ದಾವಣಗೆರೆ | ರಂಗಾಯಣದಿಂದ ವಿದ್ವಾನ್ ಪುಟ್ಟಣ್ಣಯ್ಯನವರ ರಂಗಸಂಗೀತ ಕಾರ್ಯಕ್ರಮ.

Date:

“ದಾವಣಗೆರೆ ರಂಗಾಯಣದ ವತಿಯಿಂದ ಮಾರ್ಚ್ 27 ರಂದು ಸಂಜೆ ದಾವಣಗೆರೆ ನಗರದ ಶಿವಯೋಗಿ ಮಂದಿರದ ಆವರಣದಲ್ಲಿ ವಿಶ್ವರಂಗಭೂಮಿ ದಿನಾಚರಣೆ ಆಯೋಜಿಸಲಾಗಿದ್ದು, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿ, ಪುರಸ್ಕಾರಗಳಿಗೆ ಭಾಜನರಾಗಿರುವ ಎಂಬತ್ತರ ಅಂಚಿನ ಏರುಪ್ರಾಯದ ವಿದ್ವಾನ್ ಪುಟ್ಟಣ್ಣಯ್ಯನವರ ಕನ್ನಡ ರಂಗಸಂಗೀತದ ಸವ್ಯಸಾಚಿ ಸ್ವರ ಸಾರಥ್ಯದ ‘ರಂಗ ಗೀತಾಂಜಲಿ’ ತಂಡದಿಂದ ದಾವಣಗೆರೆ ಸಹೃದಯರಿಗೆ ರಂಗಸಂಗೀತದ ರಸದೌತಣ ಏರ್ಪಡಿಸಲಾಗಿದೆ” ಎಂದು ರಂಗಾಯಣದ ನಿರ್ದೇಶಕ ಮಲ್ಲಿಕಾರ್ಜುನ ಕಡಕೋಳ ತಿಳಿಸಿದ್ದಾರೆ.

1001737063
ದಾವಣಗೆರೆ ರಂಗಾಯಣದಿಂದ ಕಾರ್ಯಕ್ರಮ

ಮೈಸೂರು ನಿವಾಸಿ ವಿದ್ವಾನ್ ವೈ.ಎಂ. ಪುಟ್ಟಣ್ಣಯ್ಯನವರ (ವಿದ್ವಾನ್ ಪುಟ್ಟಣ್ಣಯ್ಯ ) ಹುಟ್ಟೂರು ಹಾಸನ ಜಿಲ್ಲೆ ಅರಸೀಕೆರೆ ಬಳಿಯ ಯರಿಗೇನಹಳ್ಳಿ. ತಂದೆ ಮುದ್ದಪ್ಪ ಮತ್ತು ತಾಯಿ ಲಕ್ಷ್ಮಮ್ಮ. ಇವರ ತಾತ ಸಿದ್ದಪ್ಪ, ಮೂಡಲಪಾಯ ಯಕ್ಷಗಾನದ ಭಾಗವತರು. ಬಾಲ್ಯದಿಂದಲ್ಲೇ ರಂಗಸಂಸ್ಕೃತಿಯ ಒಡನಾಟದಲ್ಲಿ ಬೆಳೆದವರು.

