ದಾವಣಗೆರೆ | ಒತ್ತುವರಿ ತೆರವು, ಹದ್ದುಬಸ್ತುಗೊಳಿಸಿ ಗೋಮಾಳ ಭೂಮಿ, ಸ್ಮಶಾನ ಉಳಿಸಲು ದಂಡಾಧಿಕಾರಿಗೆ ಮನವಿ

Date:

ಸರ್ಕಾರವೇ ಐದು ಎಕರೆ ಗೋಮಾಳ ಸಾರ್ವಜನಿಕ ಸ್ಮಶಾನ ಭೂಮಿಗೆ ಮೀಸಲಾಗಿರಿಸಿದ್ದು, ಅಕ್ಕ ಪಕ್ಕದ ರೈತರು ಒತ್ತುವರಿ ಮಾಡಿಕೊಂಡಿದ್ದಾರೆ. ಒತ್ತುವರಿ ಮಾಡಿರುವ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ದಿಡಗೂರು ಗ್ರಾಮದ ಗೋಮಾಳ ಹದ್ದುಬಸ್ತು ಮಾಡಿ ಒತ್ತುವರಿ ತೆರವು ಕಾರ್ಯಾಚರಣೆ ಮಾಡಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಜಾನುವಾರುಗಳ ಮುಖಾಂತರ ತಾಲೂಕು ಕಚೇರಿ ಮುತ್ತಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ ಎಂದು ದಿಡಗೂರು ಗ್ರಾಮಸ್ಥರು ಒತ್ತಾಯಿಸಿದ್ದಾರೆ.‌

“ಹೊನ್ನಾಳಿ ತಾಲೂಕಿನ ದಿಡಗೂರಿನ ಗ್ರಾಮದಲ್ಲಿ ಒಟ್ಟು 100 ಎಕರೆ ಗೋಮಾಳ ಜಮೀನಿದ್ದು, ಅದರಲ್ಲಿ 30, ಎಕರೆ ಗೋಮಾಳ ಕೆಇಬಿ ಗ್ರಿಡ್- ಕೆ ಪಿ ಟಿ ಸಿ ಎಲ್ ಗೆ ಹಸ್ತಾಂತರ ಮಾಡಿದ್ದಾರೆ. ಇದರಲ್ಲಿ ಸ್ಮಶಾನಕ್ಕೆ ಮಂಜೂರಾದ ಜಮೀನು ಒತ್ತುವರಿಯಾಗಿದೆ.‌ಇದಕ್ಕೆ ಗ್ರಾಮ ಪಂಚಾಯಿತಿ ವತಿಯಿಂದ ಸುತ್ತು ತಡೆಗೋಡೆ ನಿರ್ಮಾಣ ಮಾಡುವಂತೆ ಹಲವಾರು ಬಾರಿ ಮನವಿ ಸಲ್ಲಿಸಿದರು ಇಲ್ಲಿವರೆಗೂ ನಿರ್ಮಾಣ ಮಾಡಿಲ್ಲ” ಎಂದು ಮುಖಂಡರು ಆರೋಪಿಸಿದರು.

“ಅಕ್ಕಪಕ್ಕದವರು ಒತ್ತುವರಿ ಮಾಡಿಕೊಂಡಿದ್ದ ಕಾರಣ ಗ್ರಾಮಸ್ಥರು ಹೆದರಿ ಸ್ಮಶಾನದಲ್ಲಿ ಬಂದು ಅಂತ್ಯಕ್ರಿಯೆ ಮಾಡಿಲ್ಲ. ಹಾಗೆಯೇ ಇನ್ನೂ ಸ್ವಲ್ಪ ಜಮೀನು ಗಳು ಕೆಲವರ ಹೆಸರಿಗೆ ಸರ್ಕಾರ ಬಗರ್ ಹುಕುಂ ಮಂಜೂರು ಮಾಡಲಾಗಿದೆ. ಮತ್ತೆ ಸರ್ಕಾರವು ಬಗುರು ಹುಕುಂ ಮಂಜೂರು ಮಾಡಲು ಮುಂದಾಗಿದ್ದು, ನಮ್ಮ ಗ್ರಾಮದಲ್ಲಿ 700 ಜಾನುವಾರುಗಳು ಇದ್ದು, ಸುಪ್ರೀಂ ಕೋರ್ಟ್ ಆದೇಶ 100 ಜಾನುವಾರುಗಳಿಗೆ ಎರಡುವರೆ ಎಕರೆ ಗೋಮಾಳ ಮೀಸಲು ಇರಬೇಕು ಎಂದು ಕಾನೂನಿದೆ. ಆದರೆ ಇಂದಿನ ಶಾಸಕರು ಕೆಲವರಿಗೆ ಜಮೀನು ಮಂಜೂರು ಮಾಡಲು ಮುಂದಾಗಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಗ್ರಾಮಸ್ಥರು ಕೆಲವು ತಿಂಗಳ ಹಿಂದೆ ಜಾನುವಾರುಗಳ ಮುಖಾಂತರ ತಾಲೂಕು ಕಚೇರಿಗೆ ಮುತ್ತಿಗೆ ಹಾಕಲು ಹೊರಟ ಸಂದರ್ಭದಲ್ಲಿ ತಾಲೂಕು
ದಂಡಾಧಿಕಾರಿಗಳು ಮತ್ತು ರಕ್ಷಣಾ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸಮಸ್ಯೆ ಬಗೆಹರಿಸುವುದಾಗಿ ಗ್ರಾಮಸ್ಥರಲ್ಲಿ ಮನವಿ ಮಾಡಿದರು. ಅಂದು ಮುತ್ತಿಗೆ ಕಾರ್ಯಕ್ರಮ ಕೈಬಿಟ್ಟಿದ್ದೆವು. ದಂಡಾಧಿಕಾರಿ ಆದ ನೀವು ಹೊಸದಾಗಿ ಅಧಿಕಾರ ವಹಿಸಿಕೊಂಡಿದ್ದು ನಿಮ್ಮ ಗಮನಕ್ಕೆ ತಂದು ಶೀಘ್ರ ಒತ್ತುವರಿ ತೆರವು ಕ್ರಮ ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸುತ್ತೇವೆ” ಎಂದು ದಂಡಾಧಿಕಾರಿ ರಾಜೇಶ್ ರವರಿಗೆ ಮನವಿ ಸಲ್ಲಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಮಾಜಿ ಸೈನಿಕರ ಚಟುವಟಿಕೆಗಳಿಗೆ ಸಭೆಗಳಿಗೆ ಸೈನಿಕರ ಭವನ, ಜಮೀನು ಮಂಜೂರಿಗೆ ಒತ್ತಾಯಿಸಿ ಮನವಿ

ಈ ವೇಳೆ ಗ್ರಾಮಸ್ಥರಾದ ಓ,ಎಚ್ ವೆಂಕಟೇಶ್, ಶಿವಮೂರ್ತಿ, ಹನುಮಂತಪ್ಪ, ಟಿ, ಕಾಂತರಾಜು ಎಂ,ಗುಡ್ಡೇಶ,ವಿ, ಧರ್ಮಪ್ಪ, ಇನ್ನೂ ಮುಂತಾದವರು ಉಪಸ್ಥಿತರಿದ್ದರು.

ವರದಿ; ಪ್ರಭಾಕರ್ ಡಿ ಎಂ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...