ದಾವಣಗೆರೆ | ಕೆರೆ ನೀರು ಪೋಲು, ನೀರಾವರಿ ಇಲಾಖೆ ನಿರ್ಲಕ್ಷ್ಯ; ದುರಸ್ತಿಗೆ ರೈತಸಂಘದ ಮುಖಂಡರ ಆಗ್ರಹ

Date:

“ಜಗಳೂರು ತಾಲೂಕಿನ ಭರಮ ಸಮುದ್ರ ಕೆರೆಯಲ್ಲಿ ಟ್ಯೂಬ್ ಗಳಲ್ಲಿ ನೀರು ಪೋಲಾಗುತ್ತಿದೆ. ಸಂಬಂಧಪಟ್ಟ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳಿಗೂ ತಿಳಿಸಿದರೂ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದ್ದಾರೆ. ಕೆರೆ ತುಂಬಿಸುವ ಯೋಜನೆಯಡಿ ಕೆರೆಗೆ ನೀರು ಹರಿಸುತ್ತಿದ್ದು, ಕೆರೆಯ ತೂಬುಗಳಲ್ಲಿ ಹೆಚ್ಚಿನ ನೀರು ಪೋಲಾಗುತ್ತಿದೆ. ಹೀಗಾದಲ್ಲಿ ಕೆರೆಗೆ ಎಷ್ಟು ನೀರು ಹರಿಸಿದರೂ ರೈತರು, ಸಾರ್ವಜನಿಕರಿಗೆ ಉಪಯೋಗ ಇಲ್ಲದೇ ವ್ಯರ್ಥವಾಗಲಿದ್ದು, ಕೂಡಲೇ ದುರಸ್ಥಿ ಕಾರ್ಯ ಕೈಗೊಳ್ಳಬೇಕು” ಎಂದು ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ರೈತಸಂಘದ ಮುಖಂಡ ಕುಮಾರ್ ಭರಮಸಮುದ್ರ ಒತ್ತಾಯಿಸಿದರು.‌

1002555634 1

ಈ ಬಗ್ಗೆ ಮಾಹಿತಿ ನೀಡಿದ “ಅವರು ಹಲವು ದಿನಗಳಿಂದ ಕೆರೆ ತೂಬಿನಲ್ಲಿ ಬಿರುಕುಂಟಾಗಿ ನೀರು ಸೋರಿ ಹೋಗುತ್ತಿದೆ. ಇದನ್ನು ಅಧಿಕಾರಿಗಳ ಗಮನಕ್ಕೆ ತಂದರೂ, ಅರ್ಧಂಬರ್ಧ ಕೆಲಸ ಮಾಡಿ ಹೋದಂತಹ ಅಧಿಕಾರಿಗಳು ಕೆರೆಯ ಕಡೆ ನೋಡದೆ ಮತ್ತೆ ತೂಬುಗಳಲ್ಲಿ ಹೆಚ್ಚಿನ ನೀರು ಪೋಲಾಗುತ್ತಿದೆ. ಕೆರೆಗಳಿಗೆ ಜಗಳೂರು 57 ಕೆರೆ ತುಂಬಿಸುವ ಯೋಜನೆಯಡಿ ನೀರು ಬಿಟ್ಟಿದ್ದು, ಮತ್ತೊಂದು ಕಡೆ ಈ ವರ್ಷ ಉತ್ತಮ ಮಳೆ ಆಗುತ್ತಿದ್ದು, ಮತ್ತೆ ಕೆರೆ ಕೋಡಿ ಬಿದ್ದಿದೆ. ಇದರಿಂದಾಗಿ ರೈತರಿಗೆ ಆತಂಕ ಉಂಟಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ತುರ್ತಾಗಿ ಕೆರೆಯ ಟ್ಯೂಬ್ಗಳಿಂದ ನೀರು ಪೋಲಾಗುತ್ತಿರುವುದನ್ನು ನಿಲ್ಲಿಸಬೇಕು. ಒಂದು ವೇಳೆ ಏನಾದರೂ ನಿರ್ಲಕ್ಷ್ಯ ಮಾಡಿದಲ್ಲಿ, ಅನಾಹುತಗಳು ಸಂಭವಿಸಿದಲ್ಲಿ ಮುಂದಿನ ದಿನದಲ್ಲಿ ಸಂಬಂಧಪಟ್ಟ ಕಚೇರಿಗಳಿಗೆ ಬೀಗ ಹಾಕುವುದರ ಮುಖಾಂತರ ಬೃಹತ್ ಹೋರಾಟ ನಡೆಸಲಾಗುವುದು” ಎಂದು ಎಚ್ಚರಿಸಿದರು.‌

ಈ ಸುದ್ದಿ ಓದಿದ್ದೀರಾ ? ದಾವಣಗೆರೆ | ಶಾಲೆಗೆ ರಸ್ತೆ ಅಭಿವೃದ್ಧಿಪಡಿಸಲು ಆರನೇ ತರಗತಿ ವಿದ್ಯಾರ್ಥಿನಿ ಗ್ರಾ.ಪಂ. ಮುಂದೆ ಧರಣಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ (ಡಾ ವಾಸುದೇವ ಮೇಟಿ ಬಣ ) ಜಗಳೂರು ತಾಲೂಕಿನ ಮುಖಂಡರು ಕಾರ್ಯಕರ್ತರು ರೈತರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪಿಬಿ ರಸ್ತೆಯಲ್ಲಿ ಮುಸ್ಲಿಂ ಬಾಂಧವರ ರಂಜಾನ್ ಆಚರಣೆ

ಪವಿತ್ರ ರಂಜಾನ್ (ಈದ್ ಉಲ್ ಫಿತುರ್) ಆಚರಣೆ ಹಿನ್ನೆಲೆಯಲ್ಲಿ ದಾವಣಗೆರೆ ನಗರದ...

ದಾವಣಗೆರೆ | ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಮರ್ಥ್ ಶಾಮನೂರು: ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್...

ದಾವಣಗೆರೆ | ದಕ್ಷಿಣ ಕ್ಷೇತ್ರ ಉಪಚುನಾವಣೆ; ಎಸ್ ಟಿ ಮೋರ್ಚಾದ ಶ್ರೀನಿವಾಸ್ ಗೆ ಒಲಿದ ಬಿಜೆಪಿ ಟಿಕೆಟ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮ...

ದಾವಣಗೆರೆ | ಒಳಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯಕ್ಕೆ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ಹೋರಾಟ

ಸರ್ವೋಚ್ಛ ನ್ಯಾಯಾಲಯದ ಸಂವಿಧಾನಿಕ ಪೀಠವು ಒಳ ಮೀಸಲಾತಿ ವರ್ಗೀಕರಣ ಹಾಗೂ ಜಾರಿಯ...