ದಾವಣಗೆರೆ | ಮಾನವ ಬಂಧುತ್ವ ವೇದಿಕೆ, ಕಲಾ ಬಂಧುತ್ವ ವೇದಿಕೆ ಸಹಯೋಗದಲ್ಲಿ ಬೀದಿ ನಾಟಕ ಹಾಗೂ ಜನಪದ ಪ್ರದರ್ಶನ

Date:

ಮಾನವ ಬಂಧುತ್ವ ವೇದಿಕೆ ಕರ್ನಾಟಕ ಹಾಗೂ ಕಲಾ ಬಂಧುತ್ವ ವೇದಿಕೆ ದಾವಣಗೆರೆಯ ಸಹಯೋಗದಲ್ಲಿ ಜಿಲ್ಲೆಯಾದ್ಯಂತ ನಡೆಯಲಿರುವ ಬೀದಿ ನಾಟಕ ಹಾಗೂ ಜನಪದ ಹಾಡುಗಳ ಪ್ರದರ್ಶನ ಕಾರ್ಯಕ್ರಮದ ಉದ್ಘಾಟನೆಯನ್ನು ದಾವಣಗೆರೆ ನಗರದ ಜಯದೇವ ವೃತ್ತದಲ್ಲಿ ಬೆಳಿಗ್ಗೆ 11ಕ್ಕೆ ಉದ್ಘಾಟಿಸಲಾಯಿತು.

1002274919
ಜಯದೇವ ವೃತ್ತದಲ್ಲಿ ಉದ್ಘಾಟನೆ ವೇಳೆ ಕಲಾ ತಂಡಗಳ ಬೀದಿ ನಾಟಕ ಪ್ರದರ್ಶನ

ದಾವಣಗೆರೆ ನಗರದ ಜಯದೇವ ವೃತ್ತದಲ್ಲಿ ಹಮ್ಮಿಕೊಂಡಿದ್ದ ಬೀದಿ ನಾಟಕ ಹಾಗೂ ಜನಪದ ಗೀತೆಗಳ ಕಾರ್ಯಕ್ರಮವನ್ನು ನಿವೃತ್ತ ಡಿವೈಎಸ್ಪಿ ರವಿ ನಾರಾಯಣ್ ಉದ್ಘಾಟಿಸಿ “ಕಲಾತಂಡಗಳು ಉತ್ತಮ ಪ್ರದರ್ಶನ ನೀಡಲಿ. ಇದರಿಂದ ಸಮಾಜದ ಸಕಾರಾತ್ಮಕ ಬೆಳವಣಿಗೆಗೆ ಉತ್ತಮ ಸಂದೇಶ ನೀಡಲು ಸಹಕಾರಿಯಾಗಲಿ” ಎಂದು ಕಾರ್ಯಕ್ರಮದ ಯಶಸ್ಸಿಗೆ ಹಾರೈಸಿದರು.

1002274920

ಮಾನವ ಬಂಧುತ್ವ ವೇದಿಕೆ ಕರ್ನಾಟಕ ಸಂಘಟನೆಯು ರಾಜ್ಯಾದ್ಯಂತ ಬೀದಿ ನಾಟಕ ಮತ್ತು ಜನಪದ ಹಾಡುಗಳ ಪ್ರದರ್ಶನವನ್ನು ಹಮ್ಮಿಕೊಂಡಿದ್ದು, ಕಲಾತಂಡಗಳು ತರಬೇತಿ ಪಡೆದು ಎಲ್ಲಾ ಜಿಲ್ಲೆಗಳಲ್ಲಿ ಪ್ರದರ್ಶನ ನೀಡಲಿರುವ ಅಂಗವಾಗಿ ಕಾರ್ಯಕ್ರಮದ ಉದ್ಘಾಟನೆಯನ್ನು ಮೊದಲಿಗೆ ದಾವಣಗೆರೆ ಜಿಲ್ಲೆಯಿಂದ ಪ್ರಾರಂಭಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1002274156

ಮಾನವ ಬಂಧುತ್ವ ವೇದಿಕೆಯ ರಾಜ್ಯ ಸಂಚಾಲಕ ಪ್ರೊ. ರಾಮಚಂದ್ರಪ್ಪ ಮಾತನಾಡಿ ಮಾನವ ಬಂಧುತ್ವ ವೇದಿಕೆಯಿಂದ ಪ್ರತಿ ಜಿಲ್ಲೆಗೊಂದರಂತೆ ಜಿಲ್ಲೆಯ ಬೇರೆ ಭಾಗಗಳಲ್ಲಿ ಬೀದಿನಾಟಕ ಮತ್ತು ಜನಪದ ಗೀತೆಗಳ ಕಲಾಪ್ರದರ್ಶನ ನೀಡಲು ಕಲಾ ಬಂಧುತ್ವ ವೇದಿಕೆಯ ಆಶ್ರಯದಲ್ಲಿ ತರಬೇತಿ ಶಿಬಿರ ಆಯೋಜಿಸಲಾಗಿದ್ದು ಹಲವಾರು ಕಲಾತಂಡಗಳನ್ನು ರಚಿಸಿ ತರಬೇತಿ ನೀಡಲಾಗಿದೆ. ಈ ಕಲಾತಂಡಗಳು ರಾಜ್ಯದ ಬೇರೆಬೇರೆ ಜಿಲ್ಲೆಗಳಲ್ಲಿ ಪ್ರದರ್ಶನ ನೀಡಲಿವೆ. ಇದರ ಅಂಗವಾಗಿ ಮೊದಲಿಗೆ ದಾವಣಗೆರೆಯಿಂದಲೇ ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಪ್ರಾರಂಭಿಸಲಾಗಿದೆ” ಎಂದು ಮಾಹಿತಿ ನೀಡಿದರು.

1002274228

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ದ್ವೇಷಿಸುವವರನ್ನು ನಾವು ಪ್ರೀತಿಸಬೇಕು ಬುದ್ಧ ಪ್ರಜ್ಞೆ, ಕರುಣೆ; ಪ್ರೊ.ಕೃಷ್ಣಪ್ಪ ಕಾರ್ಯಕ್ರಮದಲ್ಲಿ ದು ಸರಸ್ವತಿ

ಉದ್ಘಾಟನಾ ಕಾರ್ಯಕ್ರಮದಲ್ಲಿ ರೈತ ಸಂಘದ ಮುಖಂಡ ಮುನಿಯಪ್ಪ, ರುದ್ರಮುನಿ ಆವರಗೆರೆ, ಪ್ರಾಂಶುಪಾಲ ಪ್ರೊ. ಮಂಜಪ್ಪ, ನಿರ್ದೇಶಕ ಅಂಜಿನಪ್ಪ ಲೋಕಿಕೆರೆ, ವಕೀಲ ಅನೀಶ್ ಪಾಷಾ, ಹರೋಸಾಗರ ಸಿದ್ದರಾಮಣ್ಣ, ಹೆಗ್ಗೆರೆ ರಂಗಪ್ಪ, ಐರಣಿ ಚಂದ್ರು, ಆದಿಲ್ ಖಾನ್, ಮಾನವ ಬಂಧುತ್ವ ವೇದಿಕೆಯ ಶಿವಕುಮಾರ್ ಮಾಡಾಳ್, ಹನುಮಂತಪ್ಪ, ಮತ್ತು ಕಲಾತಂಡಗಳ ಸದಸ್ಯರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...