ದಾವಣಗೆರೆ | ಬೀಳುವ ಹಂತದಲ್ಲಿದೆ ಸರ್ಕಾರಿ ಶಾಲೆ; ಜೀವ ಭಯದಲ್ಲೇ ಮಕ್ಕಳ ಕಲಿಕೆ

Date:

ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಬಸವಾಪಟ್ಟಣ ಸಮೀಪ ಇರುವ ಕಂಚುಗಾರನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಸಂಪೂರ್ಣ ಶಿತಿಲಗೊಂಡಿದೆ. ಕುಸಿದು ಬೀಳುವ ಹಂತದಲ್ಲಿದೆ. ಆದರೂ, ಶಿಕ್ಷಕರು, ವಿದ್ಯಾರ್ಥಿಗಳು ಪ್ರಾಣ ಭೀತಿಯಲ್ಲಿಯೇ ಪ್ರತೀ ದಿನ ಶಾಲೆಗೆ ಬರುತ್ತಿದ್ದು, ಕಟ್ಟಡ ಕುಸಿರೆ ಭಾರೀ ಅನಾಹುತ ಸಂಭವಿಸುವ ಆತಂಕ ಗ್ರಾಮಸ್ಥರನ್ನು ಕಾಡುತ್ತಿದೆ.

ಈ ಶಾಲೆಯಲ್ಲಿ ಏಳು ತರಗತಿಗಳು ನಡೆಯುತ್ತಿದ್ದು, 185 ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಒಂದು ಆರ್‌.ಸಿ.ಸಿ ಕಟ್ಟಡ ಸೇರಿದಂತೆ 6 ಕೊಠಡಿಗಳಿದ್ದು, ಇವು ಯಾವುದೇ ಹಂತದಲ್ಲಿ ನೆಲಕಚ್ಚುವ ಸ್ಥಿತಿಯಲ್ಲಿವೆ.

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಎಚ್‌.ಕೆ. ರವಿ, ಶಿಕ್ಷಣ ಇಲಾಖೆ ಉಪನಿರ್ದೇಶಕರು ಈ ಕಟ್ಟಡ ಶೈಕ್ಷಣಿಕ ಚಟುವಟಿಕೆಗೆ ಯೋಗ್ಯವಾಗಿಲ್ಲ. ನೆಲಸಮಗೊಳಿಸಿ ಹೊಸ ಕಟ್ಟಡ ನಿರ್ಮಿಸಿಬೇಕು ಎಂಬ ಆದೇಶ ನೀಡಿದ್ದಾರೆ. ಆದರೆ, ಕಟ್ಟಡ ಕೆಡವಿದರೆ ಪಾಠ ಮಾಡಲು ಸ್ಥಳವಿಲ್ಲದೇ ಇದೇ ಕಟ್ಟಡದಲ್ಲಿ ಶಾಲೆ ನಡೆಸುತ್ತಿದ್ದೇವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇತ್ತೀಚೆಗಷ್ಟೇ ನಿರ್ಮಿಸಿದ ಆರ್‌ಸಿಸಿ ಕಟ್ಟಡವೂ ಕಳಪೆ ಕಾಮಗಾರಿಯಿಂದ ಕೂಡಿದ್ದು, ಸಂಪೂರ್ಣ ಶಿಥಿಲಗೊಂಡಿದೆ. ಈ ಬಗ್ಗೆ ಮಾಯಕೊಂಡ ಶಾಸಕರಲ್ಲಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ಅವರು ಮಾದ್ಯಮದವರಿಗೆ ಪ್ರತಿಕ್ರಿಯಿಸಿದ್ದಾರೆ.

ಶಾಲೆಯ ಈ ದುಃಸ್ಥಿತಿ ಕಂಡು ಅನೇಕ ಪಾಲಕರು ಮಕ್ಕಳನ್ನು ಸೇರಿಸದೇ ಇತರ ಶಾಲೆಗಳಿಗೆ ಕಳಿಸುತ್ತಿದ್ದಾರೆ. ಇದರಿಂದ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿದೆ. ಶಾಲೆಯ ಪಕ್ಕದಲ್ಲಿರುವ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಮೆಟ್ರಿಕ್‌ ಪೂರ್ವ ವಿದ್ಯಾರ್ಥಿ ನಿಲಯವಿದೆ. ಅಲ್ಲಿ ಪ್ರಾಥಮಿಕ ಶಾಲೆಯ 15 ವಿದ್ಯಾರ್ಥಿಗಳು ಇದ್ದಾರೆ. ಒಂದುವೇಳೆ ನಮ್ಮ ಶಾಲೆಯ ಕಟ್ಟಡ ಉತ್ತಮವಾಗಿದ್ದಿದ್ದರೆ ಬೇರೆ ಗ್ರಾಮಗಳ ಬಡ ವಿದ್ಯಾರ್ಥಿಗಳೂ ಬಂದು ಇಲ್ಲಿ ಕಲಿಯುತ್ತಿದ್ದರು ಎನ್ನುತ್ತಾರೆ ಗ್ರಾಮಸ್ಥರು.

