ದಾವಣಗೆರೆ | ಅಪ್ರಾಪ್ತರ ವಾಹನ ಚಾಲನೆ, 25 ಸಾವಿರ ದಂಡ, ಜೈಲು, ವಾಹನದ ನೋಂದಣಿ ರದ್ದು.

Date:

ಅಪ್ರಾಪ್ತರಿಗೆ ವಾಹನ ಚಾಲನೆಗೆ ಕೊಡದಂತೆ, ಸಾರ್ವಜನಿಕವಾಗಿ ಆಗುವ ಪ್ರಾಣಹಾನಿ, ನಷ್ಟ ತಪ್ಪಿಸಲು ಸಾರಿಗೆ ಇಲಾಖೆ ಅನೇಕ ನಿಯಮಗಳನ್ನು ರೂಪಿಸಿದ್ದು, ಜಾರಿಗೆ ತಂದಿದೆ. ಅಲ್ಲಲ್ಲಿ ಇದರ ಉಲ್ಲಂಘನೆಯಾಗುತ್ತಿದ್ದು, ಅದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಇಲಾಖೆ, ನ್ಯಾಯಾಲಯಗಳು ತಿಳಿಸಿದರೂ ಪ್ರಕರಣಗಳು ದಾಖಲಾಗುತ್ತಿವೆ. ಈರೀತಿಯ ಪ್ರಕರಣವೊಂದು ದಾವಣಗೆರೆಯಲ್ಲಿ ದಾಖಲಾಗಿದ್ದು, ನ್ಯಾಯಾಲಯ ವಾಹನ ಮಾಲೀಕರು, ಪಾಲಕರನ್ನು ಹೊಣೆಗಾರರನ್ನಾಗಿಸಿ ಮತ್ತೊಮ್ಮೆ ದಂಡ, ಜೈಲು, ವಾಹನ ನೋಂದಣಿ ರದ್ದು ಶಿಕ್ಷೆ ನೀಡಿ ಚಾಟಿ ಬೀಸಿದೆ.‌

ಅಪ್ರಾಪ್ತ ವಯಸ್ಸಿನ ಮಕ್ಕಳ ಕೈಗೆ ವಾಹನ ಚಾಲನೆ ಮಾಡಲು ಕೊಡುವ ಪಾಲಕರಿಗೆ, ವಾಹನ ಮಾಲೀಕರಿಗೆ ದಾವಣಗೆರೆ ಸಂಚಾರ ಪೊಲೀಸರು ಬಿಸಿ ಮುಟ್ಟಿಸಿ ಅರಿವು ಮೂಡಿಸಿದ್ದಾರೆ, ಇದೇ ರೀತಿ ಸಂಚಾರ ನಿಯಮ ಉಲ್ಲಂಘನೆ ಮಾಡುವ ಸವಾರರ ಮೇಲೆ ವಿಶೇಷ ಕಾರ್ಯಾಚರಣೆ ನಡೆಸಿ ಕ್ರಮ ಜರುಗಿಸಲಾಗುವುದು ಹಾಗೂ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ನ್ಯಾಯಾಲಯದ ತೀರ್ಪಿನ ಹಿನ್ನೆಲೆಯಲ್ಲಿ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್  ಮತ್ತೊಮ್ಮೆ ಸಾರ್ವಜನಿಕರಿಗೆ ಎಚ್ಚರಿಸಿದ್ದಾರೆ.

