ದಾವಣಗೆರೆ | ಭಯೋತ್ಪಾದನೆ ಹಾಗೂ ಮಾದಕ ದ್ರವ್ಯ ವ್ಯಸನ ಪ್ರಪಂಚದ ದೊಡ್ಡ ಸಮಸ್ಯೆಗಳು; ಪೊಲೀಸ್ ಮಹಾನಿರೀಕ್ಷಕ ಡಾ.ರವಿಕಾಂತೇಗೌಡ

Date:

“ಪ್ರಪಂಚದಲ್ಲಿ ಪ್ರಮುಖವಾಗಿ ಭಯೋತ್ಪಾದನೆ ಮತ್ತು ಮಾದಕ ದ್ರವ್ಯ ವ್ಯಸನ ಈ ಎರಡು ಪ್ರಮುಖ ಸಮಸ್ಯೆಗಳನ್ನು ಕಾಣಬಹುದು. ಭಯೋತ್ಪಾದನೆ ಎಂಬುದು ಒಂದು ಪಿಡುಗು. ಇದು ಯಾವುದೋ ಒಂದು ಸ್ಥಳ, ಸಂಸ್ಥೆ, ಪ್ರದೇಶವನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗುತ್ತದೆ. ಇದರಿಂದ ಮಾನವ ಸಂಪನ್ಮೂಲ ಮೂಲಭೂತ ಸೌಕರ್ಯಗಳು ಸಂಪೂರ್ಣವಾಗಿ ನಾಶವಾಗುತ್ತದೆ. ಆದರೆ ಮಾದಕ ದ್ರವ್ಯ ವ್ಯಸನ ಇಡೀ ಪ್ರಪಂಚವನ್ನೇ ಕಾಡುತ್ತಿರುವ ಮತ್ತೊಂದು ದೊಡ್ಡ ಸಾಮಾಜಿಕ ಪಿಡುಗಾಗಿದೆ” ಎಂದು ದಾವಣಗೆರೆಯಲ್ಲಿ ಪೂರ್ವವಲಯ ಪೊಲೀಸ್ ಮಹಾನಿರೀಕ್ಷಕ ಡಾ.ರವಿಕಾಂತೇಗೌಡ ಅಭಿಪ್ರಾಯಪಟ್ಟರು.

1002218946
ಮಾದಕವಸ್ತು ವಿರೋಧಿ ದಿನಾಚರಣೆಯಲ್ಲಿ ಐಜಿಪಿ ಡಾ.ರವಿಕಾಂತೇಗೌಡ ಮಾತನಾಡಿದರು.

ದಾವಣಗೆರೆ ನಗರದ ದೊಡ್ಡಬಾತಿ ಸಮೀಪದ ತಪೋವನ ಆಯುರ್ವೇದಿಕ್ ಮತ್ತು ಮೆಡಿಕಲ್ ಕಾಲೇಜ್ ಆವರಣದಲ್ಲಿ ತಪೋವನ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ, ತಪೋವನ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ, ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಕಾಲೇಜ್ ಹಾಗೂ ಹರಿಹರದ ಸ್ಪಂದನ ಮದ್ಯವ್ಯಸನಿಗಳ ಪುನರ್ವಸತಿ ಕೇಂದ್ರದ ವತಿಯಿಂದ ಅಂತಾರಾಷ್ಟ್ರೀಯ ಮಾದಕ ವಸ್ತುವಿನ ವಿರೋಧಿ ದಿನಾಚರಣೆ ಅಂಗವಾಗಿ ಮಾದಕ ವಸ್ತುವಿನ ವ್ಯಸನವನ್ನು ತಡೆಗಟ್ಟುವ ಕುರಿತು ಆಯೋಜಿಸಿದ್ದ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು.

