ದಾವಣಗೆರೆ | ಜಗಳೂರನ್ನು ಚಿತ್ರದುರ್ಗ ಜಿಲ್ಲೆಗೆ ಸೇರಿಸುವಂತೆ ಒತ್ತಾಯ

Date:

ಜಗಳೂರು ತಾಲೂಕನ್ನು ಮೂಲ ಚಿತ್ರದುರ್ಗ ಜಿಲ್ಲೆಗೆ ಸೇರ್ಪಡೆಗೊಳಿಸಬೇಕು ಎಂದು ಒತ್ತಾಯಿಸಿ ‘ಜಗಳೂರು ತಾಲೂಕು ಚಿತ್ರದುರ್ಗ ಜಿಲ್ಲೆ ಮರು ಸೇರ್ಪಡೆ ಹೋರಾಟ ಸಮಿತಿ’ ಕಾರ್ಯಕರ್ತರು ಮಂಗಳವಾರ ಜಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ತಹಸೀಲ್ದಾರ್ ಸೈಯದ್ ಖಲಿಂವುಲ್ಲಾ ಅವರಿಗೆ ಮನವಿ ಸಲ್ಲಿಸಿದ್ದಾರೆ.

“ಜಗಳೂರು ರಾಜ್ಯದಲ್ಲಿಯೇ ಅತ್ಯಂತ ಹಿಂದುಳಿದ ತಾಲೂಕು. ನೂರಾರು ವರ್ಷಗಳ ಇತಿಹಾಸದಲ್ಲಿ 75 ವರ್ಷಗಳ ಕಾಲ ಬರಗಾಲ ಕಂಡ ಪ್ರದೇಶವಾಗಿದೆ. ತಾಲೂಕಿನಲ್ಲಿ ಯಾವುದೇ ನದಿ, ನೀರಿನ ಮೂಲಗಳಿಲ್ಲ. ರೈಲು ಸಂಚಾರವಿಲ್ಲ. ಉದ್ಯೋಗ ಒದಗಿಸುವ ಕಂಪನಿಗಳಿಲ್ಲ. ಕೇವಲ ಮಳೆಯನ್ನೆ ನೆಚ್ಚಿಕೊಂಡು ಕೃಷಿ ಚಟುವಟಿಕೆ ಮಾಡುವ ರೈತರು ಸಂಕಷ್ಟದಲ್ಲಿ ಬದುಕುವಂತಾಗಿದೆ. ಹಾಗಾಗಿ, ಜಗಳೂರುನ್ನು ಮೂಲ ಜಿಲ್ಲೆಯಾಗಿದ್ದ ಚಿತ್ರದುರ್ಗ ಜಿಲ್ಲೆಗೆ ಸೇರ್ಪಡೆಗೊಳಿಸಬೇಕು” ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

“ದಾವಣಗೆರೆ ಜಿಲ್ಲೆಗೆ ಜಗಳೂರು ಸೇರಿದ ಬಳಿಕ ಬಡವಾಗಿದೆ. ಚುನಾಯಿತರು, ಅಧಿಕಾರಿಗಳು ಮಲತಾಯಿ ಧೋರಣೆ ಮಾಡುತ್ತಿದ್ದಾರೆ. ದಾವಣಗೆರೆ ಜಿಲ್ಲೆಯಲ್ಲಿ ದಾವಣಗೆರೆ, ಚನ್ನಗಿರಿ, ಹೊನ್ನಾಳಿ, ಹರಿಹರ ತಾಲೂಕುಗಳು ನೀರಾವರಿ ಹೊಂದಿರುವ ಸಮೃದ್ದ ತಾಲೂಕುಗಳಾಗಿವೆ. ಇವರ ನಡುವೆ ಜಗಳೂರು ತಾಲೂಕು ಹೋರಾಟ ಮಾಡುವುದು ತುಂಬ ಕಷ್ಟವಾಗುತ್ತಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಯಾವುದೇ ಕೆಲಸ ಕಾರ್ಯಗಳು ನಡೆಯಬೇಕಾದರೆ ದಾವಣಗೆರೆಯಲ್ಲಿ ದಿನವಿಡಿ ಕಾಯಬೇಕು. ಆದರೆ ಚಿತ್ರದುರ್ಗ ಹತ್ತಿರವಿದ್ದು ಅಲೆದಾಡುವುದು ತುಂಬ ಕಡಿಮೆಯಾಗುತ್ತದೆ. ಆದ್ದರಿಂದ ಚಿತ್ರದುರ್ಗ ಸೇರ್ಪಡೆಯಾಗುವವರೆಗೂ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು” ಎಂದು ಹೇಳಿದ್ದಾರೆ.

ಪ್ರತಿಭಟನೆಯಲ್ಲಿ ಸಮಿತಿಯ ಅಧ್ಯಕ್ಷ ತಿಮ್ಮಾರೆಡ್ಡಿ, ಉಪಾಧ್ಯಕ್ಷ ಪುಟ್ಟಣ್ಣ, ಸಿ. ತಿಪ್ಪೇಸ್ವಾಮಿ, ಪಾಲನಾಯಕನಗೋಟೆ ಓಬಣ್ಣ, ಸೂರಲಿಂಗಪ್ಪ, ಹನುಮಂತಪ್ಪ, ಖಾದರ್ ಸಾಬ್, ಬಂಗಾರಪ್ಪ, ಜಿ.ಎಚ್ ಶಂಬುಲಿಂಗಪ್ಪ, ವಕೀಲ ಸಣ್ಣ ಓಬಯ್ಯ, ದಸಂಸ ಸಂಚಾಲಕ ಸತೀಶ್ ಮಾಚಿಕೆರೆ, ಸೇರಿದಂತೆ ಮತ್ತಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...