ದಾವಣಗೆರೆ| ಯುವಜನತೆ ದೇಶದ, ಸಮಾಜದ ಅಭಿವೃದ್ಧಿಗೆ ಪೂರಕವಾಗಿ ನೆಡೆದುಕೊಳ್ಳುವುದೇ ದೇಶಪ್ರೇಮ: ವಿಧಾನಸಭಾಧ್ಯಕ್ಷ ಯು ಟಿ ಖಾದರ್

Date:

“ಯುವಜನತೆ, ಸಮಾಜ ನಕಾರಾತ್ಮಕ ಚಿಂತನೆ ಬಿಟ್ಟು ದೇಶದ ಅಭಿವೃದ್ಧಿಗೆ ಪೂರಕವಾಗುವ ಕಾರ್ಯ ಕೆಲಸಗಳನ್ನು ಮಾಡಬೇಕಾಗಿದೆ. ಅದೇ ನಿಜವಾದ ದೇಶಪ್ರೇಮ” ಎಂದು ದಾವಣಗೆರೆಯ ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆ ವಿಧಾನಸಭಾಧ್ಯಕ್ಷ ಯು ಟಿ ಖಾದರ್ ಅಭಿಪ್ರಾಯ ವ್ಯಕ್ತಪಡಿಸಿದರು.

ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ “ಜಗಳೂರಿನ ಸೌಹಾರ್ದತೆ ಇಮಾಮ್ ಸಾಬ್” ಕೃತಿ ಬಿಡುಗಡೆ ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆ ಸಾಮಾಜಿಕ ಜಾಲತಾಣದಲ್ಲಿ ಬರುವ ಸುದ್ದಿಗಳಿಂದ ಸಮಾಜದಲ್ಲಿ ಆಗುವ ಸಮಸ್ಯೆ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಪ್ರತಿಯೊಬ್ಬರೂ ಈ ದೇಶದ ಸತ್ಪ್ರಜೆಗಳು. ನಾವು ಒಂದೇ ತಾಯಿಯ ಮಕ್ಕಳಂತೆ ಬದುಕಬೇಕು ಎಂದು ಅರ್ಥ ಮಾಡಿಕೊಳ್ಳಬೇಕು. ಭಾರತೀಯರಾಗಿ ಹುಟ್ಟಿದ ಮೇಲೆ ನಾವು ಎಲ್ಲರೂ ಸಮಾನರು ಎಂಬುದನ್ನು ಅರಿತುಕೊಳ್ಳಬೇಕು, ಪರಸ್ಪರ ಒಬ್ಬರಿಗೊಬ್ಬರು ವಿಶ್ವಾಸ ಪ್ರೀತಿ ಹಂಚುವಂತಹ ವಾತಾವರಣವನ್ನು ನಿರ್ಮಿಸ ಬೇಕು. ಸಮಾಜವನ್ನು ಅರ್ಥ ಮಾಡಿಕೊಂಡು ಹೋಗುವುದು, ನಾವು ಮಾಡುವ ಕೆಲಸ ದೇಶವನ್ನು ಒಗ್ಗಟ್ಟಾಗಿ ಇರುವಂತೆ ಮಾಡುವುದಾಗಿದೆ. ಈ ರೀತಿ ಕೆಲಸ ಮಾಡುವವರೇ ನಿಜವಾದ ದೇಶ ಪ್ರೇಮಿಗಳು” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

1001599075
ದಾವಣಗೆರೆಯಲ್ಲಿ ಜಗಳೂರು ಶಾಸಕ ದೇವೇಂದ್ರಪ್ಪ

“ಸಾಮಾಜಿಕ ಜಾಲತಾಣದಲ್ಲಿ ಬರುವ ಸುದ್ದಿಗಳನ್ನು ಬಿಟ್ಟು, ಅವರವರ ತಪ್ಪುಗಳು ಮತ್ತು ಕೆಲಸಗಳನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕು. ನಕಾರಾತ್ಮಕ ಮಾತು, ಕೆಲಸಗಳನ್ನು ಬಿಟ್ಟು, ದೇಶದ ಅಭಿವೃದ್ಧಿಗೆ ತೊಡಗಿಸಿಕೊಳ್ಳಬೇಕು. ಯುವ ಜನಾಂಗವು ಉತ್ತಮ ಸಮಾಜ ಮತ್ತು ದೇಶದ ಅಭಿವೃದ್ಧಿಗೆ ಪೂರಕವಾಗುವ ಮಾತು ಮತ್ತು ಕೆಲಸಗಳನ್ನು ಮಾಡಬೇಕು” ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ವಿದ್ಯುತ್ ಗುಣಮಟ್ಟ ಕಾಯ್ದುಕೊಳ್ಳಲು, ಉದ್ಯೋಗ ಸೃಷ್ಟಿಗೆ ಶೀಘ್ರ 3000 ಪವರ್ ಮ್ಯಾನ್ ನೇಮಕ.