1001689240
ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್

ದಾವಣಗೆರೆ ನಗರದ ಹೊಂಡದ ರಸ್ತೆ ಅರುಣ ಎಲ್.ಸಿ ಗೇಟ್  ಬಳಿ ಪೊಲೀಸ್ ವರಿಷ್ಠಾಧಿಕಾರಿ  ಉಮಾ ಪ್ರಶಾಂತ್ ರವರ ಸೂಚನೆಯಂತೆ ನಗರದ ಡಿವೈಎಸ್ಪಿ ಶರಣಬಸವೇಶ್ವರ ಬೀಮರಾವ್ ರವರ ಮಾರ್ಗದರ್ಶನದಲ್ಲಿ ಬಸವನಗರ ಪೊಲೀಸ್ ಠಾಣೆ ಪಿಐ  ನಂಜುಂಡಸ್ವಾಮಿ ಎಂ, ಸಿಬ್ಬಂದಿಗಳೊಂದಿಗೆ ವಿಶೇಷ ಕಾರ್ಯಾಚರಣೆ ನಡೆಸಿದ್ದು, ಐಎಂವಿ ಪ್ರಕರಣಗಳನ್ನು ದಾಖಲು ಮಾಡುತ್ತಿರುವ ಸಮಯದಲ್ಲಿ ಹೊಂಡಾ ಆಕ್ಟಿವಾ ಸ್ಕೂಟರೊಂದನ್ನು ಅಪ್ರಾಪ್ತ ಬಾಲಕನೊಬ್ಬ ಚಲಾಯಿಸಿಕೊಂಡು ಬಂದಿದ್ದು ತಡೆದು ನಿಲ್ಲಿಸಿದ್ದಾರೆ. ಅಪ್ರಾಪ್ತ ವಯಸ್ಕ ಸಾರ್ವಜನಿಕ ರಸ್ತೆ ಮೇಲೆ ವಾಹನ ಚಲಾಯಿಸಿದ ಹಿನ್ನಲೆಯಲ್ಲಿ  ಆಕ್ಟಿವ್ ಹೊಂಡ ಬೈಕ್ ಅನ್ನು ಜಪ್ತಿ ಮಾಡಿ  ಬಸವನಗರ ಪೊಲೀಸ್ ಠಾಣೆಯಲ್ಲಿ ಇಂಡಿಯನ್ ಮೋಟಾರ್ ವೆಹಿಕಲ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಿ.  1ನೇ ಜೆಎಂಎಫ್ಸಿ ದಾವಣಗೆರೆ ನ್ಯಾಯಾಲಯಕ್ಕೆ ಆಕ್ಟಿವ್ ಹೊಂಡ ಬೈಕ್ ಮಾಲೀಕರ ಮೇಲೆ ದೋಷಾರೋಪಣೆ ಪತ್ರ ಸಲ್ಲಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ‘ಒಳಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ’; ಕ್ರಾಂತಿಕಾರಿ ಪಾದಯಾತ್ರೆ

ವಿಚಾರಣೆ ನಡೆಸಿದ ನ್ಯಾಯಾಲಯವು ಅಪ್ರಾಪ್ತ ವಯಸ್ಕನಿಗೆ ಚಾಲನೆ ಮಾಡಲು ಕೊಟ್ಟಿದ್ದಕ್ಕೆ ವಾಹನದ ಮಾಲೀಕರಿಗೆ ಒಂದು ದಿನ ಸಾದಾ ಸಜೆ ಮತ್ತು 25000/-ರೂ ದಂಡ ಹಾಗು ವಾಹನದ ನೊಂದಣಿಯನ್ನು1 ವರ್ಷದವರೆಗೆ ರದ್ದು ಪಡಿಸಲು ತೀರ್ಪು ನೀಡಿದೆ. ಅಲ್ಲದೇ ವಾಹನ ಚಾಲನೆ ಮಾಡಿಕೊಂಡು ಬಂದ ಅಪ್ರಾಪ್ತ ಬಾಲಕನಿಗೆ 25ವರ್ಷ ತುಂಬುವರೆಗೂ ಚಾಲನಾ ಪರವಾನಿಗೆಯನ್ನು ನೀಡದಂತೆ ಶಿಕ್ಷೆ ವಿಧಿಸಲಾಗಿದೆ.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪಿಬಿ ರಸ್ತೆಯಲ್ಲಿ ಮುಸ್ಲಿಂ ಬಾಂಧವರ ರಂಜಾನ್ ಆಚರಣೆ

ಪವಿತ್ರ ರಂಜಾನ್ (ಈದ್ ಉಲ್ ಫಿತುರ್) ಆಚರಣೆ ಹಿನ್ನೆಲೆಯಲ್ಲಿ ದಾವಣಗೆರೆ ನಗರದ...

ದಾವಣಗೆರೆ | ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಮರ್ಥ್ ಶಾಮನೂರು: ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್...

ದಾವಣಗೆರೆ | ದಕ್ಷಿಣ ಕ್ಷೇತ್ರ ಉಪಚುನಾವಣೆ; ಎಸ್ ಟಿ ಮೋರ್ಚಾದ ಶ್ರೀನಿವಾಸ್ ಗೆ ಒಲಿದ ಬಿಜೆಪಿ ಟಿಕೆಟ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮ...

ದಾವಣಗೆರೆ | ಒಳಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯಕ್ಕೆ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ಹೋರಾಟ

ಸರ್ವೋಚ್ಛ ನ್ಯಾಯಾಲಯದ ಸಂವಿಧಾನಿಕ ಪೀಠವು ಒಳ ಮೀಸಲಾತಿ ವರ್ಗೀಕರಣ ಹಾಗೂ ಜಾರಿಯ...