ದಾವಣಗೆರೆ | ಸಂವಿಧಾನಿಕ ಹಕ್ಕುಗಳ ರಕ್ಷಣೆಗಾಗಿ ವಕ್ಫ್ ತಿದ್ದುಪಡಿ ವಿರುದ್ಧ ಮುಸ್ಲಿಂ ಒಕ್ಕೂಟ ಪ್ರತಿಭಟನೆ

Date:

ಸಂವಿಧಾನಿಕ ಹಕ್ಕುಗಳ, ಧಾರ್ಮಿಕ ಹಕ್ಕುಗಳ ರಕ್ಷಣೆಗಾಗಿ 2024ರ ವಕ್ಫ್ ತಿದ್ದುಪಡಿ ಮಸೂದೆ ವಿರುದ್ಧ  ವಿರೋಧ ವ್ಯಕ್ತಪಡಿಸಿ ದಾವಣಗೆರೆ ಮುಸ್ಲಿಂ ಒಕ್ಕೂಟ ದಾವಣಗೆರೆ ನಗರದ ಪಿ.ಬಿ. ರಸ್ತೆಯ ಮದೀನಾ ಮಸ್ಜಿದ್ ಮುಂಬಾಗ ಶಾಂತಿಯುತ ಪ್ರತಿಭಟನೆ ನಡೆಯಿತು.

ವಕ್ಫ್ ತಿದ್ದುಪಡಿ ಮಸೂದೆ- 2024 ವಿರುದ್ಧದ ಹೋರಾಟದಲ್ಲಿ ಪಾಲ್ಗೊಂಡಿದ್ದ ಯುವ ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ತಾಹೀರ್ ಸಮೀರ್ ಮಾತನಾಡಿ, “ವಕ್ಫ್ ತಿದ್ದುಪಡಿ ಮಸೂದೆ ಮುಸ್ಲಿಂ ಸಮುದಾಯದ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಆರ್ಥಿಕ ಹಕ್ಕುಗಳ ಮೇಲೆ ನೇರ ಹಲ್ಲೆಯಾಗಿದ್ದು, ವಕ್ಫ್ ಆಸ್ತಿಗಳ ಮೇಲಿನ ಸಮುದಾಯದ ಹಕ್ಕನ್ನು ಕಿತ್ತೆಸೆಯುವ ಪ್ರಯತ್ನವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಹವಾಮಾನ ಬದಲಾವಣೆಯಿಂದ ಹಲವೆಡೆ ಉತ್ತಮ ಮಳೆ, ಕೃಷಿ ಚಟುವಟಿಕೆಗಳಿಗೆ ಮುನ್ನುಡಿ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ತಿದ್ದುಪಡಿ ಭಾರತ ಸಂವಿಧಾನ ಕೊಟ್ಟಿರುವ ಧಾರ್ಮಿಕ ಹಕ್ಕುಗಳ ಉಲ್ಲಂಘನೆಯಾಗುತ್ತದೆ. ಸಂವಿಧಾನವು ಧರ್ಮವನ್ನು ಆಚರಿಸುವ, ಪಾಲನೆ ಮಾಡುವ ಮತ್ತು ಪ್ರಚಾರ ಮಾಡುವ ಹಕ್ಕು ನೀಡುತ್ತದೆ. ಧಾರ್ಮಿಕ ಸಂಸ್ಥೆಗಳಿಗೆ ಸ್ವತಂತ್ರವಾಗಿ ನಿರ್ವಹಣೆಯ ಹಕ್ಕು ನೀಡುತ್ತದೆ. ಅಲ್ಪಸಂಖ್ಯಾತ ಸಮುದಾಯಗಳಿಗೆ ಶಿಕ್ಷಣ ಸಂಸ್ಥೆಗಳ ಸ್ಥಾಪನೆ ಮತ್ತು ನಿರ್ವಹಣೆಯ ಹಕ್ಕು ಒದಗಿಸುತ್ತದೆ. ವಕ್ಫ್ ತಿದ್ದುಪಡಿಯಲ್ಲಿ ಇದರ ಉಲ್ಲಂಘನೆಯಾಗಿದೆ” ಎಂದು ಆರೋಪಿಸಿದರು.

‘ಇದು ಕೇವಲ ಕಾನೂನು ತಿದ್ದುಪಡಿ ಅಲ್ಲ, ಇದು ಅಲ್ಪಸಂಖ್ಯಾತರ ಧಾರ್ಮಿಕ ಮತ್ತು ಶೈಕ್ಷಣಿಕ ಸ್ವಾತಂತ್ರ್ಯದ ವಿರುದ್ಧದ ಕದನವಾಗಿದೆ’ ಎಂದ ಪ್ರತಿಭಟನಾಕಾರರು,   ವಕ್ಫ್ ತಿದ್ದುಪಡಿ ಮಸೂದೆ ಹಿಂಪಡೆಯುವವರೆಗೆ ಹೋರಾಟ ಮುಂದುವರಿಸುವುದಾಗಿ ಘೋಷಿಸಿದರು.

ಪ್ರತಿಭಟನೆಯಲ್ಲಿ ದಾವಣಗೆರೆ ಮುಸ್ಲಿಂ ಒಕ್ಕೂಟದ ಶೋಯಬ್ ಅಹ್ಮದ್, ಸಯ್ಯದ್ ಅಹ್ಮದ್, ಖಮರ್ ಅಲಿ, ಸಯ್ಯದ್ ತಾಹಿರ್, ಗೌಸ್, ಮೊಇನುದ್ದೀನ್, ಶಾನವಾಜ್, ನದೀಮ್, ಕಬೀರ್ ಲಾಲ್, ಅಹ್ಮದ್ ಅಲಿ ಮತ್ತು ರಹೀಂ ಸೇರಿದಂತೆ ಅನೇಕರು ಭಾಗವಹಿಸಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪಿಬಿ ರಸ್ತೆಯಲ್ಲಿ ಮುಸ್ಲಿಂ ಬಾಂಧವರ ರಂಜಾನ್ ಆಚರಣೆ

ಪವಿತ್ರ ರಂಜಾನ್ (ಈದ್ ಉಲ್ ಫಿತುರ್) ಆಚರಣೆ ಹಿನ್ನೆಲೆಯಲ್ಲಿ ದಾವಣಗೆರೆ ನಗರದ...

ದಾವಣಗೆರೆ | ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಮರ್ಥ್ ಶಾಮನೂರು: ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್...

ದಾವಣಗೆರೆ | ದಕ್ಷಿಣ ಕ್ಷೇತ್ರ ಉಪಚುನಾವಣೆ; ಎಸ್ ಟಿ ಮೋರ್ಚಾದ ಶ್ರೀನಿವಾಸ್ ಗೆ ಒಲಿದ ಬಿಜೆಪಿ ಟಿಕೆಟ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮ...

ದಾವಣಗೆರೆ | ಒಳಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯಕ್ಕೆ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ಹೋರಾಟ

ಸರ್ವೋಚ್ಛ ನ್ಯಾಯಾಲಯದ ಸಂವಿಧಾನಿಕ ಪೀಠವು ಒಳ ಮೀಸಲಾತಿ ವರ್ಗೀಕರಣ ಹಾಗೂ ಜಾರಿಯ...