ಮಳೆ ಬಂದರೆ ಸೋರುವ, ಕುಸಿಯುವಂತಿರುವ ಶಾಲಾ ಕಟ್ಟಡ, ಮಕ್ಕಳನ್ನು ದಾಖಲಿಸಲು ಪೋಷಕರ ಆತಂಕ.‌

Date:

ಒಂದರಿಂದ ನಾಲ್ಕನೇ ತರಗತಿವೆರೆಗೆ ನೆಡೆಯುವ ಈ ಶಾಲೆಯಲ್ಲಿ ಇರುವುದು ಮೂರು ಜನ ಮಕ್ಕಳು, ಒಬ್ಬರೇ ಶಿಕ್ಷಕರು. ಇಂತಹದೊಂದು ಸರ್ಕಾರಿ ಪ್ರಾಥಮಿಕ ಶಾಲೆ ಇರುವುದು ದಾವಣಗೆರೆಯ ಉತ್ತರ ವಲಯದ ಸಿದ್ದನೂರು ಲಂಬಾಣಿಹಟ್ಟಿ ಗ್ರಾಮದಲ್ಲಿ. ವಿದ್ಯಾರ್ಥಿಗಳ ಕೊರತೆಯಿಂದ ಶಾಲೆ ಮುಚ್ಚುವ ಹಂತಕ್ಕೆ ಬಂದಿದೆ.‌ 20-30ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದ ಈ ಶಾಲೆಯಲ್ಲಿ ದಾಖಲಾತಿ ಕುಂಠಿತವಾಗಲು ಪರೋಕ್ಷವಾಗಿ ಅಥವಾ ನೇರವಾಗಿ ಸರ್ಕಾರವೇ ಕಾರಣ ಎಂಬುದು ಇಲ್ಲಿನ ಸ್ಥಳೀಯರ, ಪೋಷಕರ ಆರೋಪ. ಕಾರಣ ಏನೆಂದರೆ ಇಲ್ಲಿನ ಹಳೆಯ ಕಟ್ಟಡಗಳ ದುರವಸ್ಥೆ, ಶಾಲೆ ಕಾಂಪೌಂಡ್ ಸುತ್ತಲೂ ಬೆಳೆದಿರುವ ಕಸಕಡ್ಡಿ, ಕಾಡು ತರಹದ ಪೊದೆಗಳು. ಸುತ್ತಲು ಹರಡಿರುವ ಗಲೀಜು, ಯಾವಾಗ ಬೀಳುತ್ತವೋ ಎಂದು ಭಯ, ಆತಂಕ ಹುಟ್ಟಿಸುವ ಶಾಲಾ ಕೊಠಡಿಗಳು. ಇರುವ ಒಂದು ಕೊಠಡಿಯಲ್ಲಿಯೇ ಎಲ್ಲಾ ಇಟ್ಟುಕೊಂಡು ಶಾಲೆ ನಡೆಸುತ್ತಿದ್ದರೂ, ಮಳೆ ಬಂದಾಗ ಅದು ಕೂಡ ಸೋರುವ ಕೊಠಡಿ.‌

1002076200
ಉದುರಿಸುವ ಮೇಲ್ಚಾವಣಿ ಪದರ

ಇದು ಶಿಥಿಲಗೊಂಡು ಬೀಳುವ ಹಾಗಿರುವ ಸಿದ್ದನೂರು ತಾಂಡಾ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕಟ್ಟಡ.‌ ಇದರ ನೂತನ ಸುಸಜ್ಜಿತ ಕಟ್ಟಡ ನಿರ್ಮಾಣಕ್ಕೆ ಹಲವು ಬಾರಿ ಮನವಿ ಮಾಡಿದ್ದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಗ್ರಾಮಸ್ಥರ ಆರೋಪವಾಗಿದೆ.

