ದಾವಣಗೆರೆ | ಭೂಸ್ವಾಧೀನ ರದ್ದು, ದೇವನಹಳ್ಳಿ ರೈತರು, ಸರ್ಕಾರಕ್ಕೆ ಎಸ್ ಕೆ ಎಂ ಮತ್ತು ಜೆಸಿಟಿಯು ಅಭಿನಂದನೆ

Date:

ನರಗುಂದ, ನವಲಗುಂದ ಹೋರಾಟದ ರೈತ ಹುತಾತ್ಮರ ಸ್ಮರಣೆ ಮತ್ತು ದೇವನಹಳ್ಳಿ ರೈತರ ಭೂಸ್ವಾಧೀನ ಕೈ ಬಿಟ್ಟದ್ದಕ್ಕೆ ರಾಜ್ಯ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುವ ವಿಜಯೋತ್ಸವವನ್ನು ದಾವಣಗೆರೆ ನಗರದ ಜಯದೇವ ವೃತ್ತದಲ್ಲಿ ರೈತ ಸಂಘಟನೆಗಳ ಸಂಯುಕ್ತ ಹೋರಾಟ ಸಮಿತಿ (ಎಸ್ ಕೆ ಎಂ) ಮತ್ತು ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು) ವತಿಯಿಂದ ಆಚರಣೆ ಮಾಡಲಾಯಿತು.

1002358705

ನರಗುಂದ, ನವಲಗುಂದ ರೈತ ಹೋರಾಟದಲ್ಲಿ ಹುತಾತ್ಮರಾದ ರೈತರ ಸ್ಮರಣೆ ಮಾಡಿ, ಕಳೆದ ಮೂರು ವರ್ಷಗಳಿಂದ ರೈತರು ತಮ್ಮ ಜಮೀನುಗಳನ್ನು ಕೊಡುವುದಿಲ್ಲ ಎಂದು ಹೋರಾಟ ಮಾಡಿದ ಬೆಂಗಳೂರು ಜಿಲ್ಲೆಯ ದೇವನಹಳ್ಳಿ ರೈತರ ಜಮೀನುಗಳನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಸ್ಪಂದಿಸಿ ವಶಪಡಿಸಿಕೊಳ್ಳುವುದನ್ನು ಕೈಬಿಟ್ಟದ್ದಕ್ಕೆ ರಾಜ್ಯ ಸರ್ಕಾರಕ್ಕೆ ಅಭಿನಂದನೆಗಳನ್ನು ಸಲ್ಲಿಸಿ ಬಹಿರಂಗ ಸಭೆಯಲ್ಲಿ ಮುಖಂಡರು ಅಭಿನಂದನೆ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಮುಖಂಡರು, “ಸುಮಾರು ಮೂರುವರೆ ವರ್ಷಗಳ ನಿರಂತರ ಹೋರಾಟದಿಂದ ದೇವನಹಳ್ಳಿ ರೈತರು ತಮ್ಮ ಭೂಮಿ ಜಮೀನುಗಳನ್ನು ಉಳಿಸಿಕೊಂಡಿದ್ದಾರೆ. ನಿರಂತರ ಹೋರಾಟ ನೆಡೆಸುವುದು ಸಾಮಾನ್ಯವಲ್ಲ. ಮಳೆ, ಬಿಸಿಲು ಗಾಳಿಗೆ ಹೆದರದೆ ನಿರಂತರ ಹೋರಾಟಕ್ಕೆ 1777 ಎಕರೆ ಭೂಸ್ವಾಧೀನ ಕೈಬಿಟ್ಟು ಅಭಿನಂದನೆಗೆ ಅರ್ಹವಾಗಿದೆ. ಈ ಕಾರಣದಿಂದ ದೇವನಹಳ್ಳಿ ರೈತರು ಮತ್ತು ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇವೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1002358703

ಎಸ್ ಕೆ ಎಂ ಸಂಚಾಲಕ ಹೆಚ್ ಜಿ ಉಮೇಶ್, ಆನಂದ ರಾಜ್, ಬುಳ್ಳಾಪುರದ ಹನುಮಂತಪ್ಪ, ಆವರೆಗೆರೆ ಚಂದ್ರು, ಈ ಶ್ರೀನಿವಾಸ್, ಸತೀಶ್ ಅರವಿಂದ್, ಜಬೀನ ಖಾನಂ ರವರು ಅಭಿನಂದನೆ ಸಲ್ಲಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಪ್ರತ್ಯೇಕ ಲಿಂಗಾಯತ ಧರ್ಮ ಬೆಂಬಲಿಸಿ, ಅವರ ಮೇಲೆಯೇ ಈ ಸರ್ಕಾರ ಲಾಠಿ ಪ್ರಹಾರ ನೆಡೆಸಿದೆ;ರಂಭಾಪುರಿ ಶ್ರೀ

ವಿಜಯೋತ್ಸವ ಮತ್ತು ಅಭಿನಂದನಾ ಕಾರ್ಯಕ್ರಮದಲ್ಲಿ ಸಂಘಟನೆಗಳ ಮುಖಂಡರುಗಳಾದ ಜಿ ಯಲ್ಲಪ್ಪ, ಭರಮಪ್ಪ, ಶ್ರೀನಿವಾಸಮೂರ್ತಿ, ಸರೋಜ, ನರೇಗಾ ರಂಗನಾಥ್, ಸಿ ರಮೇಶ್ ದಾಸರ, ಶಿರಿನ್, ಕೆರನಹಳ್ಳಿ ರಾಜು, ಮೊದಲ ಹದಡಿ ಸುರೇಶ್, ನಾಗಮ್ಮ, ಮಲ್ಲಶೆಟ್ಟಿಹಳ್ಳಿ ಹನುಮೇಶ್, ಪವಿತ್ರ, ಚಿಕ್ಕನಹಳ್ಳಿ ಸದಾನಂದ ಸೇರಿದಂತೆ ರೈತ ಮುಖಂಡರುಗಳು ಮತ್ತು ಕಾರ್ಮಿಕ ಸಂಘಟನೆಗಳ ಮುಖಂಡರು ಕಾರ್ಯಕರ್ತರು ಭಾಗವಹಿಸಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...