ಜನವರಿ 20ರೊಳಗೆ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಘೋಷಿಸಿ: ಬಸವ ಜಯಮೃತ್ಯುಂಜಯ ಸ್ವಾಮೀಜಿ

Date:

2024ರ ಜನವರಿ 20ರೊಳಗೆ ವೀರಶೈವ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಲು ಎಲ್ಲ ಪ್ರಕ್ರಿಯೆ ಪೂರ್ಣಗೊಳಿಸಿ ಘೋಷಿಸಬೇಕು. ಇಲ್ಲದಿದ್ದರೆ ಹೋರಾಟ ಮುಂದುವರಿಯುತ್ತದೆ ಎಂದು ಕೂಡಲಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ

ದಾವಣಗೆರೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು. “ಈ ಹಿಂದೆ ಬೆಳಗಾವಿ ಸುವರ್ಣಸೌಧ ಮುತ್ತಿಗೆ ಹೋರಾಟ ಆಯೋಜಿಸಲಾಗಿತ್ತು. ಆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಂದು ವಾರದಲ್ಲಿ ಕಾನೂನು ತಜ್ಞರ ಸಭೆ ಕರೆದು ತೀರ್ಮಾನ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು. ಮುಖ್ಯಮಂತ್ರಿಯವರ ಭರವಸೆ ಹಿನ್ನೆಲೆಯಲ್ಲಿ ಮುತ್ತಿಗೆ ಹೋರಾಟಕ್ಕೆ ಅಲ್ಪವಿರಾಮ ಹಾಕಲಾಗಿತ್ತು. ಆಗ, ಒಂದು ವಾರ ಅಲ್ಲ. ಜನವರಿ 20ವರೆಗೆ ಕಾಲಾವಕಾಶ ತೆಗೆದುಕೊಂಡು ಕ್ರಮ ವಹಿಸಬೇಕೆಂದು ಮುಖ್ಯಮಂತ್ರಿಯವರಿಗೆ ಕೋರಲಾಗಿತ್ತು. ಆದರೆ, ಮುಖ್ಯಮಂತ್ರಿಯವರು ಕೊಟ್ಟ ಒಂದು ವಾರದ ಕಾಲಾವಧಿ ಮುಗಿದರೂ ಇನ್ನೂ ಕಾನೂನು ತಜ್ಞರ,
ಸಮುದಾಯದ ಪ್ರಮುಖರ ಸಭೆ ಕರೆದಿಲ್ಲ” ಎಂದು ಕಿಡಿಕಾರಿದ್ದಾರೆ.

“ಮುಖ್ಯಮಂತ್ರಿಯವರ ಮಾತಿಗೆ ಗೌರವ ಕೊಟ್ಟು ಮುತ್ತಿಗೆ ಹೋರಾಟದಿಂದ ಹಿಂದೆ ಸರಿದೆವು. ಈಗ ಕೊಟ್ಟ ಮಾತಿನಂತೆ ಮುಖ್ಯಮಂತ್ರಿ ಅವರು ಜನವರಿ 20ರೊಳಗೆ ಪಂಚಮಸಾಲಿ 2ಎ ಮೀಸಲಾತಿ ವಿಚಾರವಾಗಿ ಎಲ್ಲ ಪ್ರಕ್ರಿಯೆ ಪೂರ್ಣಗೊಳಿಸಿ ನಿರ್ಧಾರ ಪ್ರಕಟಿಸಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವೀರಶೈವ ಲಿಂಗಾಯತ ಮಹಾಸಭಾದ ಮಹಾಅಧಿವೇಶನದಲ್ಲಿ ಉಪಜಾತಿ ಕಾಲಂನಲ್ಲಿ ಒಳಪಂಗಡಗಳ ಹೆಸರು ಬರೆಸಬಾರದು ಎಂಬ ನಿರ್ಣಯ ಕೈಗೊಂಡಿದ್ದಾರೆ. ಇದರಿಂದ ಸಮಾಜದಲ್ಲಿ ತಪ್ಪು ಸಂದೇಶ ಹೋಗಿದೆ. ಗೊಂದಲವೂ ಮೂಡಿದೆ. ಸಮುದಾಯಗಳು ತಮ್ಮ ಒಳಪಂಡಗಳ ಹೆಸರು ಬರೆಸುವುದು ಅವರ ಅಸ್ಮಿತೆ ಹಾಗೂ ಅವರ ಹಕ್ಕು. ಮಹಾ ಅಧಿವೇಶನದ ವೇದಿಕೆಯಲ್ಲಿದ್ದ ಬಹುತೇಕ ಸ್ವಾಮೀಜಿಗಳೆಲ್ಲರೂ ಒಳಪಂಗಡಗಳ ಹೆಸರು ಬರೆಸಲು ಹೇಳಿದವರೇ ಆಗಿದ್ದಾರೆ. ನಮ್ಮ ಯಾವುದೇ ನಿರ್ಧಾರಗಳು ಸಮುದಾಯದ ಯಾವುದೇ ಒಳಪಂಗಡಗಳ ಸಾಮಾಜಿಕ ನ್ಯಾಯಕ್ಕೆ ತೊಡಕಾಗಬಾರದು. ಆದ್ದರಿಂದ ಮಹಾಸಭಾ ಈ ನಿರ್ಣಯದ ಬಗ್ಗೆ ಪುನರ್ ಪರಿಶೀಲಿಸಬೇಕು” ಎಂದು ಮನವಿ ಮಾಡಿದರು.

“ಹಿಂದಿನ ಸರ್ಕಾರ ಲಿಂಗಾಯತ ಎಲ್ಲ ಒಳಪಂಗಡಗಳನ್ನು ಸೇರಿಸಿ 2ಡಿ ಮಾಡಿತ್ತು. ಆ ವಿಚಾರ ನ್ಯಾಯಾಲಯದ ಮೆಟ್ಟಿಲೇರಿದೆ. ಆದ್ದರಿಂದ ನಮಗೆ 2ಡಿ ವಿಚಾರ ಬೇಡ. ಪಂಚಮಸಾಲಿ ಸಮುದಾಯದವರಿಗೆ 2ಎ ಮೀಸಲಾತಿ ಕೊಡಿಸುವುದೊಂದೇ ನಮ್ಮ ಗುರಿ” ಎಂದು ಹೇಳಿದರು.

ಈ ವೇಳೆ, ಲಿಂಗಾಯತ ಪಂಚಮಸಾಲಿ ಮೀಸಲಾತಿ ಹೋರಾಟ ಸಮಿತಿಯ ಮಾಜಿ ಶಾಸಕ ಎಚ್.ಎಸ್. ಶಿವಶಂಕರ, ಪರಮೇಶ್ವರ ಗೌಡ್ರು, ವಕೀಲ ಯೋಗೀಶ್, ಅಶೋಕ ಗೋಪನಾಳ, ಮಂಜುನಾಥ ಪೈಲ್ವಾನ್ ಮತ್ತಿತರರು ಗೋಷ್ಠಿಯಲ್ಲಿ ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...