“ಯುವ ಪೀಳಿಗೆ ಮಾದಕ ದ್ರವ್ಯ ವ್ಯಸನಗಳಿಗೆ ಬಲಿಯಾಗಬಾರದು. ಯುವ ಸಮುದಾಯ ಮದ್ಯ, ಮಾದಕ ವಸ್ತುಗಳ ಸೇವನೆಗೆ ಪ್ರೇರೇಪಣೆಗೆ, ದುಶ್ಚಟಗಳಿಗೆ ಬಲಿಯಾಗದಿರಿ” ಎಂದು ಪೂರ್ವವಲಯ ಐಜಿಪಿ ಡಾ.ರವಿಕಾಂತೇಗೌಡ ಕರೆ ನೀಡಿದರು. .

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವ್ಯಸನಗಳಿಗೆ ಬಲಿಯಾದ ವ್ಯಕ್ತಿ ಪ್ರತಿಯೊಂದು ಕ್ಷಣವೂ ಜೀವನ್ಮರಣ ಹೋರಾಟ ನಡೆಸುತ್ತಾನೆ. ಭಯೋತ್ಪಾದನೆ ನಡೆಸಿದ ಕೃತ್ಯಕ್ಕೆ ಆ ಭಯೋತ್ಪಾದಕ ಬಲಿಯಾಗುತ್ತಾನೆ. ಆದರೆ ಯಾವುದೇ ಒಂದು ದೇಶವನ್ನು ನಾಶ ಮಾಡಲು ಯುದ್ದ ಮಾಡುವ ಅವಶ್ಯಕತೆ ಇಲ್ಲಾ, ಯುವ ಸಮುದಾಯವನ್ನು ಗುರಿಯಾಗಿಸಿಕೊಂಡು ಯುವಕರಿಗೆ ಮದ್ಯ, ಮಾದಕ ದ್ರವ್ಯಗಳು ಲಭ್ಯವಾಗುವಂತೆ ಮಾಡುವ ಮೂಲಕ ಕೆಲವು ದೇಶಗಳು ದೇಶವನ್ನು ನಾಶಪಡಿಸುತ್ತಿವೆ” ಎಂದು ಆತಂಕ ವ್ಯಕ್ತಪಡಿಸಿದರು.‌

1002218948
ದಾವಣಗೆರೆ ಹೊರವಲಯದ ತಪೋವನ ಆಯುರ್ವೇದ ಕಾಲೇಜಿನಲ್ಲಿ ಮಾದಕದ್ರವ್ಯ ವಿರೋಧಿ ದಿನಾಚರಣೆ

