ದಾವಣಗೆರೆ | ಇಸ್ಲಾಂ ಪ್ರೀತಿಸಿದಂತೆ ಇತರೆ ಧರ್ಮಗಳನ್ನು ಗೌರವಿಸುವ ಮನೋಭಾವ ಇರಬೇಕು; ಜಮಾತೆ ಇಸ್ಲಾಂ ಕಾರ್ಯದರ್ಶಿ ಅಕ್ಬರ್ ಅಲಿ ಉಡುಪಿ

Date:

“ಜಗತ್ತಿಗೆ ಒಬ್ಬನೆ ಸೃಷ್ಟಿಕರ್ತನಿದ್ದಾನೆ, ನಾವುಗಳು ಆತನನ್ನು ಬೇರೆ, ಬೇರೆ ಹೆಸರಿನಿಂದ ಗುರುತಿಸುತ್ತೇವೆ. ನಮ್ಮ ಧರ್ಮವನ್ನು ಪ್ರೀತಿಸಿದಂತೆಯೆ ಇತರೆ ಧರ್ಮಗಳನ್ನು ಗೌರವಿಸುವ ಮನೋಭವ ಬೆಳೆಸಿಕೊಳ್ಳಬೇಕಿದೆ. ಈ ಮನೋಭಾವವು ಸಾಕಷ್ಟು ಕಲಹ, ಸಂಘರ್ಷಗಳನ್ನು ನಿವಾರಿಸುತ್ತದೆ. ವಿಭಿನ್ನ ಧರ್ಮ, ಜಾತಿ, ಪಂಥ, ವರ್ಣಗಳಿದ್ದರೂ ಜಗತ್ತಿನ ಮಾನವರೆಲ್ಲರೂ ಪರಸ್ಪರ ಸಹೋದರರೆಂದು ಇಸ್ಲಾಂಧರ್ಮ ಬೋಧಿಸುತ್ತದೆ” ಎಂದು ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಜಮಾತೆ ಇಸ್ಲಾಮಿ ಹಿಂದ್ ರಾಜ್ಯ ಕಾರ್ಯದರ್ಶಿ ಅಕ್ಬರ್ ಅಲಿ ಉಡುಪಿ ತಿಳಿಸಿದರು.

ದಾವಣಗೆರೆ ಜಿಲ್ಲೆಯ ಹರಿಹರ ನಗರದಲ್ಲಿ ಜಮಾತೆ ಇಸ್ಲಾಮಿ ಹಿಂದ್‍ನ ತಾಲ್ಲೂಕು ಘಟಕದ ಆಶ್ರಯದಲ್ಲಿ ನಗರದ ಅಲಿ ಮಸೀದಿಯಲ್ಲಿ ಬಕ್ರೀದ್ ಹಬ್ಬದ ನಿಮಿತ್ತ ಆಯೋಜಿಸಿದ್ದ ಈದ್ ಮಿಲನ್ ಕಾರ್ಯಕ್ರಮದಲ್ಲಿ ಅವರು ಪ್ರವಚನ ನೀಡಿದರು.

“ಸೃಷ್ಟಿಕರ್ತನು ಅನುಯಾಯಿಯೊಬ್ಬರ ತ್ಯಾಗ ಗುಣವನ್ನು ಪರೀಕ್ಷಿಸಿದ ಸಂದರ್ಭದ ಪ್ರತೀಕವಾಗಿ ಬಕ್ರೀದ್ ಹಬ್ಬವನ್ನು ಆಚರಿಸಲಾಗುತ್ತಿದೆ. ತ್ಯಾಗದ ಪ್ರತೀಕವಾದ ಬಕ್ರೀದ್ ಹಬ್ಬದ ನಿಜವಾದ ಆಚರಣೆ ಎಂದರೆ ತನಗೆ ಇಷ್ಟವಾದದ್ದನ್ನು ಸಂದರ್ಭ ಬಂದರೆ ತ್ಯಾಗ ಮಾಡುವುದಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೀಪಾವಳಿ, ಕ್ರಿಸ್‍ಮಸ್ ಹಬ್ಬದಲ್ಲಿ ನಾವೂ ಭಾಗವಹಿಸುತ್ತೇವೆ, ನಮ್ಮ ರಂಜಾನ್, ಬಕ್ರೀದ್ ಹಬ್ಬದಲ್ಲಿ ಇತರೆ ಧರ್ಮದವರೂ ಭಾಗವಹಿಸಿ ಸಂತಸವನ್ನು ಹಂಚಿಕೊಳ್ಳಬೇಕು. ಧರ್ಮಗಳ ಸಾರವನ್ನು ಅರಿತರೆ ಅಲ್ಲಿ ಸೌಹಾರ್ದತೆ, ಸ್ನೇಹ, ಶಾಂತಿಗೆ ಮಾತ್ರ ಅವಕಾಶ ಇರುತ್ತದೆ” ಎಂದರು.