1002076199
ಅರ್ಧಕ್ಕೆ ನಿಂತ ಅಡುಗೆ ಮನೆ ಕಾಮಗಾರಿ

ಈದಿನ ಡಾಟ್ ಕಾಮ್ ನೊಂದಿಗೆ ಮಾತನಾಡಿದ ಗ್ರಾಮದ ಮಹಿಳೆ ವಸಂತಾ ಬಾಯಿ “ಕುಸಿಯುತ್ತಿರುವ ಕಟ್ಟಡಕ್ಕೆ ನಮ್ಮ ಮಕ್ಕಳನ್ನು ಸೇರಿಸಲು ಆತಂಕ ಹೆಚ್ಚಾಗಿದೆ. ಕಟ್ಟಡ ಕುಸಿತದಂತಹ ಅವಘಡ ಆದರೆ ಯಾರು ಹೊಣೆ, ಮೊದಲು ಗುಣಮಟ್ಟದ ಕಟ್ಟಡ ಕಟ್ಟಿಸಿ, ನಂತರ ನಾವು ಶಾಲೆಗೆ ಮಕ್ಕಳನ್ನು ಸೇರಿಸುತ್ತೇವೆ. ಮಕ್ಕಳನ್ನು ಶಾಲೆಗೆ ಕಳುಹಿಸಲು ತಯಾರಿಸಿದ್ದೇವೆ. ಆದರೆ ಶಾಲೆಯ ಸುಸಜ್ಜಿತ ಕಟ್ಟಡ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು” ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1002076202
ಒಂದೇ ಕೊಠಡಿಯಲ್ಲಿ ಪಾಠ, ಅದರಲ್ಲೂ ಸೋರುವ ಮೇಲ್ಚಾವಣಿ

ಶಾಲೆಯ ಅವ್ಯವಸ್ಥೆ ಬಗ್ಗೆ ಮಾತನಾಡಿದ ಗ್ರಾಮದ ಮುಖಂಡ ಎಸ್ಡಿಎಂಸಿ ಅಧ್ಯಕ್ಷ ರಾಘವೇಂದ್ರ ನಾಯ್ಕ
“ಶಾಲೆಗೆ ಒಬ್ಬರೇ ಶಿಕ್ಷಕರಿದ್ದು ಹೆಚ್ಚುವರಿ ಶಿಕ್ಷಕರು, ಹೊಸ ಕಟ್ಟಡ ಬೇಕೆಂಬುದು ಗ್ರಾಮಸ್ಥರ ಆಗ್ರಹ, ಬಡ ವಿದ್ಯಾರ್ಥಿಗಳಿಗೆ ಆಸರೆಯಾಗಬೇಕಾದ ಸರ್ಕಾರಿ ಶಾಲೆಯು ಅನೇಕ ಸಮಸ್ಯೆಗಳಿಂದ ಬಳಲುತ್ತಿದೆ. ಹಳೆಯ ಕಟ್ಟಡಗಳು ಶಿಥಿಲಗೊಂಡಿವೆ. ಇರುವ ಒಂದು ಕೊಠಡಿಯಲ್ಲಿಯೇ ಶಾಲೆ ನೆಡೆಯುತ್ತಿದ್ದು, ಅದೂ ಮಳೆ ಬಂದರೆ ಸೋರುತ್ತದೆ. ಶಾಲೆಯ ಎದುರೇ ಕೆರೆಯಿದ್ದು, ಸರಿಯಾದ ಕಾಂಪೌಂಡ್‌ ವ್ಯವಸ್ಥೆ ಸಹ ಇಲ್ಲ. ಈಗಾಗಲೇ ಇಬ್ಬರು ಮಕ್ಕಳು ಶಿಕ್ಷಕರಿಲ್ಲದ ಸಮಯದಲ್ಲಿ ಆಡಲು ಹೋಗಿ ಕೆರೆಗೆ ಆಹುತಿಯಾಗಿದ್ದಾರೆ. ಇದು ಸಹ ಗ್ರಾಮಸ್ಥರ ಆತಂಕ, ಆಕ್ರೋಶಗೊಳ್ಳಲು ಕಾರಣ. ಹಾಗಾಗಿ ಶಾಲೆಯ ದಾಖಲಾತಿ ಕಡಿಮೆಯಾಗಿದೆ.‌ ಅಧಿಕಾರಿಗಳು, ಜನಪ್ರತಿನಿಧಿಗಳಿಗೆ ಎಷ್ಟು ಮನವಿ ಮಾಡಿದರೂ ಗಮನಹರಿಸಿಲ್ಲ. ಶಾಲಾ ಕಟ್ಟಡವನ್ನು ತುರ್ತಾಗಿ ದುರಸ್ಥಿಗೊಳಿಸಬೇಕು ಮತ್ತು ಕೂಡಲೇ ಹೊಸ ಕಟ್ಟಡ ಮಂಜೂರು ಮಾಡಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದರು.

