ದಾವಣಗೆರೆ | ನಗರದಲ್ಲಿ ಪೊಲೀಸ್ ಇಲಾಖೆಯ ಸಂಚಾರ ಮತ್ತು ಹೆಲ್ಮೆಟ್ ಜಾಗೃತಿ ಅಭಿಯಾನ.

Date:

ದಾವಣಗೆರೆ ನಗರದ್ಯಾಂತ ಸಂಚಾರ ಪೊಲೀಸ್ ಇಲಾಖೆಯು ದ್ವಿಚಕ್ರ ವಾಹನ ಸವಾರರಿಗೆ ಸಂಪೂರ್ಣ ಸುರಕ್ಷತೆಯ ಹೆಲ್ಮೆಟ್ ಧರಿಸುವಂತೆ ಜಾಗೃತಿ ನೀಡುವ ಅಭಿಯಾನವನ್ನು ಕಳೆದ ಮೂರು ದಿನಗಳಿಂದ ಕೈಗೊಂಡಿದ್ದು, ಮಂಗಳವಾರದವರೆಗೆ ನಡೆಯಲಿದೆ.

1001617873
ಹೆಲ್ಮೆಟ್ ಜಾಗೃತಿ ಅಭಿಯಾನದಲ್ಲಿ ಸಂಚಾರ ಪೊಲೀಸರು

ಬೆಳಗಿನಿಂದಲೂ ನಗರದಲ್ಲಿ ಸಂಚಾರ ಪೊಲೀಸ್ ವಿಭಾಗದ ಹಲವು ಅಧಿಕಾರಿಗಳು, ಪೇದೆಗಳು ವಿವಿಧ ವೃತ್ತಗಳಲ್ಲಿ ಬೆಳಗಿನಿಂದಲೂ ವಾಹನ ಸವಾರರಿಗೆ ಸುರಕ್ಷತೆ ಸಂಚಾರಕ್ಕಾಗಿ ಜಾಗೃತಿ ಅಭಿಯಾನವನ್ನು ನಡೆಸಿ ವಿಶೇಷವಾಗಿ ದ್ವಿಚಕ್ರ ಸವಾರರಿಗೆ ಸಂಪೂರ್ಣ ಸುರಕ್ಷತೆ ನೀಡುವ ಶಿರಸ್ತ್ರಾಣವನ್ನು ಧರಿಸುವಂತೆ ಮನವಿ ಮಾಡುತ್ತಿದ್ದರು ಕಂಡುಬಂದಿತು. ಹಾಗೂ ಅವರ ಬಳಿಯಿದ್ದ ಕಳಪೆ ಗುಣಮಟ್ಟದ ಅರ್ಧ ಶಿರಸ್ತ್ರಾಣವನ್ನು ವಶಕ್ಕೆ ಪಡೆದು ಎಚ್ಚರಿಕೆ ನೀಡುವುದು ಕಂಡುಬಂದಿತು.

ನಗರದ ಲಕ್ಷ್ಮಿ ಫ್ಲೋರ್ ಮಿಲ್ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತ, ಜಯದೇವ ವೃತ್ತ ಸೇರಿದಂತೆ ಹಲವಡೆಗಳಲ್ಲಿ ಕಳಪೆಗುಣಮಟ್ಟದ ಹೆಲ್ಮೆಟ್ ಅನ್ನು ವಶಕ್ಕೆ ತೆಗೆದುಕೊಂಡು ಸೂಚನೆ, ಜಾಗೃತಿ ಮೂಡಿಸುವ ಕೆಲಸದಲ್ಲಿ ಸಂಚಾರ ವಿಭಾಗದ ಪೊಲೀಸರು ಕಾರ್ಯನಿರತರಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001617864
ಜಾಗೃತಿ ಅಭಿಯಾದಲ್ಲಿ ವಶಕ್ಕೆ ಪಡೆದ ಕಳಪೆ ಶಿರಸ್ಥ್ರಾಣಗಳ ರಾಶಿ

