ದಾವಣಗೆರೆ | ಲಿಂಗಾಪುರ ರೈತ ಘಟಕದಿಂದ ರೈತ ದಿನಾಚರಣೆ ಸಂಭ್ರಮ ಬೈಕ್ ರ್ಯಾಲಿ

Date:

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಲಿಂಗಾಪುರ ಗ್ರಾಮ ಘಟಕದ ವತಿಯಿಂದ ಬೈಕ್ ರ್ಯಾಲಿ ನಡೆಸುವ ಮೂಲಕ ರೈತ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ರೈತ ದ್ವಜಾರೋಹಣ ನೆರವೇರಿಸಲಾಯಿತು. ನಂತರ ರೈತ ಗೀತೆಯo ಗಾಯನದ ಮೂಲಕ ರೈತರ ಶ್ರಮ, ತ್ಯಾಗ ಮತ್ತು ಸಮಾಜಕ್ಕೆ ಅವರ ಅಪಾರ ಕೊಡುಗೆಯನ್ನು ಸ್ಮರಿಸಲಾಯಿತು. ಇದೇ ವೇಳೆ ರೈತ ಸಂಘದ ಕಾರ್ಯಕರ್ತರಿಂದ, ರೈತರಿಂದ ರೈತರ ಹಕ್ಕುಗಳಿಗಾಗಿ ಹೋರಾಟದ ನಡೆಸುವ ಸಂಕಲ್ಪ ಮೂಡಿಬಂದಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಗ್ರಾಮ ಘಟಕದ ಅಧ್ಯಕ್ಷ ಮಲ್ಲೇಶಚಾರಿ “ರೈತ ದಿನಾಚರಣೆ ಕೇವಲ ಒಂದು ಆಚರಣೆಯಲ್ಲ, ಇದು ರೈತರ ಹಕ್ಕುಗಳು ಮತ್ತು ಸಂಕಷ್ಟಗಳ ಕುರಿತು ಸರ್ಕಾರಗಳ ಗಮನ ಸೆಳೆಯುವ ಹೋರಾಟದ ಸಂಕೇತ. ಅನ್ನದಾತನ ಜೀವನ ಇಂದು ತೀವ್ರ ಸಂಕಷ್ಟದಲ್ಲಿದ್ದು, ಬೆಳೆಗಳ ಬೆಲೆಕುಸಿತ, ಸಾಲಭಾರ, ನೀರಿನ ಕೊರತೆ, ಹಾಗೂ ಅನಿಶ್ಚಿತ ಹವಾಮಾನದಿಂದ ರೈತ ಕಂಗೆಟ್ಟಿದ್ದಾನೆ” ಎಂದು ಆತಂಕ ವ್ಯಕ್ತಪಡಿಸಿದರು.

18678

ರೈತ ಸಂಘದ ಮುಖಂಡರು ಮಾತನಾಡಿ, “ಸರ್ಕಾರಗಳು ರೈತರ ಹಿತ ಕಾಯುವ ನಿಟ್ಟಿನಲ್ಲಿ ಪರಿಣಾಮಕಾರಿ ನೀತಿಗಳನ್ನು ಜಾರಿಗೊಳಿಸಬೇಕು, ಕನಿಷ್ಠ ಬೆಂಬಲ ಬೆಲೆ ಖಚಿತಪಡಿಸಬೇಕು, ಸಾಲಮನ್ನಾ, ಬೆಳೆ ವಿಮೆ ಹಾಗೂ ನೀರಾವರಿ ಸೌಲಭ್ಯಗಳನ್ನು ಬಲಪಡಿಸಬೇಕು. ರೈತ ದಿನಾಚರಣೆ ಆಚರಿಸುವುದರಿಂದ ಮಾತ್ರ ಸಾಲದು, ವರ್ಷಪೂರ್ತಿ ರೈತರ ಸಮಸ್ಯೆಗಳಿಗೆ ಸ್ಪಂದಿಸುವ ಮನಸ್ಸು ಸರ್ಕಾರಗಳಿಗೆ ಇರಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದಲ್ಲಿ “ರೈತ ಉಳಿದರೆ ದೇಶ ಉಳಿಯುತ್ತದೆ”, “ರೈತರ ಹಕ್ಕುಗಳಿಗೆ ಭದ್ರತೆ ನೀಡಬೇಕು” ಎಂಬ ಘೋಷಣೆಗಳು ರ್ಯಾಲಿಯಲ್ಲಿ ಮೊಳಗಿದವು. ಈ ರ್ಯಾಲಿಯು ವಿಶೇಷ ಗಮನ ಸೆಳೆಯಿತು.

18677

ರೈತರ ಏಕತೆಯ ಸಂದೇಶವನ್ನು ಸಾರ್ವಜನಿಕರಿಗೆ ತಲುಪಿಸಲಾಯಿತು. ರೈತ ದಿನಾಚರಣೆಯ ಮೂಲಕ ರೈತರ ಹೋರಾಟ ಸದಾ ಜೀವಂತವಾಗಿರಬೇಕು ಮತ್ತು ಮುಂದಿನ ದಿನಗಳಲ್ಲಿ ಸರ್ಕಾರಗಳು ರೈತರ ಹಿತ ಕಾಯುವ ನಿಟ್ಟಿನಲ್ಲಿ ಸ್ಪಷ್ಟ ಹಾಗೂ ದೃಢ ಕ್ರಮ ಕೈಗೊಳ್ಳಬೇಕೆಂಬ ಸಂದೇಶವನ್ನು ಈ ಕಾರ್ಯಕ್ರಮ ರೈತರಲ್ಲಿ ಮೂಡಿಸಲಾಯಿತು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ವಿಬಿಜಿ ರಾಮ್ ಜಿ ಮಸೂದೆ; ಪ್ರತಿಭಟನೆ ವೇಳೆ ಗ್ರಾಕೂಸ್ ಸದಸ್ಯರು ಜಿಲ್ಲಾಧಿಕಾರಿಗಳ ಮಧ್ಯೆ ವಾಗ್ವಾದ

ಕಾರ್ಯಕ್ರಮದಲ್ಲಿ ಗ್ರಾಮ ಘಟಕದ ಅಧ್ಯಕ್ಷರಾದ ಮಲ್ಲೇಶಚಾರಿ, ಹಿರಿಯ ಮುಖಂಡರಾದ ಎಲ್.ಎನ್. ನಾಗರಾಜರಾವ್, ಜಿ.ಪಿ. ಲೋಕೇಶಪ್ಪ ಗೌಡ್ರು, ಎಸ್. ಪರಶುರಾಮ, ಸತೀಶ್ ಜಿ, ಬಸವರಾಜಪ್ಪ ಗೌಡ್ರು (ಕೆ.ಟಿ.), ಮಂಜುನಾಥ್ ಎಂ.ಎಸ್, ಗಂಗಾಧರ ಕೆ, ಯೋಗೇಶ್ ಪಾಟೀಲ್ (ಜಿ.ಎಸ್.), ವೀರೇಂದ್ರ ಪಾಟೀಲ್ (ಜಿ.ಡಿ.), ಲಕ್ಷ್ಮಣ, ರಂಗೋಜಿರಾವ್ (ಎಲ್.ವೈ.), ಎನ್. ತಿಪ್ಪೇಶ್, ಗಿರೀಶ್ ಹೆಚ್, ರಮೇಶ್ ಕೆ. ಸೇರಿದಂತೆ ಹಲವರು ಉಪಸ್ಥಿತರಿದ್ದರು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...