1002076304

ಈದಿನ ಡಾಟ್ ಕಾಮ್ ನೊಂದಿಗೆ ಸರ್ಕಾರಿ ಶಾಲೆ ಉಳಿಸಿ ಅಭಿಯಾನದ ಮುಖಂಡ ಲಿಂಗರಾಜು ಗಾಂಧಿನಗರ ಮಾತನಾಡಿ, “ಕಡಿಮೆ ದಾಖಲಾತಿ, ವಿಧ್ಯಾರ್ಥಿಗಳ ನೆಪವೊಡ್ಡಿ ಈ ಶಾಲೆ ಮುಚ್ಚುವ ನಿರ್ಧಾರ ಮಾಡಲಾಗುತ್ತಿದೆ. ಇದು ಸಮಾಜಕ್ಕೆ ಉತ್ತಮ ಬೆಳವಣಿಗೆಯಲ್ಲ.‌ ಗ್ರಾಮಸ್ಥರ ಬೇಡಿಕೆಗಳಾದ ಶಾಲೆಗೆ ಹೊಸ ಕಟ್ಟಡ, ಕಾಂಪೌಂಡ್ ದುರಸ್ತಿಗೊಳಿಸುವುದು, ಉತ್ತಮ ಶೌಚಾಲಯ, ಶುದ್ಧ ಕುಡಿಯುವ ನೀರು ಹಾಗೂ ಮಕ್ಕಳ ಶೈಕ್ಷಣಿಕ ಭವಿಷ್ಯಕ್ಕಾಗಿ ಶಿಕ್ಷಕರ ನಿಯೋಜನೆ ಮಾಡಿದರೆ ಮಕ್ಕಳನ್ನು ಶಾಲೆಗೆ ದಾಖಲಿಸುತ್ತೇವೆ ಎಂಬುದು ಗ್ರಾಮಸ್ಥರ, ಪೋಷಕರ ಭರವಸೆಯಾಗಿದೆ.‌ ಅಧಿಕಾರಿಗಳು ಜನಪ್ರತಿನಿಧಿಗಳು ಸರ್ಕಾರ ತೆರಿಗೆ ಹಣವನ್ನು ದುಂದು ವೆಚ್ಚ ಮಾಡುವ ಬದಲು ಇಂತಹ ಅಗತ್ಯವಿರುವ ಶಾಲೆಗಳಿಗೆ ಉತ್ತಮ ಸೌಲಭ್ಯ, ಶಿಕ್ಷಣ ವ್ಯವಸ್ಥೆ ಕಲ್ಪಿಸುವ ಮೂಲಕ ಜನಸೇವೆಗೆ ಮುಂದಾಗಬೇಕು. ಸರ್ಕಾರಿ ಶಾಲೆಗಳನ್ನು ಉಳಿಸಬೇಕು ಎಂಬುದು ನಮ್ಮ ಒತ್ತಾಯವಾಗಿದೆ. ಈ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಾಸಕರ ಬಳಿ ಮಾತನಾಡಿದ್ದು ಹೊಸ ಕಟ್ಟಡ ಮಂಜೂರಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಭರವಸೆಯಂತೆ ಹೊಸ ಕಟ್ಟಡ ನಿರ್ಮಾಣವಾಗುವವರೆಗೂ ಸರ್ಕಾರಿ ಶಾಲೆ ಉಳಿಸಿ ಅಭಿಯಾನದಡಿ ಹೋರಾಟ ನಡೆಸಲಾಗುವುದು” ಎಂದು ಎಚ್ಚರಿಸಿದರು.

