ದಾವಣಗೆರೆ | ಉಪಚುನಾವಣೆ ಟಿಕೆಟ್ ಗೆ ಬೆಂಬಲಿಗರ ಹೈಡ್ರಾಮ ಹಾಗೂ ಅಲ್ಪಸಂಖ್ಯಾತರ ಬಿಗಿಪಟ್ಟು

Date:

ದಕ್ಷಿಣ ವಿಧಾನಸಭಾ ಕ್ಷೇತ್ರ ಉಪಚುನಾವಣೆಯ ಕಾಂಗ್ರೆಸ್ ಟಿಕೆಟ್ ಗಾಗಿ ಅಲ್ಪಸಂಖ್ಯಾತರ ಬಿಗಿಪಟ್ಟು, ಮುಸ್ಲಿಂ ಅಭ್ಯರ್ಥಿಗಳ ಪರ ಬೆಂಬಲಿಗರು, ಸಮರ್ಥ್ ಶಾಮನೂರು ಹಾಗೂ ಇತರ ಅಭ್ಯರ್ಥಿಗಳ ಪರ ಬೆಂಬಲಿಗರ ಮಧ್ಯೆ ಘೋಷಣೆ, ಕೂಗಾಟ, ಹೈಡ್ರಾಮಾ ನಡೆದು ಅಭ್ಯರ್ಥಿಗಳ ಆಯ್ಕೆಗಾಗಿ ಆಗಮಿಸಿದ್ದ ರಾಜ್ಯ ಚುನಾವಣಾ ವೀಕ್ಷಕರಾದ ಹೆಚ್ಎಮ್ ರೇವಣ್ಣ, ಮಂಜುನಾಥ್ ಭಂಡಾರಿ ಹಾಗೂ ಇತರರು ಮುಜುಗರಕ್ಕೊಳಗಾಗಿ ಆಕಾಂಕ್ಷಿಗಳು ಮತ್ತು ಬೆಂಬಲಿಗರೊಂದಿಗೆ ಮಾತನಾಡದೆ ಕೇವಲ ಅರ್ಜಿಗಳನ್ನಷ್ಟೇ ಪಡೆದು ಸಭೆಯನ್ನು ಮೊಟಕುಗೊಳಿಸಿ ತೆರಳಿದ ಘಟನೆ ದಾವಣಗೆರೆಯ ಪ್ರದೇಶ ಕಾಂಗ್ರೆಸ್ ಕಚೇರಿಯಲ್ಲಿ ನಡೆದಿದೆ.

ಮಾಜಿ ಸಚಿವ ಶಾಮನೂರು ಶಿವಶಂಕರಪ್ಪನವರ ಅಕಾಲಿಕ ನಿಧನದಿಂದ ತೆರವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದ್ದು ಚುನಾವಣಾ ದಿನಾಂಕವನ್ನು ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಮಾರ್ಚ್ 24ರಂದು ನಡೆಯಬೇಕಿದ್ದ ಅಭ್ಯರ್ಥಿಯ ಆಯ್ಕೆಯ ಕಸರತ್ತನ್ನು ತುರ್ತಾಗಿ ಮಾರ್ಚ್ 17ರಂದೇ ನಡೆಸಲು ಚುನಾವಣಾ ವೀಕ್ಷಕರನ್ನು ದಾವಣಗೆರೆಗೆ ಕಳಿಸಿ ಕೆಪಿಸಿಸಿ ಕ್ರಮ ಕೈಗೊಂಡಿತ್ತು.

1003910088

ಈ ಹಿನ್ನೆಲೆಯಲ್ಲಿ 16 ಜನರ ವೀಕ್ಷಕರ ಸಮಿತಿಯಲ್ಲಿ ಅಧಿವೇಶನ ನಡೆಯುತ್ತಿರುವುದರಿಂದ ಸಚಿವರು ಆಗಮಿಸದೇ ಗ್ಯಾರಂಟಿ ಸಮಿತಿಗಳ ಪ್ರಾಧಿಕಾರದ ಅಧ್ಯಕ್ಷ ಎಚ್ ಎಮ್ ರೇವಣ್ಣ, ಕಾಂಗ್ರೆಸ್ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಮಾಜಿ ಸಚಿವ ಆಂಜನೇಯ ಸೇರಿ ಮೂವರು ಇಂದು ದಾವಣಗೆರೆ ಪ್ರದೇಶ ಕಾಂಗ್ರೆಸ್ ಕಚೇರಿಯಲ್ಲಿ ಸಭೆ ನಡೆಸಿದರು. ಸಭೆಯ ನಂತರ ಆಕಾಂಕ್ಷಿಗಳು, ಬೆಂಬಲಿಗರು ಮತ್ತು ಕಾಂಗ್ರೆಸ್ನ ಪದಾಧಿಕಾರಿಗಳ ವಿಭಾಗಗಳು ತಮ್ಮ ಅನಿಸಿಕೆಗಳನ್ನು ಸಲ್ಲಿಸಿ ತಮ್ಮ ಬೆಂಬಲ ಮತ್ತು ಆಯ್ಕೆಯನ್ನು ತಿಳಿಸಬೇಕು. ಬರಹ ರೂಪದಲ್ಲಿ ಕೂಡ ಸಲ್ಲಿಸಬಹುದು ಎಂದು ಘೋಷಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1003910087

