ದಾವಣಗೆರೆ | ಆವರಗೆರೆ ವಸತಿರಹಿತರ ಪುನರ್ವಸತಿಗಾಗಿ ಸತ್ಯಾಗ್ರಹ: ದಸಂಸ ಸಂಚಾಲಕ ಮಲ್ಲೇಶ್

Date:

“ಆವರಗೆರೆ ವಸತಿ, ನಿವೇಶನ ರಹಿತ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಡಾ.ಅಂಬೇಡ್ಕರ್ ವಾದ)(ದಸಂಸ)ದಾವಣಗೆರೆ ಜಿಲ್ಲಾ ಸಮಿತಿ ಮತ್ತು ತಾಲ್ಲೂಕು ಸಮಿತಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ” ಎಂದು ಸಂಚಾಲಕ ಎಚ್ ಮಲ್ಲೇಶ್ ತಿಳಿಸಿದರು.

ದಾವಣಗೆರೆಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು “ಕರ್ನಾಟಕ ದಲಿತ ಸಂಘರ್ಷ ಸಮಿತಿ ಡಾ. ಅಂಬೇಡ್ಕಾರ್ ವಾದ ದಾವಣಗೆರೆ ಜಿಲ್ಲಾ ಸಮಿತಿ ಮತ್ತು ತಾಲ್ಲೂಕು ಸಮಿತಿ ಅಡಿಯಲ್ಲಿ 2025, ಅಕ್ಟೋಬರ್ 9ರಂದು ಆವರಗೆರೆ ವಸತಿ, ನಿವೇಶನ ರಹಿತ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲು ಒತ್ತಾಯಿಸಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ. ದಾವಣಗೆರೆ ಉಪವಿಭಾಗಾಧಿಕಾರಿ ಕಛೇರಿ ಎದುರು ಧರಣಿ ಸತ್ಯಾಗ್ರಹ ನಡೆಸಲಾಗುವುದು. ನಂತರ ಉಪ ವಿಭಾಗಾಧಿಕಾರಿಗಳಿಗೆ ಕೂಡಲೇ ವಸತಿ ಸೌಕರ್ಯ ಕಲ್ಪಿಸಲು ಮನವಿ ಪತ್ರ ಸಲ್ಲಿಸಲಾಗುವುದು‌” ಎಂದು ತಿಳಿಸಿದರು.

“ದಾವಣಗೆರೆ ಮಹಾನಗರ ಪಾಲಿಕೆಯ ದನವಿನ ಓಣಿ ಹತ್ತಿರ ಗೋಮಾಳದಲ್ಲಿ ಕಳೆದ 2022ರಲ್ಲಿ
ನೂರಾರು ಸಂಖ್ಯೆಯ ವಸತಿ ನಿವೇಶನ ರಹಿತರು ಗುಡಿಸಲು ಕಟ್ಟಿಕೊಂಡು ವಾಸಿಸುತ್ತಿದ್ದರು.‌ ದಾವಣಗೆರೆ ಜಿಲ್ಲಾಡಳಿತದ ಮೌಖಿಕ ನಿರ್ದೇಶನದಂತೆ ರಾತ್ರಿಯ ಬೆಳಗಿನ ಜಾವದ 2:00 ಗಂಟೆ ಸಮಯದಲ್ಲಿ ನಿವಾಸಿಗಳಿಗೆ ಯಾವುದೇ ಮಾಹಿತಿ ಸೂಚನೆ ನೀಡದೇ ಏಕಾಏಕಿ ಮಹಾನಗರ ಪಾಲಿಕೆ ಮತ್ತು ತಾಲ್ಲೂಕು ತಹಶೀಲ್ದಾರರು ಪೊಲೀಸ್ ಬಲದೊಂದಿಗೆ ಜೆ.ಸಿ.ಬಿ. ಯಂತ್ರಗಳ ಸಹಾಯದಿಂದ ವಸತಿ ಗುಡಿಸಲು ಧ್ವಂಸ ಕಾರ್ಯಚರಣೆ ನಡೆಸಿ ಅಮಾಯಕ ಕುಟುಂಬಗಳನ್ನು ಬೀದಿ ಪಾಲುಮಾಡಿ ದೌರ್ಜನ್ಯ ಮೆರೆದಿದ್ದರು” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇಂತಹ ಆಕಸ್ಮಿಕ ಘಟನೆಯಿಂದ ವಿಚಲಿತಗೊಂಡ ನಿವಾಸಿಗಳ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರು ಎಂದು ಆರೋಪಿಸಿ ಬಂಧನಕ್ಕೆ ಒಳಪಡಿಸಿದ್ದರು. ಇಂತಹ ಅಕ್ರಮ, ದೌರ್ಜನ್ಯದಿಂದ ಕುಟುಂಬಗಳು ಅಲ್ಲಲ್ಲಿ ಅನುಕೂಲ ಸ್ಥಳದಲ್ಲಿ ವಾಸವಾಗಿದ್ದ ಆವರಗೆರೆ ದನವಿನ ಓಣಿಯಲ್ಲಿ ನಿವಾಸಿಗಳನ್ನು ಪುನಃ ಒಕ್ಕಲೆಬ್ಬಿಸುವ ಹುನ್ನಾರ ಮುಂದುವರೆದಿರುತ್ತದೆ. ಈ ಹಿನ್ನೆಲೆಯಲ್ಲಿ ಅಕ್ಟೋಬರ್ 9ರಂದು ಧರಣಿ ಸತ್ಯಾಗ್ರಹ ನಡೆಸಲಾಗುವುದು. ಈ ವೇಳೆ ತಾಲ್ಲೂಕು ಸಂಚಾಲಕರು, ಜಿಲ್ಲಾ ಸಂಘಟನಾ ಸಂಚಾಲಕರು, ತಾಲ್ಲೂಕು ಸಂಘಟನಾ ಸಂಚಾಲಕರು ಸೇರಿದಂತೆ ಕಾರ್ಯಕರ್ತರು ಹಾಜರಿರುವರು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಮಹರ್ಷಿ ವಾಲ್ಮೀಕಿ ಜಯಂತೋತ್ಸವ: ಐತಿಹಾಸಿಕ ಬೈಕ್‌ ರ‍್ಯಾಲಿ 

