ದಾವಣಗೆರೆ | ಅಕ್ರಮ ದಾಖಲೆ ಸೃಷ್ಟಿಸಿ ವೃದ್ಧಾಪ್ಯ ವೇತನ ಮಾಶಾಸನ, 23ಜನರ ವಿರುದ್ಧ ದೂರು, ಮರು ವಸೂಲಿಗೆ ಶಿಫಾರಸು.

Date:

ಕೇಂದ್ರ ಸರ್ಕಾರದ ಇಂದಿರಾ ಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ಪಿಂಚಣಿ ಯೋಜನೆ ಮತ್ತು ರಾಜ್ಯ ಸರ್ಕಾರ ನೇತೃತ್ವದ ಸಂಧ್ಯಾ ಸುರಕ್ಷಾ ಯೋಜನೆ, ಮಾಶಾಸನ ದುರ್ಬಳಕೆ ಮಾಡಿಕೊಂಡು ಅಕ್ರಮ ದಾಖಲೆ ಸೃಷ್ಟಿಸಿ, ಅನಧಿಕೃತವಾಗಿ ವೃದ್ಧಾಪ್ಯ ವೇತನವನ್ನು ಪಡೆಯುತ್ತಿದ್ದ ದಾವಣಗೆರೆ ಜಿಲ್ಲೆ, ಚನ್ನಗಿರಿ ತಾಲೂಕಿನ ದಾಗಿನಕಟ್ಟೆ-ಯಲೋಧಹಳ್ಳಿಯ 23 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಜನಪ್ರತಿನಿಧಿಯೊಬ್ಬರು ಈ ಬಗ್ಗೆ ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿಯವರಿಗೆ ದೂರು ನೀಡಿದ್ದು, ಈ ಹಿನ್ನೆಲೆಯಲ್ಲಿ ಉಪವಿಭಾಗಾಧಿಕಾರಿಗಳಿಗೆ ತನಿಖೆಗೆ ಆದೇಶ ನೀಡಿದ್ದರು. ಅಧಿಕಾರಿಗಳ ಭೇಟಿ, ತನಿಖೆ ಕೈಗೊಂಡ ವೇಳೆ ಅಕ್ರಮ ಬಯಲಿಗೆ ಬಂದಿದ್ದು 23 ಜನರು ಅನಧಿಕೃತವಾಗಿ ಅಕ್ರಮ ದಾಖಲೆಗಳನ್ನು ಸಲ್ಲಿಸಿ ವೇತನ ಪಡೆಯುತ್ತಿದ್ದು, ಒಟ್ಟು 1,11,200 ಲಕ್ಷ ರೂಪಾಯಿ ಇದುವರೆಗೂ ವೇತನ ಪಾವತಿಯಾಗಿದೆ ಎಂದು ತನಿಖೆಯಲ್ಲಿ ತಿಳಿದು ಬಂದಿದ್ದು, ಆರೋಪಿಗಳ ವಿರುದ್ಧ ಬಸವಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಹೊನ್ನಾಳಿ ಕಂದಾಯ ಉಪವಿಭಾಗದ ಉಪ ವಿಭಾಗಾಧಿಕಾರಿ ವಿ.ಅಭಿಷೇಕ್,
ದಾಗಿನಕಟ್ಟೆ ಹಾಗೂ ಯಲೋದಹಳ್ಳಿ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು , ಗ್ರಾಮಗಳಲ್ಲಿ ವೃದ್ಧಾಪ್ಯ ವೇತನ ಪಡೆಯುತ್ತಿರುವವರ ಮನೆಗಳಿಗೆ ತೆರಳಿ ಪರಿಶೀಲಿಸಿದ್ದೇವೆ. ಈ ವೇಳೆ 23 ಜನ ಅನರ್ಹರು ವೃದ್ಧಾಪ್ಯ ವೇತನ ಹಾಗೂ 6 ಜನರು ಅಂಗವಿಕಲರ ಮಾಸಾಶನ ಪಡೆಯುತ್ತಿರುವುದು ಪತ್ತೆಯಾಗಿದೆ. ಅಕ್ರಮ ಹಿನ್ನೆಲೆ ತಪ್ಪು ಮಾಹಿತಿ ನೀಡಿ ಹಲವು ತಿಂಗಳಿಂದ ಪಡೆದಿದ್ದ ಮಾಸಾಶನ ನಿಲ್ಲಿಸಿ ಕ್ರಮ ಕೈಗೊಳ್ಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇವರ ವಿರುದ್ಧ ದೂರು ದಾಖಲಾಗಿದ್ದು, ಈ ಎರಡೂ ಯೋಜನೆಗಳ ಪೈಕಿ ಒಟ್ಟು 1,11,200 ಲಕ್ಷ ರೂಪಾಯಿ 23 ಜನ ಅನರ್ಹ ಫಲಾನುಭವಿಗಳ ಪಾಲಾಗಿದೆ ಎನ್ನುವ ಅಂಕಿ ಅಂಶಗಳಿದ್ದು, ಸರ್ಕಾರದ ಬೊಕ್ಕಸಕ್ಕೆ ನಷ್ಟ ಮಾಡಿರುವ ಹಣವನ್ನು ಆರೋಪಿಗಳಿಂದಲೇ ವಸೂಲಿ ಮಾಡುವಂತೆ ಕ್ರಮ ಕೈಗೊಳ್ಳಲು ವರದಿಯಲ್ಲಿ ಶಿಫಾರಸು ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

