ಸಾಣೇಹಳ್ಳಿಯ ಶಿವಕುಮಾರ ಕಲಾ ಸಂಘ ಹಾಗೂ ತರಳಬಾಳು ಸೇವಾ ಟ್ರಸ್ಟ್ ಸಹಯೋಗದೊಂದಿಗೆ ‘ಶಿವಸಂಚಾರ-25 ನಾಟಕೋತ್ಸವ, ಶಿವಸಂಚಾರ ನಾಟಕಗಳ ಪ್ರದರ್ಶನವನ್ನು ದಾವಣಗೆರೆ ನಗರದ ತರಳಬಾಳು ಬಡಾವಣೆಯ ಶ್ರೀ ಶಿವಕುಮಾರ ಸ್ವಾಮಿ ಮಹಾಮಂಟಪದಲ್ಲಿ ಫೆ. 27 ಶುಕ್ರವಾರದಿಂದ ಮಾರ್ಚ್ 1ರವರೆಗೆ ಮೂರು ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ.
ತರಳಬಾಳು ಬಡಾವಣೆಯ ಶ್ರೀ ಶಿವಕುಮಾರ ಸ್ವಾಮಿ ಮಹಾಮಂಟಪದಲ್ಲಿ ಫೆ. 27ರ ಶುಕ್ರವಾರ ಸಂಜೆ 6 ಗಂಟೆಗೆ ಸಿರಿಗೆರೆ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ಹೆಚ್.ವಿ. ವಾಮದೇವಪ್ಪ ಶಿವಸಂಚಾರ ನಾಟಕೋತ್ಸವ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ದಾವಣಗೆರೆ ತರಳಬಾಳು ಸೇವಾ ಟ್ರಸ್ಟ್ ಅಧ್ಯಕ್ಷ ಎಂ.ಬಿ. ಸಂಗಮೇಶ್ವರ ಗೌಡ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ದಾವಣಗೆರೆ ರಂಗಾಯಣ ನಿರ್ದೇಶಕ ಮಲ್ಲಿಕಾರ್ಜುನ ಕಡಕೋಳ ಹಾಗೂ ತರಳಬಾಳು ಸೇವಾ ಟ್ರಸ್ಟ್ ನಿರ್ದೇಶಕ ಶಿವನಳ್ಳಿ ರಮೇಶ್ ಭಾಗವಹಿಸಲಿದ್ದಾರೆ.
ಮಾರ್ಚ್ 1ರ ಭಾನುವಾರ ಸಂಜೆ 6 ಗಂಟೆಗೆ ಸಮಾರೋಪ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಡಾ. ಮಂಜುನಾಥ ಕುರ್ಕಿ ಅವರು ಸಮಾರೋಪ ಭಾಷಣ ಮಾಡಲಿದ್ದಾರೆ. ಅತಿಥಿಗಳಾಗಿ ಟ್ರಸ್ಟ್ ನಿರ್ದೇಶಕ ಗಡಿಗುಡಾಳ್ ಮಂಜುನಾಥ್ ಉಪಸ್ಥಿತರಿರಲಿದ್ದಾರೆ.
ಶಿವಸಂಚಾರದ ಕಲಾವಿದರಿಂದ 2026, ಶುಕ್ರವಾರ ಫೆ. 27 ಸಂಜೆ 6-30ಕ್ಕೆ ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ ರಚಸಿರುವ ಜಗದೀಶ್ ನಿರ್ದೇಶನದ “ಜಂಗಮದೆಡೆಗೆ” ಪ್ರದರ್ಶನಗೊಳ್ಳಲಿದೆ. ಫೆ. 28 ಸಂಜೆ 6-30ಕ್ಕೆ ಕೃಷ್ಣಮೂರ್ತಿ ಮೂಡಬಾಗಿಲು ರಚನೆ ನಿರ್ದೇಶನದ “ಕಳ್ಳರ ಸಂತೆ”, ಮಾರ್ಚ್ 1ರ ಸಂಜೆ 6-30ಕ್ಕೆ
ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ ವಿರಚಿತ ವೈಡಿ ಬದಾಮಿ ನಿರ್ದೇಶನದ “ಶಿವಯೋಗಿ ಶ್ರೀ ಸಿದ್ದರಾಮೇಶ್ವರ” ನಾಟಕ ಪ್ರದರ್ಶನಗೊಳ್ಳಲಿವೆ.
ಈ ಸುದ್ದಿ ಓದಿದ್ದೀರಾ? http://ದಾವಣಗೆರೆ | ಕೇಂದ್ರ ಸಚಿವ ವಿ. ಸೋಮಣ್ಣರಿಂದ ತುಮಕೂರು ಹೊಸ ರೈಲ್ವೆ ಮಾರ್ಗ ಪರಿಶೀಲನೆ
ಸಾಂಸ್ಕೃತಿಕ ಹಬ್ಬದಲ್ಲಿ ಬಸವಪರ ಭಕ್ತರು, ಅನುಯಾಯಿಗಳು ಭಾಗಿಯಾಗಿ ಯಶಸ್ವಿಗೊಳಿಸಬೇಕೆಂದು ಸಂಘಟಕರಾದ ಶಿರಗುಂಬಿ, ಅವರಗೆರೆ ರುದ್ರಮುನಿ, ಕೆ.ನಾಗಪ್ಪ ಮತ್ತು ಮಂಜುನಾಥ ಕುರ್ಕಿ ಕೋರಿದ್ದಾರೆ.





