ದಾವಣಗೆರೆ | ಅತ್ಯಾಚಾರ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಎನ್ ಎಫ್ ಐ ಡಬ್ಲ್ಯೂ ಮಹಿಳಾ ಸಂಘಟನೆ ಆಗ್ರಹ.

Date:

ಉಚ್ಚಂಗಿದುರ್ಗದಿಂದ ಬಸ್ ನಲ್ಲಿ ವಾಪಸು ಸ್ವಗ್ರಾಮಕ್ಕೆ ಹಿಂದಿರುಗುವ ವೇಳೆ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ ನೆಡೆದಿದ್ದು, ಇದರಲ್ಲಿ ಸಾಕ್ಷಿ ನಾಶಕ್ಕಾಗಿ ಯತ್ನವೂ ನೆಡೆದಿದೆ. ಪ್ರಕರಣದ ಅತ್ಯಾಚಾರ ಆರೋಪಿಗಳಿಗೆ ಉಗ್ರ ಶಿಕ್ಷೆ ವಿಧಿಸುವಂತೆ ಸಿಪಿಐಎಂನ ಎನ್ ಎಫ್ ಐ ಡಬ್ಲ್ಯೂ ಮಹಿಳಾ ಒಕ್ಕೂಟದಿಂದ ಪ್ರತಿಭಟನೆ ನಡೆಸಿ ದಾವಣಗೆರೆ ಉಪವಿಭಾಗಾಧಿಕಾರಿಗಳ ಮೂಲಕ ರಾಜ್ಯದ ಗೃಹ ಸಚಿವರಿಗೆ ಮನವಿ ಸಲ್ಲಿಸಿ ಒತ್ತಾಯಿಸಲಾಯಿತು.

ಪ್ರತಿಭಟನೆಯಲ್ಲಿ ಮಾತನಾಡಿದ ಮುಖಂಡರು “ಮಾರ್ಚ್ 31ರ ಸಂಜೆ ಯುಗಾದಿ ಹಬ್ಬದಂದು ಹರಪನಹಳ್ಳಿ ತಾಲೂಕಿನ ಉಚ್ಚಂಗಿದುರ್ಗದ ಉತ್ಸವಾಂಬಾ ದೇವಿಯ ದರ್ಶನಕ್ಕೆ ಆಗಮಿಸಿ ದೇವರ ದರ್ಶನ ಮಾಡಿ, ಸಂತ್ರಸ್ತ ಮಹಿಳೆ ವಾಪಸ್ ಸ್ವಗ್ರಾಮ ದಾವಣಗೆರೆ ತಾಲೂಕಿನ ಜೆರೆಕಟ್ಟೆ ಗ್ರಾಮಕ್ಕೆ ತೆರಳಲು, ಅಂದು ರಾತ್ರಿ ಸುಮಾರು 8:30ರ ಸಮಯದಲ್ಲಿ ಉಚ್ಚಂಗಿದುರ್ಗದಿಂದ ಖಾಸಗಿ ಬಸ್ ಒಂದರಲ್ಲಿ ಪ್ರಯಾಣಿಸಿದ್ದಾರೆ. ನಂತರ ಹತ್ತಿರದ ಗ್ರಾಮಗಳಲ್ಲಿ ಪ್ರಯಾಣಕರು ಇಳಿದಿದ್ದಾರೆ. ಬಸ್ಸಿನಲ್ಲಿ ಮಕ್ಕಳೊಂದಿಗೆ ಮಹಿಳೆ ಪ್ರಯಾಣಿಸುತ್ತಿರುವಾಗ ಬಸ್ಸಿನಲ್ಲಿ ಇತರೆ ಯಾವುದೇ ಪ್ರಯಾಣಿಕರು ಇಲ್ಲದಿರುವುದನ್ನು ದುರುಪಯೋಗ ಪಡಿಸಿಕೊಂಡು ಬಸ್ ನ ಚಾಲಕ, ನಿರ್ವಾಹಕ ಹಾಗೂ ಕ್ಲೀನರ್ 3 ಜನ ಸೇರಿ ಬಸ್ಸಿನಲ್ಲಿಯೇ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ್ದಾರೆ ಅರಸೀಕೆರೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮತ್ತು ಆರೋಪಿಗಳು ಈ ಪ್ರಕರಣದಿಂದ ತಪ್ಪಿಸಿಕೊಳ್ಳಲು ಪ್ರಭಾವ ಬೀರುವ ಪ್ರಯತ್ನ ನಡೆಸಿದ್ದಾರೆ” ಎಂದು ಆರೋಪಿಸಿದರು.

