ದಾವಣಗೆರೆ | ಸ್ವಚ್ಚತೆಯೇ ಕಾಣದ ಗ್ರಾಮ; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು

Date:

ಈ ಊರಿಗೆ ಕಾಲಿಟ್ಟರೆ ಕಾಣುವುದು ಬರೀ ಕಸದ ರಾಶಿ. ರಸ್ತೆಗಳ ಅಕ್ಕಪಕ್ಕ ಅಷ್ಟೇ ಅಲ್ಲ ರಸ್ತೆಯ ಮೇಲೆಲ್ಲಾ ಕಸ, ಕಸದಿಂದ ತುಂಬಿತುಳುಕುತ್ತಿರುವ ಚರಂಡಿಗಳು, ಇದು ರಸ್ತೆಯೋ ಕಸ ಡಂಪಿಂಗ್ ಪ್ರದೇಶವೋ ಎಂದು ಅನುಮಾನ ನಿಮ್ಮನ್ನು ಕಾಡದೇ ಇರುವುದಿಲ್ಲ.

ಇದು ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ದಿದ್ದಿಗೆ ಎನ್ನುವ ಗ್ರಾಮ. ಈ ಸ್ಥಿತಿ ಇಲ್ಲಿನ ಜನರಿಗೆ ಎರಡು ವರ್ಷಗಳಿಂದ ಸರ್ವೇಸಾಮಾನ್ಯವಾಗಿದೆ. ಇಡೀ ಊರಿನಲ್ಲಿ ಚರಂಡಿಗಳು ತುಂಬಿತುಳುಕುತ್ತಿದ್ದು ರಸ್ತೆ ಮೇಲೆಲ್ಲ ಚರಂಡಿಯ ನೀರು ಹರಿವ ಸ್ಥಿತಿಇದೆ. ಇನ್ನೂ ಕೆಲವು ಕಡೆಗಳಲ್ಲಿ ಮನೆ ಅಂಗಳಕ್ಕೆ ಮನೆ ಬಾಗಿಲಲ್ಲಿ ಹರಿಯುತ್ತವೆ.

ಹೀಗೆ ಹರಿಯುವ ಚರಂದಿ ನೀರು ಅಲ್ಲಲ್ಲಿ ನಿಂತು ಸೊಳ್ಳೆ, ನೊಣಗಳು ಹೆಚ್ಚಾಗಿದ್ದು, ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಗ್ರಾಮಸ್ಥರನ್ನು ಕಾಡುತ್ತಿದೆ. ಈಗಾಗಲೇ ಮಕ್ಕಳು, ಮಹಿಳೆಯರು ಸೇರಿ ವೃದ್ಧ ಸೊಳ್ಳೆಗಳಿಂದ ತೊಂದರೆ ಅನುಭವಿಸುತ್ತಿದ್ದಾರೆ. ಗ್ರಾಮದ ಜನರಲ್ಲಿ ಸಣ್ಣದಾಗಿ ಜ್ವರ ಕಾಣಿಸಿಕೊಳ್ಳುತ್ತಿದ್ದು, ಚರಂಡಿಗಳ ಹೂಳು ತೆಗೆದು ಸ್ವಚ್ಛತೆ ಕಾಪಾಡಬೇಕು ಎನ್ನುವುದು ಗ್ರಾಮಸ್ಥರ ಮನವಿ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗ್ರಾಮದಲ್ಲಿ ಎರಡು ಮೂರು ತಿಂಗಳಿಂದ ಪಿಡಿಒ ಕೂಡ ಕರ್ತವ್ಯಕ್ಕೆ ಹಾಜರಾಗದೆ ಗೈರು ಹಾಜರಾಗಿದ್ದು, ಗ್ರಾಮ ಪಂಚಾಯತಿಯಲ್ಲಿ ಅರಾಜಕತೆಯ ತಲೆದೂರಿದೆ. ಗ್ರಾಮಸ್ಥರು ಯಾರಿಗೆ ದೂರು ನೀಡಬೇಕು ಎನ್ನುವುದೇ ತಿಳಿಯುತ್ತಿಲ್ಲ ಎನ್ನುತ್ತಾರೆ ಗ್ರಾಮಸ್ಥರು.