ಇದೇ ವೇಳೆ ಜೊತೆಯಲ್ಲಿದ್ದ ಮಾತನಾಡಿದ ಜಗಳೂರು ಶಾಸಕ ದೇವೇಂದ್ರಪ್ಪ “ರಾಜ್ಯದಲ್ಲಿ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಸ್ಥಾನ ಎರಡೂ ಖಾಲಿ ಇಲ್ಲ. ಈ ಬಗ್ಗೆ ಚರ್ಚೆ ಅಪ್ರಸ್ತುತ. ಖಾಲಿಯಾದ ನಂತರ ಪಕ್ಷದ ಹೈಕಮಾಂಡ್ ಆ ಬಗ್ಗೆ ಸ್ಪಷ್ಟನೆ ನೀಡಲಿದೆ.‌ ನನಗೂ ಕೂಡ ಆಸೆ ಇದೆ. ನಾನೇನು ಸನ್ಯಾಸಿಯಲ್ಲ. ಆದರೆ ಹಿರಿತನದ ಪರಿಗಣನೆ ಮೇಲೆ ಹೈಕಮಾಂಡ್ ನಿರ್ಧರಿಸುತ್ತದೆ. ಜಗಳೂರು ತಾಲೂಕಿನ ಪಲ್ಲಾಗಟ್ಟಿ ಬಳಿಯ ಸರ್ಕಾರಿ ಬಿಸಿಎಂ ಮೆಟ್ರಿಕ್ ಬಾಲಕಿಯರ ವಸತಿ ವಿದ್ಯಾರ್ಥಿನಿಲಯದ ಕಾಮಗಾರಿ ಗುಣಮಟ್ಟ ಸರಿಯಾಗಿಲ್ಲ. ಸಮಯಕ್ಕೆ ಸರಿಯಾಗಿ ಮುಗಿದಿಲ್ಲ. ಕಟ್ಟಡದಲ್ಲಿ ಉತ್ತಮ ನೆಲಹಾಸು ಇಲ್ಲ, ಸರಿಯಾಗಿ ರಸ್ತೆ ಸಂಪರ್ಕ ಕಲ್ಪಿಸಿಲ್ಲ, ಸುತ್ತ ಕಾಂಪೌಂಡ್ ಇಲ್ಲ. ಕಟ್ಟಡ ಗುಣಮಟ್ಟ ಕಡಿಮೆ ಇದ್ದು, ಬಾಕಿ ಇರುವ ಗುಣಮಟ್ಟದ ಕಾಮಗಾರಿ ಮುಗಿಯುವವರೆಗೂ ಬಿಲ್ ಪ್ರಕ್ರಿಯೆ ನೆಡೆಸದಂತೆ ಬಿಸಿಎಂ ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ಎಚ್ಚರಿಕೆ ನೀಡಿದ್ದೇನೆ” ಎಂದು ತಿಳಿಸಿದರು.

ಈ ವೇಳೆ ಮಾಯಕೊಂಡ ಶಾಸಕ ಕೆ ಎಸ್ ಬಸವಂತಪ್ಪ, ನಿವೃತ್ತ ಪ್ರಾಂಶುಪಾಲ ದಾದಾ ಪೀರ್ ನವಲೇಹಾಳ್, ಮಾಜಿ ಮೇಯರ್ ಚಮನ್ ಸಾಬ್, ಹಾಗೂ ಇತರರು ಜೊತೆಯಲ್ಲಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪಿಬಿ ರಸ್ತೆಯಲ್ಲಿ ಮುಸ್ಲಿಂ ಬಾಂಧವರ ರಂಜಾನ್ ಆಚರಣೆ

ಪವಿತ್ರ ರಂಜಾನ್ (ಈದ್ ಉಲ್ ಫಿತುರ್) ಆಚರಣೆ ಹಿನ್ನೆಲೆಯಲ್ಲಿ ದಾವಣಗೆರೆ ನಗರದ...

ದಾವಣಗೆರೆ | ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಮರ್ಥ್ ಶಾಮನೂರು: ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್...

ದಾವಣಗೆರೆ | ದಕ್ಷಿಣ ಕ್ಷೇತ್ರ ಉಪಚುನಾವಣೆ; ಎಸ್ ಟಿ ಮೋರ್ಚಾದ ಶ್ರೀನಿವಾಸ್ ಗೆ ಒಲಿದ ಬಿಜೆಪಿ ಟಿಕೆಟ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮ...

ದಾವಣಗೆರೆ | ಒಳಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯಕ್ಕೆ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ಹೋರಾಟ

ಸರ್ವೋಚ್ಛ ನ್ಯಾಯಾಲಯದ ಸಂವಿಧಾನಿಕ ಪೀಠವು ಒಳ ಮೀಸಲಾತಿ ವರ್ಗೀಕರಣ ಹಾಗೂ ಜಾರಿಯ...