ದಾವಣಗೆರೆ | ಸಂಕಷ್ಟದ ಮಹಿಳೆಯರಿಗೆ ಆಶ್ರಯ ಯೋಜನೆಯ ಪ್ರಚಾರ: ನ್ಯಾ. ಮಹಾವೀರ ಕರೆಣ್ಣವರ ಚಾಲನೆ.

Date:

ದಾವಣಗೆರೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಇವರ ಕಚೇರಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು “ಶಕ್ತಿ ಸದನ ಶುಭೋಧಯ ಸ್ವಾಧಾರ ಗೃಹ” ರವರ ಸಂಯುಕ್ತ ಆಶ್ರಯದಲ್ಲಿ “ಸಂಕಷ್ಟದಲ್ಲಿರುವ ಮಹಿಳೆಯರಿಗೆ ಉಚಿತ ಊಟ, ಬಟ್ಟೆ, ಆಶ್ರಯ ನೀಡುವ ಸರ್ಕಾರದ ಯೋಜನೆಯ” ಪ್ರಚಾರಕ್ಕೆ ನ್ಯಾಯಾಧೀಶ ಮಹಾವೀರ ಮ. ಕರೆಣ್ಣವರ ಚಾಲನೆಯನ್ನು ನೀಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದೊಂದಿಗೆ ತಯಾರಿಸಲಾದ ಭಿತ್ತಿ ಪತ್ರಗಳನ್ನು ಪ್ರದರ್ಶಿಸಿ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ. ಮಹಾವೀರ ಮ. ಕರೆಣ್ಣವರ ಮಾತನಾಡಿ “18ರಿಂದ 55 ವರ್ಷದೊಳಗಿನ ನಿರಾಶ್ರಿತ/ನಿರ್ಗತಿಕ ಮಹಿಳೆಯರು ಮತ್ತು ಆರ್ಥಿಕ ಭದ್ರತೆ ಇಲ್ಲದ ಮಹಿಳೆಯರು, ಪ್ರಕೃತಿ ವಿಕೋಪಕ್ಕೆ ಒಳಗಾಗಿ ಮನೆ, ಆಶ್ರಯ ಕಳೆದುಕೊಂಡು, ಜೈಲಿನಿಂದ ಬಿಡುಗಡೆ ಹೊಂದಿ ಸಾಮಾಜಿಕ ಮತ್ತು ಆರ್ಥಿಕ ಸಹಾಯ ಇಲ್ಲದೇ ಇರುವವರು, ದೈಹಿಕ ಮತ್ತು ಮಾನಸಿಕ ಹಿಂಸೆಗೆ ಒಳಪಟ್ಟವರು, ಕುಟುಂಬ/ಮನೆಯಿಂದ ಹೊರಹಾಕಲ್ಪಟ್ಟವರು, ಪತಿಯಿಂದ ಅಥವಾ ಬೇರೆ ಸದಸ್ಯರಿಂದ ದೌರ್ಜನ್ಯಕ್ಕೆ ಒಳಪಟ್ಟವರು, ವಿಧವೆಯರು, ವಿಚ್ಚೇದಿತ ಮಹಿಳೆಯರು, ಮನೆಯವರಿಂದ ನಿರ್ಲಕ್ಷಕ್ಕೆ ಒಳಪಟ್ಟ ಇತರೆ ಮಹಿಳೆಯರು ಹಾಗೂ ಸದರಿ ಮಹಿಳೆಯರಿಗೆ 12 ವರ್ಷದೊಳಗಿನ ಗಂಡುಮಕ್ಕಳು ಹಾಗೂ 18 ವರ್ಷದೊಳಗಿನ ಹೆಣ್ಣುಮಕ್ಕಳಿದ್ದರೆ ಅವರೂ ಕೂಡಾ ತಾಯಿಯೊಂದಿಗೆ ಸ್ವಾಧಾರ ಗೃಹದ ಆಶ್ರಯ ಪಡೆಯಬಹುದು” ಎಂದು ತಿಳಿಸಿದರು.

