ದಾವಣಗೆರೆ | ಔಷಧಿ ಕ್ಷೇತ್ರದಲ್ಲಿ ಅಕ್ರಮ ದಂಧೆ ನಿಯಂತ್ರಣಕ್ಕೆ ಒತ್ತಾಯಿಸಿ ಪ್ರತಿಭಟನೆ

Date:

ಔಷಧಿ ಕ್ಷೇತ್ರದಲ್ಲಿ ಅನೈತಿಕವಾಗಿ ನಡೆಯುತ್ತಿರುವ ಮಾರಾಟ ದಂಧೆಗೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಔಷಧಿ ಮತ್ತು ಮಾರಾಟ ಪ್ರತಿನಿಧಿಗಳ ಸಂಘದ ಸದಸ್ಯರು ದಾವಣಗೆರೆ ಮಹಾನಗರ ಪಾಲಿಕೆ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಈ ವೇಳೆ ಸಂಘದ ಮುಖಂಡ ಕೆ.ಎಚ್. ಆನಂದರಾಜ್ ಮಾತನಾಡಿ ಖಾಸಗಿ ಬಹುರಾಷ್ಟ್ರೀಯ ಕಂಪನಿಗಳು ಭ್ರಷ್ಟ ವ್ಯವಸ್ಥೆ ಮೂಲಕ ತಮ್ಮ ಲಾಭಕೋರತನದಿಂದ ಜನರಿಗೆ ಅವಶ್ಯಕವಾದ ಔಷಧಿಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಮೂಲಕ ಅದನ್ನು ಬಳಸುವ ರೋಗಿಗಳ ಆರೋಗ್ಯವನ್ನು ಮತ್ತಷ್ಟು ಹಾಳು ಮಾಡುತ್ತಿವೆ.

ಜನರ ಆರೋಗ್ಯವನ್ನು ರಕ್ಷಿಸಬೇಕಾದ ಕೇಂದ್ರ ಸರ್ಕಾರವು ಕಂಡು ಕಾಣದಂತೆ ವರ್ತಿಸುತ್ತಿದೆ. ಮಾತ್ರವಲ್ಲ ಸಾರ್ವಜನಿಕ ವಲಯದ ಔಷಧಿ ಕಂಪನಿಗಳನ್ನು ಮುಚ್ಚುವ ಮೂಲಕ ಖಾಸಗೀ ಕಂಪನಿಗಳ ಲಾಭಕೋರತನವನ್ನು ಸರ್ಕಾರವೇ ಬೆಂಬಲಿಸುತ್ತಿರುವುದು ದುರದೃಷ್ಟಕರ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವ್ಯವಸ್ಥೆಯಿಂದಾಗಿ ಖಾಸಗಿ ಬಹುರಾಷ್ಟ್ರೀಯ ಕಂಪನಿಗಳು ತಮ್ಮ ಇಚ್ಛೆ ಬಂದಷ್ಟು ಔಷಧಿಗಳ ಬೆಲೆಗಳ ಏರಿಕೆಗೆ ಅವಕಾಶ ನೀಡಿದಂತಾಗಿದೆ. ಔಷಧಿಗಳ ಎಂಆರ್‌ಪಿ ಮೇಲೆ ಪ್ರತೀ ವರ್ಷ ಶೇ.10ರಷ್ಟು ಬೆಲೆ ಹೆಚ್ಚಿಸುವ ಅವಕಾಶವನ್ನು ಕೇಂದ್ರ ಸರ್ಕಾರ ಮಾಡಿದೆ. ಇದರಿಂದಾಗಿ ಇಡೀ ಆರೋಗ್ಯ ಕ್ಷೇತ್ರವೇ ಖಾಸಗೀಯವರ ದಾಳಕ್ಕೆ ಸಿಲುಕಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ಇದರ ಪರಿಣಾಮವಾಗಿ ಅಲ್ಲಿ ಚಿಕಿತ್ಸೆ ಪಡೆಯುವುದು ಸಂಪೂರ್ಣ ಹಣದ ವ್ಯವಹಾರದ ಮೇಲೆ ನಿಂತಿದೆ. ಇದರಿಂದ ರೋಗಿಗಳ ಜೀವ ಸದಾ ಅಪಾಯದಲ್ಲಿದೆ ಎಂದರು.

