ದಾವಣಗೆರೆ | ಮುಸ್ಲಿಮ್‌ ಎಜುಕೇಷನ್‌ ಫಂಡ್‌ ಅಸೋಸಿಯೇಷನ್‌ ವಿದ್ಯಾರ್ಥಿವೇತನ ಹಂಚಿಕೆ ಹಾಗೂ ಬೀಳ್ಕೊಡುಗೆ ಸಮಾರಂಭ

Date:

77ನೇ ಗಣರಾಜ್ಯೋತ್ಸವ ದಿನದ ಅಂಗವಾಗಿ ಅರ್ಹ ವಿದ್ಯಾರ್ಥಿಗಳಿಗೆ ಮುಸ್ಲಿಮ್‌ ಎಜುಕೇಷನ್‌ ಫಂಡ್‌ ಅಸೋಸಿಯೇಷನ್‌ನಿಂದ ವಿದ್ಯಾರ್ಥಿವೇತನ ಹಂಚಿಕೆ ಕಾರ್ಯಕ್ರಮ ಹಾಗೂ ದಾವಣಗೆರೆ ಜಿಲ್ಲಾ ವಕ್ಫ್‌ ಅಧಿಕಾರಿ ಸೈಯದ್‌ ಮೊಅಜಮ್‌ ಪಾಷ ಇವರ ಸೇವಾ ನಿವೃತ್ತಿ ಪ್ರಯುಕ್ತ ಬೀಳ್ಕೊಡುಗೆ ಸಮಾರಂಭವನ್ನು ಭಾನುವಾರ ದಾವಣಗೆರೆಯ ಮುಸ್ಲಿಂ ವಿದ್ಯಾರ್ಥಿನಿಲಯದಲ್ಲಿ ಹಮ್ಮಿಕೊಳ್ಳಲಾಗಿತ್ತು.

1003607001

ಕಾರ್ಯಕ್ರಮ ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿ ಮಾತನಾಡಿದ ವಿಧಾನ ಪರಿಷತ್‌ ಸದಸ್ಯರಾದ ಕೆ. ಅಬ್ದುಲ್‌ ಜಬ್ಬಾರ್‌ ಸಾಬ್, “ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಶಿಸ್ತನ್ನು ಅಳವಡಿಸಿಕೊಳ್ಳಬೇಕು, ತಂದೆ ತಾಯಿಯ ಘನತೆ ಗೌರವವನ್ನು ಕಾಪಾಡಬೇಕು. ಹಾಗೂ ದೇಶದ ಉತ್ತಮ ನಾಗರೀಕರಾಗಬೇಕು. ಹಾಗೂ ದುಶ್ಚಟಗಳಿಂದ ದೂರವಿರಬೇಕು. ಪೋಷಕರು ತಮ್ಮ ಮಕ್ಕಳ ಮೇಲೆ ವಿಶೇಷ ಗಮನ ಹರಿಸಬೇಕು. ಮಕ್ಕಳು ಯಾರ ಜೊತೆ ಸಂಪರ್ಕದಲ್ಲಿದ್ದಾರೆ, ಎಷ್ಟು ಹೊತ್ತಿಗೆ ಕಾಲೇಜಿಗೆ ಹೋಗುತ್ತಾರೆ, ಅವರ ದೈನಂದಿನ ಚಟುವಟಿಕೆಗಳ ಬಗ್ಗೆ ನಿಗಾವಹಿಸಬೇಕು. ಉತ್ತಮ ವಿದ್ಯಾಭ್ಯಾಸ ಪಡೆದು ಅವಕಾಶಗಳನ್ನು ಬಳಸಿಕೊಳ್ಳಬೇಕು” ಎಂದು ಕರೆ ನೀಡಿದರು.

