ದಾವಣಗೆರೆ | ಅಂಬೇಡ್ಕರರ ಸಂವಿಧಾನದಿಂದ ಶೂದ್ರರು ಮಹಿಳೆಯರಿಗೆ ಸ್ವಾತಂತ್ರ್ಯ: ಡಾ. ನಾಗಲಕ್ಷ್ಮಿ ಚೌಧರಿ

Date:

“ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದ ಕಾರಣದಿಂದ ದೇಶದ ಶೂದ್ರರ ಜೊತೆಗೆ ಎಲ್ಲಾ ಸಮುದಾಯದ ಮಹಿಳೆಯರಿಗೂ ನಿಜವಾದ ಸ್ವಾತಂತ್ರ್ಯ ಸಿಕ್ಕಂತಾಗಿದೆ” ಎಂದು ದಾವಣಗೆರೆ ಜಿಲ್ಲೆ ಹರಿಹರ ನಗರದಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಅಭಿಪ್ರಾಯಪಟ್ಟರು.

ದಾವಣಗೆರೆ ಜಿಲ್ಲೆ ಹರಿಹರ ನಗರದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ) ಹರಿಹರ ಘಟಕ ಹಾಗೂ ಸ್ಪೂರ್ತಿ ಛಾರಿಟೇಬಲ್ ಟ್ರಸ್ಟ್ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಸದ್ಭಾವನ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು “ಅಮಾನವೀಯವಾದ ವೈದಿಕ ಪದ್ಧತಿಯಿಂದಾಗಿ ಶೂದ್ರರ ಜೊತೆಗೆ ಮಹಿಳಾ ಸಮುದಾಯದ ಶೋಷಣೆಯೂ ಎಗ್ಗಿಲ್ಲದೆ ನಡೆದಿದೆ. ವೈದಿಕ ಪದ್ಧತಿಯಿಂದಾಗಿ ಈ ಹಿಂದೆ ಶೂದ್ರರು ಗ್ರಾಮದೊಳಗೆ ಪ್ರವೇಶ ಮಾಡುವಾಗ ಹಿಂದೆ ಪೊರಕೆ ಕಟ್ಟಿಕೊಳ್ಳುವುದು, ಶಿಕ್ಷಣ, ಆರೋಗ್ಯ, ಧರ್ಮಾಚರಣೆಯಿಂದ ದೂರ ಇಡಲಾಗಿತ್ತು. ಎಲ್ಲಾ ಸಮುದಾಯದ ಮಹಿಳೆಯರನ್ನೂ ಕೂಡ ವೈದಿಕ ಪದ್ಧತಿ ಗುಲಾಮಗಿರಿಗೆ ತಳ್ಳಿ ಕೀಳಾಗಿ ಕಾಣುತ್ತಿತ್ತು” ಎಂದು ವಿಷಾದ ವ್ಯಕ್ತಪಡಿಸಿದರು.

“ಸಂವಿಧಾನದಲ್ಲಿ ಮಹಿಳೆಯರಿಗೆ ಸಮಾನ ಅವಕಾಶ ಕಲ್ಪಿಸಿರುವದರಿಂದಲೆ ಇಂದು ಮಹಿಳೆ ಜನಪ್ರತಿನಿಧಿ, ಸಚಿವೆ, ರಾಷ್ಟ್ರಪತಿ ಇತರೆ ಸಾಂವಿಧಾನಿಕ ಹುದ್ದೆಗಳನ್ನು ಪಡೆಯಲು ಸಾಧ್ಯವಾಗಿದೆ ಎಂಬುದನ್ನು ಮರೆಯಬಾರದು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶಾಲಾ ಶೌಚಾಲಯದಲ್ಲಿ ನೀರು ಬಾರದಿದ್ದರೆ ವಿದ್ಯಾರ್ಥಿಗಳು ಮೊದಲು ಮುಖ್ಯ ಶಿಕ್ಷಕರಿಗೆ, ನಂತರ ಬಿಇಒ ಅವರಿಗೆ, ಅಲ್ಲೂ ಸಮಸ್ಯೆ ಬಗೆಹರಿಯದಿದ್ದರೆ ಜಿಲ್ಲಾಧಿಕಾರಿ ಅವರ ಗಮನಕ್ಕೆ ತರಬೇಕು. ಮಹಿಳೆಯರು ಸರ್ಕಾರಿ ಇಲಾಖೆಗಳ ಅಧಿಕಾರಿಗಳ ಮೊಬೈಲ್ ಸಂಖ್ಯೆ ಇಟ್ಟುಕೊಂಡು ಸಮಸ್ಯೆಗಳನ್ನು ಅವರ ಗಮನಕ್ಕೆ ತಂದು ಪರಿಹರಿಸಿಕೊಳ್ಳುವತ್ತ ಗಮನ ಹರಿಸಬೇಕು” ಎಂದು ಸಲಹೆ ನೀಡಿದರು.

