ದಾವಣಗೆರೆ | ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್‌ ಮೂಲಸೌಕರ್ಯ ರದ್ದು; ರೈತ ಮೋರ್ಚಾ ಖಂಡನೆ

Date:

ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಪರದಾಡುತ್ತಿರುವ ಸರ್ಕಾರ ರೈತರ ಪಂಪ್‌ಸೆಟ್‌ಗಳಿಗೆ ಟ್ರಾನ್ಸ್ ಫಾರ್ಮರ್ ಸಹಿತ ಮೂಲ ಸೌಲಭ್ಯ ಒದಗಿಸುವ ಯೋಜನೆ ರದ್ದು ಮಾಡಿದೆ. ರೈತರು ಸ್ವಂತ ಖರ್ಚಿನಲ್ಲಿ ವಿದ್ಯುತ್ ಸಂಪರ್ಕ ಪಡೆಯಬೇಕು ಎಂದು ಆದೇಶಿಸಿದೆ. ಇದನ್ನು ದಾವಣಗೆರೆ ಬಿಜೆಪಿ ಜಿಲ್ಲಾ ರೈತ ಮೋರ್ಚಾ ಖಂಡಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೈತ ಮೋರ್ಚಾದ ಜಿಲ್ಲಾಧ್ಯಕ್ಷ ನಾಗರಾಜ್‌ ಲೋಕಿಕೆರೆ, ಬರದಿಂದ ಕಂಗಾಲಾಗಿರೊ ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಇಂಧನ ಇಲಾಖೆಯ ಅಧೀನ ಕಾರ್ಯದರ್ಶಿ ಡಿ.ಎಂ. ವಿನೋದ್‌ ಕುಮಾರ್ ಕಳೆದ ಅ.7ರಂದು ಈ ಬಗ್ಗೆ ಆದೇಶ ಹೊರಡಿಸಿದ್ದಾರೆ. ಸೆ.22ರ ನಂತರ ನೋಂದಣಿ ಆಗುವ ನೀರಾವರಿ ಪಂಪ್‌ಸೆಟ್‌ಗಳಿಗೆ ರೈತರು ತಮ್ಮ ಸ್ವಂತ ಖರ್ಚಿನಲ್ಲಿ ವಿದ್ಯುತ್ ಸಂಪರ್ಕ ಪಡೆಯಬೇಕು ಎಂದು ಸಷ್ಟವಾಗಿ ತಿಳಿಸಿದ್ದಾರೆ.

ಸರ್ಕಾರದ ಹೊಸ ಆದೇಶದ ಹಿನ್ನಲೆ ರೈತರು ತಮ್ಮ ನೀರಾವರಿ ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ಪಡೆಯಲು ಲಕಾಂತರ ರೂಪಾಯಿ ಹಣ ಖರ್ಚುಮಾಡಬೇಕಿದೆ. ಕಳೆದ ಹತ್ತು ವರ್ಷದಿಂದ ಅಕ್ರಮ – ಸಕ್ರಮ ಜಾರಿಯಲ್ಲಿತ್ತು. ಪಂಪ್ ಸೆಟ್ ಮೂಲಕ ನೀರಾವರಿ ಮಾಡುವ ರೈತರಿಗೆ ಇಂಧನ ಇಲಾಖೆಯ ಈ ಯೋಜನೆ ವರವಾಗಿತ್ತು. ರೈತರು ಸುಮಾರು 20ಸಾವಿರ ರೂ. ಶುಲ್ಕ ಪಾವತಿಸಿ ನೀರಾವರಿ ಪಂಪ್‌ಸೆಟ್‌ ವಿದ್ಯುತ್ ಸಂಪರ್ಕ ಪರವಾನಗಿ ಪಡೆದರೆ, ವಿದ್ಯುತ್ ಕಂಪನಿಗಳೇ ಆ ರೈತನ ಹೊಲಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸಬೇಕಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ, ಸರ್ಕಾರದ ಹೊಸ ನೀತಿಯಿಂದ ವಿದ್ಯುತ್ ಜಾಲ ಎಷ್ಟೇ ದೂರವಿದ್ದರೂ ಸ್ವಂತ ಹಣದಲ್ಲೇ ವಿದ್ಯುತ್‌ ಕಂಬ ಮತ್ತು ತಂತಿ ಹಾಕಿಕೊಳ್ಳಬೇಕಿದೆ. ಜೊತೆಗೆ ಲಕ್ಷಾಂತರ ರೂ. ಖರ್ಚು ಮಾಡಿ ಟ್ರಾನ್ಸ್‌ಫಾರ್ಮ‌ ಪಡೆಯಬೇಕಿದೆ. ಇದು ರೈತರಿಗೆ ಭಾರಿ ಸಂಕಷ್ಟ ತಂದೊಡ್ಡಿದೆ. ರೈತರಿಗೆ ನೋಂದಣಿ ಶುಲ್ಕ ಪಾವತಿಸುವುದೇ ಕಷ್ಟವಾಗಿತ್ತು. ಸರ್ಕಾರದ ಹೊಸ ನೀತಿಯಿಂದ ರೈತರು ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸಂಪರ್ಕ ಪಡೆಯಲು ಲಕ್ಷಾಂತರ ರೂ. ಖರ್ಚು ಮಾಡಬೇಕಿದೆ.