ಪುಟ್ಟಣ್ಣಯ್ಯ ದಕ್ಷಿಣಾದಿ ಸಂಗೀತದ ಪ್ರೌಢಿಮೆ. ಲೀಲಾಜಾಲ ಮಾತ್ರವಲ್ಲ , ಲಾಲಿತ್ಯಮಯವಾಗಿ ಹಾರ್ಮೋನಿಯಂ ನುಡಿಸುವ ನೈಪುಣ್ಯ ಗಳಿಸಿದವರು. ಗುಬ್ಬಿ ವೀರಣ್ಣ ನಾಟಕ ಕಂಪನಿಯಂತೂ ಪುಟ್ಟಣ್ಣಯ್ಯ ಅವರ ಮಧುರ ಕಂಠ ಮತ್ತು ಹಾರ್ಮೋನಿಯಂ ನುಡಿಸುವ ಸಲೀಲತೆಗೆ ಉತ್ಕೃಷ್ಟತೆಯ ‌ಮೆರುಗು ನೀಡಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೈಸೂರು ರಂಗಾಯಣಕ್ಕೆ ಸದಾರಮೆ, ಮಂಡ್ಯ ರಮೇಶ ‘ನಟನ’ ತಂಡಕ್ಕೆ ಸುಭದ್ರಾ ಕಲ್ಯಾಣ ಸೇರಿದಂತೆ ಸುರುಚಿ ರಂಗಮನೆ, ಕದಂಬ ರಂಗವೇದಿಕೆಗಳಿಗೆ ಮನ್ಮಥ ವಿಜಯ, ಕುರುಕ್ಷೇತ್ರ ಮುಂತಾದ ನಾಟಕಗಳ ರಂಗಸಂಗೀತ, ವಿನ್ಯಾಸ, ನಿರ್ದೇಶನದ ಮಹಾಮಣಿಹ ಪ್ರಾಪ್ತಿ. ವಾಲ್ಮೀಕಿ ವಿರಚಿತ “ಶ್ರೀಮದ್ ರಾಮಾಯಣ” ಎಂಬ ಸಂಗೀತ ಸಾದೃಶ್ಯ ಮಹಾಕಾವ್ಯವನ್ನು ಇತ್ತೀಚೆಗೆ ರಂಗಪ್ರಯೋಗಕ್ಕಿಳಿಸಿ ಯಶಸ್ಸು ಗಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಖಾಸಗಿ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಆಗ್ರಹ.

ಪುಟ್ಟಣ್ಣಯ್ಯನವರ ಸಿರಿಕಂಠದ ಸುಮಧುರ ಸರೋವರದಲ್ಲಿ 2783 ರಂಗಗೀತೆಗಳು ಮಾಧುರ್ಯಗೊಂಡಿವೆ. ಹೀಗೆ ಚೈತನ್ಯಶೀಲ ವೃತ್ತಿ ರಂಗಭೂಮಿಯ ಹಲವು ಅನನ್ಯತೆಗಳನ್ನು ಬದುಕಿದವರು. ಇಷ್ಟೆಲ್ಲಾ ಪಾಂಡಿತ್ಯದ ಹಿರಿಮೆಯಾದ ಪುಟ್ಟಣ್ಣಯ್ಯ ಅವರು ವಿಧೇಯಭಾವದ ಸಜ್ಜನಿಕೆಯ ವ್ಯಕ್ತಿತ್ವವುಳ್ಳಂತಹ ಪುಟ್ಟಣ್ಣಯ್ಯ ದಾವಣಗೆರೆಯ ಜನತೆಗೆ ರಂಗಸಂಗೀತದ ರಸದೌತಣ ನೀಡಲಿದ್ದಾರೆ ಎಂದು ದಾವಣಗೆರೆ ರಂಗಾಯಣದ ನಿರ್ದೇಶಕ ಮಲ್ಲಿಕಾರ್ಜುನ ಕಡಕೋಳ ತಿಳಿಸಿದ್ದಾರೆ.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪಿಬಿ ರಸ್ತೆಯಲ್ಲಿ ಮುಸ್ಲಿಂ ಬಾಂಧವರ ರಂಜಾನ್ ಆಚರಣೆ

ಪವಿತ್ರ ರಂಜಾನ್ (ಈದ್ ಉಲ್ ಫಿತುರ್) ಆಚರಣೆ ಹಿನ್ನೆಲೆಯಲ್ಲಿ ದಾವಣಗೆರೆ ನಗರದ...

ದಾವಣಗೆರೆ | ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಮರ್ಥ್ ಶಾಮನೂರು: ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್...

ದಾವಣಗೆರೆ | ದಕ್ಷಿಣ ಕ್ಷೇತ್ರ ಉಪಚುನಾವಣೆ; ಎಸ್ ಟಿ ಮೋರ್ಚಾದ ಶ್ರೀನಿವಾಸ್ ಗೆ ಒಲಿದ ಬಿಜೆಪಿ ಟಿಕೆಟ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮ...

ದಾವಣಗೆರೆ | ಒಳಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯಕ್ಕೆ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ಹೋರಾಟ

ಸರ್ವೋಚ್ಛ ನ್ಯಾಯಾಲಯದ ಸಂವಿಧಾನಿಕ ಪೀಠವು ಒಳ ಮೀಸಲಾತಿ ವರ್ಗೀಕರಣ ಹಾಗೂ ಜಾರಿಯ...