ಸರ್ಕಾರದ ಯೋಜನೆಗಳಡಿ ಸಾಲ ಮಂಜೂರಾತಿಗೆ ಸಿಬಿಲ್ ಸ್ಕೋರ್ ಪರಿಗಣಿಸಬೇಡಿ: ಕೇಂದ್ರ ಸಚಿವ ನಾರಾಯಣಸ್ವಾಮಿ

Date:

ಸರ್ಕಾರದ ವಿವಿಧ ಯೋಜನೆಗಳಡಿ ಸಾಲ ಮಂಜೂರಾತಿಗೆ ಬ್ಯಾಂಕುಗಳು ಸಿಬಿಲ್ ಸ್ಕೋರ್ ಪರಿಗಣಿಸಬಾರದು. ಹಾಲು ಉತ್ಪಾದಕ ಸಂಘಗಳ ಸಹಯೋಗದಲ್ಲಿ ಹಸು ಸಾಕಾಣಿಕೆಗೆ, ಸಣ್ಣ ಘಟಕಗಳ ಆಧಾರದಲ್ಲಿ ಪಾರಂಪರಿಕವಾಗಿ ಕುರಿ ಸಾಕಾಣಿಕೆ ಮಾಡಿಕೊಂಡು ಬಂದ ಸಮುದಾಯಗಳಿಗೆ ರಿಯಾಯಿತಿ ಬಡ್ಡಿದರದಲ್ಲಿ ಸಾಲ ಒದಗಿಸಬೇಕು ಎಂದು ಕೇಂದ್ರ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಇಲಾಖೆ ರಾಜ್ಯ ಖಾತೆ ಸಚಿವ ಎ.ನಾರಾಯಣಸ್ವಾಮಿ ಹೇಳಿದ್ದಾರೆ.

ದಾವಣಗೆರೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ಅಭಿವೃದ್ಧಿ ನಿಗಮಗಳ ಅನುದಾನದಡಿ ಸಾಲ ಸೌಲಭ್ಯ ಯೋಜನೆಗಳ ಅನುಷ್ಠಾನದ ಕುರಿತು ಚಿತ್ರದುರ್ಗ, ತುಮಕೂರು, ದಾವಣಗೆರೆ ಜಿಲ್ಲೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ಬ್ಯಾಂಕ್ ಅಧಿಕಾರಿಗಳೊಂದಿಗೆ ಸಬೆ ನಡೆಸಿ, ಅವರು ಮಾತನಾಡಿದರು.

“ಸಾಮಾಜಿಕವಾಗಿ ಹಾಗೂ ಹಿಂದುಳಿದವರು ಸ್ವಂತ ಉದ್ಯೋಗ ಕೈಗೊಂಡು ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗುವಂತೆ, ಕೇಂದ್ರ ಸರ್ಕಾರ ಹಲವು ನಿಗಮಗಳನ್ನು ಸ್ಥಾಪಿಸಿ, ಬ್ಯಾಂಕುಗಳ ಮೂಲಕ ಫಲಾನುಭವಿಗಳಿಗೆ ರಿಯಾಯಿತಿ ಬಡ್ಡಿದರದಲ್ಲಿ ಸಾಲ ಸೌಲಭ್ಯ ನೀಡುವ ಯೋಜನೆ ಜಾರಿಗೊಳಿಸಿದೆ. ಆದರೆ, ಬ್ಯಾಂಕ್‌ಗಳು ಈ ಸೌಲಭ್ಯದ ಕುರಿತು ಸಾರ್ವಜನಿಕರಿಗೆ ಯಾವುದೇ ಮಾಹಿತಿ ನೀಡುತ್ತಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಿಗಮಗಳು ಬ್ಯಾಂಕ್‌ಗಳಲ್ಲಿ ಠೇವಣಿ ಇರಿಸಿದ ಹಣದ ಬಳಕೆಯೇ ಆಗಿಲ್ಲ. ಸಿಬಿಲ್ ಸ್ಕೋರ್, ಸಾಲ ಮರುಪಾವತಿ ಅರ್ಹತೆ ಮುಂತಾದ ನೆಪಗಳನ್ನು ಹೇಳಿ ಸಾಲ ಸೌಲಭ್ಯಕ್ಕೆ ಸಲ್ಲಿದ ಅರ್ಜಿಯನ್ನು ಬ್ಯಾಂಕುಗಳಿಂದ ತಿರಸ್ಕರಿಸಲಾಗುತ್ತಿದೆ ಎಂಬ ದೂರುಗಳು ಕೇಳಿಬರುತ್ತಿವೆ. ಕೇಂದ್ರ ಸರ್ಕಾರವು ಸಾಮಾಜಿಕವಾಗಿ ಹಿಂದುಳಿದ ವ್ಯಕ್ತಿಗಳು, ಬಡವರು ಉದ್ಯೋಗ ಕೈಗೊಂಡು ಅಭಿವೃದ್ಧಿ ಹೊಂದಲು ಸೌಲಭ್ಯ ನೀಡುವಾಗ, ಇದಕ್ಕೆ ಬ್ಯಾಂಕುಗಳು ಸ್ಕೋರ್ ಹಾಗೂ ಆಸ್ತಿ ಭದ್ರತೆಯನ್ನು ಬಯಸುವುದು ಎಷ್ಟು ಸರಿ” ಎಂದು ಕಡಿಕಾರಿದರು.

