ದಾವಣಗೆರೆ | ಸಂವಿಧಾನಬದ್ದ ಹಕ್ಕುಗಳಿಗಾಗಿ ಯುವಕರ ಸಂಘಟಿತ ಹೋರಾಟ ಅನಿವಾರ್ಯ; ಸಿಪಿಐ ಕಾರ್ಯದರ್ಶಿ ಆವರಗೆರೆ ಚಂದ್ರು.

Date:

“ಯುವಕರು ಸಂಘಟಿತ ಹೋರಾಟದಿಂದ ಮಾತ್ರ ಸಂವಿಧಾನಬದ್ದ ಹಕ್ಕುಗಳನ್ನು ಪಡೆಯಲು ಸಾಧ್ಯ” ಎಂದು ಭಾರತ ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಆವರಗೆರೆ ಚಂದ್ರು ಕರೆ ನೀಡಿದರು. ದಾವಣಗೆರೆ ನಗರದ ಪಂಪಾಪತಿ ಭವನದಲ್ಲಿ ಆಲ್ ಇಂಡಿಯಾ ಯೂತ್ ಫೆಡರೇಷನ್ (ಎಐವೈಎಫ್) ಜಿಲ್ಲಾ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, “ಜಿಲ್ಲೆಯ ಪ್ರತಿ ತಾಲೂಕುಗಳಲ್ಲಿ ಕನಿಷ್ಠ 5 ಶಾಖೆಗಳನ್ನು ಸ್ಥಾಪಿಸುವ ಮೂಲಕ ಎಐವೈಎಫ್ ಸಂಘಟನೆ ಸಿದ್ದಾಂತ, ಧ್ಯೇಯೋದ್ದೇಶಗಳನ್ನು ಸಂಘಟನೆ ಮುಖಂಡರು ಯುವಕರಿಗೆ ತಿಳಿಸುವ ಮೂಲಕ ಯುವಕರನ್ನು ಜಾಗೃತಗೊಳಿಸಬೇಕಿದೆ” ಎಂದು ಸಲಹೆ ನೀಡಿದರು.

1002036756

“ವಿದ್ಯಾರ್ಥಿಯುವ ಸಮೂಹ ಮೊಬೈಲ್ ಗೀಳು, ಕ್ರಿಕೆಟ್ ಬೆಟ್ಟಿಂಗ್, ಮಾದಕ ವಸ್ತುಗಳ ಸೇವನೆಗಳಿಗೆ ಮಾರುಹೋಗದೆ, ಸಮಾಜಮುಖಿಯಾಗಿ ಸಂಘಟನಾತ್ಮಕ ಚಿಂತನೆ ಮೈಗೂಡಿಸಿಕೊಳ್ಳಬೇಕು. ವಿದ್ಯಾಭ್ಯಾಸ, ದುಡಿಮೆಯ ಜೊತೆಗೆ ಸಮಾಜಸೇವೆಯಲ್ಲಿ ತೊಡಗಿಸಿಕೊಳ್ಳಬೇಕು. ಇತ್ತೀಚೆಗೆ ಯುವಕರು ದುಶ್ಚಟಗಳ ದಾಸರಾಗಿ ವೈಯಕ್ತಿಕ, ಕೌಟುಂಬಿಕ ಜವಾಬ್ದಾರಿಯಿಂದ ವಿಮುಖವಾಗಿದ್ದು, ಸಮಾಜದಲ್ಲಿ ಕೆಲವರ ಕೈಗೊಂಬೆಯಂತೆ ವರ್ತಿಸುತ್ತಿರುವುದು ಬೇಸರದ ಸಂಗತಿ” ವಿಷಾದ ವ್ಯಕ್ತಪಡಿಸಿದರು.

1002036748

ಎಐವೈಎಫ್- ಅಖಿಲ ಭಾರತ ಯುವಜನ ಫೆಡರೇಷನ್ ರಾಷ್ಟ್ರೀಯ ಮಂಡಳಿ ಸದಸ್ಯ ಎಚ್.ಎಂ. ಸಂತೋಷ್ ಕುಮಾರ್ ಮಾತನಾಡಿ, “ದೇಶದಲ್ಲಿ ಬಿಜೆಪಿ ಆಡಳಿತ ಸರಕಾರ ಯುವಕರಿಗೆ ನೀಡಿದ್ದ 2 ಕೋಟಿ ಉದ್ಯೋಗ ಸೃಷ್ಠಿಯ ಭರವಸೆ ಹುಸಿಯಾಗಿದೆ. ಯುವಕರು ದೇಶದಲ್ಲಿನ ನಿರುದ್ಯೋಗ, ಉಚಿತ ಶಿಕ್ಷಣ, ಇತರೆ ಜ್ವಲಂತ ಸಮಸ್ಯೆಗಳನ್ನು ಮರೆತು ದೇವರು,ಧರ್ಮದ ಹೆಸರಿನಲ್ಲಿ ಕೋಮುವಾದದ ಕೂಪದಲ್ಲಿ ಮುಳುಗಿರುವುದು ಆತಂಕಕಾರಿ ಬೆಳವಣಿಗೆ” ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1002036749 1

