ದಾವಣಗೆರೆ | ತರಳಬಾಳು ಬಡಾವಣೆಯಲ್ಲಿ ಶಿವಸಂಚಾರ-25 ನಾಟಕೋತ್ಸವ ಪ್ರದರ್ಶನ

Date:

ಸಾಣೇಹಳ್ಳಿಯ ಶಿವಕುಮಾರ ಕಲಾ ಸಂಘ ಹಾಗೂ ತರಳಬಾಳು ಸೇವಾ ಟ್ರಸ್ಟ್ ಸಹಯೋಗದೊಂದಿಗೆ ‘ಶಿವಸಂಚಾರ-25 ನಾಟಕೋತ್ಸವ, ಶಿವಸಂಚಾರ ನಾಟಕಗಳ ಪ್ರದರ್ಶನವನ್ನು ದಾವಣಗೆರೆ ನಗರದ ತರಳಬಾಳು ಬಡಾವಣೆಯ ಶ್ರೀ ಶಿವಕುಮಾರ ಸ್ವಾಮಿ ಮಹಾಮಂಟಪದಲ್ಲಿ ಫೆ. 27 ಶುಕ್ರವಾರದಿಂದ ಮಾರ್ಚ್ 1ರವರೆಗೆ ಮೂರು ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ.

ತರಳಬಾಳು ಬಡಾವಣೆಯ ಶ್ರೀ ಶಿವಕುಮಾರ ಸ್ವಾಮಿ ಮಹಾಮಂಟಪದಲ್ಲಿ ಫೆ. 27ರ ಶುಕ್ರವಾರ ಸಂಜೆ 6 ಗಂಟೆಗೆ ಸಿರಿಗೆರೆ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ಹೆಚ್.ವಿ. ವಾಮದೇವಪ್ಪ ಶಿವಸಂಚಾರ ನಾಟಕೋತ್ಸವ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ದಾವಣಗೆರೆ ತರಳಬಾಳು ಸೇವಾ ಟ್ರಸ್ಟ್ ಅಧ್ಯಕ್ಷ ಎಂ.ಬಿ. ಸಂಗಮೇಶ್ವರ ಗೌಡ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ದಾವಣಗೆರೆ ರಂಗಾಯಣ ನಿರ್ದೇಶಕ ಮಲ್ಲಿಕಾರ್ಜುನ ಕಡಕೋಳ ಹಾಗೂ ತರಳಬಾಳು ಸೇವಾ ಟ್ರಸ್ಟ್ ನಿರ್ದೇಶಕ ಶಿವನಳ್ಳಿ ರಮೇಶ್ ಭಾಗವಹಿಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾರ್ಚ್ 1ರ ಭಾನುವಾರ ಸಂಜೆ 6 ಗಂಟೆಗೆ ಸಮಾರೋಪ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಡಾ. ಮಂಜುನಾಥ ಕುರ್ಕಿ ಅವರು ಸಮಾರೋಪ ಭಾಷಣ ಮಾಡಲಿದ್ದಾರೆ. ಅತಿಥಿಗಳಾಗಿ ಟ್ರಸ್ಟ್ ನಿರ್ದೇಶಕ ಗಡಿಗುಡಾಳ್ ಮಂಜುನಾಥ್ ಉಪಸ್ಥಿತರಿರಲಿದ್ದಾರೆ.

ಶಿವಸಂಚಾರದ ಕಲಾವಿದರಿಂದ 2026, ಶುಕ್ರವಾರ ಫೆ. 27 ಸಂಜೆ 6-30ಕ್ಕೆ ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ ರಚಸಿರುವ ಜಗದೀಶ್ ನಿರ್ದೇಶನದ “ಜಂಗಮದೆಡೆಗೆ” ಪ್ರದರ್ಶನಗೊಳ್ಳಲಿದೆ. ಫೆ. 28 ಸಂಜೆ 6-30ಕ್ಕೆ ಕೃಷ್ಣಮೂರ್ತಿ ಮೂಡಬಾಗಿಲು ರಚನೆ ನಿರ್ದೇಶನದ “ಕಳ್ಳರ ಸಂತೆ”, ಮಾರ್ಚ್ 1ರ ಸಂಜೆ 6-30ಕ್ಕೆ
ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ ವಿರಚಿತ ವೈಡಿ ಬದಾಮಿ ನಿರ್ದೇಶನದ “ಶಿವಯೋಗಿ ಶ್ರೀ ಸಿದ್ದರಾಮೇಶ್ವರ” ನಾಟಕ ಪ್ರದರ್ಶನಗೊಳ್ಳಲಿವೆ.

ಈ ಸುದ್ದಿ ಓದಿದ್ದೀರಾ? http://ದಾವಣಗೆರೆ | ಕೇಂದ್ರ ಸಚಿವ ವಿ. ಸೋಮಣ್ಣರಿಂದ ತುಮಕೂರು ಹೊಸ ರೈಲ್ವೆ ಮಾರ್ಗ ಪರಿಶೀಲನೆ

ಸಾಂಸ್ಕೃತಿಕ ಹಬ್ಬದಲ್ಲಿ ಬಸವಪರ ಭಕ್ತರು, ಅನುಯಾಯಿಗಳು ಭಾಗಿಯಾಗಿ ಯಶಸ್ವಿಗೊಳಿಸಬೇಕೆಂದು ಸಂಘಟಕರಾದ ಶಿರಗುಂಬಿ, ಅವರಗೆರೆ ರುದ್ರಮುನಿ, ಕೆ.ನಾಗಪ್ಪ ಮತ್ತು ಮಂಜುನಾಥ ಕುರ್ಕಿ ಕೋರಿದ್ದಾರೆ.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...