ದಾವಣಗೆರೆ | ಜೆಸಿಟಿಯು ಕಾರ್ಮಿಕರ ಜಿಲ್ಲಾ ಸಮಾವೇಶ; ಸಾರ್ವತ್ರಿಕ ಮುಷ್ಕರ ಯಶಸ್ಸಿಗೆ ಕರೆ

Date:

ಫೆಬ್ರವರಿ 12 ರಂದು ನಡೆಯಲಿರುವ ಅಖಿಲ ಭಾರತ ಸಾರ್ವತ್ರಿಕ ಮುಷ್ಕರದ ಯಶಸ್ಸಿಗಾಗಿ ಜೆಸಿಟಿಯು (JCTU) – ಕಾರ್ಮಿಕ ಸಂಘಗಳ ಜಂಟಿ ಸಮಿತಿಯಿಂದ ದಾವಣಗೆರೆ ನಗರದ ಪಂಪಾಪತಿ ಭವನದಲ್ಲಿ ಮುಷ್ಕರಕ್ಕೆ ಪೂರ್ವಭಾವಿಯಾಗಿ ಜಿಲ್ಲಾ ಮಟ್ಟದ ಕಾರ್ಮಿಕ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು. ಬಂಡವಾಳಶಾಹಿಗಳ ಪೋಷಿಸುವ, ಕಾರ್ಮಿಕರ ಶೋಷಣೆಯ ವಿರುದ್ಧದ ಕಾರ್ಮಿಕ ವಿರೋಧಿ ಕಾನೂನುಗಳನ್ನು ಹಿಂಪಡೆಯಲು ಆಗ್ರಹ ಕೇಳಿಬಂದಿತು.

1003599844

ಸಮಾವೇಶದಲ್ಲಿ ಕಾರ್ಮಿಕ ಸಂಘಗಳ ಜಂಟಿ ಸಮಿತಿಯ ರಾಜ್ಯ ಸಂಚಾಲಕ ಕೆ.ವಿ.ಭಟ್ ಮಾತನಾಡಿ,
“ವಿಸ್ತಾರವಾದ ಮತ್ತು ಕಾರ್ಮಿಕರ ಪರವಾಗಿದ್ದ 29 ಕಾನೂನುಗಳನ್ನು ಸಂಕುಚಿತಗೊಳಿಸಿ 4 ಕೋಡ್‌ಗಳಾಗಿ ಪರಿವರ್ತಿಸಿದ ಕಾರ್ಮಿಕ ವಿರೋಧಿ 4 ಕಾನೂನುಗಳನ್ನು ಹಿಂದಕ್ಕೆ ಪಡೆಯಬೇಕು” ಎಂದು ಕೇಂದ್ರ ಸರಕಾರವನ್ನು ಆಗ್ರಹಿಸಿದರು.

“ಮಹಾತ್ಮ ಗಾಂಧಿ ನರೇಗಾ ಯೋಜನೆಯ ಹೆಸರನ್ನು ವಿಬಿ ಜಿ.ರಾಮ್.ಜಿ ಎಂದು ಬದಲಾಯಿಸಿದರೆ ಕೃಷಿ ಕೂಲಿಕಾರ್ಮಿಕರ ಜೀವನ ಹಸನಾಗುವುದಿಲ್ಲ. ಜೊತೆಗೆ ಯೋಜನೆಯ ಭಾರವನ್ನು ರಾಜ್ಯ ಸರಕಾರಗಳಿಗೆ ವರ್ಗಾಯಿಸಿದೆ. ಇದರಿಂದ ಯೋಜನೆಯನ್ನು ದುರ್ಬಲಗೊಳಿಸಿ ಹಳ್ಳಿಗಳಲ್ಲಿ ವಾಸಿಸುತ್ತಿರುವ ಬಡ ಕೃಷಿಕೂಲಿ ಕಾರ್ಮಿಕರ ಜೀವನವನ್ನು ದುಸ್ತರಗೊಳಿಸುವ ಹುನ್ನಾರ ಅಡಗಿದೆ. ಇದು ಮಹಾತ್ಮ ಗಾಂಧಿಯವರ ಗ್ರಾಮ ಸ್ವರಾಜ್ಯ ಪರಿಕಲ್ಪನೆಗೆ ಸಂಪೂರ್ಣ ವಿರುದ್ಧವಾಗಿದೆ. ಎಪಿಎಂಸಿ ಕಾಯಿದೆ ತಿದ್ದುಪಡಿ ಬಿಲ್, ವಿದ್ಯುತ್ ಕಾಯಿದೆ ತಿದ್ದುಪಡಿ ಬಿಲ್, ವಿದೇಶಿ ನೇರ ಬಂಡವಾಳದ ನಿಯಮ ಪರಿಷ್ಕರಣೆ ಸೇರಿದಂತೆ ಅನೇಕ ಕಾರ್ಮಿಕ ವಿರೋಧಿ ಧೋರಣೆಗಳನ್ನು ಖಂಡಿಸಿ ದೇಶದ ಕೋಟ್ಯಾಂತರ ಕಾರ್ಮಿಕರು ಮತ್ತು ರೈತರು ಫೆಬ್ರವರಿ 12 ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರವನ್ನು ಮಾಡಲಿದ್ದಾರೆ. ಸಾರ್ವಜನಿಕರು, ವ್ಯವಹಾರಸ್ಥರು ಸ್ವಯಂ ಪ್ರೇರಣೆಯಿಂದ ಮುಷ್ಕರದಲ್ಲಿ ಭಾಗವಹಿಸಬೇಕು” ಎಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1003599851