“ಇಸ್ಲಾಮ್ ಧರ್ಮದ ಸಾರವನ್ನು ಇತರೆ ಧರ್ಮದವರಿಗೆ ತಿಳಿಸಲು, ಸೌಹಾರ್ದತೆಯನ್ನು ಮೆರೆಯಲು ಜಮಾತೆ ಇಸ್ಲಾಮಿ ಹಿಂದ್ ದೇಶದಾದ್ಯಂತ ಹಲವು ದಶಕಗಳಿಂದ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಆ ಮೂಲಕ ಪರಸ್ಪರರಲ್ಲಿ ಸ್ನೇಹ ಬೆಳೆಯಲು ದಾರಿಯಾಗಿದೆ” ಎಂದರು.

ಕಾರ್ಯಕ್ರಮದಲ್ಲಿ ಅಹಮದಾಬಾದಿನಲ್ಲಿ ನಡೆದ ವಿಮಾನದುರಂತದಲ್ಲಿ ಮಡಿದವರಿಗೆ ಎರಡು ನಿಮಿಷಗಳ ಮೌನಾಚರಣೆ ಮಾಡುವ ಮೂಲಕ ಶ್ರದ್ದಾಂಜಲಿ ಅರ್ಪಿಸಲಾಯಿತು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಸರ್ಕಾರ ರೈತ, ಬಡವರ್ಗಗಳಿಗೆ ಸಾಮೂಹಿಕ ಮದುವೆ ಆಯೋಜಿಸಿ ಉಡುಗೊರೆಯಾಗಿ ಉಚಿತ ಗೃಹ ಯೋಜನೆ ಜಾರಿಗೊಳಿಸಿ

ಮಾಜಿ ಶಾಸಕ ಎಸ್.ರಾಮಪ್ಪ, ತಾಪಂ ಮಾಜಿ ಅಧ್ಯಕ್ಷ ಟಿ.ಜೆ.ಮುರುಗೇಶಪ್ಪ, ಅಂಜುಮನ್ ಸಂಸ್ಥೆ ಅಧ್ಯಕ್ಷ ಆರ್.ಸಿ.ಜಾವೀದ್, ದಾವಣಗೆರೆ ಜಿಲ್ಲಾ ವಕ್ಫ್ ಸಲಹಾ ಸಮಿತಿ ಉಪಾಧ್ಯಕ್ಷ ಶಾಮೀರ್ ಆಲಂ ಖಾನ್, ನಗರಸಭಾ ಸದಸ್ಯರಾದ ಶಂಕರ್ ಬಟಾವ್‍ಕರ್, ಕೆ.ಬಿ.ರಾಜಶೇಖರ್, ಮುಖಂಡರಾದ ಬಿ. ರೇವಣಸಿದ್ದಪ್ಪ, ಬಿ.ಮೊಹ್ಮದ್ ಸಿಗ್ಬತ್‍ಉಲ್ಲಾ, ಎಚ್.ನಿಜಗುಣ, ಸಾಹಿತಿ ಚನ್ನಬಸಪ್ಪ ಹುಲಿಕಟ್ಟಿ, ಎಂ.ಬಿ.ಅಣ್ಣಪ್ಪ, ಬಿ.ಮೊಹ್ಮದ್ ಫೈರೋಜ್, ಜಾನಪದಕಲಾವಿದ ಪರಮೇಶ್ವರಪ್ಪ ಕತ್ತಿಗೆ, ಎಂ.ಆರ್.ಸೈಯದ್ ಸನಾಉಲ್ಲಾ, ಎಚ್.ನಿಜಗುಣ, ಮಕ್ಕಳ ತಜ್ಞ ವೈದ್ಯ ಗುಲಾಂನಬಿ, ಜಮಾತೆಇಸ್ಲಾಮಿ ಹಿಂದ್ ಹರಿಹರ ಘಟಕ ಅಧ್ಯಕ್ಷ ಅಬ್ದುಲ್ ಖಯೂಂ ಎಕ್ಕೆಗೊಂದಿ, ಪತ್ರಕರ್ತ ಬಿ.ಮಗ್ದುಮ್ ಸಾಬ್ ಹಾಗೂ ಇತರರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...