ದಾವಣಗೆರೆ | ಕನ್ನಡದ ಭಾಷಾವಿವಾದ, ಕಮಲ್ ಕ್ಷಮೆ ಯಾಚಿಸದಿದ್ದರೆ ಥಗ್ ಲೈಪ್ ಚಿತ್ರ ಪ್ರದರ್ಶನಕ್ಕೆ ಅವಕಾಶವಿಲ್ಲ; ಕರವೇ

Date:

ಕನ್ನಡದ ಬಗ್ಗೆ ಅವಹೇಳನ ಮಾಡಿ ಮಾತನಾಡಿರುವ ಕಮಲ್ ಹಾಸನ್ ಕ್ಷಮೆಯಾಚಿಸದಿದ್ದರೆ ಅವರ ಚಲನಚಿತ್ರ ಥಗ್ ಲೈಫ್ ಚಿತ್ರ ಬಿಡುಗಡೆಗೆ ಕರವೇ ಅವಕಾಶ ನೀಡಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ದಾವಣಗೆರೆ ಜಿಲ್ಲಾ ಘಟಕದ ಪದಾಧಿಕಾರಿಗಳು ದಾವಣಗೆರೆ ನಗರದ ಗುರುಭವನದ ಹತ್ತಿರ ಕಮಲ್ ಹಾಸನ್ ಭಾವಚಿತ್ರ ಸುಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಕರವೇ ಜಿಲ್ಲಾಧ್ಯಕ್ಷ ಎಂಎಸ್ ರಾಮೇಗೌಡ ಮಾತನಾಡಿ “ಕನ್ನಡದ ಇತಿಹಾಸ ಗೊತ್ತಿಲ್ಲದೆ ನಟ ಕನ್ನಡದ ಅನ್ನ ತಿಂದು ದ್ರೋಹ ಬಗೆದಿದ್ದಾರೆ. ಕಮಲ್ ಹಾಸನ್ ಕೊನೆಗೂ ತನ್ನ ರಾಜಕೀಯ ಬುದ್ಧಿ ತೋರಿಸಿದ್ದಾನೆ. ಖಾಸಗಿ ಕಾರ್ಯಕ್ರಮದಲ್ಲಿ ತಮಿಳು ಭಾಷೆಯಿಂದ ಕನ್ನಡ ಹುಟ್ಟಿದ್ದು ಎಂದು ಹೇಳಿಕೆ ನೀಡಿದ್ದಾನೆ. ಇಂಥ ಚಲನಚಿತ್ರ ನಟರನ್ನ ಕರ್ನಾಟಕದಿಂದ ಬಹಿಷ್ಕಾರ ಹಾಕಬೇಕು. ಆತನ ಚಿತ್ರಗಳಿಗೆ ಯಾವುದೇ ಕಾರಣಕ್ಕೂ ಕರ್ನಾಟಕದಲ್ಲಿ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಿ ಕೊಡಬಾರದು” ಎಂದು ಆಕ್ರೋಶ ವ್ಯಕ್ತಪಡಿಸಿದರು.