1003357494

ಇನ್ ಸೈಟ್ಸ್ ಐಎಎಸ್ ಸಂಸ್ಥೆ ಸಂಸ್ಥಾಪಕ ಜಿ.ಬಿ.ವಿನಯ್ ಕುಮಾರ್ ಮಾತನಾಡಿ, “ಇನ್ ಸೈಟ್ಸ್ ಸಂಸ್ಥೆಯಲ್ಲಿ ತರಬೇತಿ ಪಡೆದ 1500 ಜನ ವಿದ್ಯಾರ್ಥಿಗಳು ದೇಶದ ವಿವಿದೆಡೆ ಐಎಎಸ್, ಐಪಿಎಸ್ ಅಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಬಡವರ ಮಕ್ಕಳು ಪ್ರತಿಭಾವಂತರಿದ್ದರೆ ಅವರಿಗೆ ಉಚಿತವಾಗಿ ತರಬೇತಿ ನೀಡಲಾಗುವುದು. ಬಿ.ಆರ್.ಅಂಬೇಡ್ಕರ್ ಅವರ ಸಿದ್ಧಾಂತದಂತೆ ಶಿಕ್ಷಣವನ್ನು ಪಸರಿಸುವ ಕೆಲಸ ಮಾಡಲಾಗುತ್ತಿದೆ” ಎಂದರು.

1003357492

ವಕೀಲೆ ಜಿ.ಎಚ್.ಭಾಗೀರಥಿ ಮಾತನಾಡಿ, “ಎಲ್ಲಾ ಧರ್ಮಿಯರಿಗೂ ಸಂವಿಧಾನದ ಪೀಠಿಕೆ ಮಂತ್ರ, ಪ್ರಾರ್ಥನೆಯಾಗಬೇಕು. ಮಹಿಳಾ ಆಯೋಗದ ಅಧ್ಯಕ್ಷರು ಕ್ರಿಯಾಶೀಲರಾಗಿ ಹಾಗೂ ನಿರ್ಭೀತಿಯಿಂದ ಮಾಡುತ್ತಿರುವ ಸೇವೆಯಿಂದ ರಾಜ್ಯದ ಮಹಿಳಾ ಸಮುದಾಯದಲ್ಲಿ ಆತ್ಮಸ್ಥೈರ್ಯ ಮೂಡಿದೆ ಎಂದರು.

1003357489

ಕದಸಂಸ ತಾಲ್ಲೂಕು ಸಂಚಾಲಕ ಪಿ.ಜೆ.ಮಹಾಂತೇಶ್ ಮಾತನಾಡಿ, ಪ್ರೊ.ಬಿ.ಕೃಷ್ಣಪ್ಪರವರು ಹುಟ್ಟಿರುವ ಮನೆಯನ್ನು ಸ್ಮಾರಕವಾಗಿಸಬೇಕು, ದಾವಣಗೆರೆ ವಿವಿಗೆ ಪ್ರೊ.ಬಿ.ಕೃಷ್ಣಪ್ಪರ ಹೆಸರು ಇಡಬೇಕು, ತಾಲ್ಲೂಕಿನ ಕಡ್ಲೆಗೊಂದಿ ಗ್ರಾಮದ ನಿರ್ವಸತಿಕರಿಗೆ ವಸತಿ ವ್ಯವಸ್ಥೆ ಕಲ್ಪಿಸಲು ಸರ್ಕಾರದ ಗಮನ ಬೆಳೆಯಬೇಕು” ಎಂದು ಅವರಿಗೆ ಮನವಿ ನೀಡಿದರು.

