ವಾಲ್ಮೀಕಿ ಸಮಾಜದ ವಿರುದ್ಧ ಸಭೆಯಲ್ಲಿ ಮಾತನಾಡಿ ಅವಹೇಳನಕಾರಿಯಾಗಿ ಮಾತನಾಡಿರುವ ಹಿನ್ನೆಲೆಯಲ್ಲಿ ಆಕ್ರೋಶ ವ್ಯಕ್ತಪಡಿಸಿ, ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ಸರ್ಕಾರ ಕಾನೂನು ಕ್ರಮಕೈಗೊಳ್ಳಬೇಕು ಎಂದು ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ರಾಜನಹಳ್ಳಿ ಗುರುಪೀಠದ ಪ್ರಸನ್ನಾನಂದಪುರಿ ಶ್ರೀ ಒತ್ತಾಯಿಸಿದರು.
ಹರಿಹರ ತಾಲೂಕಿನ ರಾಜನಹಳ್ಳಿಯ ಶ್ರೀವಾಲ್ಮೀಕಿ ಗುರುಪೀಠದಲ್ಲಿ ಮಾತನಾಡಿ ಆಕ್ರೋಶ ವ್ಯಕ್ತಪಡಿಸಿರುವ ಶ್ರೀಗಳು “ಬೆಳಗಾವಿಯಲ್ಲಿ ಮಾಜಿ ಸಂಸದ ರಮೇಶ್ ಕತ್ತಿ ಸಮಾಜದ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದಾರೆ. ಅವರು ಬಳಸಿದ ಭಾಷೆಯಿಂದ ಸಮಸ್ತ ಬೇಡ, ವಾಲ್ಮೀಕಿ, ನಾಯಕ ಸಮಾಜಕ್ಕೆ ನೋವುಂಟು ಮಾಡಿದೆ. ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತಾಡಿರುವುಧನ್ನು ತೀವ್ರವಾಗಿ ಖಂಡಿಸುತ್ತೇವೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.
“ಡಾ. ಬಾಬಾ ಸಾಹೇಬ ಅಂಬೇಡ್ಕರ್ ಅವರು ಜಾತಿ ಕಾರಣಕ್ಕೆ, ಸಮುದಾಯದ ಮುಖ್ಯವಾಹಿನಿಯಿಂದ ದೂರ ಉಳಿದ ಕಾರಣಕ್ಕೆ ಕಾನೂನಿನಲ್ಲಿ ರಕ್ಷಣೆ ನೀಡಿದ್ದಾರೆ. ಕಾನೂನು ರಕ್ಷಣೆ ಕೊಟ್ಟು 78 ವರ್ಷಗಳಾದರೂ ರಮೇಶ ಕತ್ತಿಯ ಮನಸ್ಥಿತಿಯ ಕೆಲವರು ಈ ರೀತಿ ವರ್ತಿಸುತ್ತಿರುವುದು ಬೇಸರದ ವಿಚಾರ. ಸಮಾಜದ ವಿರುದ್ಧ ಅವಹೇಳನಕಾರಿ ಪದ ಬಳಸಿದ ರಮೇಶ್ ಕತ್ತಿ ವಿರುದ್ಧ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ವಾಲ್ಮೀಕಿ ಗುರುಪೀಠದ ಆಗ್ರಹವಾಗಿದೆ” ಎಂದು ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಶಿಕ್ಷಣ ಇಲಾಖೆ ಕಚೇರಿಯಲ್ಲಿ ‘ಎಣ್ಣೆ ಪಾರ್ಟಿ’; ಐವರು ಅಮಾನತು