“ಎಐವೈಎಫ್ ಸಂಘಟನೆ ರಾಷ್ಟ್ರೀಯ ಸಮ್ಮೇಳನದಲ್ಲಿ ಕೈಗೊಂಡ ನಿರ್ಣಯದಂತೆ ವಿಶ್ವಪರಿಸರ ದಿನಾಚರಣೆ, ಮಾದಕವಸ್ತುಗಳ ನಿಷೇಧ ಕಾರ್ಯಕ್ರಮ, ಸ್ಥಳೀಯವಾಗಿ ಉದ್ಯೋಗಕ್ಕಾಗಿ ಕೈಗಾರಿಕೆ ಸ್ಥಾಪನೆಗಾಗಿ ಹೋರಾಟ, ಸಾಂಸ್ಕೃತಿಕ, ಸಾಹಿತ್ಯಿಕ, ಕ್ರೀಡಾ ಚಟುವಟಿಕೆಗಳ ಆಯೋಜನೆಯೊಂದಿಗೆ ಸಂಘಟನೆಯನ್ನು ಬಲವರ್ಧನೆಗೊಳಿಸಲಾಗುವುದು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ನರೇಗಾ ಉದ್ಯೋಗಖಾತ್ರಿ ಕೆಲಸದ ವೇಳೆ ಗ್ರಾಕೂಸ್ ಕೂಲಿ ಕಾರ್ಮಿಕ ಸಾವು.

ಪೂರ್ವಭಾವಿ ಸಭೆಯಲ್ಲಿ ಅಕ್ಷರದಾಸೋಹ ಬಿಸಿಯೂಟ ತಯಾರಕರ ಸಂಘಟನೆಯ ರಮೇಶ್ ದಾಸರ್, ಸರೋಜಮ್ಮ, ಪಂಪಾಪತಿ ಟ್ರಸ್ಟ್ ನ ಯಲ್ಲಪ್ಪ, ಎಐವೈಎಫ್ ಜಿಲ್ಲಾಧ್ಯಕ್ಷ ರಾಜು ಕೆರನಹಳ್ಳಿ, ಜಿಲ್ಲಾ ಪ್ರಧಾನಕಾರ್ಯದರ್ಶಿ ತಿಪ್ಪೇಸ್ವಾಮಿ, ಜಗಳೂರು ತಾಲೂಕು ಅಧ್ಯಕ್ಷ ಮಾದಿಹಳ್ಳಿ ಮಂಜುನಾಥ್, ಮುಖಂಡರಾದ ಗದುಗೇಶ್, ಪರುಶರಾಮ್, ಶೇಖರನಾಯ್ಕ ಸೇರಿದಂತೆ ಮತ್ತಿತರರು ಹಾಜರಿದ್ದರು

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪಿಬಿ ರಸ್ತೆಯಲ್ಲಿ ಮುಸ್ಲಿಂ ಬಾಂಧವರ ರಂಜಾನ್ ಆಚರಣೆ

ಪವಿತ್ರ ರಂಜಾನ್ (ಈದ್ ಉಲ್ ಫಿತುರ್) ಆಚರಣೆ ಹಿನ್ನೆಲೆಯಲ್ಲಿ ದಾವಣಗೆರೆ ನಗರದ...

ದಾವಣಗೆರೆ | ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಮರ್ಥ್ ಶಾಮನೂರು: ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್...

ದಾವಣಗೆರೆ | ದಕ್ಷಿಣ ಕ್ಷೇತ್ರ ಉಪಚುನಾವಣೆ; ಎಸ್ ಟಿ ಮೋರ್ಚಾದ ಶ್ರೀನಿವಾಸ್ ಗೆ ಒಲಿದ ಬಿಜೆಪಿ ಟಿಕೆಟ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮ...

ದಾವಣಗೆರೆ | ಒಳಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯಕ್ಕೆ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ಹೋರಾಟ

ಸರ್ವೋಚ್ಛ ನ್ಯಾಯಾಲಯದ ಸಂವಿಧಾನಿಕ ಪೀಠವು ಒಳ ಮೀಸಲಾತಿ ವರ್ಗೀಕರಣ ಹಾಗೂ ಜಾರಿಯ...