ದಾವಣಗೆರೆ | ಕೊಲೆ ಪ್ರಕರಣ ಭೇದಿಸಲು ಪೊಲೀಸರಿಗೆ ನೆರವಾದ ‘ಆ್ಯಪ್’

Date:

ಎಲ್ಲ ಕ್ಷೇತ್ರಗಳಲ್ಲಿಯೂ ತಂತ್ರಜ್ಞಾನ ಮುಂದುವರೆಯುತ್ತಿದೆ. ಕಳ್ಳರು, ಕೊಲೆಗಡುಕರು, ಹ್ಯಾಕರ್‌ಗಳು ತಮ್ಮ ಅಪರಾಧಗಳಿಲ್ಲಿಯೂ ತಂತ್ರಜ್ಞಾನವನ್ನು ಬಳಸಿಕೊಳ್ಳಲಾರಂಭಿಸಿದ್ದಾರೆ. ಅದೇ ರೀತಿ ಅವರನ್ನು ಬಂಧಿಸಬೇಕಾದ ಮತ್ತು ನಿಯಂತ್ರಿಸಬೇಕಾದ ಪೊಲೀಸರೂ ‘ಅಪ್‌ಡೇಟ್‌’ ಆಗಲೇಬೇಕಾದ ಅನಿವಾರ್ಯತೆ ಇದೆ. ಪೊಲೀಸ್‌ ಇಲಾಖೆಯೂ ಹೊಸ ಆ್ಯಪ್‌ಗಳನ್ನು ಅಭಿವೃದ್ಧಿಪಡಿಸಿ ಬಳಸಲಾರಂಭಿಸಿದೆ. ಅವುಗಳಲ್ಲಿ ಕ್ರೈಂ ಮತ್ತು ಕ್ರಿಮಿನಲ್ ಟ್ರ್ಯಾಕಿಂಗ್ ನೆಟ್‌ವರ್ಕ್ ಸಿಸ್ಟಮ್ (M-CCTNS) ಆ್ಯಪ್ ಕೂಡ ಒಂದು. ಕರ್ನಾಟಕದಲ್ಲಿ ಈ ಆ್ಯಪ್‌ ಬಳಸಿ, ಮೊದಲ ಬಾರಿಗೆ ಪ್ರಕರಣವೊಂದನ್ನು ಪೊಲೀಸರು ಬೇಧಿಸಿದ್ದಾರೆ.

ಮಾರ್ಚ್​​ 23 ರಂದು ದಾವಣಗೆರೆಯ ‘ರಿಂಗ್‌ ರೋಡ್‌’ನಲ್ಲಿ ಮೈ ಮೇಲೆ ಖಾರದ ಪುಡಿ ಹಾಕಿ, ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಲಾಗಿತ್ತು. ಮೃತ ವ್ಯಕ್ತಿ ಯಾರೆಂದು ಪತ್ತೆ ಮಾಡಲು ಪೊಲೀಸರು ಹರಸಾಹಸ ಪಟ್ಟಿದ್ದರಾದರೂ, ವ್ಯಕ್ತಿಯ ಗುರುತು ಮಾತ್ರ ಪತ್ತೆಯಾಗಿರಲಿಲ್ಲ. ಆಗ ಅವರಿಗೆ ಈ ಆ್ಯಪ್‌ ನೆರವಾಯಿತು. ಆ್ಯಪ್‌ ಸಹಾಯದಲ್ಲಿ ವ್ಯಕ್ತಿಯ ಗುರುತನ್ನು ಪತ್ತೆ ಹಚ್ಚಿದ ಪೊಲೀಸರು ಆತನ ಪತ್ನಿ ಮತ್ತು ಆಕೆಯ ಪ್ರಿಯಕರನನ್ನು ಬಂಧಿಸಿದ್ದಾರೆ.

ದಾವಣಗೆರೆಯ ವಿದ್ಯಾನಗರ ಪೊಲೀಸರು ಕೊಲೆಯಾದ ವ್ಯಕ್ತಿಯ ಬೆರಳಚ್ಚನ್ನು ‘ಸ್ಕಾನ್’ ಮಾಡಿ ಆ್ಯಪ್‌ಗೆ ಅಪ್‌ಲೋಡ್‌ ಮಾಡಿದ್ದಾರೆ. ಕೂಡಲೇ, ಆ ವ್ಯಕ್ತಿಯ ಹೆಸರು ಮತ್ತು ವಿಳಾಸ ತೆರೆದುಕೊಂಡಿದೆ. ಹತ್ಯೆಯಾದ ವ್ಯಕ್ತಿ, ಸಲೂನ್‌ನಲ್ಲಿ ಕೆಲಸ ಮಾಡುತ್ತಿದ್ದ ಮಹಾಂತೇಶ್ ಎಂಬುದನ್ನು ಪೊಲೀಸರು ಆ್ಯಪ್‌ ಮೂಲಕ ಕಂಡುಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ಹಾಸನ | ರಂಜಾನ್‌ ಉಪವಾಸದ ವೇಳೆ ಮೀಸಲಾತಿ ತೆಗೆದಿರುವುದೇ ಸರ್ಕಾರವನ್ನು ಕೆಳಗಿಳಿಸಲಿದೆ: ಎಚ್‌ ಡಿ ರೇವಣ್ಣ

ಪ್ರಕರಣದ ಬೆನ್ನತ್ತಿದ ಪೊಲೀಸರು ಆತನ ಪತ್ನಿ ಸೌಮ್ಯ ಹಾಗೂ ಅವಳ ಪ್ರಿಯಕರ ಚಂದ್ರಶೇಖರ್‌ನನ್ನು ವಿಚಾರಣೆ ಒಳಪಡಿಸಿದ್ದಾರೆ. ಈ ಇಬ್ಬರೂ ಸೇರಿ, ಮದ್ಯದಲ್ಲಿ ನಿದ್ರೆ ಮಾತ್ರೆ ಬೆರೆಸಿ, ಆತನಿಗೆ ಕುಡಿಸಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸ್‌ ರೆಕಾರ್ಡ್‌ನಲ್ಲಿ ಯಾವುದೇ ವ್ಯಕ್ತಿಯ ಹೆಸರು ಮತ್ತು ವಿಳಾಸ ನಮೂದಾಗಿದ್ದರೆ ಮಾತ್ರವೇ ಈ ಆ್ಯಪ್‌ನಲ್ಲಿ ಅವರ ಗುರುತನ್ನು ಪತ್ತೆ ಹಚ್ಚಬಹುದು ಎನ್ನಲಾಗಿದೆ. ಈ ಆ್ಯಪ್‌ಅನ್ನು ರಾತ್ರಿ ಗಸ್ತಿನ ಸಮಯದಲ್ಲಿ ರಸ್ತೆಯಲ್ಲಿ ಅನುಮಾನಾಸ್ಪದವಾಗಿ ಓಡಾಡುವ ವ್ಯಕ್ತಿಗಳನ್ನು ಪರಿಶೀಲಿಸಲು ಬಳಸಲಾಗುತ್ತದೆ ಎಂದು ತಿಳಿದುಬಂದಿದೆ. ಇದೇ ಮೊದಲ ಬಾರಿಗೆ, ರಾಜ್ಯದಲ್ಲಿ ಈ ಆ್ಯಪ್‌ ಬಳಸಿ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...