ಇದಲ್ಲದೆ ಔಷಧಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಔಷಧಿ ಮಾರಾಟ ಪ್ರತಿನಿಧಿಗಳಿಗೆ ಯಾವುದೇ ಕನಿಷ್ಟವೇತನ, ಸಾಮಾಜಿಕ ಭದ್ರತೆ ಇಲ್ಲ. ಇಲ್ಲಿ ಕಾರ್ಮಿಕ ಕಾನೂನು ಉಲ್ಲಂಘನೆ ಎಂಬುದು ನಿತ್ಯ ನಡೆಯುತ್ತಲೇ ಇದೆ. ಹಲವಾರು ವರ್ಷಗಳಿಂದ ಬೆಂಗಳೂರಿನಲ್ಲಿರುವ ಔಷಧಿ ಕಂಪನಿಗಳ ದಾಖಲೆಗಳನ್ನ ಪರಿಶೀಲಿಸಲು ನಮ್ಮ ಸಂಘಟನೆಯು ಒತ್ತಾಯ ಮಾಡಿದ್ದರೂ ರಾಜ್ಯ ಸರ್ಕಾರವು ಸರಿಯಾದ ಕ್ರಮ ಕೈಗೊಂಡಿರುವುದಿಲ್ಲ. ಇದೀಗ ಕೇಂದ್ರ ಸರ್ಕಾರ ಕಾರ್ಮಿಕ ಕಾನೂನು ತಿದ್ದುಪಡಿ ಮಾಡುವ ಮೂಲಕ ಕಾರ್ಮಿಕರನ್ನು ಶೋಷಣೆ ಮಾಡಿ, ಮಾಲಿಕರನ್ನು ಪೋಷಣೆ ಮಾಡುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಜಾರಿ ಮಾಡಿರುವುದರಿಂದ ಮಾರಾಟ ಪ್ರತಿನಿಧಿಗಳ ರಕ್ಷಣೆಗೆ ಇದ್ದಂತಹ ಎಸ್‌ಪಿಇ ಖಾಯಿದೆ ರದ್ದಾಗಲಿದೆ.

ಆಸ್ಪತ್ರೆಗಳಲ್ಲಿ ಔಷಧಿ ಮಾರಾಟ ಪ್ರತಿನಿಧಿಗಳ ಪ್ರವೇಶ ನಿರ್ಬಂಧ ಮಾಡಿರುವುದು. ಸೇವಾ ಷರತ್ತುಗಳು ಮತ್ತು ಕೆಲಸದ ಅವಧಿಯನ್ನ ನಿಗಧಿ ಮಾಡದೇ ಜಿಪಿಆರ್‌ಎಸ್ ಮತ್ತು ಜಿಯೋಟ್ಯಾಗಿಂಗ್ ಮೂಲಕ ಗೌಪ್ಯತೆ ಬಹಿರಂಗಪಡಿಸುವ ಮೂಲಕ ಸುಮಾರು 13-15ಗಂಟೆ ಕೆಲಸ ಮಾಡಿಸುವ ಮೂಲಕ ಮಾರಾಟ ಪ್ರತಿನಿಧಿಗಳ ಮೇಲೆ ನಡೆಯುತ್ತಿರುವ ಶೋಷಣೆಯು ಸಂವಿಧಾನ ವಿರೋಧಿ ನಡೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಲೋಹಿತಾಶ್ವ, ವೆಂಕಟೇಶ್, ಶಶಿಆಚಾರ್, ಆಫರೊಜ್ ಸೇರಿದಂತೆ  ಸಂಘದ ಸದಸ್ಯರು ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...