ಆನಂತರ ಒಬ್ಬೊಬ್ಬರಾಗಿ ತೆರಳಲು ಪ್ರಾರಂಭವಾದ ಕೂಡಲೇ ಆಕಾಂಕ್ಷಿಗಳ ಬೆಂಬಲಿಗರು ತಮ್ಮ ನಾಯಕರಿಗೆ, ತಮ್ಮ ಸಮುದಾಯಕ್ಕೆ ಟಿಕೆಟ್ ಬೇಕೆಂದು ಕೂಗಾಟ ಮತ್ತು ರೋಷಾವೇಷದೊಂದಿಗೆ ಅರಚಾಟ ನಡೆಸಿದ ಘಟನೆಯಿಂದ ಸಭೆ ಅಸ್ತವ್ಯಸ್ತಗೊಂಡಿತು. ಕಾಂಗ್ರೆಸ್ ನಾಯಕರುಗಳು ಸೇರಿದಂತೆ ಪೊಲೀಸರು ಬೆಂಬಲಿಗರನ್ನು ಸಮಾಧಾನ ಪಡಿಸಲು ಯತ್ನಿಸಿದರೂ, ಪರಿಸ್ಥಿತಿ ನಿಯಂತ್ರಣಕ್ಕೆ ಸಿಗದೆ ವೀಕ್ಷಕರು ಸಭೆಯನ್ನು ಮೊಟಕುಗೊಳಿಸಿ ಅರ್ಜಿಗಳನ್ನಷ್ಟೇ ಪಡೆದು ಹಿಂದಿರುಗಿದರು.

1003910085

ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯದ ಮುಖಂಡರು ಬೆಂಬಲಿಗರು ಕಾಂಗ್ರೆಸಿಗಾಗಿ ರಾಜ್ಯ, ಜಿಲ್ಲೆಯಲ್ಲಿ ನಾವು ಬೆಂಬಲವಾಗಿ ನಿಂತಿದ್ದು, ಇದುವರೆಗೂ ಕಾಂಗ್ರೆಸ್ ಅನ್ನು ಬೇಷರತ್ತಾಗಿ ಬೆಂಬಲಿಸಿ ಗೆಲ್ಲಿಸುತ್ತಿದ್ದೇವೆ. ರಾಜ್ಯದಲ್ಲಿ ಕಾಂಗ್ರೆಸ್ ಗೆಲ್ಲಲು ಪ್ರಮುಖವಾಗಿ ಮುಸ್ಲಿಂ ಸಮುದಾಯ ಕಾರಣವಾಗಿದೆ. ಕ್ಷೇತ್ರದಲ್ಲಿ 85,000ಕ್ಕೂ ಅತಿ ಹೆಚ್ಚು ಮತ, ಮತ್ತು ದೊಡ್ಡ ಸಮುದಾಯವಾಗಿರುವ ಮುಸ್ಲಿಂ ಸಮುದಾಯಕ್ಕೆ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಟಿಕೆಟ್ ನೀಡಲೇಬೇಕು, ಇಲ್ಲವಾದಲ್ಲಿ ತಕ್ಕ ಪಾಠ ಕಲಿಸುವುದಾಗಿ ಎಚ್ಚರಿಸಿ ಘೋಷಣೆಗಳನ್ನು ಕೂಗಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಉಪಚುನಾವಣೆ ನೀತಿ ಸಂಹಿತೆ ಜಾರಿ; ಪಾಲಿಕೆಯಲ್ಲಿ ಚುನಾವಣಾ ಕಛೇರಿ: ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಪುತ್ರ ಸಮರ್ಥ ಶಾಮನೂರುರವರಿಗೆ ಕೂಡ ಟಿಕೆಟ್ ನೀಡಬೇಕು ಎಂದು ಕೆಲವು ಯುವಕರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಘೋಷಣೆಗಳನ್ನು ಕೂಗಿದರು.

1003910089

ಅಲ್ಪಸಂಖ್ಯಾತ ಮುಖಂಡರು “ಅಹಿಂದ ಅಹಿಂದ” ಎಂದು ಘೋಷಣೆಗಳನ್ನು ಕೂಗುತ್ತಿದ್ದರೇ, “ಸಮರ್ಥ್ ಸಮರ್ಥ್” ಎಂದು ಇನ್ನೊಂದು ಕಡೆ ಶಾಮನೂರು ಬೆಂಬಲಿಗರು ಘೋಷಣೆಗಳನ್ನು ಕೂಗುತ್ತಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...