ಕಳೆದ ಏಳು ತಿಂಗಳಗಳಿಂದ ಮನವಿ ಮಾಡಿ ಪ್ರತಿಭಟಿಸಿದರೂ, ಮೇಲಾಧಿಕಾರಿಗಳಿಗೆ ದೂರು ನೀಡಿದರೂ ಪ್ರಯೋಜನವಾಗಿಲ್ಲ. ಚರಂಡಿಗಳು ಯಾವುದೇ ಸ್ವಚ್ಛತೆ ಕಂಡಿಲ್ಲ. ರಸ್ತೆಯಲ್ಲಿ ಮಕ್ಕಳು ಚರಂಡಿಯ ನೀರು ಕೊಳಚೆಯ ಮೇಲೆ ಆಟವಾಡುವ ಹಾಗೂ ಅದರ ಮೇಲೆ ಎಲ್ಲರೂ ನಡೆದುಕೊಂಡು ಓಡಾಡುವ ಪರಿಸ್ಥಿತಿ ಇದ್ದು, ತಕ್ಷಣವೇ ಹೂಳು ತೆಗೆಸಿ ಚರಂಡಿಯ ಸ್ವಚ್ಛತೆ ಕಾಪಾಡಿ, ಜನರ ಆರೋಗ್ಯ ಕಾಪಾಡಬೇಕು ಎಂದು ಗ್ರಾಮಸ್ಥರು ಆಗ್ರಹಿಸುತ್ತಿದ್ದಾರೆ.

ಕಳೆದ ಎರಡು ವರ್ಷಗಳಿಂದ ಚರಂಡಿಯ ಹೂಳನ್ನು ಸರಿಯಾಗಿ ತೆಗೆದಿಲ್ಲ. ಕೆಲವೆಡೆ ರಸ್ತೆ ಮೇಲೆಲ್ಲಾ ಕೊಳಚೆ ಹರಿದು ಅಸಹ್ಯಕರ ಪರಿಸ್ಥಿತಿ ಇದ್ದು ಗ್ರಾಮ ಪಂಚಾಯಿತಿಯ ಯಾರೊಬ್ಬರೂ ಅದರ ಬಗ್ಗೆ ಗಮನ ಹರಿಸಿಲ್ಲ. ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಏಳು ತಿಂಗಳಿಂದ ಮನವಿ ಮಾಡಿದರೂ ಹೂಳು ತೆಗೆಸದೆ ಪರಿಸ್ಥಿತಿ ಬದಲಾಗಿಲ್ಲ. ಊರಲ್ಲಿ ಹಬ್ಬ, ಹರಿದಿನಗಳು ಜಾತ್ರೆಗಳು ಪ್ರಾರಂಭವಾಗುತ್ತಿದ್ದು ಕೊಳಚೆ ತುಳಿದುಕೊಂಡೆ ಊರಿನಲ್ಲಿ ಹಬ್ಬ ಹರಿದಿನಗಳನ್ನು ಆಚರಿಸಬೇಕಾದ ಪರಿಸ್ಥಿತಿ ಇದೆ ಎಂದು ಅಸಮಾಧಾನ ವ್ಯಕ್ತಪಡಿಸುತ್ತಾರೆ ದಿದ್ದಿಗೆ ಗ್ರಾಮದ ನಿವಾಸಿ ನಾಗರಾಜ.

