ದಾವಣಗೆರೆ | ರೈತಪರ ಎನ್ನುವ ಪಕ್ಷಗಳು ಬೆಂಬಲ ಬೆಲೆ ಘೋಷಿಸಿಲ್ಲ: ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್

Date:

“ರೈತನಿಗೆ ಸಮಾಧಾನಕರ ಕನಿಷ್ಠ ಬೆಂಬಲ ಬೆಲೆ C2+50 ನೀಡಬೇಕು ಎಂದು ಸ್ವಾಮಿನಾಥನ್ ಆಯೋಗ ವರದಿ ನೀಡಿ 25 ವರ್ಷಗಳಾದರೂ ನಾವು ರೈತರ ಪರ ಎನ್ನುವ ಬಿಜೆಪಿ, ಕಾಂಗ್ರೆಸ್ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳು ಇದುವರೆಗೂ (ಎಂ ಎಸ್ ಪಿ) ಬೆಂಬಲ ಬೆಲೆ ಘೋಷಿಸಿಲ್ಲ. ಇದರ ಬಗ್ಗೆ ಪಕ್ಷಗಳಿಗೆ ಮತ ನೀಡಿರುವ ರೈತ ಸಮುದಾಯ ಆಲೋಚಿಸಬೇಕಿದೆ” ಎಂದು ದಾವಣಗೆರೆಯಲ್ಲಿ ನಡೆದ ರಾಜ್ಯ ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅಸಮಾಧಾನ ವ್ಯಕ್ತಪಡಿಸಿದರು.

ದಾವಣಗೆರೆಯ ಎಪಿಎಂಸಿ ಆವರಣದ ರೈತ ಭವನದಲ್ಲಿ ನಡೆದ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು

1003505755

“1995 ರಿಂದಲೂ ರೈತರ ಆತ್ಮಹತ್ಯೆಗಳು ಹೆಚ್ಚುತ್ತಿವೆ. ಇದಕ್ಕೆ ಸರ್ಕಾರವೇ ಕಾರಣ, ಇದಕ್ಕಾಗಿ ರೈತ ಪರ ನಿಲುವು ಜಾರಿಗೊಳಿಸಬೇಕು ಎಂದು ಸಂಸತ್ ಮುಂದೆ 1995ರಲ್ಲಿ ರೈತರು ಹೋರಾಟ ನಡೆಸಿದರು. ಇದಕ್ಕಾಗಿ ಅಂದಿನ ಕೇಂದ್ರ ಸರಕಾರ ರೈತರ ಆತ್ಮಹತ್ಯೆ ನಿಲ್ಲಬೇಕು ಎನ್ನುವ ಕಾರಣದಿಂದಾಗಿ ರೈತರ ಸಲಹೆ ಪಡೆದು ಎಂ ಎಸ್ ಸ್ವಾಮಿನಾಥನ್ ಆಯೋಗವನ್ನು ರಚಿಸಿತು. ಸ್ವಾಮಿನಾಥನ್ ಆಯೋಗವು ಕೂಲಂಕುಶವಾಗಿ ದೇಶದಲ್ಲಿ ಅಧ್ಯಯನ ನಡೆಸಿ ರೈತರ ಆತ್ಮಹತ್ಯೆಗೆ ವೈಜ್ಞಾನಿಕ ಕಾರಣ ಮತ್ತು ಪರಿಹಾರಗಳೇನು ಎಂಬುದಕ್ಕೆ ವರದಿ ನೀಡಿತು” ಎಂದು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1003505752

“ಆಯೋಗದ ವರದಿ ಪ್ರಕಾರ ರೈತರಿಗೆ ಕೃಷಿಯಲ್ಲಿ ಆರ್ಥಿಕ ನಷ್ಟ, ಉತ್ಪನ್ನಕ್ಕೆ ಯೋಗ್ಯ ಬೆಲೆ ಇಲ್ಲದಿರುವುದು ಮತ್ತು ಕೃಷಿಯ ವೆಚ್ಚ ಮರುಪಾವತಿ ಆಗದೆ ಇರುವುದು ಆತ್ಮಹತ್ಯೆ ಹೆಚ್ಚಲು ಕಾರಣ ಎಂದು ಅಂದೇ ವರದಿ ನೀಡಿದೆ. ಆದರೆ ಇಂದು ರೈತನ ಆತ್ಮಹತ್ಯೆ ಆದಾಗ ಕೆಲವರು ರೈತ ಬೇರೆ ಬೇರೆ ವ್ಯಸನಗಳಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಾನೆ ಎನ್ನುತ್ತಾರೆ, ಅಂಥವರಿಗೆ ತಲೆ ಕೆಟ್ಟಿರುತ್ತದೆ. ರೈತನಿಗೆ ಸಮಾಧಾನಕರ ಕನಿಷ್ಠ ಬೆಂಬಲ ಬೆಲೆ ಸ್ವಾಮಿನಾಥನ್ ಆಯೋಗ ಹೇಳಿದಂತೆ ಸಿಟು ಪ್ಲಸ್ 50 ಅತ್ಯಗತ್ಯವಾಗಿ ಬೇಕಾಗಿದೆ” ಎಂದು ಪ್ರತಿಪಾದಿಸಿದರು.