1002076190
ಪಾಠಕ್ಕೆ ಮೀಸಲಾದ ಸೋರುವ ಒಂದೇ ಕೊಠಡಿ

ಇಲ್ಲಿನ ಅಡುಗೆಮನೆ ಕೂಡ ಹಾಳಾಗಿದ್ದು, ಶಿಥಿಲಗೊಂಡಿರುವ ಶಾಲಾ ಕೊಠಡಿಯಲ್ಲಿಯೇ ಅಡುಗೆ ತಯಾರಿಸಲಾಗುತ್ತಿದೆ. ಉಳಿದ ಕೊಠಡಿಗಳು ಸಂಪೂರ್ಣ ಹಾಳಾಗಿದ್ದು. ಕಸದ ರಾಶಿಯು ತುಂಬಿಕೊಂಡಿದೆ. ಅಲ್ಲದೆ ಹಿಂದೆ ಅಡುಗೆ ಕೋಣೆಗೆ ಹೊಸ ಕಟ್ಟಡ ನಿರ್ಮಿಸಲು ಬುನಾದಿ ಹಾಕಿದ್ದು, ಅದು ಉತ್ತಮ ಗುಣಮಟ್ಟದಲ್ಲಿ ಇಲ್ಲ ಎನ್ನುವ ಕಾರಣ ಅರ್ಧಕ್ಕೆ ನಿಲ್ಲಿಸಲಾಗಿದೆ. ಇದರ ಬಗ್ಗೆ ಅಧಿಕಾರಿಗಳು ಗಮನಹರಿಸಿ ಕ್ರಮ ಕೈಗೊಳ್ಳಬೇಕೆಂದು ಗ್ರಾಮದ ಇತರ ಮುಖಂಡರು ಒತ್ತಾಯಿಸಿದರು.

1002076296

ಈ ಬಗ್ಗೆ ಈದಿನ ಡಾಟ್ ಕಾಮ್ ನೊಂದಿಗೆ ಎಐಡಿಎಸ್‌ಓ ವಿದ್ಯಾರ್ಥಿ ಸಂಘಟನೆಯ ಕಾರ್ಯಕರ್ತೆ ಪೂಜಾ ನಂದಿಹಳ್ಳಿ ಮಾತನಾಡಿ, “ಗ್ರಾಮದ ಜನರು ತಮ್ಮ ಮಕ್ಕಳನ್ನು ಶಾಲೆಗೆ ಸೇರಿಸಲು ತಯಾರಿದ್ದಾರೆ. ಆದರೆ ಇಲ್ಲಿನ ಅವ್ಯವಸ್ಥೆ ಮತ್ತು ಸೋರುವ ಕಟ್ಟಡದ ಭಯದಿಂದಾಗಿ ಬೇರೆ ಊರಿನ ಶಾಲೆಗೆ ಕಲಿಯಲು ಕಳಿಸುತ್ತಿದ್ದಾರೆ. ಮಕ್ಕಳನ್ನು ಶಾಲೆಗೆ ಕಳಿಸಲು ಆಟೋ ಬಾಡಿಗೆಯನ್ನೇ ತಿಂಗಳಿಗೆ ಒಂದು ಸಾವಿರ ರೂಪಾಯಿ ನೀಡಬೇಕಾಗಿದೆ. ಇದು ಅಸಹಾಯಕ ಜನರಿಗೆ ಸಂಕಷ್ಟವನ್ನು ತಂದೊಡ್ಡಿದೆ. ಉತ್ತಮ ಶಾಲೆಯನ್ನು ಕಟ್ಟಬೇಕು. ಅಲ್ಲಿಯವರೆಗೂ ಗ್ರಾಮಸ್ಥರ ನೇತೃತ್ವದಲ್ಲಿ ‘ಸರ್ಕಾರಿ ಶಾಲೆ ಉಳಿಸಿ ಹೋರಾಟ’ ನಡೆಯಲಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ನರಸೀಪುರ ಸರ್ಕಾರಿ ಶಾಲೆಗೆ ಮೂಲಭೂತ ಸೌಕರ್ಯ ಕಲ್ಪಿಸಿ, ಶಾಲೆ ಮುಚ್ಚದಂತೆ ಕ್ರಮವಹಿಸಿ; ಎಐಡಿಎಸ್‌ಓ