“ರಾಜ್ಯ ಸರ್ಕಾರದ ಗೃಹ ಮಂತ್ರಿ ಜಿ ಪರಮೇಶ್ವರ್ ರವರು, ಹಾಗೂ ಪೊಲೀಸರು ಕೂಡಲೇ ನ್ಯಾಯಯುತ ತನಿಖೆ ನಡೆಸಿ ಪ್ರಕರಣದಲ್ಲಿ ಆರೋಪಿಗಳಿಗೆ ಉಗ್ರ ಶಿಕ್ಷೆ ಆಗುವಂತೆ ಎನ್ ಎಫ್ ಐ ಡಬ್ಲ್ಯೂ ರಾಷ್ಟ್ರೀಯ ಮಹಿಳಾ ಒಕ್ಕೂಟ ದಾವಣಗೆರೆ ಜಿಲ್ಲಾ ಸಮಿತಿ ವತಿಯಿಂದ ಒತ್ತಾಯಿಸುತ್ತೇವೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಗ್ರಾಮ ಪಂಚಾಯತಿಯಲ್ಲಿ ಅಧ್ಯಕ್ಷೆಯ ಸಹೋದರನ ಹಸ್ತಕ್ಷೇಪ, ಸದಸ್ಯರಿಂದ ಕಛೇರಿಗೆ ಬೀಗ.

“ಜಾತ್ರೆಯ ಸಂದರ್ಭದಲ್ಲಿ ಸಾಕಷ್ಟು ಪೊಲೀಸ್ ಬಂದೋಬಸ್ತ್ ಮತ್ತು ಸಂಚಾರ ಪೊಲೀಸರ ಗಸ್ತು ಇದ್ದರೂ ಇಂತಹ ಘಟನೆ ನಡೆದಿರುವುದು ಅಮಾನವೀಯ ಕೃತ್ಯವಾಗಿದೆ. ಘಟನೆಗೆ ಕಾರಣರಾದ ಈ ಮೂರು ಜನರಿಗೆ ಉಗ್ರ ಶಿಕ್ಷೆಯನ್ನು ಕೊಡಬೇಕು ಮತ್ತು ಸಂತ್ರಸ್ತ ಮಹಿಳೆಗೆ ಸರ್ಕಾರ ಪರಿಹಾರ ಕೊಡಬೇಕೆಂದು” ಎನ್ ಎಫ್ ಐ ಡಬ್ಲ್ಯೂ ಮಹಿಳಾ ಸಂಘಟನೆ ಒತ್ತಾಯಿಸಿದೆ.

ಈ ವೇಳೆ ಎನ್ ಎಫ್ ಐ ಡಬ್ಲ್ಯೂ ಮಹಿಳಾ ಒಕ್ಕೂಟ ಸಂಘಟನೆಯ ಮಹಿಳಾ ಮುಖಂಡರಾದ ಹುಚ್ಚಂಗಮ್ಮ, ಹೆಚ್ ಜಿ ಮಂಜುಳಾ, ಅನ್ನಪೂರ್ಣ, ಸರೋಜಾ , ಉಚ್ಚಂಗಿಮ್ಮ ,ಶಕುಂತಲಮ್ಮ, ನಿರ್ಮಲ ,ಸ್ನೇಹಲತಾ, ಜ್ಯೋತಿಲಕ್ಷ್ಮಿ, ಲತಾ ಹಾಗು ಹಲವು ಮುಖಂಡರು ಹಾಜರಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪಿಬಿ ರಸ್ತೆಯಲ್ಲಿ ಮುಸ್ಲಿಂ ಬಾಂಧವರ ರಂಜಾನ್ ಆಚರಣೆ

ಪವಿತ್ರ ರಂಜಾನ್ (ಈದ್ ಉಲ್ ಫಿತುರ್) ಆಚರಣೆ ಹಿನ್ನೆಲೆಯಲ್ಲಿ ದಾವಣಗೆರೆ ನಗರದ...

ದಾವಣಗೆರೆ | ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಮರ್ಥ್ ಶಾಮನೂರು: ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್...

ದಾವಣಗೆರೆ | ದಕ್ಷಿಣ ಕ್ಷೇತ್ರ ಉಪಚುನಾವಣೆ; ಎಸ್ ಟಿ ಮೋರ್ಚಾದ ಶ್ರೀನಿವಾಸ್ ಗೆ ಒಲಿದ ಬಿಜೆಪಿ ಟಿಕೆಟ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮ...

ದಾವಣಗೆರೆ | ಒಳಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯಕ್ಕೆ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ಹೋರಾಟ

ಸರ್ವೋಚ್ಛ ನ್ಯಾಯಾಲಯದ ಸಂವಿಧಾನಿಕ ಪೀಠವು ಒಳ ಮೀಸಲಾತಿ ವರ್ಗೀಕರಣ ಹಾಗೂ ಜಾರಿಯ...