“ಮುಂದಿನ ದಿನಗಳಲ್ಲಿ ರೈತರು ಕನಿಷ್ಠ ಬೆಂಬಲ ಬೆಲೆ ಪಡೆಯಲು ಹೋರಾಟದ ಚಳುವಳಿಗಳು ಹೇಗಿರಬೇಕು ಮತ್ತು ಎಲ್ಲಿ ನಡೆಸಬೇಕು, ಚಳುವಳಿ ಸ್ವರೂಪದ ಬಗ್ಗೆ ತಯಾರಿ ಮಾಡಿಕೊಳ್ಳಬೇಕು” ಎಂದು ಕರೆ ನೀಡಿದರು.

1003505754

“ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಎಪಿಎಂಸಿ ಕಾಯ್ದೆ ರದ್ದುಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅಧಿಕಾರದಲ್ಲಿ ಇಲ್ಲದಿದ್ದಾಗ ಹೋರಾಟ ನಡೆಸಿದ್ದರು. ಇಂದು ಎಪಿಎಂಸಿ ಕಾಯ್ದೆಗಳನ್ನು ರದ್ದುಗೊಳಿಸದೇ ಮೂರು ವರ್ಷ ಅಧಿಕಾರ ನಡೆಸಿದ್ದು, ಜೊತೆಗೆ ಕಾರ್ಪೊರೇಟ್ ಕಂಪನಿ, ಬಂಡವಾಳಶಾಹಿಗಳಿಗೆ ಬಿಜೆಪಿ ಮತ್ತು ಕಾಂಗ್ರೆಸ್ ಸೇರಿದಂತೆ ಸರ್ಕಾರಗಳು ರೈತರ ಭೂಮಿಯನ್ನು ಬಲಿಕೊಡುತ್ತಿವೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ರಾಜ್ಯದಲ್ಲಿ ಶೀಘ್ರದಲ್ಲಿಯೇ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪಚುನಾವಣೆ ಸೇರಿದಂತೆ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಸೇರಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ನಡೆಯಲಿದ್ದು ರೈತ ಸಂಘಟನೆಯ ಅಭ್ಯರ್ಥಿಗಳು ಸ್ಪರ್ಧಿಸಿದರೆ ಅಥವಾ ರೈತರ ಪರವಾಗಿರುವ ಅಭ್ಯರ್ಥಿಗಳಿಗೆ ಸಂಘಟನೆ ಬೆಂಬಲಿಸಲಿದೆ. ಅಲ್ಲದೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಹಣ ಕೊಟ್ಟು ಮತ ಪಡೆಯಲು ಸಂಚು ರೂಪಿಸಿದೆ” ಎಂದು ಆರೋಪಿಸಿದರು.

1003505770

ರಾಜ್ಯ ಉಪಾಧ್ಯಕ್ಷರಾದ ಬಸವರಾಜ್ ಜಮಖಂಡಿ ಮಾತನಾಡಿ “ವಿದ್ಯುತ್ ಅಕ್ರಮ ಸಕ್ರಮಕ್ಕೆ ಹಣ ಕಟ್ಟಿ ಕಾಯುತ್ತಿರುವ ರೈತರಿಗೆ ಅನ್ಯಾಯವಾಗುತ್ತಿದೆ. ಈ ಮಧ್ಯೆ ಹಲವು ಎಸ್ಕಾಂಗಳು ರೈತರಿಗೆ ವಿದ್ಯುತ್ ಸಂಪರ್ಕವನ್ನು ನಿಲ್ಲಿಸುವ ಬೆದರಿಕೆ ಹಾಕಿ, ದೌರ್ಜನ್ಯ ಎಸಗುತ್ತಿವೆ. ಈ ಸಮಸ್ಯೆಯ ಬಗ್ಗೆ ಗಮನ ಸೆಳೆಯಲು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಡಿಸಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆಗೆ ಮುಂದಾಗಬೇಕು” ಎಂದು ತಿಳಿಸಿದರು.