ಗ್ರಾಮದ ಹಿಂದುಳಿದ, ಪರಿಶಿಷ್ಠ ವರ್ಗದ, ಪರಿಶಿಷ್ಠ ಪಂಗಡದ ವಿದ್ಯಾರ್ಥಿಗಳು ಇಲ್ಲಿ ಅಭ್ಯಾಸ ಮಾಡುತ್ತಿದ್ದಾರೆ. ಪಾಲಕರು ಆರ್ಥಿಕವಾಗಿ ಹಿಂದುಳಿದಿರುವುದರಿಂದ ಮಕ್ಕಳನ್ನು ಬೇರೆ ಕಡೆ ಸೇರಿಸಿ ಶಿಕ್ಷಣ ಕೊಡಿಸಲು ಅಸಾಧ್ಯವಾಗದೆ ಇದೇ ಶಾಲೆಯಲ್ಲಿ ಓದಿಸುತ್ತಿದ್ದಾರೆ.

ಶಾಲೆಯ ಕಟ್ಟಡವನ್ನು 1960ರಲ್ಲಿ ನಿರ್ಮಿಸಲಾಗಿದ್ದು, ಮಂಗಳೂರು ಹಂಚಿನ ಛಾವಣಿ ಹೊಂದಿದೆ. ಸುಮಾರು 60ವರ್ಷದ ಹಳೆಯ ಕಟ್ಟಡ ಇದಾಗಿದ್ದು, ಕೂಡಲೇ ಶಿಕ್ಷಣ ಇಲಾಖೆ ಬದಲಿ ವ್ಯವಸ್ಥೆ ಕಲ್ಪಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸುತ್ತಿದ್ದಾರೆ.

ಶಾಲೆಯ ಶಿಥಿಲ ಕಟ್ಟಡದ ಬಗ್ಗೆ ಇಲಾಖೆಗೆ ವರದಿ ಸಲ್ಲಿಸಿದ್ದೇವೆ. ಮೂಲ ಭೂತ ಸೌಲಭ್ಯದ ಕೊರತೆಯೂ ಇದೆ. ಕಟ್ಟಡ ಸೇರಿದಂತೆ ಉತ್ತಮ ವಾತಾವರಣ ಇದ್ದರೆ ಪಾಲಕರು ಮಕ್ಕಳನ್ನು ಶಾಲೆಗೆ ಸೇರಿಸುತ್ತಾರೆ. ಮಕ್ಕಳೂ ಸಂತಸದಿಂದ ಶಾಲೆಗೆ ಬರುತ್ತಾರೆ. ಈ ವರ್ಷ ಮಳೆ ಕಡಿಮೆ ಇರುವುದರಿಂದ ಶಾಲೆ ಕಟ್ಟಡ ಕುಸಿದು ಬಿದ್ದಿಲ್ಲ. ಇಂತಹ ಶಿಥಿಲ ಕಟ್ಟಡದಲ್ಲಿಯೇ ಪಾಠ ನಡೆಸುತ್ತಿದ್ದೇವೆ ಎನ್ನುತ್ತಾರೆ ಶಾಲೆಯ ಮುಖ್ಯ ಶಿಕ್ಷಕ ಡಿ.ಕೆ. ರಾಜು.

ಒಟ್ಟಿನಲ್ಲಿ ಬಡವರ ಮಕ್ಕಳಿಗೆ ಆಸರೆಯಾಗಬೇಕಿದ್ದ ಶಾಲೆಯೊಂದರಲ್ಲಿ ಜೀವ ಕೈಯಲ್ಲಿ ಹಿಡಿದು ಮಕ್ಕಳು ಶಿಕ್ಷಕರು ಕಾಲ ಕಳೆಯುವಂತಾಗಿದೆ. ಆದಷ್ಟು ಬೇಗ ನಮ್ಮ ಊರ ಶಾಲೆಗೆ ಒಂದು ಕಟ್ಟಡದ ವ್ಯವಸ್ಥೆ ಮಾಡಿ ಮಕ್ಕಳನ್ನು ರಕ್ಷಿಸಿ ಎಂದು ಗ್ರಾಮಸ್ಥರು ಆಗ್ರಹಿಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...