಕೂಟದಿಂದ ಪ್ರತ್ಯೇಕ ಲಿಂಗಾಯತ ಧರ್ಮಕ್ಕಾಗಿ ಹೋರಾಟವನ್ನು ರೂಪಿಸಿರುವುದು ಸರಿಯಷ್ಟೆ, ಆದರೆ ಬಸವ ಪರವಾದ ಮಠಾಧೀಶರ ಏಕತೆಯನ್ನು ಸಹಿಸಿಕೊಳ್ಳಲಾಗದ ಮತ್ತು ವೈದಿಕಶಾಹಿಯ ಗುಲಾಮರಂತೆ ವರ್ತಿಸುತ್ತಿರುವ ಕನ್ನೇರಿ ಮಠದ ಶ್ರೀ ಕಾಡಸಿದ್ದೇಶ್ವರ ಸ್ವಾಮಿಗಳು ಬಸವಪರವಾದ ಲಿಂಗಾಯತ ಮಠಾಧೀಶರಿಗೆ ಅಸಂವಿಧಾನಿಕ ಮತ್ತು ಆವಾಚ್ಯ ಶಬ್ದಗಳಿಂದ ನಿಂದಿಸಿ, ಲಿಂಗಾಯತ ಮಠಾಧೀಶರುಗಳಿಗೆ ನಿಂದಿಸಿದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿರುತ್ತದೆ” ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೋಟ್ಯಾಂತರ ಲಿಂಗಾಯತ ಸಮುದಾಯಕ್ಕೆ ಕಾಡಸಿದ್ದೇಶ್ವರ ಸ್ವಾಮಿಗಳ ಈ ಮಾತಿನಿಂದ ಅಪಮಾನವಾಗಿದ್ದು, ಇವರ ಮಾತು ಸಮಾಜದ ಶಾಂತಿಗೆ ಧಕ್ಕೆ ತರುತ್ತಿವೆ ಭಾರತದ ಸಂವಿಧಾನ ಮತ್ತು ಕಾನೂನು ಸುವ್ಯವಸ್ಥೆಯ ವಿರುದ್ಧವಾಗಿ ವರ್ತಿಸುತ್ತಿದ್ದಾರೆ. ಭಾರತದ ಸಾರ್ವಭೌಮತೆ, ಸಹಬಾಳ್ವೆ, ಸೌಹಾರ್ದ, ಸಹೋದರತ್ವದ ಮೂಲದಂತಿರುವ ಸಂವಿಧಾನದ ಆಶಯಗಳಿಗೆ ಧಕ್ಕೆ ಉಂಟಾಗುತ್ತಿದೆ.

ಭಾರತೀಯ ಸಮಾಜದಲ್ಲಿ ಲಿಂಗಾಯತ ಮಠಾಧೀಶರು ಗೌರವಯುತ ಸ್ಥಾನಮಾನ ಪಡೆದುಕೊಂಡು, ಈ ನೆಲದ ಸೌಹಾರ್ದತೆಯನ್ನು, ಸಂವಿಧಾನವನ್ನು ಪಾಲಿಸಿಕೊಂಡು ಮುನ್ನಡೆಯುತ್ತಿದ್ದಾರೆ. ಇಂತಹ ಗೌರವಯುತವಾದ ಸ್ಥಾನಮಾನ ಪಡೆದುಕೊಂಡಿರುವ ಮಠಾಧೀಶರುಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ. ಸಾಮಾಜಿಕ ಶಾಂತಿಗೆ ಧಕ್ಕೆ ಉಂಟು ಮಾಡಿರುವ ಶ್ರೀ ಕಾಡಸಿದ್ದೇಶ್ವರ ಸ್ವಾಮಿಗಳ ವಿರುದ್ಧ ದೇಶದ್ರೋಹ ಪ್ರಕರಣವನ್ನು ದಾಖಲಿಸಿ. ಇವರನ್ನು ದೇಶದಿಂದ ಗಡಿಪಾರು ಮಾಡಬೇಕೆಂದು ಬಸವಪರ ಸಂಘಟನೆಗಳ ವತಿಯಿಂದ ಸಾಂಕೇತಿಕವಾದ ಪ್ರತಿಭಟನೆಯ ಮೂಲಕ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿಯನ್ನು ಸಲ್ಲಿಸುತ್ತಿದ್ದೇವೆ” ಎಂದರು.‌

“ಮುಖ್ಯಮಂತ್ರಿಗಳು ಕಾಡಸಿದ್ದೇಶ್ವರ ಸ್ವಾಮಿಯ ವಿರುದ್ಧ ಸೂಕ್ತ ಕ್ರಮ ಜರುಗಿಸದೇ ಹೋದಲ್ಲಿ ಮುಂದಿನ ದಿನಗಳಲ್ಲಿ ಕರ್ನಾಟಕದಾದ್ಯಂತ ಬೃಹತ್ ಪ್ರತಿಭಟನೆ ಕೈಗೊಳ್ಳಲಾಗುವುದು ಎಂಬುದನ್ನು ಸರ್ಕಾರದ ಗಮನಕ್ಕೆ ತರುತ್ತೀದ್ದೇವೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ನಿರಾಶ್ರಿತರಿಗೆ ಮನೆ ನಿರ್ಮಾಣಕ್ಕೆ ಸೌಕರ್ಯ ಒದಗಿಸಿ: ಪ್ರಗತಿಪರ ಸಂಘಟನೆಗಳ ಒತ್ತಾಯ

.‌

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...