“ಭವಿಷ್ಯದಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಕೆಲಸ ಮಾಡುವವರಿದ್ದೀರಿ, ಸಮಾಜದ ದೈಹಿಕ, ಮಾನಸಿಕ ಆರೋಗ್ಯ ಕಾಪಾಡುವ ಶಕ್ತಿ ನಿಮ್ಮಲ್ಲಿದೆ. ಮನಸ್ಸಿನ ಆರೋಗ್ಯ ಕಾಪಾಡಿಕೊಂಡಲ್ಲಿ ದೈಹಿಕ ಆರೋಗ್ಯ ಉತ್ತಮವಾಗಿರಲಿದೆ. ಈ ಹಿನ್ನೆಲೆಯಲ್ಲಿ ದೇಶವು ವ್ಯಸನಮುಕ್ತ ರಾಷ್ಟ್ರವಾಗಲಿ. ಯಾವ ದೇಶ ವ್ಯಸನಮುಕ್ತ ರಾಷ್ಟ್ರವಾಗುವುದೋ, ಆ ದೇಶ ಪ್ರಗತಿಶೀಲ ರಾಷ್ಟ್ರವಾಗುವುದು. ನಮ್ಮ ದೇಶವು ಮತ್ತಷ್ಟು ಬಲಿಷ್ಠವಾಗಿ ಬೆಳೆಯಬೇಕಾದರೆ ಇಂತಹ ದುಶ್ಚಟ, ವ್ಯಸನಗಳಿಗೆ ಬಲಿಯಾಗದೇ ಇದರ ವಿರುದ್ಧ ಹೋರಾಡೋಣ” ಎಂದು ಕರೆ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾಪ್ರಶಾಂತ್ ಮಾತನಾಡಿ, “ಮದ್ಯ, ಮಾದಕ ವ್ಯಸನದಿಂದ ವೈಯಕ್ತಿಕವಾಗಿ ಮತ್ತು ಸಾಮಾಜಿಕವಾಗಿ ಗಾಢವಾದ ಪರಿಣಾಮ ಬೀರುತ್ತದೆ. ಇದು ಕೇವಲ ಒಬ್ಬ ವ್ಯಕ್ತಿಯ ಮೇಲೆ ದುಷ್ಪರಿಣಾಮ ಬೀರದೆ, ಇಡೀ ಕುಟುಂಬವೇ ಇದರ ಪರಿಣಾಮವನ್ನು ಎದುರಿಸಬೇಕಾಗುತ್ತದೆ. ಇಂತಹ ಕಾರ್ಯಕ್ರಮ ಈ ದಿನಕ್ಕೆ ಸೀಮಿತವಾಗದೆ ನಿರಂತರವಾಗಿ ಕರ್ತವ್ಯದಲ್ಲಿ ತೊಡಗಿಸಿಕೊಂಡು ನಶೆ ಮುಕ್ತ ಸಮಾಜ ನಿರ್ಮಾಣಕ್ಕೆ ತಾವೆಲ್ಲರೂ ಪ್ರಾಮಾಣಿಕವಾಗಿ ಶ್ರಮಿಸೋಣ” ಎಂದು ಸಲಹೆ ನೀಡಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಲೋಕಸಭಾ ಚುನಾವಣೆಯಲ್ಲಿ ಹಣ ಪಡೆದು ರೇಣುಕಾಚಾರ್ಯ ಕಾಂಗ್ರೆಸ್ ಅಭ್ಯರ್ಥಿ ಪರ ಕೆಲಸ

ಕಾರ್ಯಕ್ರಮದಲ್ಲಿ ಮದ್ಯ ಮಾದಕ ವಸ್ತುಗಳ ವಿರೋಧಿ ದಿನಾಚರಣೆ ಕುರಿತು ಪ್ರತಿಜ್ಞಾವಿಧಿ ಭೋಧಿಸಲಾಯಿತು. ತಪೋವನ ಸಮೂಹ ಸಂಸ್ಥೆಯ ನಿರ್ದೇಶಕ ಡಾ.ಶಶಿಕುಮಾರ್ ವಿ ಮೆಹರ್ವಾಡೆ, ವಿಶೇಷಚೇತನ ಹಾಗೂ ಹಿರಿಯ ನಾಗರಿಕ ಸಬಲೀಕರಣ ಅಧಿಕಾರಿ ಡಾ. ಕೆ ಕೆ.ಪ್ರಕಾಶ್, ನಗರ ಸಿಇಎನ್ ಠಾಣಾ ಇನ್ಸ್ ಪೆಕ್ಟರ್ ಹೆಚ್.ಸಿ.ವಸಂತ್, ತಪೋವನ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಪ್ರಾಂಶುಪಾಲರಾದ ಡಾ. ಕೆ. ಆರ್. ಅಶ್ವಿನಿ, ತಪೋವನ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಪ್ರಾಂಶುಪಾಲೆ ಡಾ. ಸುಮನಾ ಭಟ್, ತಪೋವನ ಇನ್ಸ್ಟಿಟ್ಯೂಟ್ ಆಫ್ ನಸಿರ್ಂಗ್ ಕಾಲೇಜ್ ಶೈಲಜಾ ಬಿ. ಆರ್. ಸೇರಿದಂತೆ ಸಂಸ್ಥೆಯ ಸಿಬ್ಬಂದಿ, ವಿದ್ಯಾರ್ಥಿಗಳು ಭಾಗವಹಿಸಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...