ಕಾರ್ಮಿಕರ ಜಿಲ್ಲಾ ಸಮಾವೇಶದ ಅಧ್ಯಕ್ಷತೆ ವಹಿಸಿದ್ದ ಎಐಟಿಯುಸಿ ಜಿಲ್ಲಾಧ್ಯಕ್ಷ ಕೆ.ರಾಘವೇಂದ್ರ ನಾಯರಿ ಮಾತನಾಡಿ “ಆಳುವ ಸರಕಾರಗಳು ಸಂಪೂರ್ಣವಾಗಿ ರೈತಕಾರ್ಮಿಕರ ವಿರುದ್ಧವಾದ ಧೋರಣೆಗಳನ್ನು ಅನುಸರಿಸುತ್ತಿವೆ‌. ಬಂಡವಾಳಶಾಹಿಗಳಿಗೆ ರಕ್ಷಣೆ ನೀಡುವುದಕ್ಕಾಗಿ ಕಾರ್ಮಿಕ ಕಾಯಿದೆಗಳಿಗೆ ತಿದ್ದುಪಡಿಯನ್ನು ತಂದು ಕಾರ್ಮಿಕರ ಶೋಷಣೆ ಮಾಡುತ್ತಿದೆ. ಶತಮಾನಗಳಿಂದ ತ್ಯಾಗ, ಬಲಿದಾನ, ಹೋರಾಟಗಳಿಂದ ಗಳಿಸಿದ ಸೌಲಭ್ಯಗಳನ್ನು ಕೇಂದ್ರ ಸರಕಾರ ಕಸಿಯಲು ಯತ್ನಿಸುತ್ತಿದೆ. ಈ ಹುನ್ನಾರವನ್ನು ಹಿಮ್ಮೆಟ್ಟಿಸಲು ಕೇಂದ್ರ ಕಾರ್ಮಿಕ ಸಂಘಟನೆಗಳು ಐಕ್ಯತೆಯಿಂದ ಕರೆ ನೀಡಿದ ಈ ಐತಿಹಾಸಿಕ ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಬ್ಯಾಂಕ್ ವಲಯದ ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ, ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಸಂಘ ಮತ್ತು ಬೆಫಿ ಸಂಘಟನೆಗಳು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿ ಮುಷ್ಕರದಲ್ಲಿ ಪಾಲ್ಗೊಳ್ಳುತ್ತಿವೆ” ಎಂದು ತಿಳಿಸಿದರು.

ರೈತಸಂಘದ ಮುಖಂಡ ಕುರುಡಿ ಅರುಣ್ ಕುಮಾರ್ ಮಾತನಾಡಿ “ರೈತರು ಕಾರ್ಮಿಕರು ಒಂದಾಗಿ ಕೇಂದ್ರ ಸರಕಾರದ ರೈತಕಾರ್ಮಿಕ ವಿರೋಧಿ ನೀತಿಗಳನ್ನು ಸೋಲಿಸಬೇಕಾಗಿದೆ. ಕೇಂದ್ರ ಸರಕಾರ ಏನೇ ಮಾಡಿದರೂ ಬಹುಪರಾಕ್ ಹೇಳುವ ಗುಲಾಮ ಸಂಸ್ಕೃತಿ ಹೆಚ್ಚುತ್ತಿರುವುದು ದೇಶದ ದೃಷ್ಟಿಯಿಂದ ಅಪಾಯಕಾರಿಯಾಗಿದೆ. ದೆಹಲಿಯಲ್ಲಿ ನಡೆದ ರೈತ ಹೋರಾಟ ಮತ್ತು ಇತ್ತೀಚೆಗೆ ನಡೆದ ಬ್ಯಾಂಕ್ ಮಷ್ಕರದ ಮಾದರಿಯಲ್ಲಿ ಫೆಬ್ರವರಿ 12 ರ ಮುಷ್ಕರವನ್ನು ಯಶಸ್ವಿಗೊಳಿಸಿ ಸರಕಾರಕ್ಕೆ ಸ್ಪಷ್ಟ ಸಂದೇಶ ನೀಡುವ ಅಗತ್ಯವಿದೆ” ಎಂದರು.

