ದಾವಣಗೆರೆ | ಕಂಚುಗಾರನಹಳ್ಳಿ ಗ್ರಾಮಸ್ಥರ ಹೋರಾಟಕ್ಕೆ ಸಂದ ಜಯ: ಶಾಲೆ ಹೊಸ ಕಟ್ಟಡಕ್ಕೆ ಶಾಸಕರ ಭರವಸೆ

Date:

ಹೊಸ ಕಟ್ಟಡಕ್ಕೆ ಆಗ್ರಹಿಸಿ ಕಂಚುಗಾರನಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯನ್ನು ಉಳಿಸಲು ಗ್ರಾಮಸ್ಥರು ಸತತ ಎರಡನೇ ದಿನವೂ ತಮ್ಮ ಹೋರಾಟವನ್ನು ಎಐಡಿಎಸ್ಓ ನೇತೃತ್ವದಲ್ಲಿ ಪ್ರತಿಭಟನೆ ಮುಂದುವರಿಸಿದ ಸ್ಥಳಕ್ಕೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ (BEO) ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ (EO) ಭೇಟಿ ನೀಡಿ ಪ್ರೌಢಶಾಲೆ ಮೇಲೆ ತಾತ್ಕಾಲಿಕ ಕೊಠಡಿಗಳ ವ್ಯವಸ್ಥೆ ಮಾಡುವುದಾಗಿ ತಿಳಿಸಿದರೂ ಮಣಿಯದೆ ಹೋರಾಟ ಮುಂದುವರೆಸಿದಾಗ ಹೋರಾಟದ ತೀವ್ರತೆ ತಿಳಿದ ಮಾಯಕೊಂಡ ಶಾಸಕ ಕೆ ಎಸ್ ಬಸವಂತಪ್ಪ ಪೋನ್ ಮೂಲಕ ಸಂಪರ್ಕಿಸಿ ಸೋಮವಾರದೊಳಗೆ ಹೊಸ ಶಾಲಾ ಕಟ್ಟಡದ 2 ಕೊಠಡಿಗಳಿಗೆ ಕಾಮಗಾರಿ ಆರಂಭಿಸುವುದಾಗಿ ಭರವಸೆ ನೀಡಿದರು. ಈ ಹೇಳಿಕೆಯನ್ನು ಗ್ರಾಮಸ್ಥರು ಮತ್ತು ಅಧಿಕಾರಿಗಳ ಸಮ್ಮುಖದಲ್ಲಿ ತಿಳಿಸಿದರು.

1002244083

ಇದಕ್ಕೆ ಮುನ್ನ ಕಂಚುಗಾರನಹಳ್ಳಿ ಗ್ರಾಮಸ್ಥರು, ಪೋಷಕರು ಮತ್ತು ಸ್ಥಳೀಯ ಯುವಕರು ಪ್ರತಿಭಟನೆ ತೀವ್ರಗೊಳಿಸಿದರು. ಈ ವೇಳೆ ಸ್ಥಳಕ್ಕೆ ಆಗಮಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ತಾತ್ಕಾಲಿಕ ಪರಿಹಾರ ನೀಡುವುದಾಗಿ ತಿಳಿಸಿದರು. ಆದರೆ ಗ್ರಾಮಸ್ಥರು ಹೊಸ ಕಟ್ಟಡ ಮಂಜೂರಾಗಬೇಕೆಂಬ ತಮ್ಮ ಬೇಡಿಕೆಗೆ ದೃಢವಾಗಿ ನಿಂತು, ಮೌಖಿಕ ಭರವಸೆ ಅಥವಾ ತಾತ್ಕಾಲಿಕ ವ್ಯವಸ್ಥೆಗಳನ್ನು ನಿರಾಕರಿಸಿದರು.
ಪರಿಹಾರ ನೀಡದೇ ಶಾಲೆಯಿಂದ ಹೊರಟಾಗ ಗ್ರಾಮಸ್ಥರು ಅಧಿಕಾರಿಗಳನ್ನು ಅಡ್ಡಗಟ್ಟಿದರು. ವಿಷಯ ತಿಳಿದು ಜನರ ಒತ್ತಾಯಕ್ಕೆ ಮಣಿದು ದೂರವಾಣಿ ಕರೆ ಮೂಲಕ ಮಾತನಾಡಿದ ಮಾಯಕೊಂಡ ಸ್ಥಳಿಯ ಶಾಸಕ ಬಸವಂತಪ್ಪ ಕರೆ ಮಾಡಿ ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದಂತೆ ಶೀಘ್ರ ಕ್ರಮಕ್ಕೆ ಭರವಸೆ ನೀಡಿದರು.

1002244082

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಭದ್ರಾ ಬಲದಂಡೆಯಿಂದ ಕುಡಿಯುವ ನೀರು ಹರಿಸಲು ಐಐಎಸ್‌ಸಿ ವರದಿ, ನಾಲೆ ಜಲಾಶಯಕ್ಕೆ ತೊಂದರೆ ಇಲ್ಲ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಂತರ ಪೋಷಕರು ಮತ್ತು ಎಐಡಿಎಸ್ಓ ಹಾಗೂ ಸಾರ್ವಜನಿಕ ಶಿಕ್ಷಣ ಉಳಿಸಿ ಹೋರಾಟ ಸಮಿತಿಯ ಮುಖಂಡರು ಸಭೆ ನಡೆಸಿ ಸೋಮವಾರದವರೆಗೆ ಕಾಯಲು ನಿರ್ಧರಿಸಿದರು. ಭರವಸೆಯಂತೆ ಕಟ್ಟಡ ನಿರ್ಮಾಣ ಕಾರ್ಯ ಪ್ರಾರಂಭವಾದರೆ, ವಿಜಯೋತ್ಸವ ಆಚರಿಸಲಾಗುವುದು, ಇಲ್ಲವಾದಲ್ಲಿ ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಗ್ರಾಮಸ್ಥರು ಸ್ಪಷ್ಟಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...