ಗ್ರಾಮದ ಅಂಚಿನಲ್ಲಿ ಉತ್ತಮ ಪರಿಸರದಲ್ಲಿರುವ ಮತ್ತು ಉತ್ತಮ ಸ್ಥಳ ಹೊಂದಿರುವ ಶಾಲೆಗೆ ಉತ್ತಮ ಕಟ್ಟಡ, ಸಿಬ್ಬಂದಿ ವ್ಯವಸ್ಥೆ ಕಲ್ಪಿಸಬೇಕು. ಹಾಗೂ ಪೋಷಕರ ಬೇಡಿಕೆಗಳಾದ ಕಾಂಪೌಂಡ್ ದುರಸ್ತಿಗೊಳಿಸುವುದು, ಉತ್ತಮ ಶೌಚಾಲಯ, ಶುದ್ಧ ಕುಡಿಯುವ ನೀರು ಹಾಗೂ ಮಕ್ಕಳ ಶೈಕ್ಷಣಿಕ ಭವಿಷ್ಯಕ್ಕಾಗಿ ಆಂಗ್ಲ ಮಾಧ್ಯಮವನ್ನು ಆರಂಭಿಸಬೇಕು ಎಂಬುದು ಗ್ರಾಮಸ್ಥರ ಆಗ್ರಹ ಮತ್ತು ಅಭಿಪ್ರಾಯವಾಗಿದ್ದು, ಸೌಲಭ್ಯ ಕಲ್ಪಿಸಬೇಕು ಎಂಬುದು ಎಲ್ಲರ ಕಳಕಳಿಯಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ಕ್ರಮ ವಹಿಸಿದರೆ ಸರ್ಕಾರಿ ಶಾಲೆಗಳಿಗೆ ವಿಧ್ಯಾರ್ಥಿಗಳ ದಾಖಲಾತಿಯು ಹೆಚ್ಚಿ ಸರ್ಕಾರಿ ಶಾಲೆಗಳು ಉಳಿಯುವುದರಲ್ಲಿ ಸಕಾರಾತ್ಮಕ ಹೆಜ್ಜೆ ಎನ್ನುವುದು ಸಾರ್ವಜನಿಕರೆಲ್ಲರ ಅಭಿಪ್ರಾಯ.

WhatsApp Image 2025 11 17 at 5.21.38 PM
ವಿನಾಯಕ್ ಚಿಕ್ಕಂದವಾಡಿ
+ posts

ದಾವಣಗೆರೆ, ಚಿತ್ರದುರ್ಗ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ವಿನಾಯಕ್ ಚಿಕ್ಕಂದವಾಡಿ
ವಿನಾಯಕ್ ಚಿಕ್ಕಂದವಾಡಿ
ದಾವಣಗೆರೆ, ಚಿತ್ರದುರ್ಗ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪಿಬಿ ರಸ್ತೆಯಲ್ಲಿ ಮುಸ್ಲಿಂ ಬಾಂಧವರ ರಂಜಾನ್ ಆಚರಣೆ

ಪವಿತ್ರ ರಂಜಾನ್ (ಈದ್ ಉಲ್ ಫಿತುರ್) ಆಚರಣೆ ಹಿನ್ನೆಲೆಯಲ್ಲಿ ದಾವಣಗೆರೆ ನಗರದ...

ದಾವಣಗೆರೆ | ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಮರ್ಥ್ ಶಾಮನೂರು: ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್...

ದಾವಣಗೆರೆ | ದಕ್ಷಿಣ ಕ್ಷೇತ್ರ ಉಪಚುನಾವಣೆ; ಎಸ್ ಟಿ ಮೋರ್ಚಾದ ಶ್ರೀನಿವಾಸ್ ಗೆ ಒಲಿದ ಬಿಜೆಪಿ ಟಿಕೆಟ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮ...

ದಾವಣಗೆರೆ | ಒಳಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯಕ್ಕೆ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ಹೋರಾಟ

ಸರ್ವೋಚ್ಛ ನ್ಯಾಯಾಲಯದ ಸಂವಿಧಾನಿಕ ಪೀಠವು ಒಳ ಮೀಸಲಾತಿ ವರ್ಗೀಕರಣ ಹಾಗೂ ಜಾರಿಯ...