ದಾವಣಗೆರೆ | ಭಾರತದ ಯಶಸ್ಸಿಗೆ, ಯೋಧರ ಸುರಕ್ಷತೆಗೆ ಪ್ರಾರ್ಥಿಸಿ, ದುರ್ಗಾಂಬಿಕಾ ದೇಗುಲ, ದರ್ಗಾದಲ್ಲಿ ವಿಶೇಷ ಪೂಜೆ.

Date:

ಆಪರೇಷನ್ ಸಿಂಧೂರ ನಡೆಸಿ ಪಾಕಿಸ್ತಾನಕ್ಕೆ ಭಾರತ ಸೇನೆಯು ತಕ್ಕ ಉತ್ತರ ನೀಡಿದ್ದು, ಶತ್ರು ರಾಷ್ಟ್ರದ ವಿರುದ್ಧ ಹೋರಾಡಲು ಯೋಧರಿಗೆ ಇನ್ನೂ ಶಕ್ತಿ ನೀಡಲು ಹಾಗೂ ಸುರಕ್ಷತೆಗೆ ಪ್ರಾರ್ಥಿಸಿ ದಾವಣಗೆರೆ ನಗರದ ದುರ್ಗಾಂಬಿಕಾ ದೇವಸ್ಥಾನ ಹಾಗೂ ಕಡಕ್ ಶಾ ವಲಿ ದರ್ಗಾದಲ್ಲಿ ದಾವಣಗೆರೆ ಜಿಲ್ಲಾ ಜವಾಹರ್ ಬಾಲ್ ಮಂಚ್ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

ಈ ವೇಳೆ ಮಾತನಾಡಿದ ಮಂಚ್ ಜಿಲ್ಲಾಧ್ಯಕ್ಷ ಮೊಹಮ್ಮದ್ ಜಿಕ್ರಿಯಾ ಅವರು, “ಪಾಕಿಸ್ತಾನವು ಪದೇ ಪದೇ ಕಾಲು ಕರೆದು ಭಾರತವನ್ನು ಕೆಣಕುತ್ತಲೇ ಇತ್ತು. ಪಹಲ್ಗಾಮ್ ನಲ್ಲಿ ಉಗ್ರರು ನಡೆಸಿದ ಪೈಶಾಚಿಕ ಕೃತ್ಯ ಎಂದಿಗೂ ಕ್ಷಮಿಸಲು ಸಾದ್ಯವಿಲ್ಲ. 26 ಪ್ರವಾಸಿಗರ ಹತ್ಯೆಗೈದ ಭಯೋತ್ಪಾದಕರಿಗೆ ತಕ್ಕ ಶಿಕ್ಷೆಯಾಗಲೇಬೇಕು. ಈ ಉಗ್ರರ ಹಿಂದಿರುವವರಿಗೆ ತಕ್ಕ ಪಾಠ ಕಲಿಸುವ ನಿಟ್ಟಿನಲ್ಲಿ ಭಾರತ ದಿಟ್ಟ ಹೆಜ್ಜೆ ಇಟ್ಟಿದೆ. ಪಾಕಿಸ್ತಾನದ ಭಯೋತ್ಪಾದನಾ ನೆಲೆಗಳ ಮೇಲೆ ನುಗ್ಗಿ ಹೊಡೆದಿರುವ ಭಾರತವು ತಕ್ಕ ಉತ್ತರ ನೀಡುತ್ತಿದೆ” ಎಂದು ಸೇನೆಗೆ ಬೆಂಬಲಿಸಿದರು.

1001968283
ದಾವಣಗೆರೆ ಕಡಕ್ ಶಾ ವಲಿ ದರ್ಗದಲ್ಲಿ ಪ್ರಾರ್ಥನೆ ಸಲ್ಲಿಸಿದ ಮುಖಂಡರು

“ಪಾಕಿಸ್ತಾನದ ಎಲ್ಲಾ ಷಡ್ಯಂತ್ರ ಬಯಲು ಮಾಡುತ್ತಿರುವ ಭಾರತ ಸೇನೆಯು ನೆರೆರಾಷ್ಟ್ರದೊಳಗೆ ಕ್ಷಿಪಣಿ ದಾಳಿ ನಡೆಸಿ ಹೊಡೆದು ಹಾಕುತ್ತಿದೆ. ಪಾಕಿಸ್ತಾನದ ಡ್ರೋಣ್, ಕ್ಷಿಪಣಿಗಳ ಹೊಡೆದುರುಳಿಸಿದೆ. ಭಾರತ – ಪಾಕ್ ಗಡಿಯಲ್ಲಿ ಎರಡೂ ರಾಷ್ಟ್ರಗಳ ಯೋಧರ ನಡುವೆ ಗುಂಡಿನ ಚಕಮಕಿ ನಡೆಯುತ್ತಿದೆ. ಭಾರತದ ಯೋಧರಿಗೆ ಯಾವುದೇ ತೊಂದರೆ ಆಗದಿರಲಿ. ಭಾರತ ಸೇನೆಗೆ ಮತ್ತಷ್ಟು ಶಕ್ತಿ ನೀಡುವಂತೆ ದುರ್ಗಾಂಬಿಕಾ ದೇವಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಸಲ್ಲಿಸಿದ್ದೇವೆ. ಅದೇ ರೀತಿಯಲ್ಲಿ ಕಡಕ್ ಶಾ ವಲಿ ದರ್ಗಾದಲ್ಲಿ ಪ್ರಾರ್ಥಿಸಿದ್ದೇವೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಭಾರತ ಸೇನೆಯು ವಿಶ್ವದಲ್ಲಿಯೇ ಶಕ್ತಿಶಾಲಿಯಾಗಿದೆ. ವಿಶ್ವದ ಬಹುತೇಕ ರಾಷ್ಟ್ರಗಳು ಭಯೋತ್ಪಾದನೆ ಮಟ್ಟ ಹಾಕಲು ದಿಟ್ಟ ಹೆಜ್ಜೆ ಇಟ್ಟಿರುವ ಭಾರತಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಘೋಷಿಸಿವೆ. ಭಾರತದ ವಾಯುಸೇನೆ, ಭೂ ಸೇನೆ, ನೌಕಾ ಸೇನೆ ಪಾಕ್ ಗೆ ತಕ್ಕ ಪಾಠ ಕಲಿಸುವುದು ಖಚಿತ. ಈ ಕಾರ್ಯಾಚರಣೆಯಲ್ಲಿ ಹೋರಾಡುವವರಿಗೆ ಯಾವುದೇ ಸಮಸ್ಯೆಯಾಗದಿರಲಿ. ಭಯೋತ್ಪಾದಕರಿಗೆ ಬೆಂಬಲ ನೀಡುತ್ತಿರುವ ಪಾಕಿಸ್ತಾನ ಪಾಠ ಕಲಿಯುವವರೆಗೂ ದಾಳಿ ನಡೆಯಬೇಕು. ಉಗ್ರರ
ಸಂಪೂರ್ಣ ನಿರ್ನಾಮ ಮಾಡುವವರೆಗೆ ಆಪರೇಷನ್ ಸಿಂಧೂರ ನೆಡೆಯಲಿ” ಎಂದು ಹೇಳಿದರು.

