ದಾವಣಗೆರೆ | ಎಲ್ಲ ನಾಮಫಲಕಗಳಲ್ಲಿ ಕನ್ನಡ ಬಳಕೆಗೆ ಸಕರವೇ ಆಗ್ರಹ

Date:

ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಡಿಯಲ್ಲಿ ಬರುವ ಎಲ್ಲ ವಾಣಿಜ್ಯ ಮಳಿಗೆಗಳ ಮುಂಭಾಗದಲ್ಲಿ ಅಳವಡಿಸಿರುವ ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಇರಬೇಕು ಎಂದು ಸಮಗ್ರ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ದಾವಣಗೆರೆಯ ಬಿಪಿ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ ಸಂಘಟನೆಯ ಕಾರ್ಯಕರ್ತರು, ” ಕನ್ನಡೇತರ ಭಾಷೆಗಳ ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡದಲ್ಲೂ ಹೆಸರುಗಳನ್ನು ಬರೆಯಬೇಕು” ಎಂದು ಆಗ್ರಹಿಸಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ವಿ.ಅವಿನಾಶ್, “ರಾಜ್ಯ ಸರ್ಕಾರವು ಕನ್ನಡವನ್ನು ಆಡಳಿತ ಭಾಷೆಯೆಂದು 1953ರಲ್ಲಿ ಆದೇಶ ಹೊರಡಿಸಿತ್ತು. ರಾಜ್ಯದಲ್ಲಿ ಕನ್ನಡ ಭಾಷೆ ಸಾರ್ವಭೌಮತೆ ಮತ್ತು ರಾಜ್ಯ ಸರ್ಕಾರದ ಆಡಳಿತದಲ್ಲಿ ಕನ್ನಡ ಭಾಷೆಯನ್ನು ಅಗ್ರಸ್ಥಾನ ಕೊಟ್ಟು ರಾಜ್ಯ ಸರ್ಕಾರ ಕನ್ನಡ ಭಾಷೆ ಬಳಕೆಯಾಗಬೇಕೆಂದು ಅನುಷ್ಠಾನಗೊಳಿಸಿ ಆದೇಶ ಹೊರಡಿಸಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕನ್ನಡಿಗರ ಹಿತಾಸಕ್ತಿಗೆ ಕಾನೂನನ್ವಯ ಕನ್ನಡ ಭಾಷೆಯನ್ನು ಸಕ್ರಿಯಗೊಳಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರವು 2013ರ ಜುಲೈನಲ್ಲಿ ಎಲ್ಲ ನಾಮಫಲಕಗಳಲ್ಲಿ ಕಡ್ಡಾಯವಾಗಿ ಶೇ.60ರಷ್ಟು ಕನ್ನಡ ಇರಬೇಕು ಎಂದು ಆದೇಶಿಸಿತ್ತು. ಪ್ರಾಧಿಕಾರದ ತೀರ್ಮಾನವನ್ನು ಸರ್ಕಾರ ಅನುಮೋದಿಸಿದೆ. ಆದರೂ, ಆಮಫಲಕಗಳಲ್ಲಿ ಕನ್ನಡ ಬಳಕೆ ಸರಿಯಾಗಿ ಆಗುತ್ತಿಲ್ಲ” ಎಂದು ಕಿಡಿಕಾರಿದ್ದಾರೆ.

“ಸರ್ಕಾರದ ಆದೇಶಕ್ಕೆ ವಿರುದ್ಧವಾಗಿ ದಾವಣಗೆರೆ ಮಹಾನಗರ ಪಾಲಿಕೆ ಅಡಿಯಲ್ಲಿರುವ ವಾಣಿಜ್ಯ ಮಳಿಗೆಗಳು ಮತ್ತು ಅಂಗಡಿ ಮುಂಗಟ್ಟುಗಳಲ್ಲಿ ಕನ್ನಡೇತರ ಭಾಷೆಗಳ ನಾಮಫಲಕಗಳು ಹೆಚ್ಚಾಗಿ ಕಂಡುಬರುತ್ತವೆ. ಹೀಗಾಗಿ, ಪಾಲಿಕೆ ಆಯುಕ್ತರು ಈ ಕೂಡಲೇ ಕನ್ನಡೇತರ ಭಾಷೆಯ ನಾಮಫಲಕ ಹೊಂದಿರುವ ಅಂಗಡಿ ಮುಂಗಟ್ಟುಗಳ ಪರವಾನಿಗೆಯನ್ನು ರದ್ದುಪಡಿಸಬೇಕು. ನೋಟೀಸ್ ಜಾರಿ ಮಾಡಿ ಕನ್ನಡೇತರ ಭಾಷೆ ಒಳಗೊಂಡಿರುವ ನಾಮ ಫಲಕಗಳನ್ನು ತೆರವುಗೊಳಸಬೇಕು” ಎಂದು ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...