ದಾವಣಗೆರೆ | ವಿರಕ್ತಮಠ, ಬಸವಕೇಂದ್ರದಿಂದ ಶ್ರಾವಣ ಮಾಸದ ವಚನಾನುಷ್ಠಾನ ಪ್ರವಚನ

Date:

ವಿಶ್ವದಲ್ಲೇ ಮೊಟ್ಟ ಮೊದಲ ಬಾರಿಗೆ 1913 ರಲ್ಲಿ ವಿಶ್ವಗುರು ಬಸವಣ್ಣನವರ ಜಯಂತಿಯನ್ನು ಆಚರಿಸಿದ ದಾವಣಗೆರೆಯ ಬಸವಕೇಂದ್ರ, ಶ್ರೀ ಮುರುಘರಾಜೇಂದ್ರ ವಿರಕಮಠ, ಶ್ರೀ ಜಗದ್ಗುರು ಮುರುಘರಾಜೇಂದ್ರ ಶಿವಯೋಗಾಶ್ರಮ ಟ್ರಸ್ಟ್ ವತಿಯಿಂದ ಶ್ರಾವಣ ಮಾಸದ ವಚನಾನುಷ್ಠಾನ ಪ್ರವಚನ ಉದ್ಘಾಟನಾ ಕಾರ್ಯಕ್ರಮ ಜುಲೈ 24ರಂದು ಗುರುವಾರ ಸಂಜೆ 6ಕ್ಕೆ ನಗರದ ದೊಡ್ಡಪೇಟೆಯ ಶ್ರೀ ವಿರಕಮಠದ ಬಸವಕೇಂದ್ರದಲ್ಲಿ ಆಯೋಜಿಸಲಾಗಿದೆ.

ದಾವಣಗೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುರುಘರಾಜೇಂದ್ರ ಶಿವಯೋಗಾಶ್ರಮ ಟ್ರಸ್ಟ್ ಅಧ್ಯಕ್ಷ ಹಾಸಬಾವಿ ಕರಿಬಸಪ್ಪ “ಚಿತ್ರದುರ್ಗದ ಮುರುಘಾಮಠದ ಶೂನ್ಯ ಪೀಠಾಧ್ಯಕ್ಷ ಡಾ. ಶಿವಮೂರ್ತಿ ಮುರುಘಾ ಶರಣರ ಕೃಪಾರ್ಶೀವಾದದಿಂದ ಕಾರ್ಯಕ್ರಮ ನಡೆಸಲಾಗುತ್ತಿದ್ದು. ದಾವಣಗೆರೆಯ ವಿರಕ್ತ ಮಠದ ಚರಮೂರ್ತಿ ಡಾ.ಬಸವಪ್ರಭು ಸ್ವಾಮಿಗಳು ಅಧ್ಯಕ್ಷತೆ ವಹಿಸಲಿದ್ದಾರೆ. ಗದಗಿನ ಪಂಡಿತ್ ಪುಟ್ಟರಾಜಕವಿ ಗವಾಯಿಗಳವರ ಶಿಷ್ಯರಾದ ಬಿ.ಎಂ. ಪಂಚಾಕ್ಷರಿ ಶಾಸ್ತ್ರಿಗಳು ಪ್ರವಚನ ನೀಡಲಿದ್ದಾರೆ” ಎಂದು ತಿಳಿಸಿದರು.

1002371243
ಈದಿನ ಡಾಟ್ ಕಾಮ್ ಯೂಟ್ಯೂಬ್ ಚಾನೆಲ್ ಮತ್ತೆ ಪುನರಾರಂಭಗೊಳ್ಳಲಿದ್ದು ಚಾನೆಲ್ ಗೆ ಭೇಟಿ ನೀಡಿ,

“ವಚನಾನುಷ್ಠಾನ ಉದ್ಘಾಟನೆಯನ್ನು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, ಮುಖ್ಯ ಅತಿಥಿಗಳಾಗಿ ದೂಡಾ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ, ಎಂ.ಜಯಕುಮಾರ್, ಶ್ರೀಶಿವಯೋಗಾಶ್ರಮ ಕಾರ್ಯದರ್ಶಿ ಅಂದನೂರು ಮುಪ್ಪಣ್ಣ, ವಿರಕ್ತಮಠ ಧರ್ಮದರ್ಶಿ ಸಮಿತಿಯ ಕಾರ್ಯದರ್ಶಿ ಕಣಕುಪ್ಪಿ ಮುರುಗೇಶಪ್ಪ, 1153 ಶ್ರಾವಣ ಪ್ರವಚನ ಸಮಿತಿಯ ಅಧ್ಯಕ್ಷ ಹಾಸಭಾವಿ ಕರಿಬಸಪ್ಪ, ಚಿಗಟೇರಿ ಜಯದೇವ, ವೀರಯ್ಯ ಎಂ. ಕಾಡದೇವರಮಠ ಆಗಮಿಸಲಿದ್ದಾರೆ. ಕಾರ್ಯಕ್ರಮದಲ್ಲಿ ವಿರಕ್ತ ಮಠದ ಬಸವ ಕಲಾಲೋಕದಿಂದ ವಚನಗಾಯನ ನಡೆಯಲಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯದರ್ಶಿ ಬಾಳೆಕಾಯಿ ಮುರುಗೇಶ್ ಮಾತನಾಡಿ, “ಡಾ.ಬಸವ ಪ್ರಭು ಶ್ರೀಗಳ ನೇತೃತ್ವದಲ್ಲಿ ಜುಲೈ 28ರ ಸೋಮವಾರ ಬೆಳಿಗ್ಗೆ 10ಕ್ಕೆ ವಿರಕ್ತ ಮಠದಲ್ಲಿ ಮಹಿಳಾ ಬಸವ ಕೇಂದ್ರದಲ್ಲಿ ಬಸವ ಪಂಚಮಿ ಪ್ರಯುಕ್ತ ಹಾಲು ಕುಡಿಸುವ ಹಬ್ಬ, “ಕಲ್ಲು ನಾಗರಕ್ಕೆ ಹಾಕುವ ಹಾಲು ಮಕ್ಕಳ ಪಾಲಾಗಲಿ” ಸಮಾರಂಭ ನಡೆಯಲಿದೆ” ಎಂದು ಮಾಹಿತಿ ನೀಡಿದರು.

ಈ ಸುದ್ದಿ ಓದಿದ್ದೀರಾ ?ದಾವಣಗೆರೆ | ಯೂರಿಯಾ ರಸಗೊಬ್ಬರ ಅಭಾವ; ರೈತರ ಬೆಳೆಗಳಿಗೆ ಅಗತ್ಯ ಗೊಬ್ಬರ ಒದಗಿಸಲು ರೈತ ಸಂಘ ಆಗ್ರಹ

ಸುದ್ದಿಗೋಷ್ಠಿಯಲ್ಲಿ ಕಣಕುಪ್ಪಿ ಮುರುಗೇಶ್, ಕುಂಟೋಜಿ ಚನ್ನಪ್ಪ, ಕುಮಾರ ಶಾಸ್ತಿ, ದಾನಯ್ಯ ಶಾಸ್ತ್ರೀ ಹಿರೇಮಠ ಸೇರಿದಂತೆ ಇತರರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...