1003606995

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ ನಿರ್ದೇಶಕರಾದ ಮೊಹಮ್ಮದ್‌ ಸಿರಾಜ್‌ ಮಾತನಾಡಿ, “ಈಗಿರುವ ಸುಸಜ್ಜಿತ ಮುಸ್ಲಿಮ್‌ ಹಾಸ್ಟೆಲ್‌ ಕಟ್ಟಡವು ಮಾನ್ಯ ಕೆ. ಅಬ್ದುಲ್‌ ಜಬ್ಬಾರ್‌ ರವರ ಪ್ರಯತ್ನದಿಂದ ನಿರ್ಮಿಸಲಾಗಿದ್ದು, ಹೊಸದಾಗಿ ನಿರ್ಮಾಣ ಮಾಡಲಾದ ಮೆಸ್‌, ಲೈಬ್ರರಿ ಹಾಲ್‌, ಸಭಾಂಗಣ ಇನ್ನಿತರೆ ಉದ್ದೇಶಗಳಿಗೆ ಉಪಯೋಗಿಸಬಹುದಾಗಿದೆ. ಹಾಗೂ ಇದರಿಂದ ವಿದ್ಯಾರ್ಥಿಗಳಿಗೆ ಸಾಕಷ್ಟು ಉಪಯೋಗವಾಗಿರುತ್ತದೆ” ಎಂದು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1003607003

ದಾವಣಗೆರೆ ಜಿಲ್ಲಾ ವಕ್ಫ್‌ ಅಧಿಕಾರಿ ಸೈಯದ್‌ ಮೊಅಜಮ್‌ ಪಾಷಾ ಪ್ರಾಸ್ತಾವಿಕವಾಗಿ ಮಾತನಾಡಿ, “ಪ್ರತಿ ವರ್ಷದಂತೆ ಈ ವರ್ಷವೂ ಸಹ ಸುಮಾರು 60 ಕ್ಕಿಂತಲೂ ಹೆಚ್ಚು ಅರ್ಹ ವಿದ್ಯಾರ್ಥಿಗಳಿಗೆ ಒಟ್ಟು ರೂ. 7.00 ಲಕ್ಷಕ್ಕಿಂತ ಅಧಿಕ ವಿದ್ಯಾರ್ಥಿವೇತನವನ್ನು ಹಂಚಿಕೆ ಮಾಡಲಾಗುತ್ತಿದ್ದು, ಇದರಿಂದ ಸಾಕಷ್ಟು ಬಡ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತಿದೆ. ಹಾಗೂ ವೈದ್ಯಕೀಯ ಕೋರ್ಸ್‌ ಮಾಡುವ ಒಬ್ಬ ವಿದ್ಯಾರ್ಥಿಗೆ ದತ್ತು ತೆಗೆದುಕೊಂಡು ಅವರ ಪೂರ್ತಿ ಕೋರ್ಸ್‌ ಮುಗಿಯುವವರೆಗೂ ಅವರಿಗೆ ವಿದ್ಯಾರ್ಥಿವೇತನವನ್ನು ನೀಡಲಾಗುವುದು. ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು” ಎಂದು ತಿಳಿಸಿದರು.

1003607009

ದಾವಣಗೆರೆ ನಗರದ ವಿವಿಧ ಕಾಲೇಜುಗಳಲ್ಲಿ ತಾಂತ್ರಿಕ, ವೈದ್ಯಕೀಯ ಹಾಗೂ ಇತರೆ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸುಮಾರು 60 ಕ್ಕಿಂತಲೂ ಹೆಚ್ಚು ಅರ್ಹ ವಿದ್ಯಾರ್ಥಿಗಳಿಗೆ ಒಟ್ಟು ರೂ. 7.00 ಲಕ್ಷಕ್ಕಿಂತಲೂ ಅಧಿಕ ವಿದ್ಯಾರ್ಥಿವೇತನವನ್ನು ಹಂಚಿಕೆ ಮಾಡಲಾಯಿತು. ಎಲ್ಲಾ ವಿದ್ಯಾರ್ಥಿಗಳಿಗೆ ಪಾರದರ್ಶಕತೆಯನ್ನು ಕಾಪಾಡಲು ಅವರ ಬ್ಯಾಂಕ್‌ ಖಾತೆಗಳಿಗೆ ಡಿಬಿಟಿ ಮುಖಾಂತರ ವಿದ್ಯಾರ್ಥಿವೇತನವನ್ನು ಪಾವತಿ ಮಾಡುವ ವಿಧಾನವನ್ನು ಅನುಷ್ಠಾನಗೊಳಿಸಲಾಯಿತು.

