ದಾವಣಗೆರೆ | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಮುಸ್ಲಿಂ ಒಕ್ಕೂಟ ಸಭೆ, ವಿರೋಧಿಸಿ ಪ್ರತಿಭಟನೆ.

Date:

ಸಂಸತ್ತಿನಲ್ಲಿ ಅಂಗೀಕಾರಗೊಂಡಿರುವ ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ದಾವಣಗೆರೆ ಮುಸ್ಲಿಂ ಒಕ್ಕೂಟದಿಂದ ನಗರದ ನೂರಾನಿ ಶಾದಿಮಹಲ್‌ನಲ್ಲಿ ಖಂಡನಾ ಸಭೆ ನಡೆಸಲಾಯಿತು. ಖಂಡನಾ ಸಭೆಯಲ್ಲಿ ಮುಸ್ಲಿಂ ಒಕ್ಕೂಟದ ಸಂಚಾಲಕ ಟಿ.ಅಸ್ಗರ್ ಮಾತನಾಡಿ, ವಕ್ಫ್ ತಿದ್ದುಪಡಿ ಕಾಯ್ದೆಯು ಸಂವಿಧಾನದ ಮೌಲ್ಯಗಳಿಗೆ ವಿರುದ್ಧವಾಗಿದ್ದು, ಮುಸ್ಲಿಂ ಸಮುದಾಯವನ್ನು ಗುರಿಪಡಿಸುವುದೇ ಇದರ ಉದ್ದೇಶವಾಗಿದೆ” ಎಂದು ಪ್ರತಿಭಟಿಸಿ ಮುಸ್ಲಿಂ ಒಕ್ಕೂಟದ ಮುಖಂಡ ಅಸಮಾಧಾನ ವ್ಯಕ್ತಪಡಿಸಿದರು.

1001798969
ವಕ್ಫ್ ತಿದ್ದುಪಡಿ ವಿರುದ್ಧ ಮುಸ್ಲಿಂ ಒಕ್ಕೂಟ

“ನಮ್ಮ ಪೂರ್ವಜರು ಅಲ್ಲಾನನ್ನು ಸಂತೃಪ್ತಿ ಪಡಿಸಲು, ಮುಸ್ಲಿಮರ ಸಬಲೀಕರಣಕ್ಕಾಗಿ ದಾನ ಮಾಡಿದ ಜಮೀನು ವಕ್ಫ್ ಆಸ್ತಿಯಲ್ಲಿದೆ. ವಕ್ಫ್ ಸೇರಿರುವ ಜಮೀನುಗಳು ಯಾರಿಂದಲೋ ಕಬಳಿಸಿದ ಜಮೀನಲ್ಲ. ಧರ್ಮವನ್ನು ಬದಿಗಿಟ್ಟು ಎಲ್ಲಾ ಭಾರತೀಯರು ನಮ್ಮ ಜೊತೆ ಕೈ ಜೋಡಿಸಬೇಕೆಂದು ನಾವು ಕೇಳುತ್ತೇವೆ” ಮನವಿ ಮಾಡಿದರು..

“ಇಂದು ಮುಸ್ಲಿಮರು ಗುರಿಯಾಗಿದ್ದರೆ, ನಾಳೆ ಎಲ್ಲಾ ಶೋಷಿತ, ದಮನಿತ ವರ್ಗಗಳು ಹೆಜ್ಜೆ ಹೆಜ್ಜೆಗೆ ಗುರಿಯಾಗುತ್ತವೆ. ನಮ್ಮ ಹೋರಾಟ ಹಿಂದೂ-ಮುಸ್ಲಿಂ ಹೋರಾಟವಲ್ಲ. ನಮ್ಮ ಹೋರಾಟ ಹಿಂದೂಗಳ ವಿರುದ್ಧವಲ್ಲ. ನಮ್ಮ ಹೋರಾಟ ಸಂವಿಧಾನ ನೀಡಿರುವಂತಹ ಹಕ್ಕುಗಳನ್ನು ಪಡೆದುಕೊಳ್ಳುವುದಕ್ಕಾಗಿದೆ. ಈ ಕಾಯ್ದೆ ಮುಸ್ಲಿಮರ ಹಿತಕ್ಕೆ ವಿರುದ್ಧವಾಗಿದೆ. ಇದು ಮುಸ್ಲಿಮರ ಜಮೀನು ಕಬಳಿಸುವ ಯತ್ನವಾಗಿದೆ. ನಮ್ಮ ಸಂವಿಧಾನಾತ್ಮಕ ಮೌಲ್ಯಗಳಿಗೆ ಇದು ವಿರುದ್ದವಾಗಿದೆ” ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001798970