1002079912

“ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿಗೆ ನಟನ ಹೇಳಿಕೆ ಬಗ್ಗೆ ಈಗಾಗಲೇ ಕರವೇ ರಾಜ್ಯಾಧ್ಯಕ್ಷರಾದ ಟಿಎ ನಾರಾಯಣಗೌಡರವರು ಮನವರಿಕೆ ಮಾಡಿಕೊಟ್ಟಿದ್ದಾರೆ. ಇದಕ್ಕೂ ಮೀರಿ ಚಲನಚಿತ್ರ ಪ್ರದರ್ಶನವಾದರೆ. ಅಂತಹ ಚಲನಚಿತ್ರ ಮಂದಿರಕ್ಕೆ ಮುತ್ತಿಗೆ ಹಾಕಿ ಚಿತ್ರ ಪ್ರದರ್ಶನವನ್ನು ನಿಲ್ಲಿಸಬೇಕಾಗುತ್ತದೆ” ಎಂದು ಎಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಾರ್ಯಕ್ರಮದಲ್ಲಿ ಇದ್ದ ನಟ ಶಿವರಾಜಕುಮಾರ್ ವಿರೋಧ ಮಾಡದೆ ಇರುವುದು ತೀವ್ರ ಬೇಸರದ ಸಂಗತಿ. ಡಾ.ರಾಜಕುಮಾರ್ ಅವರ ಪುತ್ರನಾಗಿ ಕನ್ನಡ ದ್ರೋಹಿ ಹೇಳಿಕೆ ನೀಡಿದಾಗ ಪ್ರತಿರೋಧ ವ್ಯಕ್ತಪಡಿಸಬೇಕಾಗಿತ್ತು. ಆಗ ಶಿವರಾಜ್‌ಕುಮಾರ್ ಅವರನ್ನ ಮತ್ತೋರ್ವ ರಾಜಕುಮಾರರಂತೆ ಕನ್ನಡಿಗರು ಗೌರವಿಸುತ್ತಿದ್ದರು, ಆದರೆ ಇಂದು ಹೇಳಿಕೆ ನೀಡಿ ಶಿವರಾಜಕುಮಾರ್ ಅವರು ಒಂದು ರೀತಿಯಲ್ಲಿ ಕಮಲ್ ಹಾಸನ್ ಅವರ ಹೇಳಿಕೆಯನ್ನು ಸಮರ್ಥಿಸಿಕೊಳ್ಳುವ ರೀತಿಯಲ್ಲಿ ಹೇಳಿಕೆ ನೀಡುತ್ತಿರುವುದು ಕರ್ನಾಟಕ ರಕ್ಷಣಾ ವೇದಿಕೆ ತೀವ್ರವಾಗಿ ಖಂಡಿಸುತ್ತದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

1002079916

“ಕಾವೇರಿ ವಿಚಾರ ಬಂದಾಗ ತಮಿಳುನಾಡಿನ ವಿರುದ್ಧ ಹೋರಾಟ ನಡೆಸುವುದು ಕರ್ನಾಟಕಕ್ಕೆ ಅನಿವಾರ್ಯವಾಗಿದೆ. ಆದರೂ ಸಹ ಕನ್ನಡಿಗರು ದಕ್ಷಿಣ ಭಾರತದವರು ನಾವೆಲ್ಲ ಒಂದೇ ಎಂಬ ಭಾವನೆಯಲ್ಲಿ ಬದುಕುತ್ತಿದ್ದರೇ, ಮೂರ್ಖ ಕಮಲ್ ಹಾಸನ್ ಕರ್ನಾಟಕ ತಮಿಳುನಾಡು ನಡುವೆ ಬೆಂಕಿ ಹಚ್ಚಿದ್ದಾನೆ. ತಕ್ಷಣ ಈತನ ವಿರುದ್ಧ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳಬೇಕು. ರಾಜ್ಯ ಸರಕಾರ ಇವನ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಕರ್ನಾಟಕದಲ್ಲಿ ಆತನಿಗೆ ನಿರ್ಭಂಧ ವಿಧಿಸಬೇಕು.‌ ಯಾವುದೇ ಕಾರಣಕ್ಕೂ ಆತನಿಗೆ ಪ್ರವೇಶ ಅವಕಾಶ ಕೊಡಬಾರದು, ಅವನ ಚಲನಚಿತ್ರಗಳು ಸಹ ಪ್ರದರ್ಶನವಾಗಲು 5 ರಂದು ಬಿಡುಗಡೆ ಆಗಲಿರುವ ಥಗ್ ಲೈಫ್ ಸಿನಿಮಾ ಬಿಡುಗಡೆಗೆ ಅವಕಾಶ ನೀಡುವುದಿಲ್ಲವೆಂದು ಕರ್ನಾಟಕ ರಕ್ಷಣಾ ವೇದಿಕೆ ಎಚ್ಚರಿಕೆ ನೀಡಿದೆ.