ಈ ಸುದ್ದಿ ಓದಿದ್ದೀರಾ? http://ದಾವಣಗೆರೆ | ವಿಶ್ವವಿದ್ಯಾಲಯದ ಘಟಿಕೋತ್ಸವ: ಚಿನ್ನದ ಹುಡುಗಿ ನಯನ ಎನ್ ಬಿ ಏಳು ಪದಕ

ಕಾರ್ಯಕ್ರಮದಲ್ಲಿ ಮುಸ್ಲಿಂ ಮುಖಂಡರಾದ ಮೊಹಮ್ಮದ್‌ ಸಿರಾಜ್‌, ಅಬ್ದುಲ್‌ ಘನಿ ತಾಹಿರ್‌, ಎಂ.ಎನ್.‌ ಸಮೀವುಲ್ಲಾ, ಬಿ. ಮೊಹಮ್ಮದ್‌ ಫೈರೋಜ್‌, ಅಬ್ದುಲ್‌ ನಾಸೀರ್‌ ಮೌಲಾನಾ, ಏಜಾಜ್‌ ಅಹಮದ್‌, ಪಿ. ಖಾಸೀಂ ಸಾಬ್‌, ಜಿಲ್ಲಾ ವಕ್ಫ್‌ ಅಧಿಕಾರಿ ಜಾಕೀರ್‌ ಹುಸೇನ್‌ ಹಾಗೂ ದಾವಣಗೆರೆ ಜಿಲ್ಲಾ ವಕ್ಫ್‌ ಸಂಸ್ಥೆಗಳ ಮುತವಲ್ಲಿಗಳು ಹಾಗೂ ವಿದ್ಯಾರ್ಥಿಗಳು, ಪೋಷಕರು, ಮುಸ್ಲಿಮ್‌ ಹಾಸ್ಟೆಲ್‌ ಹಾಗೂ ಜಿಲ್ಲಾ ವಕ್ಫ್‌ ಕಛೇರಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪಿಬಿ ರಸ್ತೆಯಲ್ಲಿ ಮುಸ್ಲಿಂ ಬಾಂಧವರ ರಂಜಾನ್ ಆಚರಣೆ

ಪವಿತ್ರ ರಂಜಾನ್ (ಈದ್ ಉಲ್ ಫಿತುರ್) ಆಚರಣೆ ಹಿನ್ನೆಲೆಯಲ್ಲಿ ದಾವಣಗೆರೆ ನಗರದ...

ದಾವಣಗೆರೆ | ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಮರ್ಥ್ ಶಾಮನೂರು: ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್...

ದಾವಣಗೆರೆ | ದಕ್ಷಿಣ ಕ್ಷೇತ್ರ ಉಪಚುನಾವಣೆ; ಎಸ್ ಟಿ ಮೋರ್ಚಾದ ಶ್ರೀನಿವಾಸ್ ಗೆ ಒಲಿದ ಬಿಜೆಪಿ ಟಿಕೆಟ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮ...

ದಾವಣಗೆರೆ | ಒಳಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯಕ್ಕೆ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ಹೋರಾಟ

ಸರ್ವೋಚ್ಛ ನ್ಯಾಯಾಲಯದ ಸಂವಿಧಾನಿಕ ಪೀಠವು ಒಳ ಮೀಸಲಾತಿ ವರ್ಗೀಕರಣ ಹಾಗೂ ಜಾರಿಯ...