ಪ್ರಸ್ತುತ ಮಳೆಯ ಅಭಾವದಿಂದಾಗಿ ರೈತನ ಬೆಳೆಗಳು ಸಂಪೂರ್ಣ ನಾಶವಾಗಿವೆ. ಸರ್ಕಾರದ ವರದಿಯ ಪ್ರಕಾರ ರಾಜ್ಯದಲ್ಲಿ 223 ತಾಲೂಕುಗಳು ಸಂಪೂರ್ಣ ಬರಪೀಡಿತ ಎಂದು ಘೋಷಿಸಲಾಗಿದೆ. ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸುಮಾರು 200ಕ್ಕೂ ಹೆಚ್ಚು ರೈತರ ಆತ್ಮಹತ್ಯೆ ಪ್ರಕರಣಗಳು ವರದಿಯಾಗಿದ್ದು, ಇದು ದುರ್ದೈವದ ಸಂಗತಿಯಾಗಿದೆ.

ಹಿಂದಿನ ರೈತಪರ ಯೋಜನೆಗಳಾದ ಕಿಸಾನ್ ಸಮ್ಮಾನ್ ನಿಧಿ, ರೈತ ವಿದ್ಯಾನಿಧಿ, ಭೂ ಚೇತನ, ಭೂ ಸಿರಿ, ರೈತ ಶಕ್ತಿ, ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಸೇರಿದಂತೆ ಅನೇಕ ಯೋಜನೆಗಳನ್ನು ಅನುದಾನದ ಕೊರತೆ ನೆಪವೊಡ್ಡಿ ರದ್ದು ಮಾಡಲಾಗಿದೆ. ವಿದ್ಯುತ್ ಅಭಾವ, ರೈತರ ಆತ್ಮಹತ್ಯೆ ಹಾಗೂ ಬರ ಪೀಡಿತ ಪ್ರದೇಶದ ರೈತರ ಸಹಾಯಕ್ಕೆ ಬರಬೇಕಾದ ಸರ್ಕಾರ ಮತ್ತು ಉಸ್ತುವಾರಿ ಮಂತ್ರಿಗಳು ಯಾವುದೇ ಜಿಲ್ಲೆಗಳಿಗೆ ನೀಡಿಲ್ಲ ರೈತರಿಗೆ ಧೈರ್ಯ ತುಂಬುವ ಕೆಲಸ ಮಾಡಿಲ್ಲ, ಹೀಗಾಗಿ ರೈತನ ಬದುಕು ಅತ್ಯಂತ ಅಸಹನೀಯವಾಗಿದೆ ಎಂದು ದೂರಿದರು.

ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಸ್ವಂತ ಖರ್ಚಿನಲ್ಲಿಯೇ ಹೊಸ ಸಂಪರ್ಕ ಪಡೆಯುವ ಆದೇಶವನ್ನು ಸರ್ಕಾರ ರದ್ದುಗೊಳಿಸಿ, ಈ ಹಿಂದಿನಂತೆಯೇ ವಿದ್ಯುತ್ ಸಂಪರ್ಕ ನೀಡಬೇಕಾಗಿ ಸರ್ಕಾರವನ್ನು ಕರ್ನಾಟಕ ಬಿಜೆಪಿ ರೈತ ಮೋರ್ಚಾ ಒತ್ತಾಯಿಸುತ್ತದೆ. ಒಂದು ವೇಳೆ ಈ ಆದೇಶವನ್ನು ಹಿಂಪಡೆಯದಿದ್ದರೆ ರಾಜ್ಯದ ಸುಮರು 35ಲಕ್ಷ ಪಂಪ್‌ಸೆಟ್‌ ರೈತ ಬಳಕೆದಾರರೊಂದಿಗೆ ಬಿಜೆಪಿ ರೈತ ಮೋರ್ಚಾ ಬೀದಿಗಿಳಿದು ಹೋರಾಟ ಮಾಡುವುದು ಅನಿವಾರ್ಯ ಎಂದು ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ಕೊಳೇನಹಳ್ಳಿ ಬಿ.ಎಂ.ಸತೀಶ್, ಕಡ್ಲೆಬಾಳು ಧನಂಜಯ್, ಗುರುನಾಥ್, ಬಾತಿ ಶಿವಕುಮಾರ್, ಅಣಜಿ ಗುಡೇಶ್, ಕುಂದುವಾಡ ಗಣೇಶ್‌, ರೇವಣಸಿದ್ದಪ್ಪ, ಕಡ್ಲೆಬಾಳು ಬಸವರಾಜ್, ಅಣಬೇರು ಶಿವಪ್ರಕಾಶ್ ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...