ಜೆಸಿಟಿಯು ಜಿಲ್ಲಾ ಸಂಚಾಲಕ ಹೆಚ್‌.ಜಿ‌.ಉಮೇಶ್ ಅವರಗೆರೆ ಮಾತನಾಡಿ “ದಾವಣಗೆರೆ ಜಿಲ್ಲೆಯಲ್ಲಿ ಮಾದಕ ದ್ರವ್ಯಗಳ ಮಾರಾಟವು ಅವ್ಯಾಹತವಾಗಿ ನಡೆಯುತ್ತಿದೆ. ಇದರಿಂದ ವಿದ್ಯಾರ್ಥಿಗಳ, ಯುವಜನತೆಯ ಬದುಕು ದುಸ್ತರವಾಗುತ್ತಿದೆ. ಇದನ್ನು ಜಿಲ್ಲಾಡಳಿತ ಈ ಕೂಡಲೇ ನಿರ್ಬಂಧಿಸಿ ಸೂಕ್ತವಾದ ಕ್ರಮವನ್ನು ಕೈಗೊಳ್ಳಬೇಕು. ಇಲ್ಲವಾದರೆ ರೈತಕಾರ್ಮಿಕ ಜಂಟಿ ಸಮಿತಿಯ ವತಿಯಿಂದ ಉಗ್ರ ಹೋರಾಟ ಮಾಡಲಾಗುವುದು” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಪ್ರಜಾಪ್ರಭುತ್ವ ಗಣರಾಜ್ಯ ಕುರಿತು ವಿಚಾರ ಸಂಕಿರಣ ಹಾಗೂ ಮಕ್ಕಳ ಕಲಾ ಪ್ರತಿಭೆ ಕಾರ್ಯಕ್ರಮ

ಸಮಾವೇಶವನ್ನು ಉದ್ದೇಶಿಸಿ ಎಐಟಿಯುಸಿ ಅವರಗೆರೆ ಚಂದ್ರು, ಸಿಐಟಿಯು ಆನಂದರಾಜು, ರೈತ ನಾಯಕ ಹೊನ್ನೂರು ಮುನಿಯಪ್ಪ, ಎಐಯುಟಿಯುಸಿ ಕೈದಾಳೆ ಮಂಜುನಾಥ್, ರೈತ ನಾಯಕ ಗುಮ್ಮನೂರು ಬಸವರಾಜ್, ಜನಶಕ್ತಿ ಪವಿತ್ರಾ, ಅಂಗನವಾಡಿ ಫೆಡರೇಶನ್‌ನ ಎಸ್.ಎಸ್.ಮಲ್ಲಮ್ಮ, ಆಶಾ ಸಂಘಟನೆಯ ಇಂದಿರಾ, ಬಿಸಿಯೂಟದ ರುದ್ರಮ್ಮ ಮುಂತಾದವರು ಮಾತನಾಡಿದರು. ರೈತ ನಾಯಕ ಬುಳ್ಳಾಪುರದ ಹನುಮಂತಪ್ಪ, ಕಂಪ್ಲೇಶ್, ಪರಮೇಶಪ್ಪ, ಕುಕ್ಕವಾಡ ಮಂಜುನಾಥ್, ಸಿಪಿಐ ಯಲ್ಲಪ್ಪ, ಸಿಪಿಐಎಮ್ ಶ್ರೀನಿವಾಸ್, ಇಪ್ಟಾ ಐರಣಿ ಚಂದ್ರು, ಹೊಸಳ್ಳಿ ಮಂಜುಳಾ, ಸರೋಜ, ರಂಗನಾಥ್, ಸಿ.ರಮೇಶ್, ಸತೀಶ್ ಅರವಿಂದ್, ಸುರೇಶ್ ಅವರಗೊಳ್ಳ, ಕೆ.ಮಹೇಶ್ವರಪ್ಪ ಹಾಗೂ ನೂರಾರು ರೈತ ಕಾರ್ಮಿಕರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪಿಬಿ ರಸ್ತೆಯಲ್ಲಿ ಮುಸ್ಲಿಂ ಬಾಂಧವರ ರಂಜಾನ್ ಆಚರಣೆ

ಪವಿತ್ರ ರಂಜಾನ್ (ಈದ್ ಉಲ್ ಫಿತುರ್) ಆಚರಣೆ ಹಿನ್ನೆಲೆಯಲ್ಲಿ ದಾವಣಗೆರೆ ನಗರದ...

ದಾವಣಗೆರೆ | ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಮರ್ಥ್ ಶಾಮನೂರು: ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್...

ದಾವಣಗೆರೆ | ದಕ್ಷಿಣ ಕ್ಷೇತ್ರ ಉಪಚುನಾವಣೆ; ಎಸ್ ಟಿ ಮೋರ್ಚಾದ ಶ್ರೀನಿವಾಸ್ ಗೆ ಒಲಿದ ಬಿಜೆಪಿ ಟಿಕೆಟ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮ...

ದಾವಣಗೆರೆ | ಒಳಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯಕ್ಕೆ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ಹೋರಾಟ

ಸರ್ವೋಚ್ಛ ನ್ಯಾಯಾಲಯದ ಸಂವಿಧಾನಿಕ ಪೀಠವು ಒಳ ಮೀಸಲಾತಿ ವರ್ಗೀಕರಣ ಹಾಗೂ ಜಾರಿಯ...