ರಾಜ್ಯ ಸಮಿತಿ ಸಭೆಯಲ್ಲಿ ಎಪಿಎಂಸಿ ಕಾಯ್ದೆ ಹಿಂಪಡೆಯಲು, ಸ್ವಾಮಿನಾಥನ್ ವರದಿ ಆಯೋಗದ ಜಾರಿ ಮತ್ತು ಸಿಟು ಪ್ಲಸ್ 50 ಜಾರಿ, ಬೆಂಬಲ ಬೆಲೆ ಎಂ ಎಸ್ ಪಿ (MSP) ಜಾರಿಗೊಳಿಸುವ ಕುರಿತು ಬೆಂಗಳೂರಿನಲ್ಲಿ ಅಧಿವೇಶನದ ಸಮಯದಲ್ಲಿ ಬೃಹತ್ ಹೋರಾಟವನ್ನು ನಡೆಸಬೇಕೆಂದು ತೀರ್ಮಾನಿಸಲಾಯಿತು. ಇದೇ ವೇಳೆ ರೈತ ಸಂಘ ಮತ್ತು ಹಸಿರು ಸೇನೆಯ ವಿದ್ಯಾರ್ಥಿ ಸಂಘಟನೆಯನ್ನು ಅಸ್ತಿತ್ವಕ್ಕೆ ತರಲು ಇಂದಿನಿಂದ ಚಾಲನೆ ನೀಡಿ, ದಾವಣಗೆರೆ ಜಿಲ್ಲೆಯ ವಿದ್ಯಾರ್ಥಿ ಘಟಕದ ಅಧ್ಯಕ್ಷರನ್ನಾಗಿ ಆರ್ ಎಸ್ ನಾಯಕ್ ರನ್ನು ನೇಮಿಸಲಾಯಿತು. ರೈತರ ಮಗಳಾದ ಸುಜಾತ ಪೋಳ ಇವರಿಗೆ ಬೆಳಗಾವಿ ವಿಶ್ವವಿದ್ಯಾನಿಲಯದಿಂದ ಪಿ ಎಚ್ ಡಿ ಪ್ರಧಾನ ಮಾಡದೇ ಅಲ್ಲಿನ ಅಧಿಕಾರಿಗಳಿಂದ ಆಗಿರುವ ಅನ್ಯಾಯದ ಕುರಿತು ಮುಖಂಡರಿಗೆ ಮನವಿ ಸಲ್ಲಿಸಲಾಯಿತು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ರೈತರ ಪಂಪ್ ಸೆಟ್ಗೆ ಗುಣಮಟ್ಟದ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ರೈತರ ತಮಟೆ ಚಳುವಳಿ

ಕಾರ್ಯಕ್ರಮದಲ್ಲಿ ರೈತ ಮುಖಂಡ ಹಿರಿಯ ಹೋರಾಟಗಾರ ರೆಡ್ಡಿಹಳ್ಳಿ ವೀರಣ್ಣ, ಬಸವರಾಜ ಜಮಖಂಡಿ, ದಾವಣಗೆರೆ ಜಿಲ್ಲಾಧ್ಯಕ್ಷ ಮಲ್ಲಶೆಟ್ಟಿಹಳ್ಳಿ ಚೆನ್ನಬಸಪ್ಪ, ತಾಲೂಕು ಅಧ್ಯಕ್ಷ ವಿಶ್ವನಾಥ ಮಂಡ್ಲೂರು, ರಾಜ್ಯ ಸಮಿತಿ ಮುಖಂಡರಾದ ಹನುಮಂತಪ್ಪ, ಬಸವಂತಪ್ಪ, ಕಲ್ಮೇಶ್, ಚಿಕ್ಕೋಡಿ ಗೌಡ್ರು ವಸಂತಕುಮಾರ್, ಅರುಣ್ ಕುಮಾರ್, ರಾಜ್ಯ ಮಹಿಳಾ ಉಪಾಧ್ಯಕ್ಷರಾದ ಬೇವಿನಮಠ ಮಹಾದೇವಿ ಸೇರಿದಂತೆ ವಿವಿಧ ಜಿಲ್ಲೆಗಳ ರೈತ ಮುಖಂಡರು ಪದಾಧಿಕಾರಿಗಳು ಹಾಗೂ ದಾವಣಗೆರೆ ತಾಲೂಕು ಸಿದ್ದನೂರು, ಅಗಸನಕಟ್ಟೆ ಕೋಡಿಹಳ್ಳಿ ಗ್ರಾಮ ಸಮಿತಿಯ ಸದಸ್ಯರುಗಳು ಸೇರಿದಂತೆ ಅನೇಕ ರೈತ ಮುಖಂಡರು ಭಾಗವಹಿಸಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...