ಬೆಳಗಿನ ಜಾವ ಮೂರು ಗಂಟೆ ಸುಮಾರಿಗೆ ಬಹಿರ್ದೆಸೆಗೆ ತೆರಳಿದ್ದ 15 ವರ್ಷದ ಪ್ರೌಢಶಾಲಾ ವಿದ್ಯಾರ್ಥಿ ಹೃದಯಾಘಾತಕ್ಕೆ ಒಳಗಾಗಿ ಸಾವಿಗೀಡಾಗಿರುವ ಘಟನೆ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಗೋಗುದ್ದು ಗ್ರಾಮದಲ್ಲಿ ಜರುಗಿದೆ. ರಾಜೀವ್ ಗಾಂಧಿ ವಸತಿ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ ಮುಜಾಮಿಲ್ ಹೃದಯಾಘಾತಕ್ಕೆ ಬಲಿಯಾದ ದುರ್ದೈವಿ.

ಜಗಳೂರು ತಾಲೂಕಿನ ಗೋಗುದ್ದು ಗ್ರಾಮದ ಚಮನ್ ಸಾಬ್ ಮತ್ತು ಫಾತೀಮಾರ ಮೂರು ಜನ ಮಕ್ಕಳಲ್ಲಿ ಮುಜಮಿಲ್ ದ್ವಿತೀಯ ಪುತ್ರನಾಗಿದ್ದ ಮುಜಾಮಿಲ್ ಸೋಮವಾರ ಮುಂಜಾನೆ ಸುಮಾರು ಮೂರು ಗಂಟೆ ವೇಳೆಗೆ ನಿದ್ರಿಯಿಂದ ಎದ್ದು ಮೂತ್ರ ವಿಸರ್ಜನೆಗಾಗಿ ಹೊರಗೆ ತೆರಳಿದ್ದಾನೆ. ಮೂತ್ರ ವಿಸರ್ಜನೆ ನಂತರ ಮನೆ ಒಳಗೆ ಬಂದು ಕುಸಿದು ಬಿದ್ದಿದ್ದಾನೆ. ಕೂಡಲೇ ಪೋಷಕರು ವಿದ್ಯಾರ್ಥಿಯನ್ನು ಆಸ್ಪತ್ರೆಗೆ ತೆಗೆದುಕೊಂಡು ಹೋಗುವ ಕರೆದುಕೊಂಡು ಹೋಗುವ ಮಾರ್ಗ ಮಧ್ಯದಲ್ಲಿಯೇ ಅಸುನೀಗಿದ್ದಾನೆ ಎಂದು ತಿಳಿದು ಬಂದಿದೆ.
ಈ ಸುದ್ದಿ ಓದಿದ್ದೀರಾ? http://ದಾವಣಗೆರೆ | ಎಸ್ಐಆರ್ ಮ್ಯಾಪಿಂಗ್ ನಲ್ಲಿ ನ್ಯೂನತೆ: ಬಿಎಲ್ಓ ಮಾರ್ಗಸೂಚಿಗೆ ಮುಸ್ಲಿಂ ಒಕ್ಕೂಟ ಆಗ್ರಹ
ಮೃತ ವಿದ್ಯಾರ್ಥಿಯು ತಾಲೂಕಿನ ಹನುಮಂತಪುರ ಗ್ರಾಮದ ರಾಜೀವ್ ಗಾಂಧಿ ವಸತಿ ಪ್ರೌಢಶಾಲೆಯಲ್ಲಿ ಒಂಬತ್ತನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಜ್ಞಾನಜ್ಯೋತಿ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ತಿಪ್ಪೇಸ್ವಾಮಿ ಮತ್ತು ರಾಜೀವ್ ಗಾಂಧಿ ವಸತಿ ಪ್ರೌಢಶಾಲೆಯ ಶಾಲೆಯ ಮುಖ್ಯಶಿಕ್ಷಕರು ,ಶಿಕ್ಷಕರು , ಗೋಗುದ್ದು ಗ್ರಾಮದ ಮುಖಂಡರು ಸಂತಾಪ ಸೂಚಿಸಿದ್ದಾರೆ.





