“ಶ್ರಮಿಕ ಶಕ್ತಿ ಸಂಯೋಜಿತ ‘ಕಾಯಕಜೀವಿ ಕಟ್ಟಡ ಕಾರ್ಮಿಕ ಸಂಘಟನೆ’ ಹೊನ್ನಾಳಿ ತಾಲ್ಲೂಕು ಘಟಕವನ್ನು ತಾಲೂಕಿನ ಕುಂದೂರು ಗ್ರಾಮದಲ್ಲಿ ಪ್ರಾರಂಭಿಸಲಾಯಿತು. ಕಾರ್ಯಕ್ರಮದಲ್ಲಿ ಘಟಕದ ಉದ್ಘಾಟನೆಯನ್ನು ದಾವಣಗೆರೆ ಜಿಲ್ಲೆಯ ಹೊನ್ನಾಳಿ ಮತ್ತು ಮಾಯಕೊಂಡ ಶಾಸಕರು ಜಂಟಿಯಾಗಿ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಕಾಯಕಜೀವಿ ಕಟ್ಟಡ ಕಾರ್ಮಿಕ ಸಂಘಟನೆ’ ಘಟಕ ಉದ್ಘಾಟಿಸಿ ಮಾತನಾಡಿದ ಹೊನ್ನಾಳಿ ಶಾಸಕ ಶಾಂತನಗೌಡ “ಕಾರ್ಮಿಕರಿಗೆ ಸರ್ಕಾರ ಹಲವು ಯೋಜನೆಗಳನ್ನು, ಸೌಲಭ್ಯಗಳನ್ನು ಒದಗಿಸಿದ್ದು, ಅವುಗಳನ್ನು ಬಳಸಿಕೊಳ್ಳುವ ಮೂಲಕ ಪ್ರಗತಿ ಕಾಣಬೇಕು” ಎಂದು ಹಾರೈಸಿದರು. ಮಾಯಕೊಂಡ ಶಾಸಕ ಕೆ ಎಸ್ ಬಸವಂತಪ್ಪ ಮಾತನಾಡಿ, “ಅಸಂಘಟಿತ ಕಾರ್ಮಿಕ ವಲಯದ ಕಾರ್ಮಿಕರು, ಇತರೆ ಕಾರ್ಮಿಕರು ಸಂಘಟಿತರಾಗುವ ಮೂಲಕ ಯೋಜನೆಗಳು ಸದುಪಯೋಗ ಪಡೆದುಕೊಳ್ಳಬೇಕು” ಎಂದು ತಿಳಿಸಿದರು.
ಈ ಸುದ್ದಿ ಓದಿದ್ದೀರಾ ? ಚಿತ್ರದುರ್ಗ | ವೇತನ ಹೆಚ್ಚಳ ಹಾಗೂ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ
ಕಟ್ಟಡ ಕಾರ್ಮಿಕರ ಸಮಸ್ಯೆಗಳ ಕುರಿತು, ಒಟ್ಟಾಗಿ ಸಂಘಟನೆ ಕಟ್ಟುವ ಕುರಿತು ಕಾರ್ಮಿಕ ಮುಖಂಡರು
ಚರ್ಚೆ ನಡೆಸಿದರು. ಕಾರ್ಯಕ್ರಮದಲ್ಲಿ ಕಾಯಕಜೀವಿ ಕಟ್ಟಡ ಕಾರ್ಮಿಕರ ಸಂಘ (ರಿ), ಕರ್ನಾಟಕ ಶ್ರಮಿಕ ಶಕ್ತಿಯ ಮುಖಂಡರಾದ ಸತೀಶ್ ಅರವಿಂದ್, ಆದಿಲ್ ಖಾನ್, ಸೈಯದ್ ಅಶ್ಫಾಕ್, ರವೀಂದ್ರ, ಷಣ್ಮುಖ, ಪ್ರಿಯಾ, ಆಂಜನೇಯ, ಇಸ್ಮಾಯಿಲ್ ಜಬೀವುಲ್ಲಾ ಸೇರಿದಂತೆ ಇತರ ಸದಸ್ಯರು ಭಾಗವಹಿಸಿದ್ದರು.





