ದಾವಣಗೆರೆ | ಅಕ್ರಮ ಮದ್ಯ ಜೂಜು ಮಟ್ಕಾ ನಿಯಂತ್ರಣಕ್ಕೆ ಎಸ್ಸಿಎಸ್ಟಿಕುಂದುಕೊರತೆ ಸಭೆಯಲ್ಲಿ ಆಗ್ರಹ

Date:

ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟ ಮತ್ತು ಜೂಜಾಟವನ್ನು ನಿಯಂತ್ರಿಸಬೇಕೆಂದು ಹರಿಹರ ನಗರದ ಗುರುಭವನದಲ್ಲಿ ಗುರುವಾರ ಪೊಲೀಸ್ ಇಲಾಖೆಯಿಂದ ಆಯೋಜಿಸಿದ್ದ ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಕುಂದುಕೊರತೆ ಸಭೆಯಲ್ಲಿ ಸಮುದಾಯದ ಮುಖಂಡರು ಆಗ್ರಹಿಸಿದರು.

“ಹರಿಹರ ತಾಲ್ಲೂಕಿನ ಬಹುತೇಕ ಗ್ರಾಮಗಳಲ್ಲಿ ಅಕ್ರಮ ಮದ್ಯ ಮಾರಾಟ ಎಗ್ಗಿಲ್ಲದೆ ನಡೆಯುತ್ತಿದೆ. ಅಂಗಡಿ, ಹೋಟಲ್, ಮನೆಗಳಲ್ಲಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿದೆ. ಇದೇ ಮಾದರಿಯಲ್ಲಿ ಮಟ್ಕಾ ಜೂಜಾಟದ ಅರ್ಭಟವೂ ಇದೆ. ಮದ್ಯ ಮತ್ತು ಮಟ್ಕಾದ ವ್ಯಸನಕ್ಕೆ ಈಡಾಗಿರುವ ಪರಿಶಿಷ್ಟ ಹಾಗೂ ಇತರೆ ಸಮುದಾಯದ ಯುವಕರ ಬದುಕು ಬೀದಿಗೆ ಬೀಳುತ್ತಿದೆ, ಕುಟುಂಬದವರು ಉಪವಾಸಕ್ಕೆ ಈಡಾಗುತ್ತಿದ್ದಾರೆ. ಈ ಜ್ವಲಂತ ಸಮಸ್ಯೆ ನಿವಾರಣೆ ಮಾಡಬೇಕು” ಎಂದು ಸಮುದಾಯದ ಹಲವು ಮುಖಂಡರು ಮಾತನಾಡಿ ಆಗ್ರಹಿಸಿದರು.

ಕದಸಂಸ ತಾಲ್ಲೂಕು ಸಂಚಾಲಕ ಪಿ.ಜೆ.ಮಹಾಂತೇಶ್ ಮಾತನಾಡಿ, “ಕಡ್ಲೆಗೊಂದಿ ಗ್ರಾಮದಲ್ಲಿ ಲಭ್ಯವಿರುವ ಸರ್ಕಾರಿ ಜಮೀನಿನಲ್ಲಿ ಗ್ರಾಮದ ನಿರ್ವಸತಿಗರಿಗೆ ವಸತಿ ಯೋಜನೆ ರೂಪಿಸಬೇಕು, ಕೊಕ್ಕನೂರು ಗ್ರಾಮದ ಡಾ.ಬಾಬು ಜಗಜೀವನರಾಮ್ ಭವನಕ್ಕೆ ವಿದ್ಯುತ್ ಸೌಲಭ್ಯ, ಬೆಳ್ಳೂಡಿಯಲ್ಲಿ ಅಪೂರ್ಣವಾಗಿರುವ ಅಂಬೇಡ್ಕರ್ ಭವನ ಕಾಮಗಾರಿ ಪೂರ್ಣಗೊಳಿಸಬೇಕು, ಭಾನುವಳ್ಳಿಯಲ್ಲಿ ಶಿಥಿಲಗೊಂಡ ಅಂಬೇಡ್ಕರ್ ಭವನ ತೆರವುಗೊಳಿಸಿ ಹೊಸ ಭವನ ನಿರ್ಮಾಣ ಮಾಡಬೇಕಿದೆ” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1003537823

ಮುಖಂಡ ವಿಶ್ವನಾಥ ಮೈಲಾಳ ಮಾತನಾಡಿ, “ಕುಂದುಕೊರತೆ ಸಭೆಯಲ್ಲಿ ಬಹುತೇಕ ಇಲಾಖೆ ಅಧಿಕಾರಿಗಳು ಗೈರಾಗಿದ್ದಾರೆ. ಈ ಸಭೆ ಕಾಟಾಚಾರಕ್ಕೆ ನಡೆಸಲಾಗುತ್ತಿದೆ, ಕಾನೂನಿನ ಬೆಂಬಲ ಇದ್ದರೂ ಅಸ್ಪೃಷ್ಯರ ನಿರೀಕ್ಷಿತ ಅಭಿವೃದ್ಧಿ ಆಗುತ್ತಿಲ್ಲ” ಎಂದು ಆರೋಪಿಸಿದರು.