“ಸುಪ್ರೀಂ ಕೋರ್ಟ್ನಲ್ಲಿ ಈಗಾಗಲೇ ಈ ಕಾಯ್ದೆ ವಿರುದ್ಧ ಅರ್ಜಿ ಸಲ್ಲಿಸಲಾಗಿದೆ. ನ್ಯಾಯಕ್ಕಾಗಿ ಹೋರಾಟ ಮುಂದುವರಿಸುತ್ತೇವೆ. ದಾವಣಗೆರೆಯಲ್ಲಿ ಇನ್ನೂ ದೊಡ್ಡ ಮಟ್ಟದ ಹೋರಾಟ ಮಾಡುತ್ತೇವೆ” ಎಂದು ಎಚ್ಚರಿಕೆ ನಿಡಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಬೆಸ್ಕಾಂ ನೌಕರರಿಗೆ ಎಚ್ಚರಿಕೆ ಗಂಟೆ, ನಿರ್ಲಕ್ಷ್ಯದ ಅವಘಡಕ್ಕೆ ಜೈಲು ಶಿಕ್ಷೆ.

ಈ ಸಂದರ್ಭದಲ್ಲಿ ವಕೀಲರಾದ ನಜೀರ್ ಅಹ್ಮದ್, ಮಹಮ್ಮದ್ ಅಲಿ ಶೋಯೇಬ್, ಮಹಮ್ಮದ್ ಅಲ್ತಾಫ್, ರಜ್ವಿ ರಿಯಾಜ್ ಸಾಬ್, ಇಸ್ಮಾಯಿಲ್ ಕಾಟ, ಆದಿಲ್, ಜಾಫರ್, ಕೋಳಿ ಇಬ್ರಾಹಿಂ ಸಾಬ್, ಶೇರಯಾರ ಜಂಗ ಸಾಬ್, ಸುಭಾನಿ, ಲಿಯಾಕತ್ ಅಲಿ, ಮುಜಾಹೀದ್, ಮುಜಾಮಿಲ್, ತಾಹೀರ್, ಇಮ್ರಾನ್, ನಿಜಾಮ, ರಫೀಕ್, ಸರ್ಫರಜ್, ಸದ್ಧಾಂ ಇತರರು ಉಪಸ್ಥಿತರಿದ್ದರು

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪಿಬಿ ರಸ್ತೆಯಲ್ಲಿ ಮುಸ್ಲಿಂ ಬಾಂಧವರ ರಂಜಾನ್ ಆಚರಣೆ

ಪವಿತ್ರ ರಂಜಾನ್ (ಈದ್ ಉಲ್ ಫಿತುರ್) ಆಚರಣೆ ಹಿನ್ನೆಲೆಯಲ್ಲಿ ದಾವಣಗೆರೆ ನಗರದ...

ದಾವಣಗೆರೆ | ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಮರ್ಥ್ ಶಾಮನೂರು: ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್...

ದಾವಣಗೆರೆ | ದಕ್ಷಿಣ ಕ್ಷೇತ್ರ ಉಪಚುನಾವಣೆ; ಎಸ್ ಟಿ ಮೋರ್ಚಾದ ಶ್ರೀನಿವಾಸ್ ಗೆ ಒಲಿದ ಬಿಜೆಪಿ ಟಿಕೆಟ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮ...

ದಾವಣಗೆರೆ | ಒಳಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯಕ್ಕೆ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ಹೋರಾಟ

ಸರ್ವೋಚ್ಛ ನ್ಯಾಯಾಲಯದ ಸಂವಿಧಾನಿಕ ಪೀಠವು ಒಳ ಮೀಸಲಾತಿ ವರ್ಗೀಕರಣ ಹಾಗೂ ಜಾರಿಯ...