ಈ ಮಧ್ಯೆ ಬೀದಿ ದೀಪಗಳ ಸಮಸ್ಯೆ ಕೂಡ ಅಲ್ಲಲ್ಲಿ ಹೆಚ್ಚಾಗಿದ್ದು, ರಾತ್ರಿಯಲ್ಲಿ ಕೆಲವು ರಸ್ತೆಗಳಲ್ಲಿ ನಡೆದು ಹೋಗಲು ದೀಪಗಳ ಬೆಳಕು ಇಲ್ಲದಂತಾಗಿದೆ ಮತ್ತು ಅದರೊಂದಿಗೆ ಗ್ರಾಮ ಪಂಚಾಯಿತಿನಲ್ಲಿ ಅವ್ಯವಹಾರದ ಆರೋಪ ಕೂಡ ಜನರಿಂದ ಕೇಳಿ ಬಂದಿದೆ.

ಈ ಬಗ್ಗೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದಾಗ ಅವರು ಸಂಪರ್ಕಕ್ಕೆ ದೊರೆಯಲಿಲ್ಲ, ಅವರನ್ನು ಅಮಾನತು ಮಾಡಿರುವ ಮಾಹಿತಿ ಕೇಳಿಬಂದಿದೆ.

ಈ ಬಗ್ಗೆ ಗ್ರಾಮ ಪಂಚಾಯಿತ್ ಕಾರ್ಯದರ್ಶಿ ಅವರನ್ನು ಮಾತನಾಡಿಸಿದಾಗ ಈ ಬಗ್ಗೆ ಗ್ರಾಮ ಪಂಚಾಯತಿಯ ಕಾರ್ಯದರ್ಶಿ ಅವರನ್ನು ಮಾತನಾಡಿಸಿದಾಗ ಅವರು ಊರಿನಲ್ಲಿ ಸ್ವಚ್ಛತೆ ಕಾರ್ಯದಿಂದಾಗಿ ಆಗಿಂದಾಗ್ಗೆ ನಡೆಯುತ್ತಿದ್ದು, ಕೆಲವು ಭಾಗಗಳಲ್ಲಿ ಜಾಡಮಾಲಿಗಳ ಕೊರತೆಯಿಂದ ಸ್ವಚ್ಛತೆ ಕಾರ್ಯ ಸಾಧ್ಯವಾಗಿಲ್ಲ. ಸ್ವಚ್ಛತೆ ಕಾರ್ಯ ಕೈಗೊಳ್ಳಲು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಕರ್ತವ್ಯಕ್ಕೆ ಬರಬೇಕಿದ್ದು ಅವರು ಕರ್ತವ್ಯಕ್ಕೆ ಬಂದ ತಕ್ಷಣ ಸ್ವಚ್ಛತೆ ಕಾರ್ಯ ಪ್ರಾರಂಭಿಸುವುದಾಗಿ ಮಾಹಿತಿ ನೀಡಿದರು.

ಈಗಲಾದರೂ ಸ್ಥಳೀಯ ಆಡಳಿತ ಮತ್ತು ಜಿಲ್ಲಾಡಳಿತ ಎಚ್ಚೆತ್ತುಕೊಂಡು ಗ್ರಾಮಗಳ ಚರಂಡಿಯ ಸ್ವಚ್ಛತೆಯನ್ನು ಸಮರೋಪಾದಿಯಲ್ಲಿ ಕೈಗೊಳ್ಳಬೇಕಾದ ಅನಿವಾರ್ಯತೆ ಇದ್ದು, ಆದಷ್ಟುಬೇಗ ಕ್ರಮಕೈಗೊಳ್ಳಲಿ ಎನ್ನುವುದು ಸಾರ್ವಜನಿಕರ ಆಗ್ರಹ.

ಪೋಸ್ಟ್ ಹಂಚಿಕೊಳ್ಳಿ:

ವಿನಾಯಕ್ ಚಿಕ್ಕಂದವಾಡಿ
ವಿನಾಯಕ್ ಚಿಕ್ಕಂದವಾಡಿ
ದಾವಣಗೆರೆ, ಚಿತ್ರದುರ್ಗ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...