ಸಂಗೀತ ಕಲಾವಿದ ಅಣ್ಣಪ್ಪ ಅಜ್ಜೇರ್ ಮಾತನಾಡಿ, “ಗುತ್ತೂರು ಗ್ರಾಮದಲ್ಲಿ ಪರಿಶಿಷ್ಟರಿಗೆ ರುದ್ರಭೂಮಿ ಇಲ್ಲ, ಮಳೆಗಾಲದಲ್ಲಿ ನದಿಯಲ್ಲಿ ಪ್ರವಾಹ ಬಂದಾಗ ಮೃತರ ಅಂತ್ಯ ಸಂಸ್ಕಾರ ಮಾಡುವುದು ದುಸ್ತರವಾಗುತ್ತಿದೆ. ತಾಲೂಕು ಮತ್ತು ಜಿಲ್ಲಾಡಳಿತ ರುದ್ರಭೂಮಿಗೆ ಜಮೀನು ಮಂಜೂರು ಮಾಡಬೇಕು” ಎಂದು ಒತ್ತಾಯಿಸಿದರು.

ಗ್ರಾಮಾಂತರ ಡಿವೈಎಸ್ ಪಿ ಬಸವರಾಜ್ ಬಿ.ಎಸ್. ಮಾತನಾಡಿ, “ಸಭೆಯಲ್ಲಿ ಪ್ರಸ್ತಾಪಿಸಿರುವ ಸಮಸ್ಯೆಗಳನ್ನು ಕ್ರೂಢೀಕರಿಸಿ ಸಂಬಂಧಿತ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಸೂಚಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಸರ್ಕಾರದ ಸೂಚನೆಯಂತೆ ಹಲವು ಭಾಗಗಳಲ್ಲಿ ಕುಂದು ಕೊರತೆ ಸಭೆಗಳು ಆಯೋಜಿಸಲಾಗಿದೆ. ಹಲವು ಅಧಿಕಾರಿಗಳು ಹಾಜರಿದ್ದು, ಪರಿಹಾರಕ್ಕೆ ಪ್ರಯತ್ನಿಸಲಾಗುವುದು” ಎಂದು ಮಾಹಿತಿ ನೀಡಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ರೈತರಿಗೆ ಕೃಷಿಸಾಲ ನೀಡದ ಬ್ಯಾಂಕ್ ವಿರುದ್ಧ ಮಲೆಬೆನ್ನೂರಿನಲ್ಲಿ ರೈತಸಂಘ ಪ್ರತಿಭಟನೆ

ಸಭೆಯಲ್ಲಿ ಇನ್ ಸ್ಪೆಕ್ಟರ್ ಗಳಾದ ಆರ್.ಎಫ್ ದೇಸಾಯಿ, ಸುರೇಶ್ ಸಗರಿ, ಬಿಇಒ ಡಿ.ದುರುಗಪ್ಪ, ಸಿಡಿಪಿಒ ಪ್ರಿಯದರ್ಶಿನಿ, ದಲಿತ ಸಮುದಾಯದ ಮುಖಂಡರಾದ ರಾಜನಹಳ್ಳಿ ನಾಗೇಂದ್ರಪ್ಪ, ಕೆ.ಬಿ.ಮಂಜುನಾಥ್, ಕೊಟ್ರೇಶ್, ಹರಳಹಳ್ಳಿ ಹನುಮಂತಪ್ಪ, ಎ.ಕೆ ಭೂಮೇಶ್, ಎಚ್.ಸುಧಾಕರ, ಕೊತ್ವಾಲ್ ಹನುಮಂತಪ್ಪ, ಬೇವಿನಹಳ್ಳಿ ಶಿವರಾಂ, ಧೂಳೆಹೊಳೆ ಪರಶುರಾಮ್, ತಿಪ್ಪೇಶ್, ಬೆಳ್ಳೂಡಿ ಹಾಲೇಶ್, ಆರ್.ವಿಜಯಕುಮಾರ್, ವೈ.ಬಿ.ಪ್ರಭಾಕರ್, ಸಂತೋಷ ನೋಟದವರ, ಜಿ.ಕೆ.ಪಂಚಾಕ್ಷರಿ ಹಾಗೂ ಹಲವು ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.
……
ಹರಿಹರದಲ್ಲಿ ಗುರುವಾರ ನಡೆದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಕುಂದುಕೊರತೆ ಸಭೆಯಲ್ಲಿ ಗ್ರಾಮಾಂತರ ಡಿವೈಎಸ್ ಪಿ ಬಸವರಾಜ್ ಬಿ.ಎಸ್. ಮಾತನಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...