ದಾವಣಗೆರೆ | ಸಂಚಾರ ನಿಯಮ ಉಲ್ಲಂಘನೆ : ಶಾಲಾ ಬಸ್, ಆಟೋ, ವಾಹನಗಳಿಗೆ ದಂಡ

Date:

ದಾವಣಗೆರೆ ನಗರದ ವಿವಿಧ ವೃತ್ತಗಳಲ್ಲಿ ಪೊಲೀಸ್ ಇಲಾಖೆ ಶಾಲಾ ಕಾಲೇಜಿನ ಬಸ್‍ಗಳು ಹಾಗೂ ಆಟೋ, ವ್ಯಾನ್‍ಗಳ ಪರಿಶೀಲನೆ ನಡೆಸಿ ಸಂಚಾರ ನಿಯಮ ಉಲ್ಲಂಘನೆ ಮಾಡಿದ ವಾಹನ ಚಾಲಕರು, ಸವಾರರ ಮೇಲೆ ಐಎಂವಿ ಕಾಯ್ದೆಯಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ.

ಡ್ರಂಕ್ ಅಂಡ್ ಡ್ರೈವ್, ವಾಹನ ಚಾಲನಾ ಪರವಾನಿಗೆ, ವಾಹನದ ದಾಖಲಾತಿಗಳು, ನೋಂದಣಿ ಫಲಕ, ಅತಿ ವೇಗದ ಚಾಲನೆ, ಅಪಾಯಕಾರಿ ಚಾಲನೆ, ಹೆಚ್ಚು ಶಾಲಾ ಮಕ್ಕಳನ್ನು ಹತ್ತಿಸಿಕೊಂಡು ಮತ್ತು ವಾಹನದಲ್ಲಿ ಜಿ.ಪಿ.ಎಸ್, ಸಿಸಿ ಕ್ಯಾಮಾರ ಅಳವಡಿಕೆ, ಬಗ್ಗೆ ಪರಿಶೀಲನೆ ಮಾಡಿದರು.

ದಾವಣಗೆರೆ ದಕ್ಷಿಣ ಮತ್ತು ಉತ್ತರ ಸಂಚಾರ, ಎರಡು ಪೊಲೀಸ್ ಠಾಣೆಯಿಂದ ಒಟ್ಟು 77 ಶಾಲಾ ವಾಹನಗಳನ್ನು ಪರಿಶೀಲನೆ ಮಾಡಿದ್ದು, ಅದರಲ್ಲಿ ಹೆಚ್ಚು ಶಾಲಾ ಮಕ್ಕಳನ್ನು ಕರೆದೊಯ್ಯತ್ತಿದ್ದ 38 ವಾಹನದ ಚಾಲಕರ ಮೇಲೆ ಪ್ರಕರಣ ದಾಖಲು ಮಾಡಿ 9200 ದಂಡ ವಿಧಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಮವಸ್ತ್ರ ಧರಿಸದೇ ವಾಹನ ಚಾಲನೆ ಮಾಡಿದ 13 ಶಾಲಾ ವಾಹನ ಚಾಲಕರಿಗೆ 6500 ದಂಡವಿಧಿಸಿದ್ದಾರೆ. ಸಿಗ್ನಲ್ ಜಂಪ್ ಮಾಡಿದ 03 ಪ್ರಕರಣಗಳನ್ನು ದಾಖಲಿಸಿ 1500 ದಂಡ ವಿಧಿಸಲಾಗಿದೆ.

ದಕ್ಷಿಣ ಸಂಚಾರ ಪೊಲೀಸ್ ಠಾಣೆಯ ಎ.ಎಸ್.ಐ ಅಣ್ಣಯ್ಯ ಬಿ.ಎಸ್ ಹಾಗೂ ಪೊಲೀಸ್ ಕಾನ್ ಸ್ಟೇಬಲ್ ಡಿ. ನೂರ್ ಅಹ್ಮದ್, ಹಾಗೂ ಉಮೇಶ ಅಜ್ಜೊಳ ರವರು ದಕ್ಷಿಣ ಸಂಚಾರ ಠಾಣಾ ಸರಹದ್ದಿನ ಸಾರ್ವಜನಿಕ ರಸ್ತೆಯಲ್ಲಿ ಮದ್ಯಪಾನ ಮಾಡಿ ಅತಿವೇಗ ಮತ್ತು ಅಜಾಗರೂಕತೆಯಿಂದ ವಾಹನ ಚಾಲನೆ ಮಾಡಿದ ಚಾಲಕನ ಮೇಲೆ ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