1003357493

ಕದಸಂಸ ಜಿಲ್ಲಾ ಸಂಚಾಲಕ ಕುಂದವಾಡ ಮಂಜುನಾಥ ಮಾತನಾಡಿ, “ಬಿ.ಆರ್.ಅಂಬೇಡ್ಕರ್ ರವರ ಚಿಂತನೆಯಿಂದ ಪ್ರೇರಣೆಗೊಂಡು ಹರಿಹರ ದಲಿತ ಚಳವಳಿಯ ತವರೂರು ಆಗಿ ಬೆಳೆಯಿತು. ದಲಿತರು, ಮಹಿಳೆಯರು ಸಂವಿಧಾನ ನೀಡಿರುವ ಹಕ್ಕು ಹಾಗೂ ಜವಾಬ್ದಾರಿಗಳನ್ನು ಅರಿಯಬೇಕು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ವಿಬಿಜಿ ರಾಮ್ ಜಿ ಮಸೂದೆ; ಪ್ರತಿಭಟನೆ ವೇಳೆ ಗ್ರಾಕೂಸ್ ಸದಸ್ಯರು ಜಿಲ್ಲಾಧಿಕಾರಿಗಳ ಮಧ್ಯೆ ವಾಗ್ವಾದ

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಜಿ.ಬಿ.ವಿನಯ್ ಕುಮಾರ್ ಸದ್ಭಾವನ ಪ್ರಶಸ್ತಿ ನೀಡಿದರು. ಜಿಪಂ ಮಾಜಿ ಅಧ್ಯಕ್ಷ ಎ.ಗೋವಿಂದರೆಡ್ಡಿ, ಅಕ್ಷಯ ಆಸ್ಪತ್ರೆ ಮುಖ್ಯಸ್ಥ ಡಾ.ವಿ.ಟಿ.ನಾಗರಾಜ್, ಬೊಂಗಾಳೆ ಆಸ್ಪತ್ರೆ ಮುಖ್ಯಸ್ಥ ಸಚಿನ್ ಬೊಂಗಾಳೆ, ಬಿಇಒ ಡಿ.ದುರುಗಪ್ಪ, ಭದ್ರಾವತಿ ನಿವೃತ್ತ ಪ್ರಾಚಾರ್ಯ ಶಿವಬಸಪ್ಪ, ಕದಸಂಸ ಶಿವಮೊಗ್ಗ ಜಿಲ್ಲಾ ಸಂಚಾಲಕ ಎಂ.ಏಳಕೋಟಿ, ಹೊನ್ನಾಳಿಯ ಚನ್ನಕೇಶವ, ಬುಳ್ಳಸಾಗರದ ಸಿದ್ಧರಾಮಣ್ಣ, ಸಿಡಿಪಿಒ ಪ್ರಿಯದರ್ಶಿನಿ, ಬಿ.ಮಗ್ದುಮ್, ಅಲೆಮಾರಿ ಸಮುದಾಯದ ಮುಖಂಡ ಸಣ್ಣ ಅಜ್ಜಯ್ಯ, ದುರುಗಪ್ಪ, ವಕೀಲ ವೀರೇಶ್, ಮಂಜುನಾಥ್ ಎಂ.ಎಸ್.ಕೊಕ್ಕನೂರು, ಕಡ್ಲೆಗೊಂದಿ ತಿಮ್ಮಣ್ಣ, ಚೌಡಪ್ಪ ಸಿ.ಭಾನುವಳ್ಳಿ, ಗದಿಗೆಪ್ಪ ವಾಸನ, ಸುರೇಶ್ ಬಿ. ಕೆಂಚನಹಳ್ಳಿ, ಧರ್ಮರಾಜ್ ಹಳ್ಳಿಹಾಳ್, ರಾಮಣ್ಣ ಹಿಂಡಸಘಟ್ಟ, ಹನುಮಂತ ಡಿ. ಎಳೆಹೊಳೆ, ಗುಡ್ಡದಹಳ್ಳಿ ಮಂಜಪ್ಪ ಸೇರಿದಂತೆ ಇತರರು ಹಾಜರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...