ದಾವಣಗೆರೆ | ಹೆಲಿಕಾಪ್ಟರ್ ಲೇಔಟ್ ಗೆ ಕುಡಿಯುವ ನೀರು, ಬೀದಿ ದೀಪ, ರಸ್ತೆಸೌಲಭ್ಯ ಕಲ್ಪಿಸಲು ಜನಶಕ್ತಿ ಆಗ್ರಹ

Date:

ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ರಸ್ತೆ, ಬೀದಿ ದೀಪವನ್ನು ಸೌಲಭ್ಯ ಒದಗಿಸಲು ಕೋರಿ ಕರ್ನಾಟಕ ಜನಶಕ್ತಿಯ ದಾವಣಗೆರೆ ಘಟಕದ ಮುಖಂಡರು ದಾವಣಗೆರೆ ಮಹಾನಗರ ಪಾಲಿಕೆಯ ಆಯುಕ್ತರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ಮನವಿ ಸಲ್ಲಿಸಿ ಮಾತನಾಡಿದ ಮುಖಂಡರು “ದಾವಣಗೆರೆ ನಗರದ ಬೂದಾಳ್ ಮುಖ್ಯ ರಸ್ತೆಗೆ ಹೊಂದಿಕೊಂಡಂತಿರುವ ಮೆಹಕ್ ಶಾದಿ ಮಹಲ್ ಮುಂಭಾಗದ ತಾಜ್ ಲೇಔಟ್ 1ನೇ ಮುಖ್ಯ ರಸ್ತೆಗೆ ಹೊಂದಿಕೊಂಡ ಹೆಲಿಕಾಪ್ಟರ್ ಲೇ ಔಟ್ ನಲ್ಲಿ 128 ನಿವೇಶನಗಳಿದ್ದು, ಈಗಾಗಲೇ 15 ನಿವೇಶನದಾರರು ಮನೆಯನ್ನು ಕಟ್ಟಿಕೊಂಡಿದ್ದು ಬಿ ಖಾತೆಯನ್ನು ಕೂಡ ಪಡೆದಿದ್ದಾರೆ.‌ ಆದರೆ ಈ ಪ್ರದೇಶದಲ್ಲಿ ಮೂಲಸೌಕರ್ಯಗಳಿಲ್ಲದೇ ಜನ ಸಮಸ್ಯೆ ಎದುರಿಸುವಂತಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

1002986684
Oplus_131072

“ಕಳೆದ 2 ವರ್ಷಗಳಿಂದ ಇಲ್ಲಿನ ಜನರಿಗೆ ದಾರಿಯಿಲ್ಲ, ದಿನನಿತ್ಯ ಬಳಸುವ ಹಾಗೂ ಕುಡಿಯುವ ನೀರಿನ ಸಂಪರ್ಕವು ಕಲ್ಪಿಸಿಲ್ಲ, ಮತ್ತು ರಾತ್ರಿ ಸಮಯದಲ್ಲಿ ಬೀದಿ ದೀಪಾಗಳಿಲ್ಲದೆ ಮಕ್ಕಳು ಮತ್ತು ಹಿರಿಯ ನಾಗರೀಕರು ಓಡಾಡಲು ತೊಂದರೆ ಆಗುತ್ತಿದೆ. ಕೆಲವರು ರಸ್ತೆಯಲ್ಲಿ ಬಿದ್ದು ಸಣ್ಣ ಪುಟ್ಟ ಗಾಯಗಳಾದ ಘಟನೆಗಳೂ ನಡೆದಿವೆ. ನಿರಂತರ ಮಳೆಯಿಂದಾಗಿ ಗಿಡ-ಗಂಟಿಗಳು ಪೊದೆಗಳು ಬೆಳೆದು, ಹಾವುಗಳ ಹಾವಳಿಯು ಜಾಸ್ತಿ ಆಗಿದೆ. ಅದರಿಂದ ಮಹಾನಗರ ಪಾಲಿಕೆಯಿಂದ ನಿವೇಶನದಾರರಿಗೆ 24*7 ಕುಡಿಯುವ ನೀರಿನ ವ್ಯವಸ್ಥೆ, ಸುರಕ್ಷತವಾಗಿ ಓಡಾಡಲು ರಸ್ತೆ ಮತ್ತು ಬೀದಿ ದೀಪಗಳನ್ನು ಅಳವಡಿಸಬೇಕು” ಎಂದು ಮನವಿ ಸಲ್ಲಿಸಿ ಒತ್ತಾಯಿಸಿದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? http://ಈ ಸುದ್ದಿ ಓದಿದ್ದೀರಾ? ದಾವಣಗೆರೆ | ದೇಶಾದ್ಯಂತ ಮದ್ಯ ನಿಷೇಧಕ್ಕೆ, ಮಹಿಳಾ ಗ್ರಾಮ ಸಭೆಗೆ ಪರಮಾಧಿಕಾರಕ್ಕೆ ಒತ್ತಾಯ

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ದೇಶಾದ್ಯಂತ ಮದ್ಯ ನಿಷೇಧಕ್ಕೆ, ಮಹಿಳಾ ಗ್ರಾಮ ಸಭೆಗೆ ಪರಮಾಧಿಕಾರಕ್ಕೆ ಒತ್ತಾಯ

1002986683
Oplus_131072

ಕರ್ನಾಟಕ ಜನಶಕ್ತಿಯ ಮುಖಂಡರಾದ ಸೈಯದ್ ಅಸ್ಪಾಕ್, ಪವಿತ್ರ, ಸತೀಶ್ ಅರವಿಂದ್, ಜಾಫರ್ ಶರೀಪ್, ಸಮೀರ್, ರಫೀಕ್ ಖಾನ್, ರಿಯಾಜ್, ಮೆಹಬೂಬ್, ಬುಡೇನ್ ಸಾಬ್, ಮಾಹೀರ್ ಸೇರಿದಂತೆ ಹಲವಾರು ನಿವಾಸಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...