ಜನಪ್ರತಿನಿಧಿಯೊಬ್ಬರು ವೃದ್ಧಾಪ್ಯ ವೇತನ, ಮಾಶಾಸನದ ಅಕ್ರಮದ ಬಗ್ಗೆ ವೃದ್ಧಾಪ್ಯ ವೇತನ ಅನರ್ಹರ ಪಾಲಾಗುತ್ತಿದ್ದ ವಿಚಾರವನ್ನು ದಾವಣಗೆರೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ್ ಸ್ವಾಮಿ ಅವರ ಗಮನಕ್ಕೆ ತಂದಿದ್ದು ಬಯಲಿಗೆಳೆದಿದ್ದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಪರಿಶಿಷ್ಟ ಜಾತಿ ಗಣತಿ ಶೇ.100ರಷ್ಟು ‌ಸಾಧನೆಯ ಹೆಗ್ಗಳಿಕೆ; ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.

ಚನ್ನಗಿರಿ ತಾಲೂಕಿನ ಬಸವಾಪಟ್ಟಣ ಹೋಬಳಿಯ ಉಪ ತಹಶೀಲ್ದಾ‌ರ್ ನೀಲಮ್ಮ ಅವರು ವೃದ್ಧಾಪ್ಯ ವೇತನ ಮಂಜೂರು ಮಾಡುವ ವೇಳೆ ಸರಿಯಾದ ಕ್ರಮಕೈಗೊಂಡಿಲ್ಲದಿರುವುದು, ಕರ್ತವ್ಯ ಲೋಪ ಎಸಗಿರುವುದು ತನಿಖೆಯಲ್ಲಿ ಮೇಲ್ನೋಟಕ್ಕೆ ಕಂಡು ಬಂದಿದೆ. ಅವರ ವಿರುದ್ಧ ಕ್ರಮಕ್ಕೆ ವರದಿಯಲ್ಲಿ ಒತ್ತಾಯಿಸಲಾಗಿದೆ.‌ ಅಲ್ಲದೇ ವೃದ್ಧಾಪ್ಯ ವೇತನಕ್ಕೆ ಸಲ್ಲಿಸಿದ್ದ ಕಡತ ದಾಖಲೆಗಳು ಕಚೇರಿಯಲ್ಲಿಲ್ಲ, ಕಳೆದು ಹೋಗಿರುವುದಾಗಿ ಕಂಡು ಬಂದಿದೆ ಎನ್ನಲಾಗಿದೆ.‌

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪಿಬಿ ರಸ್ತೆಯಲ್ಲಿ ಮುಸ್ಲಿಂ ಬಾಂಧವರ ರಂಜಾನ್ ಆಚರಣೆ

ಪವಿತ್ರ ರಂಜಾನ್ (ಈದ್ ಉಲ್ ಫಿತುರ್) ಆಚರಣೆ ಹಿನ್ನೆಲೆಯಲ್ಲಿ ದಾವಣಗೆರೆ ನಗರದ...

ದಾವಣಗೆರೆ | ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಮರ್ಥ್ ಶಾಮನೂರು: ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್...

ದಾವಣಗೆರೆ | ದಕ್ಷಿಣ ಕ್ಷೇತ್ರ ಉಪಚುನಾವಣೆ; ಎಸ್ ಟಿ ಮೋರ್ಚಾದ ಶ್ರೀನಿವಾಸ್ ಗೆ ಒಲಿದ ಬಿಜೆಪಿ ಟಿಕೆಟ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮ...

ದಾವಣಗೆರೆ | ಒಳಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯಕ್ಕೆ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ಹೋರಾಟ

ಸರ್ವೋಚ್ಛ ನ್ಯಾಯಾಲಯದ ಸಂವಿಧಾನಿಕ ಪೀಠವು ಒಳ ಮೀಸಲಾತಿ ವರ್ಗೀಕರಣ ಹಾಗೂ ಜಾರಿಯ...