ಈ ಬಗ್ಗೆ ಮಾಹಿತಿ ನೀಡಿದ ಉಪನಿರೀಕ್ಷಕ ಮಹಿಳಾ ಅಧಿಕಾರಿ ಶೈಲಜಾ “ಕಳೆದ ಮೂರು ದಿನಗಳಿಂದಲೂ ಈ ಜಾಗೃತಿ ಅಭಿಯಾನ ನಡೆಸುತ್ತಿದ್ದು, ಕಳಪೆ ಗುಣಮಟ್ಟದ ಶಿರಸ್ಥ್ರಾಣವನ್ನು ವಶಕ್ಕೆ ಪಡೆದು ಸಂಪೂರ್ಣ ಸುರಕ್ಷತೆಯ ಶಿರಸ್ಥ್ರಾಣ ಧರಿಸಲು ಎಚ್ಚರಿಕೆ ಮತ್ತು ಸೂಚನೆ ನೀಡುತ್ತಿದ್ದೇವೆ. ಈ ಜಾಗೃತಿ ಅಭಿಯಾನವು ನಾಳೆಯವರೆಗೂ ನಡೆಯಲಿದ್ದು, ಹಿರಿಯ ಅಧಿಕಾರಿಗಳಿಂದ ಸೂಚನೆ ಬಂದ ನಂತರ ಅರ್ಧ ಹೆಲ್ಮೆಟ್ ಧರಿಸುವ ಸವಾರರಿಗೆ ದಂಡ ವಿಧಿಸಲು ಪ್ರಾರಂಭಿಸುತ್ತೇವೆ” ಎಂದು ಮಾಹಿತಿ ನೀಡಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಮದುವೆ ಸಂಭ್ರಮ, ಹತ್ತಕ್ಕೂ ಹೆಚ್ಚು ಮನೆಗಳ ಸರಣಿಗಳ್ಳತನ.

ಈ ಬಗ್ಗೆ ಪೊಲೀಸರೊಂದಿಗೆ ಕೆಲ ವಾಹನ ಸವಾರರು ಚರ್ಚೆ, ವಾಗ್ವಾದಕ್ಕೆ ಇಳಿದಿದ್ದುದು ಕಂಡು ಬಂತು. ಈ ಬಗ್ಗೆ ವಾಹನಸವಾರರೊಬ್ಬರು “ಇವರು ಜಾಗೃತಿ ಮೂಡಿಸುವ ಸಲುವಾಗಿ ಧರಿಸಿರುವ ಅರ್ಧ ಹೆಲ್ಮೆಟ್ ಅನ್ನು ವಶಪಡಿಸಿಕೊಂಡಿದ್ದಾರೆ. ಮುಂದಿನ ವೃತ್ತಗಳಲ್ಲಿ ಬೇರೆ ಸಂಚಾರ ಪೊಲೀಸರು ಹೆಲ್ಮೆಟ್ ಧರಿಸಿಲ್ಲ ಎಂದು ದಂಡ ವಿಧಿಸಿದರೆ ಏನು ಹೇಳಲಿ. ಜಾಗೃತಿ ಮೂಡಿಸುವುದೆಂದರೆ ಇರುವ ಹೆಲ್ಮೆಟ್ ಅನ್ನು ಕಸಿದುಕೊಳ್ಳುವುದಲ್ಲ. ಸಮಯ ಕೊಟ್ಟು ನಂತರ ದಂಡ ಪ್ರಯೋಗಿಸಬೇಕು. ಆದರೆ ಇಲ್ಲಿ ಪೊಲೀಸರು ಸರಿಯಾದ ಸೂಚನೆ ಮತ್ತು ನಿಯಮಗಳನ್ನು ಪಾಲಿಸುತ್ತಿಲ್ಲ” ಎಂದು ಅಳಲನ್ನು ತೋಡಿಕೊಂಡರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪಿಬಿ ರಸ್ತೆಯಲ್ಲಿ ಮುಸ್ಲಿಂ ಬಾಂಧವರ ರಂಜಾನ್ ಆಚರಣೆ

ಪವಿತ್ರ ರಂಜಾನ್ (ಈದ್ ಉಲ್ ಫಿತುರ್) ಆಚರಣೆ ಹಿನ್ನೆಲೆಯಲ್ಲಿ ದಾವಣಗೆರೆ ನಗರದ...

ದಾವಣಗೆರೆ | ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಮರ್ಥ್ ಶಾಮನೂರು: ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್...

ದಾವಣಗೆರೆ | ದಕ್ಷಿಣ ಕ್ಷೇತ್ರ ಉಪಚುನಾವಣೆ; ಎಸ್ ಟಿ ಮೋರ್ಚಾದ ಶ್ರೀನಿವಾಸ್ ಗೆ ಒಲಿದ ಬಿಜೆಪಿ ಟಿಕೆಟ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮ...

ದಾವಣಗೆರೆ | ಒಳಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯಕ್ಕೆ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ಹೋರಾಟ

ಸರ್ವೋಚ್ಛ ನ್ಯಾಯಾಲಯದ ಸಂವಿಧಾನಿಕ ಪೀಠವು ಒಳ ಮೀಸಲಾತಿ ವರ್ಗೀಕರಣ ಹಾಗೂ ಜಾರಿಯ...