ದಾವಣಗೆರೆ | ಸ್ಮಶಾನ, ಕೆರೆ, ಗೋಮಾಳದಲ್ಲಿ ಅಕ್ರಮ ಮಣ್ಣು ಸಾಗಾಟ; ಕ್ರಮಕ್ಕೆ ದಸಂಸ ಆಗ್ರಹ.‌

Date:

ಕಬ್ಬೂರು ಗ್ರಾಮದ ಸ್ಮಶಾನದ ವಿರೂಪ, ಅಕ್ರಮವಾಗಿ ಮಣ್ಣು ಸಾಗಾಟ ಮತ್ತು ಪೂರ್ವಜರ ಸಮಾಧಿಗಳನ್ನು, ಅಸ್ಥಿಪಂಜರ ನಾಶ ಮಾಡಿರುವವರ ಹಾಗೂ ಕೆರೆ ಮತ್ತು ಗೋಮಾಳವನ್ನು ಒತ್ತುವರಿ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪ್ರೊ.ಕೃಷ್ಣಪ್ಪ ಸ್ಥಾಪಿತ ದಲಿತ ಸಂಘರ್ಷ ಸಮಿತಿಯ ನೇತೃತ್ವದಲ್ಲಿ ದಾವಣಗೆರೆ ತಾಲೂಕಿನ ಕಬ್ಬೂರಿನ ಗ್ರಾಮಸ್ಥರು ದಾವಣಗೆರೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

1001631670

ಕಬ್ಬೂರು ಗ್ರಾಮದಲ್ಲಿ ಸರ್ವೆ ನಂ.31-32ರಲ್ಲಿ ಸರ್ಕಾರಿ ಗೋಮಾಳದಲ್ಲಿ ಸರಿ ಸುಮಾರು 25-30 ವರ್ಷಗಳಿಂದ ಆದಿಕರ್ನಾಟಕ (ಎಸ್.ಸಿ), ನಾಯಕ ಜನಾಂಗ, ಮಡಿವಾಳ, ಗೊಲ್ಲ, ಭೋವಿ ಇತರೆ ಜನಾಂಗದ ನಮ್ಮ ಪೂರ್ವಜರ ಅಂತ್ಯ ಸಂಸ್ಕಾರ ಮಾಡಿಕೊಂಡು ಬಂದಿದ್ದೇವೆ. ನಮ್ಮ ಗ್ರಾಮಕ್ಕೆ ಸೇರಿದ ಕೆರೆಯ ಜಾಗವನ್ನು ಒತ್ತುವರಿ ಮಾಡಿ ಒತ್ತುವರಿದಾರರು ಆ ಜಾಗದಲ್ಲಿ ಅಡಿಕೆ, ತೆಂಗು ಹಾಗೂ ಇತರೆ ಬೆಳೆಗಳ ತೋಟಗಳನ್ನಾಗಿ ಪರಿವರ್ತಿಸಿಕೊಂಡು ಒತ್ತುವರಿ ಮಾಡಿದ್ದು ಮತ್ತು ನಮ್ಮ ಗ್ರಾಮಕ್ಕೆ ಸೇರಿದ ಸರ್ಕಾರಿ ಗೋಮಾಳದಲ್ಲಿ ಕೆಲ ಮಣ್ಣು ಮಾಫಿಯ ದಂಧೆಕೋರರು ಕೆಲವಾರು ವರ್ಷಗಳಿಂದ ಜಾನುವಾರುಗಳಿಗೆ ಪಶು ಪಕ್ಷಿಗಳಿಗೆ, ಕುರಿ-ಮೇಕೆಗಳ ಮೇವಿಗೆ ಆಶ್ರಯವಾದ ಗೋಮಾಳದಲ್ಲಿ 8-10 ಅಡಿ ಆಳದವರೆಗೆ ಜೆ.ಸಿ.ಬಿ ಮತ್ತು ಟ್ರಾಕ್ಟರ್‌ನಿಂದ ಮಣ್ಣನ್ನು ಅಗೆದು ಸಾಗಾಟ ಮಾಡಿ ಮಾರಾಟ ಮಾಡಿದ್ದಾರೆ.

