ದಾವಣಗೆರೆ | ಪತ್ರಾಂಕಿತ ಅಧಿಕಾರಿ ಸೀಲು, ಸಹಿ ನಕಲು; ಆರೋಪಿ ಬಂಧನ

Date:

ಆಧಾರ್ ತಿದ್ದುಪಡಿ, ನವೀಕರಣ ಅರ್ಜಿ ನಮೂನೆಯ ಪತ್ರಾಂಕಿತ ಅಧಿಕಾರಿಯಂತೆ ಸೀಲು ಮತ್ತು ಸಹಿ ನಕಲು ಮಾಡಿಕೊಡುತ್ತಿದ್ದ ಆರೋಪಿಯನ್ನು, ದಾವಣಗೆಯ ಬಸವನಗರ ಪೊಲೀಸರು ಬಂಧಿಸಿದ್ದಾರೆ.

ನ.7ರಂದು ದಾವಣಗೆರೆ ಪ್ರಧಾನ ಅಂಚೆ ಕಚೇರಿಯ ಮುಖ್ಯ ಅಂಚೆ ಪಾಲಕ ಸದ್ಯೋಜಾತಪ್ಪ ಅವರು ಕರ್ತವ್ಯದಲ್ಲಿದ್ದಾಗ ಮಧ್ಯಾಹ್ನ 12ಕ್ಕೆ ಅಂಚೆ ಕಚೇರಿ ಆಧಾರ್ ಸೇವಾ ಕೇಂದ್ರದಲ್ಲಿ ಆಧಾರ್ ವಿಳಾಸ ಮತ್ತು ವಯಸ್ಸು ತಿದ್ದುಪಡಿ ಮಾಡಿಕೊಡಲು ಗ್ರಾಹಕರು ಸಲ್ಲಿಸಿದ ನಿಗದಿತ ಅರ್ಜಿ ನಮೂನೆಯಲ್ಲಿ ಪತ್ರಾಂಕಿತ ಅಧಿಕಾರಿಯು ದೃಢೀಕರಣ ಸಹಿ ಮಾಡಬೇಕಾಗಿತ್ತು.

ಪತ್ರಾಂಕಿತ ಅಧಿಕಾರಿಯ ಸಹಿ ಮತ್ತು ಸೀಲು ಹಾಕುವ ಸ್ಥಳದಲ್ಲಿ ಪತ್ರಾಂಕಿತ ಅಧಿಕಾರಿಯು, ʼಹಿರಿಯ ತಜ್ಞರು ಸಿ.ಜಿ. ಎಚ್. ದಾವಣಗೆರೆʼ ಎಂದು ನಕಲು ಸೀಲನ್ನು ಸೃಷ್ಟಿ ಮಾಡಿಕೊಂಡು ಪತ್ರಾಂಕಿತ ಅಧಿಕಾರಿ ಎಂದು ಹಸಿರು ಶಾಯಿಯಿಂದ ನಕಲು ಸಹಿ ಮಾಡಿರುವುದು ಕಂಡು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಕಲು ಸಹಿ ಮಾಡಿದ ವ್ಯಕ್ತಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಿ ಎಂದು ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಪ್ರಕರಣದಲ್ಲಿ ಭಾಗಿಯಾದ್ದ ಆರೋಪಿ ಬಸವರಾಜಪ್ಪ ಅಲಿಯಾಸ್ ಬಸವಂತಪ್ಪರನ್ನು ವಶಕ್ಕೆ ಪಡೆದು, ನಕಲಿ ಪರಿಕರಗಳನ್ನು ವಶಕ್ಕೆ ಪಡೆದಿದ್ದಾರೆ.

ಆರೋಪಿಯನ್ನು ವಿಚಾರಣೆ ಮಾಡಿದಾಗ, ಆರೋಪಿ ದಾವಣಗೆರೆ ಪ್ರಧಾನ ಅಂಚೆ ಕಚೇರಿಯ ಮುಂಭಾಗದಲ್ಲಿ ಆಧಾರ್ ತಿದ್ದುಪಡಿ ಅರ್ಜಿ ನಮೂನೆಯಲ್ಲಿನ ಪತ್ರಾಂಕಿತ ಅಧಿಕಾರಿಯ ದೃಢೀಕರಣ ಮಾಡುವ ಪತ್ರಾಂಕಿತ ಅಧಿಕಾರಿಯ ಸಹಿ ಮತ್ತು ಸೀಲು ಹಾಕುವ ಸ್ಥಳದಲ್ಲಿ ತಾನು ಸೃಷ್ಟಿಸಿಕೊಂಡ ʼಹಿರಿಯ ತಜ್ಞರು. ಸಿ.ಜಿ.ಎಚ್, ದಾವಣಗೆರೆ,ʼ ಅಂತಾ ನಕಲು ಸೀಲನ್ನು ಹಾಕಿ ನಾನೇ ಪತ್ರಾಂಕಿತ ಅಧಿಕಾರಿ ಎಂದು ಹಸಿರು ಶಾಯಿಯಿಂದ ನಕಲು ಸಹಿ ಮಾಡಿರುತ್ತೇನೆ ಎಂದು ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...