ಸುದ್ದಿಗೋಷ್ಠಿಯಲ್ಲಿ ತಾಲ್ಲೂಕು ಸಂಚಾಲಕ ಆವರಗೆರೆ
ಚಂದ್ರಪ್ಪ, ಜಿಲ್ಲಾ ಸಂಘಟನಾ ಸಂಚಾಲಕರಾದ ಜಿ.ಎಸ್. ಲೋಕೇಶ ಹಾಲೇಕಲ್ಲು, ಮುಖಂಡರಾದ ಸಮಾದಪ್ಪ, ಎಲ್. ಶಿವು, ಯು ಮಹಾಂತೇಶ, ಚನ್ನಬಸಪ್ಪ, ಶಿವಾನಂದ, ಗಿರೀಶ ಆರ್, ತಾಲ್ಲೂಕು ಸಂಘಟನಾ ಸಂಚಾಲಕರಾದ ಎಸ್. ಶಿವು, ಪ್ರವೀಣ ಎಸ್. ಉಪಸ್ಥಿತರಿದ್ದರು.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪಿಬಿ ರಸ್ತೆಯಲ್ಲಿ ಮುಸ್ಲಿಂ ಬಾಂಧವರ ರಂಜಾನ್ ಆಚರಣೆ

ಪವಿತ್ರ ರಂಜಾನ್ (ಈದ್ ಉಲ್ ಫಿತುರ್) ಆಚರಣೆ ಹಿನ್ನೆಲೆಯಲ್ಲಿ ದಾವಣಗೆರೆ ನಗರದ...

ದಾವಣಗೆರೆ | ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಮರ್ಥ್ ಶಾಮನೂರು: ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್...

ದಾವಣಗೆರೆ | ದಕ್ಷಿಣ ಕ್ಷೇತ್ರ ಉಪಚುನಾವಣೆ; ಎಸ್ ಟಿ ಮೋರ್ಚಾದ ಶ್ರೀನಿವಾಸ್ ಗೆ ಒಲಿದ ಬಿಜೆಪಿ ಟಿಕೆಟ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮ...

ದಾವಣಗೆರೆ | ಒಳಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯಕ್ಕೆ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ಹೋರಾಟ

ಸರ್ವೋಚ್ಛ ನ್ಯಾಯಾಲಯದ ಸಂವಿಧಾನಿಕ ಪೀಠವು ಒಳ ಮೀಸಲಾತಿ ವರ್ಗೀಕರಣ ಹಾಗೂ ಜಾರಿಯ...