ದಾವಣಗೆರೆ | ಏ.15ರಿಂದ ಮಹಿಳಾ ಆಯೋಗದ ಅಧ್ಯಕ್ಷೆ ಭೇಟಿ; ಮಹಿಳೆಯರ ಸುರಕ್ಷತೆ ಕುರಿತ ಪರಿಶೀಲನೆ

Date:

ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಮಂಗಳವಾರ ಏಪ್ರಿಲ್ 15 ರಿಂದ 17ರವರೆಗೆ ಮೂರು ದಿನಗಳ ಕಾಲ ದಾವಣಗೆರೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ಸೇರಿದಂತೆ ಜಿಲ್ಲೆಯ ಹಲವು ಭೇಟಿಯ ಕಾರ್ಯಕ್ರಮಗಳನ್ನು ನಿಗದಿಗೊಳಿಸಿದ್ದು, ಮಹಿಳೆಯರ ಸುರಕ್ಷತೆ ಕುರಿತ ಪರಿಶೀಲನೆ ನಡೆಸಲಿದ್ದಾರೆ.

ಏಪ್ರಿಲ್ 15ರ ಬೆಳಿಗ್ಗೆ ಜಯದೇವ ವೃತ್ತದ ಬಳಿ ದಲಿತ ಸಂರಕ್ಷಣಾ ಸಮಿತಿ ಆಯೋಜಿಸಿರುವ ಅಂಬೇಡ್ಕರ್ ಜಯಂತಿ ಉತ್ಸವವನ್ನು ಉದ್ಘಾಟಿಸಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

1001836917
Oplus_0

ಕುಂದು ಕೊರತೆಗೆ ಸಂಬಂಧಪಟ್ಟಂತೆ ಭೇಟಿ ನೀಡುವ ಕಾರ್ಯಕ್ರಮವಿದ್ದು, ಮೊದಲು ಮಧ್ಯಾಹ್ನ 1 ಗಂಟೆಗೆ ಆವರಗೊಳ್ಳ ಗ್ರಾಮದ ಕೇಂದ್ರೀಯ ವಿಶ್ವವಿದ್ಯಾನಿಲಯದ ಹಿಂಭಾಗದ ರಾಮಕೃಷ್ಣ ನಗರದ ಸ್ಥಳಾಂತರಗೊಂಡ ನಿವಾಸಿಗಳ ಭೇಟಿ ಮಾಡಲಿದ್ದಾರೆ. ನಂತರ ಸಂಜೆ 5ಕ್ಕೆ ದಾವಣಗೆರೆ ವಿಶ್ವವಿದ್ಯಾನಿಲಯದ ಮಹಿಳಾ ವಸತಿ ನಿಲಯಕ್ಕೆ ಭೇಟಿ ನೀಡಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಅಂಬೇಡ್ಕರ್ ಭವನದ ನಿರ್ಮಾಣಕ್ಕೆ ಶಂಕುಸ್ಥಾಪನೆ, ದಲಿತ ಹೋರಾಟಗಾರರ ಸಂತಸ.

ಏಪ್ರಿಲ್ 16ರ ಬೆಳಿಗ್ಗೆ ಜಗಳೂರು ಸರ್ಕಾರಿ ತಾಲೂಕು ಆಸ್ಪತ್ರೆ, ತಾಲೂಕು ಕಚೇರಿ ಮತ್ತು ಜಗಳೂರಿನ ಗೊಲ್ಲರಹಟ್ಟಿಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ ದಾವಣಗೆರೆಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಹಿಳಾ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಹಿಳೆಯರ ಕುಂದುಕೊರತೆಗೆ ಸಂಬಂಧಪಟ್ಟಂತೆ ಕಾರ್ಯಕ್ರಮಗಳು, ವಿದ್ಯಾರ್ಥಿನಿಯರ, ಮಹಿಳೆಯರ ಸುರಕ್ಷತೆಯ ಬಗ್ಗೆ ಜಿಲ್ಲಾಡಳಿತ ತೆಗೆದುಕೊಂಡ ಕ್ರಮಗಳ ಬಗ್ಗೆ ಅಂಕಿ ಅಂಶಗಳು, ಮಾಹಿತಿ ಮತ್ತು ಚರ್ಚೆ ನಡೆಸಲಿದ್ದಾರೆ. ಸಂಜೆ ದಾವಣಗೆರೆಯ ಪೋಸ್ಟ್ ಮೆಟ್ರಿಕ್ ಬಾಲಕಿಯರ ವಸತಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

1001836931
ಕೃಪೆ;

ಏಪ್ರಿಲ್ 17ರ ಬೆಳಿಗ್ಗೆ ದಾವಣಗೆರೆ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ನಂತರ ಬೆಂಗಳೂರು ಕಚೇರಿಗೆ ಹಿಂತಿರುಗಲಿದ್ದಾರೆ ಎಂದು ರಾಜ್ಯ ಮಹಿಳಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ. ಭೇಟಿಯ ವೇಳೆ ಸಂಬಂಧಪಟ್ಟ ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿರುತ್ತಾರೆ.

ಪ್ರವಾಸ ಕಾರ್ಯಕ್ರಮದ ವೇಳೆ ದಾವಣಗೆರೆಯಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿರುವ ಕೆಲವು ಸ್ಥಳಗಳಿಗೆ ಭೇಟಿ ನೀಡಲು ಈದಿನ.ಕಾಂ ಮನವಿ ಮಾಡಿತ್ತು. ಅದರಂತೆ ಮನವಿಗೆ ಸ್ಪಂದಿಸಿದ ಮಹಿಳಾ ಆಯೋಗದ ಅಧ್ಯಕ್ಷರು ಮನವಿ ಮಾಡಿ ಸೂಚಿಸಿದ್ದ ಸ್ಥಳಗಳಿಗೆ ಭೇಟಿಯ ಕಾರ್ಯಕ್ರಮ ಹಮ್ಮಿಕೊಂಡಿರುವುದಕ್ಕೆ ಈದಿನ ಡಾಟ್ ಕಾಮ್ ಅಭಿನಂದನೆ ತಿಳಿಸುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ ಮಣ್ಣಿನ ಹೆಣ್ಣು ದನಿಗಳು | ಸಮಾಜ ಸ್ಪಂದನಶೀಲೆ- ಸೌಭಾಗ್ಯ ಸಿ. 

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಮಹಿಳೆಯರ ವಿರುದ್ಧ ಸೈಬರ್ ಕ್ರೈಮ್: ಐದು ವರ್ಷಗಳಲ್ಲಿ ದುಪ್ಪಟ್ಟು

ಮಹಿಳೆಯರ ವಿರುದ್ಧದ ಸೈಬರ್ ಕ್ರೈಮ್ ಪ್ರಕರಣಗಳು ಕಳೆದ ಐದು ವರ್ಷಗಳಲ್ಲಿ ದುಪಟ್ಟಾಗಿದೆ....

ದಾವಣಗೆರೆ | ಶಾಮನೂರು ಕುಟುಂಬಕ್ಕೆ ಟಿಕೆಟ್; ಕಾಂಗ್ರೆಸ್ ವಿರುದ್ಧ ಮುಸ್ಲಿಮರ ಆಕ್ರೋಶ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಶಾಮನೂರು ಶಿವಶಂಕರಪ್ಪನವರ...

ಅಮಾನತುಗೊಂಡಿದ್ದ ಇನ್‌ಸ್ಪೆಕ್ಟರ್ ಸಂದೇಶ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

ಈ ಹಿಂದೆ ಇಬ್ಬರು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಅಮಾನತುಗೊಂಡಿದ್ದ...