1002532223

ಎಫ್.ಸಿ ಇಲ್ಲದ ಶಾಲಾ ಬಸ್ಸನ್ನು ಜಪ್ತು ಮಾಡಿ ಮುಂದಿನ ಕ್ರಮ ಜರುಗಿಸಲು ಆರ್.ಟಿ.ಓ ರವರಿಗೆ ನೀಡಿದೆ. ಜಿಲ್ಲೆಯಾದ್ಯಂತ ಯಾವುದೇ ಶಾಲಾ ಮತ್ತು ಕಾಲೇಜ್ ವಾಹನ ಚಾಲಕರು ಕುಡಿದು ವಾಹನಗಳನ್ನು ಚಲಾಯಿಸದಂತೆ, ಮತ್ತು ವಾಹನಗಳ ದಾಖಲಾತಿಗಳನ್ನು ಸರಿಯಾಗಿ ನಿರ್ವಹಿಸಲು ಮತ್ತು ಸುರಕ್ಷಿತವಾಗಿ ಚಾಲನೆ ಮಾಡಲು ಸೂಚಿಸಲಾಗಿದೆ. ವಾಹನ ಅಧಿನಿಯಮ ಉಲ್ಲಂಘಿಸುವ ಶಾಲಾ/ಕಾಲೇಜ್ ಚಾಲಕರ ಮೇಲೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ತಗೆದುಕೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗದಲ್ಲಿ ವಿಶೇಷವಾಗಿ ಸ್ವಾತಂತ್ರ್ಯ ದಿನಾಚರಣೆ: ಕುರಿಗಾಹಿಯಿಂದ ಧ್ವಜಾರೋಹಣ

ಎಸ್ಪಿ ಉಮಾ ಪ್ರಶಾಂತ, ಎಎಸ್ಪಿ ಪರಮೇಶ್ವರ ಹೆಗಡೆ, ಡಿವೈಎಸ್.ಪಿ. ಶರಣಬಸವೇಶ್ವರ ಬಿ ಮಾರ್ಗದರ್ಶನದಲ್ಲಿ ನಲುವಾಗಲು ಮಂಜುನಾಥ ಸಿಪಿಐ ನೇತೃತ್ವದಲ್ಲಿ ದಾವಣಗೆರೆ ದಕ್ಷಿಣ ಮತ್ತು ಉತ್ತರ ಸಂಚಾರ ಠಾಣೆಯ ಪಿಎಸ್.ಐಗಳಾದ ಶೈಲಜಾ, ಕೆ.ಎನ್. ಮಹಾದೇವ ಭತ್ತೆ, ಜಯಶೀಲಾ ಹಾಗೂ ಎ.ಎಸ್.ಐ ಮುತ್ತು ಸಿಬ್ಬಂದಿಗಳೊಂದಿಗೆ ಗುಂಡಿಸರ್ಕಲ್,ಅಂಬೇಡ್ಕರ್ ಸರ್ಕಲ್, ಅರುಣ ಸರ್ಕಲ್, ನಿಜಲಿಂಗಪ್ಪ ಸರ್ಕಲ್, ಸಮುಧಾಯ ಭವನ ಸರ್ಕಲ್ ಶಾಮನೂರು ರಸ್ತೆ, ಹದಡಿ ರಸ್ತೆ, ಎಂ.ಜಿ. ಸರ್ಕಲ್, ಆವರಗೆರೆ, ಸಂಗೊಳ್ಳಿ ರಾಯಣ್ಣ ಸರ್ಕಲ್, ಆರ್.ಎಂ.ಸಿ ಲಿಂಕ್ ರಸ್ತೆ, ಕೆ.ಆರ್. ರಸ್ತೆ, ಹೊಂಡದ ಸರ್ಕಲ್ , ಅಕ್ತರ್ ರಜಾ ಸರ್ಕಲ್, ಆರ್.ಟಿ.ಓ ಸರ್ಕಲ್ , ಬೇತೂರು ರಸ್ತೆ ಗಳಲ್ಲಿ ವಿಶೇಷ ಕಾರ್ಯಚರಣೆ ನಡೆಸಲಾಯಿತು.‌

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪಿಬಿ ರಸ್ತೆಯಲ್ಲಿ ಮುಸ್ಲಿಂ ಬಾಂಧವರ ರಂಜಾನ್ ಆಚರಣೆ

ಪವಿತ್ರ ರಂಜಾನ್ (ಈದ್ ಉಲ್ ಫಿತುರ್) ಆಚರಣೆ ಹಿನ್ನೆಲೆಯಲ್ಲಿ ದಾವಣಗೆರೆ ನಗರದ...

ದಾವಣಗೆರೆ | ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಮರ್ಥ್ ಶಾಮನೂರು: ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್...

ದಾವಣಗೆರೆ | ದಕ್ಷಿಣ ಕ್ಷೇತ್ರ ಉಪಚುನಾವಣೆ; ಎಸ್ ಟಿ ಮೋರ್ಚಾದ ಶ್ರೀನಿವಾಸ್ ಗೆ ಒಲಿದ ಬಿಜೆಪಿ ಟಿಕೆಟ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮ...

ದಾವಣಗೆರೆ | ಒಳಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯಕ್ಕೆ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ಹೋರಾಟ

ಸರ್ವೋಚ್ಛ ನ್ಯಾಯಾಲಯದ ಸಂವಿಧಾನಿಕ ಪೀಠವು ಒಳ ಮೀಸಲಾತಿ ವರ್ಗೀಕರಣ ಹಾಗೂ ಜಾರಿಯ...