“ಸಿಬಿಲ್‌ ಸ್ಕೋರ್‌ಅನ್ನು ಮಾನದಂಡ ಮಾಡಿಕೊಳ್ಳುವುದು ಸರ್ಕಾರ ಜಾರಿ ಮಾಡಿರುವ ಯೋಜನೆಗಳ ಆಶಯಕ್ಕೆ ವಿರುದ್ಧವಾಗಿದೆ. ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯ ಐದು ನಿಗಮಗಳ ಯೋಜನೆಯಡಿ ಬ್ಯಾಂಕುಗಳು ಇದವರೆಗೆ ಎಷ್ಟುಜನರಿಗೆ ಸಾಲ ಸೌಲಭ್ಯ ನೀಡಿವೆ” ಎಂದು ಸಚಿವ ಎ.ನಾರಾಯಣಸ್ವಾಮಿ ಬ್ಯಾಂಕ್ ಅಧಿಕಾರಿಗಳನ್ನು ಪ್ರಶ್ನಿಸಿದರು.

“ಕೇಂದ್ರ ಸರ್ಕಾರ ಪ್ರತಿ ವರ್ಷವೂ ಸೌಲಭ್ಯ ಯೋಜನೆಗೆ ಅನುದಾನವನ್ನು ಮೀಸಲಿಡುತ್ತದೆ. ಆದರೆ, ಕಳೆದ ವರ್ಷಗಳಲ್ಲಿ ಬ್ಯಾಂಕುಗಳಲ್ಲಿ ಸರ್ಕಾರದಿಂದ ಇರಿಸಿದ ಠೇವಣ ಹಣವೇ ಬಳಕೆಯಾಗಿಲ್ಲ. ಇದು ವಿರ್ಪಯಾಸದ ಸಂಗತಿಯಾಗಿದೆ. ಬ್ಯಾಂಕುಗಳು ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ನಿರ್ಲಕ್ಷ್ಯ ಧೋರಣೆ ತೋರಿಸುತ್ತಿವೆ. ಇದು ಸಲ್ಲದು, ಯೋಜನೆಗಳನ್ನು ಜನರಿಗೆ ಬ್ಯಾಂಕುಗಳು ತಲುಪಿಸದಿದ್ದರೆ, ನಿಗಮಗಳಿಂದ ಇರಿಸಿದ ಠೇವಣಿ ಹಣವನ್ನು ಹಿಂಪಡೆದು ಬೇರೆ ಮಾರ್ಗವಾಗಿ ಜನರಿಗೆ ತಲುಪಿಸುವ ಬಗ್ಗೆ ಚಿಂತಿಸಬೇಕಾಗುವುದು” ಎಂದರು.

“ನಾಯಕರು, ಬೋವಿ, ಗೊಲ್ಲರು ಹಾಗೂ ಕುರುಬ ಸಮುದಾಯಗಳಿಗೆ ಸೇರಿದಂತೆ ಹಲವು ಸಮುದಾಯಗಳು ಸಾಂಪ್ರದಾಯಕವಾಗಿ ಕುರಿ ಸಾಕಾಣಿಕೆ ಮಾಡಿಕೊಂಡು ಬರುತ್ತಿದ್ದಾರೆ. ಹೊಸದಾಗಿ ಕುರಿ ಮೇಕೆ ಸಾಕಾಣಿಕೆ ಮಾಡಲು ಅಥವಾ 50 ಇಚ್ಛಿಸುವವರಿಗೆ 25 ಕುರಿಗಳ ಘಟಕಕ್ಕೆ ಕುರಿ, ಮೇಕೆ ಸಾಕಾಣಿಕೆ ಸಾಲವನ್ನು ಮಂಜೂರು ಮಾಡಬೇಕು.ಈ ಸಾಲಗಳನ್ನು ಮಂಜೂರು ಮಾಡುವಾಗ ಅಗತ್ಯ ದಾಖಲೆಗಳನ್ನು ಹೊರತುಪಡಿಸಿ, ಅನಗತ್ಯವಾಗಿ ಹೆಚ್ಚಿನ ದಾಖಲೆಗಳನ್ನು ಕೇಳಬಾರದು. ಪ್ರತಿ ಬ್ಯಾಂಕ್ ಶಾಖೆಗಳಿಗೂ ಗುರಿ ನಿಗದಿಪಡಿಸಿ, ಫಲಾನುಭವಿಗಳನ್ನು ಆಯ್ಕೆ ಮಾಡಿ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು” ಎಂದರು.

ಸಭೆಯಲ್ಲಿ ದಾವಣಗೆರೆ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್, ತುಮಕೂರು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ, ತುಮಕೂರು ಜಿ.ಪಂ. ಸಿಇಓ ಪ್ರಭು.ಜಿ, ದಾವಣಗೆರೆ ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್ ಪರಿಶಿಷ್ಟ ಜಾತಿ ರಾಷ್ಟ್ರೀಯ ಹಣಕಾಸು ಹಾಗೂ ಅಭಿವೃದ್ಧಿ ನಿಗಮದ ರಂಜನೀಶ್ ಕುಮಾರ್ ಜೆನ್ಹಾ, ರಾಜ್ಯ ಮಟ್ಟದ ಬ್ಯಾಂಕ‌ ಸಮಿತಿ ಪ್ರಧಾನ ವ್ಯವಸ್ಥಾಪಕ ಪ್ರವೀಣ್ ಕುಮಾರ್, ಕರ್ನಾಟಕ ಗ್ರಾಮೀಣ ಬ್ಯಾಂಕ್ ಪ್ರಧಾನ ವ್ಯವಸ್ಥಾಪಕ ಜಿ.ಆರ್.ದಿಲ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಬ್ಯಾಂಕುಗಳು ಪ್ರಧಾನ ವ್ಯವಸ್ಥಾಪಕರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...