ಜನವರಿ 10ರ ತಡರಾತ್ರಿಯಲ್ಲಿ ನಮ್ಮ ಪೂರ್ವಜರ ಸಮಾಧಿಗಳನ್ನು ಸಹ ನಾಶ ಮಾಡಿ ಅಲ್ಲಿನ ಅಸ್ಥಿಪಂಜರಗಳನ್ನು ಯಾವುದೇ ಕುರುಹುಗಳು ಸಿಗದಂತೆ ಮಾಡಿ ಅಲ್ಲಿನ ಮಣ್ಣನ್ನು ಸಾಗಾಟ ಮಾಡಿದ್ದಾರೆ. ಮರುದಿನ ಜನವರಿ 11ರ ಶನಿವಾರ ಬೆಳಿಗ್ಗೆ 9.00ಗಂಟೆಗೆ ಜೆ.ಸಿ.ಬಿ. ಮತ್ತು ಟ್ರಾಕ್ಟರ್‌ಗಳ ಮಾಲೀಕರನ್ನು ಕೇಳಿದಾಗ ನಮಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಅಂದೇ ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಕ್ರಮ ಕೈಗೊಂಡಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದ್ದರಿಂದ ಈ ಕೂಡಲೇ ಸ್ಮಶಾನದಲ್ಲಿ, ಗೋಮಾಳ, ಕೆರೆಗಳಲ್ಲಿ ಅಕ್ರಮ ಮಣ್ಣು ಗಣಿಗಾರಿಕೆ ಮಾಡಿರುವವರ ವಿರುದ್ಧ, ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕಛೇರಿ ಎದುರು ಧರಣಿ ನಡೆಸಿ ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಮದುವೆ ಸಂಭ್ರಮ; ಹತ್ತಕ್ಕೂ ಹೆಚ್ಚು ಮನೆಗಳ ಸರಣಿ ಕಳ್ಳತನ

ಪ್ರತಿಭಟನೆಯಲ್ಲಿ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಮಂಜುನಾಥ ಕುಂದುವಾಡ, ಮಂಜು ಕಬ್ಬೂರು, ಗ್ರಾಮಸ್ಥರಾದ ಕುಮಾರಪ್ಪ, ಮಲ್ಲಿಕಾರ್ಜುನ, ಶೇಖರಪ್ಪ, ಎಂ ರಾಮಚಂದ್ರಪ್ಪ, ಸಂದೀಪ್, ವಿಜಯಲಕ್ಷ್ಮಿ,‌ ಎನ್ಎಂ ಕೋಟಿ, ಅಂಜನಪ್ಪ, ಗೋವಿಂದಪ್ಪ, ಬಸವರಾಜಪ್ಪ, ಮಂಜಪ್ಪ, ಮಹೇಶ್, ಯಲ್ಲೇಶ, ಮಂಜುನಾಥ‌ ಸೇರಿದಂತೆ ಕಬ್ಬೂರಿನ ಗ್ರಾಮಸ್ಥರು ಪಾಲ್ಗೊಂಡಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪಿಬಿ ರಸ್ತೆಯಲ್ಲಿ ಮುಸ್ಲಿಂ ಬಾಂಧವರ ರಂಜಾನ್ ಆಚರಣೆ

ಪವಿತ್ರ ರಂಜಾನ್ (ಈದ್ ಉಲ್ ಫಿತುರ್) ಆಚರಣೆ ಹಿನ್ನೆಲೆಯಲ್ಲಿ ದಾವಣಗೆರೆ ನಗರದ...

ದಾವಣಗೆರೆ | ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಮರ್ಥ್ ಶಾಮನೂರು: ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್...

ದಾವಣಗೆರೆ | ದಕ್ಷಿಣ ಕ್ಷೇತ್ರ ಉಪಚುನಾವಣೆ; ಎಸ್ ಟಿ ಮೋರ್ಚಾದ ಶ್ರೀನಿವಾಸ್ ಗೆ ಒಲಿದ ಬಿಜೆಪಿ ಟಿಕೆಟ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮ...

ದಾವಣಗೆರೆ | ಒಳಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯಕ್ಕೆ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ಹೋರಾಟ

ಸರ್ವೋಚ್ಛ ನ್ಯಾಯಾಲಯದ ಸಂವಿಧಾನಿಕ ಪೀಠವು ಒಳ ಮೀಸಲಾತಿ ವರ್ಗೀಕರಣ ಹಾಗೂ ಜಾರಿಯ...