“ಸ್ವಧಾರ್ ಗೃಹ ಯೋಜನೆಯಲ್ಲಿ ಮಹಿಳೆಯರಿಗೆ ಉಚಿತ ಬಟ್ಟೆ, ಊಟ, ವೈದ್ಯಕೀಯ ಸೌಲಭ್ಯ, ಆಶ್ರಯ, ಆಪ್ತಸಮಾಲೋಚನೆ, ಜಿಲ್ಲಾ ಕಾನೂನು ಪ್ರಾಧಿಕಾರದಿಂದ ಅಗತ್ಯ ಕಾನೂನು ಸಲಹೆ ಕೊಡಿಸುವುದು, ವೃತ್ತಿ ತರಬೇತಿಗಳಾದ ಟೈಲರಿಂಗ್‍ ಎಂಬ್ರಾಯಿಡರಿ ತರಬೇತಿ, ಅಗರಬತ್ತಿ ಮೇಕಿಂಗ್‍ ಇತ್ಯಾದಿ ಕೌಶಲ್ಯಾದಾರಿತ ಸ್ವಾವಲಂಬನೆಯ ತರಬೇತಿ ಮತ್ತು ಮಾರ್ಗದರ್ಶನ, ಆಪ್ತ ಸಮಾಲೋಚನೆ ಮೂಲಕ ನಿವಾಸಿಗಳನ್ನು ತಂದೆ/ತಾಯಿ/ಅಥವಾ ಪತಿಯೊಂದಿಗೆ ಸೇರಿಸುವುದು, ಮನರಂಜನೆ ಇತ್ಯಾದಿ ಸೌಲಭ್ಯಗಳನ್ನು ಒದಗಿಸಲಾಗುವುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದಾವಣಗೆರೆ ನಗರದಲ್ಲಿ ಸರ್ಕಾರಿ ಬಾಲಕಿಯರ ಬಾಲ ಮಂದಿರ, ರಾಜ್ಯ ಮಹಿಳಾ ನಿಲಯ, ಸರ್ಕಾರಿ ಬಾಲಕರ ಬಾಲ ಮಂದಿರ, ತುರ್ಚಗಟ್ಟದ ನಿರಾಶ್ರಿತರ ಕೇಂದ್ರ, ಜಾಗೃತ ಮಹಿಳಾ ನಿಲಯ, ಮತ್ತು ಶುಭೋದಯ ಮಹಿಳಾ ನಿಲಯ ಮತ್ತು ಇನ್ನೂ ಕೆಲವು ಸರ್ಕಾರಿ ಅನುದಾನಿತ ಸಂಸ್ಥೆಗಳು ಕರ್ತವ್ಯ ನಿರ್ವಹಿಸುತ್ತಿವೆ. ಇಲ್ಲಿ ಬರುವ ಎಲ್ಲಾ ನಿರಾಶ್ರಿತರಿಗೆ ಮತ್ತು ಬಾಧಿತರಿಗೆ ಮತ್ತು ಮಕ್ಕಳಿಗೆ ಉಚಿತ ಊಟ, ವಸತಿ ಮತ್ತು ಸೌಲಭ್ಯಗಳನ್ನು ಒದಗಿಸಿಕೊಡಲಾಗುವುದು. ಇದಕ್ಕೆ ತಗಲುವ ಎಲ್ಲಾ ವೆಚ್ಚವನ್ನು ಸರ್ಕಾರದಿಂದಲೇ ಪಾವತಿಸಲಾಗುತ್ತದೆ ಯಾರೊಬ್ಬರೂ ಕೂಡ ಹಣ ಪಾವತಿಸುವ ಅಗತ್ಯವಿಲ್ಲ” ಎಂದು ತಿಳಿಸಿದರು.

“ಉಚಿತ ಸಹಾಯವಾಣಿಗಳಾದ 181 ಅಥವಾ ಕಾನೂನು ಸೇವೆಗಳ ಪ್ರಾಧಿಕಾರದ ಟೋಲ್ ಫ್ರೀ ಸಂಖ್ಯೆ 15100 ಅಥವಾ ಪೊಲೀಸ್ ಸಹಾಯವಾಣಿ 112 ಗೆಮಹಿಳೆಯರಿಗೆ ಯಾವುದೇ ತೊಂದರೆಗಳಾದಲ್ಲಿ ಕರೆ ಮಾಡಬಹುದು” ಎಂದು ಸಲಹೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಶಿಕ್ಷಣ ಇಲಾಖೆ ಕಚೇರಿಯಲ್ಲಿ ‘ಎಣ್ಣೆ ಪಾರ್ಟಿ’; ಐವರು ಅಮಾನತುಚಿತ್ರದುರ್ಗ | ಶಿಕ್ಷಣ ಇಲಾಖೆ ಕಚೇರಿಯಲ್ಲಿ ‘ಎಣ್ಣೆ ಪಾರ್ಟಿ’; ಐವರು ಅಮಾನತು

ಭಿತ್ತಿ ಪತ್ರ ಅನಾವರಣ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಇಲಾಖೆ ಅಧಿಕಾರಿಗಳು, “ಶಕ್ತಿ ಸದನ ಶುಭೋದಯ ಸ್ವಾಧಾರ ಗ್ರಹ”, ಸ್ವಾಧಾರ ಗೃಹಗಳ ಮೇಲ್ವಿಚಾರಕಿಯರ, ಇತರೆ ವಕೀಲರೂ ಕೂಡ ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...