ಈ ಸುದ್ದಿ ಓದಿದ್ದೀರಾ? ಮಳೆ ಬಂದರೆ ಸೋರುವ, ಕುಸಿಯುವಂತಿರುವ ಶಾಲಾ ಕಟ್ಟಡ, ಮಕ್ಕಳನ್ನು ದಾಖಲಿಸಲು ಪೋಷಕರ ಆತಂಕ.‌

ಪ್ರತಿಭಟನೆಯಲ್ಲಿ ಕರವೇ ಮುಖಂಡರಾದ ಶ್ರೀಮತಿ ಬಸಮ್ಮ, ಮಂಜುಳಾ ಮಾಂತೇಶ್, ಮಂಜುಳಾ ಗಣೇಶ್, ಶಾಂತಮ್ಮ, ಸಾಕಮ್ಮ, ರವಿಕುಮಾರ್, ಗಿರೀಶ್ ಕುಮಾರ್. ಗೋಪಾಲ್ ದೇವರಮನೆ, ಭಾಷಾ, ಸುರೇಶ್, ಚಂದ್ರು, ಮಹೇಶ್ವರಪ್ಪ, ವಾಸುದೇವ ರಾಯ್ಕರ್, ಈಶ್ವರ್, ಸಂತೋಷ್ ಜಿ .ಎಸ್. ನಾಗರಾಜ್, ತುಳಸಿ ರಾಮ್, ಪರಮೇಶ್, ಮಂಜು, ಧರ್ಮರಾಜ, ನಾಗರಾಜ್, ಆಟೋ ರಫಿಕ್, ಜಬಿಉಲ್ಲಾಪೈಲ್ವಾನ್, ಹರಿಹರ ತಾಲೂಕ ಅಧ್ಯಕ್ಷರಾದ ರಾಜೇಶ್, ಇಂತ್ತಿಯಾಜ್, ಶಶಿಕುಮಾರ್, ಮನ್ಸೂರ್ ಅಲಿ, ಚನ್ನಗಿರಿ ತಾಲೂಕ ಅಧ್ಯಕ್ಷರಾದ ಮಲ್ಲನಾಯಕ್, ಬಸವರಾಜ್, ಕುಪೇಂದ್ರ ನಾಯಕ್ ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪಿಬಿ ರಸ್ತೆಯಲ್ಲಿ ಮುಸ್ಲಿಂ ಬಾಂಧವರ ರಂಜಾನ್ ಆಚರಣೆ

ಪವಿತ್ರ ರಂಜಾನ್ (ಈದ್ ಉಲ್ ಫಿತುರ್) ಆಚರಣೆ ಹಿನ್ನೆಲೆಯಲ್ಲಿ ದಾವಣಗೆರೆ ನಗರದ...

ದಾವಣಗೆರೆ | ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಮರ್ಥ್ ಶಾಮನೂರು: ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್...

ದಾವಣಗೆರೆ | ದಕ್ಷಿಣ ಕ್ಷೇತ್ರ ಉಪಚುನಾವಣೆ; ಎಸ್ ಟಿ ಮೋರ್ಚಾದ ಶ್ರೀನಿವಾಸ್ ಗೆ ಒಲಿದ ಬಿಜೆಪಿ ಟಿಕೆಟ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮ...

ದಾವಣಗೆರೆ | ಒಳಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯಕ್ಕೆ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ಹೋರಾಟ

ಸರ್ವೋಚ್ಛ ನ್ಯಾಯಾಲಯದ ಸಂವಿಧಾನಿಕ ಪೀಠವು ಒಳ ಮೀಸಲಾತಿ ವರ್ಗೀಕರಣ ಹಾಗೂ ಜಾರಿಯ...