ದಾವಣಗೆರೆ – ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ ಮಾತನಾಡಿ, “ಪಹಲ್ಗಾಮ್ ನಲ್ಲಿ ದಾಳಿಗೆ ಪ್ರತೀಕಾರವಾಗಿ ಭಾರತವು ತೆಗೆದುಕೊಂಡಿರುವ ರಾಜತಾಂತ್ರಿಕ ನಡೆ, ಆಪರೇಷನ್ ಸಿಂಧೂರ, ಭಯೋತ್ಪಾದನಾ ಶಿಬಿರಗಳ ಧ್ವಂಸ ಪ್ರತೀಕಾರದ ಭಾಗ. ಹಿಂದೂ ಹೆಸರು ಕೇಳಿ ಹತ್ಯೆ ಮಾಡಿದ ಉಗ್ರರ ಕ್ಷಮಿಸಲು ಆಗದು. ಇಂಥ ಪೈಶಾಚಿಕ ಕೃತ್ಯ ಎಸಗಿದ ಮತ್ತು ಸಹಕರಿಸಿದ, ಬೆಂಬಲಿಸಿದ ಪಾಕಿಸ್ತಾನಕ್ಕೆ ಸರಿಯಾಗಿಯೇ ಭಾರತ ಪಾಠ ಕಲಿಸುತ್ತಿದೆ. ವಿಶ್ವದ ಭೂಪಟದಲ್ಲಿ ಪಾಕಿಸ್ತಾನ ಇಲ್ಲದಂತೆ ಮಾಡಬೇಕಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಸಾಣೇಹಳ್ಳಿ ತರಳಬಾಳು ಮಠದಲ್ಲಿ ಬಸವಾದಿ ಶರಣರ ವಚನಗಳ ರಾಜ್ಯ ಮಟ್ಟದ ಸ್ಪರ್ಧೆ.

ಈ ವೇಳೆ ಜವಾಹರ್ ಬಾಲ್ ಮಂಚ್ ಪದಾಧಿಕಾರಿಗಳಾದ ಕೆ. ಹೆಚ್. ಪ್ರೇಮಾ, ಶಿಲ್ಪಾ ಪರಶುರಾಮ್, ಯುವರಾಜ್, ಮಂಜುನಾಥ್, ಹರೀಶ್, ಅಕ್ಬರ್ ಬಾಷಾ, ಫಯಾಜ್ ಅಹ್ಮದ್, ಅಯೂಬ್ ಖಾನ್, ಇಮಾಮ್, ಗೌರವ್ ಮತ್ತಿತರರು ಹಾಜರಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪಿಬಿ ರಸ್ತೆಯಲ್ಲಿ ಮುಸ್ಲಿಂ ಬಾಂಧವರ ರಂಜಾನ್ ಆಚರಣೆ

ಪವಿತ್ರ ರಂಜಾನ್ (ಈದ್ ಉಲ್ ಫಿತುರ್) ಆಚರಣೆ ಹಿನ್ನೆಲೆಯಲ್ಲಿ ದಾವಣಗೆರೆ ನಗರದ...

ವಾಣಿಜ್ಯ ಹಡಗುಗಳ ಮೇಲಿನ ದಾಳಿ ಸಹಿಸುವುದಿಲ್ಲ: ವಿಕ್ರಂ ದೊರೆಸ್ವಾಮಿ ಕಟ್ಟೆಚ್ಚರ

ವಾಣಿಜ್ಯ ಹಡಗುಗಳ ಮೇಲೆ ದಾಳಿ ಮಾಡುವುದು, ಹಡಗು ಮಾರ್ಗಗಳಲ್ಲಿ ಸುರಕ್ಷಿತ ಸಂಚಾರಕ್ಕೆ...

ದಾವಣಗೆರೆ | ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಮರ್ಥ್ ಶಾಮನೂರು: ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್...

ದಾವಣಗೆರೆ | ದಕ್ಷಿಣ ಕ್ಷೇತ್ರ ಉಪಚುನಾವಣೆ; ಎಸ್ ಟಿ ಮೋರ್ಚಾದ ಶ್ರೀನಿವಾಸ್ ಗೆ ಒಲಿದ ಬಿಜೆಪಿ ಟಿಕೆಟ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮ...