“ನಾನು ಕುಟುಂಬ ರಾಜಕಾರಣ ಬೆಂಬಲಿಸುವುದಿಲ್ಲ, ವಿರೋಧಿಸುತ್ತೇನೆ. ಆದರೆ ಕ್ಷೇತ್ರದಲ್ಲಿ ಅಳೆದು ತೂಗಿ ಎಲ್ಲ ರೀತಿಯಿಂದಲೂ ಗೆಲ್ಲುವ ಸಮರ್ಥ ಅಭ್ಯರ್ಥಿಗೆ ಟಿಕೆಟ್ ನೀಡಿದ್ದೇವೆ” ಎಂದು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆಯ ವೇಳೆ ದಾವಣಗೆರೆಯಲ್ಲಿ ತಿಳಿಸಿದರು.

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಶಾಮನೂರು ಸಮರ್ಥ್ ಪರ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರೊಂದಿಗೆ ರ್ಯಾಲಿಯಲ್ಲಿ ಆಗಮಿಸಿ ದಾವಣಗೆರೆ ಮಹಾನಗರ ಪಾಲಿಕೆಯ ಆವರಣದ ಚುನಾವಣಾ ಕಚೇರಿಗೆ ತೆರಳಿ ಬಿ-ಫಾರ್ಮ್ ನೊಂದಿಗೆ ನಾಮಪತ್ರ ಸಲ್ಲಿಸಿದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ “ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಲಿದೆ. ಎರಡೂ ಕಡೆ ಸಮರ್ಥ ಅಭ್ಯರ್ಥಿಗಳನ್ನು ಹಾಕಿದ್ದೇವೆ. ನಮ್ಮದು ನುಡಿದಂತೆ ನಡೆದ ಸರ್ಕಾರವಾಗಿದ್ದು, ಗ್ಯಾರಂಟಿಗಳೊಂದಿಗೆ ಮನೆಮನೆಗೂ ತಲುಪಿದ್ದೇವೆ. ಕಾಂಗ್ರೆಸ್ ಸಾಮಾಜಿಕವಾಗಿ, ಬಡವರ, ಹಿಂದುಳಿದವರ ಪರ ಕೆಲಸ ಮಾಡಲಿದೆ” ಎಂದು ತಿಳಿಸಿದರು.
“ಮತ್ತೆ ದಾವಣಗೆರೆ ಬಂದು ಎಲ್ಲರನ್ನೂ ಭೇಟಿ ಮಾಡಿ ಮತಯಾಚಿಸಿ ಪ್ರಚಾರ ಮಾಡಲಿದ್ದೇನೆ. ಈ ಹಿಂದಿನ ಉಪಚುನಾವಣೆಗಳಲ್ಲಿ ಮೂರನ್ನೂ ಕಾಂಗ್ರೆಸ್ ಗೆದ್ದಿದ್ದು, ಅವು ಕೂಡ ಮುಂದಿನ ಚುನಾವಣೆಗಳ ದಿಕ್ಸೂಚಿಗಳಾಗಿವೆ. ಅಲ್ಪಸಂಖ್ಯಾತರಿಗೂ ಕೂಡ ಮುಂದಿನ ದಿನಗಳಲ್ಲಿ ನ್ಯಾಯ ಒದಗಿಸುತ್ತೇವೆ” ಎಂದು ಪ್ರತಿಕ್ರಿಯಿಸಿದರು.
ಈ ಸುದ್ದಿ ಓದಿದ್ದೀರಾ? http://ದಾವಣಗೆರೆ | ಉಪಚುನಾವಣೆಯಲ್ಲಿ ಶಾಮನೂರು ಕುಟುಂಬಕ್ಕೆ ಟಿಕೆಟ್; ಕಾಂಗ್ರೆಸ್ ವಿರುದ್ಧ ಮುಸ್ಲಿಂರ ಆಕ್ರೋಶ
ಈ ವೇಳೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಎಸ್ಎಸ್ ಮಲ್ಲಿಕಾರ್ಜುನ್ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಶಾಮನೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್ಡಿ ಮಂಜಪ್ಪ, ಕಾಂಗ್ರೆಸ್ ಮುಖಂಡ ಆಯುಬ್ ಪೈಲ್ವಾನ್ ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.





